Homeರಾಷ್ಟ್ರೀಯಅರುಣಾಚಲ ಪ್ರದೇಶ: ಹೋಟೆಲ್‌ಗಳ ಬೋರ್ಡ್‌ಗಳಲ್ಲಿ ‘ಗೋಮಾಂಸ’ ಪದ ಬರೆಯದಂತೆ ಆದೇಶ; ಆಕ್ರೋಶದ ನಂತರ ಆದೇಶ ವಾಪಾಸ್‌...

ಅರುಣಾಚಲ ಪ್ರದೇಶ: ಹೋಟೆಲ್‌ಗಳ ಬೋರ್ಡ್‌ಗಳಲ್ಲಿ ‘ಗೋಮಾಂಸ’ ಪದ ಬರೆಯದಂತೆ ಆದೇಶ; ಆಕ್ರೋಶದ ನಂತರ ಆದೇಶ ವಾಪಾಸ್‌ ಪಡೆದ ಜಿಲ್ಲಾಡಳಿತ

ಮಾಂಸಾಹಾರ ಸೇವನೆಗೆ ಯಾವುದೇ ನಿರ್ಬಂಧವಿಲ್ಲದಿದ್ದರೂ ಹೆದ್ದಾರಿಗಳ ಉದ್ದಕ್ಕೂ ತೆರೆದ ಪ್ರದರ್ಶನವು ರಾಜಧಾನಿಯ ಕೆಟ್ಟ ಚಿತ್ರವನ್ನು ಬಿಂಬಿಸುತ್ತದೆ ಎಂದು ಜಿಲ್ಲಾಧಿಕಾರಿ ಸಮರ್ಥಿಸಿದ್ದರು

- Advertisement -
- Advertisement -

ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಲ್ಲಿರುವ ಎಲ್ಲಾ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ‘ದನದ ಮಾಂಸ (ಗೋಮಾಂಸ)’ ಎಂದು ಬರೆದಿರುವ ಬೋರ್ಡ್‌ಗಳನ್ನು ತೆಗೆದುಹಾಕಬೇಕು ಎಂದು ಜಿಲ್ಲಾಡಳಿತ ಆದೇಶ ಮಾಡಿತ್ತು. ಇದೀಗ ಈ ಆದೇಶವನ್ನು ಮುಂದಿನ ಸೂಚನೆವರೆಗೆ ತಡೆಹಿಡಿಯಲಾಗಿದೆ ಎಂದ ವರದಿಯಾಗಿದೆ.

ಜುಲೈ 13ರ ಬುಧವಾರದಂದು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ಸೋಮವಾರದೊಳಗೆ “ದನದ ಮಾಂಸ (ಬೀಫ್‌)” ಎಂಬ ಪದವುಳ್ಳ ಬೋಡ್‌ಗಳನ್ನು ತೆಗೆದುಹಾಕುವಂತೆ ಸರ್ಕಾರ ಆದೇಶ ಮಾಡಿತ್ತು. ಆದೇಶವನ್ನು ಉಲ್ಲಂಘಿಸಿದವರಿಗೆ 2,000 ರೂಪಾಯಿ ದಂಡ ಹಾಗೂ ಹೋಟೆಲ್‌ಗಳ ಟ್ರೇಡ್ ಲೈಸೆನ್ಸ್ ರದ್ದುಪಡಿಸುವುದಾಗಿ ಬೆದರಿಕೆಯನ್ನೂ ಹಾಕಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರದ ಈ ಆದೇಶವನ್ನು ಅರುಣಾಚಲ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ACCI) ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ವಿರೋಧಿಸಿದ್ದು, ಪ್ರತಿಭಟನೆಗಳು ನಡೆಸಿದ್ದವು. ಪ್ರತಿಭಟನಾಕಾರರು ಇದನ್ನು ‘ಅನಾವಶ್ಯಕ’ ಎಂದು ಕರೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ಇದನ್ನೂ ಓದಿ: ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ಜುಲೈ 13 ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ರಾಜಧಾನಿ ಇಟಾನಗರದ ಜಿಲ್ಲಾಡಳಿತವು, “ಭಾರತೀಯ ಸಂವಿಧಾನದ ಜಾತ್ಯತೀತ ಮನೋಭಾವವನ್ನು ನಂಬುತ್ತೇವೆ. ಆದರೆ ‘ದನದ ಮಾಂಸ’ ಎಂಬ ಪದದ ಬಹಿರಂಗ ಪ್ರದರ್ಶನವು ಸಮುದಾಯದ ಕೆಲವು ವರ್ಗಗಳ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆಯಿದೆ. ಜೊತಗೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉಂಟುಮಾಡಬಹುದು” ಎಂದು ಹೇಳಿತ್ತು.

ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಅರುಣಾಚಲ ಪ್ರದೇಶ ಘಟಕ, “ಈ ಆದೇಶವು ಅಶಾಂತಿಯನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿದೆ” ಎಂದು ಹೇಳಿತ್ತು.

ಈ ಆದೇಶವನ್ನು ವಾಪಾಸು ಪಡೆಯುವಂತೆ ಯುವ ಕಾಂಗ್ರೆಸ್‌ ಅಗ್ರಹಿಸಿತ್ತು. “ಅರುಣಾಚಲ ಪ್ರದೇಶದ ನಾಗರಿಕರು ಅನಾದಿ ಕಾಲದಿಂದಲೂ ಗೋಮಾಂಸ ಸೇವಿಸುತ್ತಿದ್ದಾರೆ. ಇದು ಯಾವುದೇ ಸಮುದಾಯದ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದಿಲ್ಲ” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ತಾರ್ ಜಾನ್ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದರು. ಜಿಲ್ಲಾಡಳಿತದ ಹಠಾತ್ ಮತ್ತು ಆಶ್ಚರ್ಯಕರ ಆದೇಶವು ರಾಜ್ಯದ ವಿವಿಧ ಗುಂಪುಗಳ ಜನರ ಮನಸ್ಸಿನಲ್ಲಿ, ವಿಶೇಷವಾಗಿ ರಾಜಧಾನಿಯಲ್ಲಿ ಕಳವಳವನ್ನು ಸೃಷ್ಟಿಸಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ರಾಜಧಾನಿ ಇಟಾನಗರದ ನಹರ್ಲಗುನ್‌ನ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಜಿಲ್ಲಾಧಿಕಾರಿ) ಅವರು ಈ ಆದೇಶವನ್ನು ಹೊರಡಿಸಿದ್ದರು. “ಮಾಂಸಾಹಾರ ಸೇವನೆಗೆ ಯಾವುದೇ ನಿರ್ಬಂಧವಿಲ್ಲದಿದ್ದರೂ ಹೆದ್ದಾರಿಗಳ ಉದ್ದಕ್ಕೂ ತೆರೆದ ಪ್ರದರ್ಶನವು ರಾಜಧಾನಿಯನ್ನು ಕೆಟ್ಟದಾಗಿ ಬಿಂಬಿಸುತ್ತದೆ” ಎಂದು ಅವರು ಹೇಳಿದ್ದರು. ಆದೇಶಕ್ಕೆ ಕೋಮು ಬಣ್ಣ ಬಳಿಯದಂತೆ ಮನವಿ ಮಾಡಿದ್ದ ಜಿಲ್ಲಾಧಿಕಾರಿ, ಮುಂಜಾಗ್ರತಾ ಕ್ರಮವಾಗಿ ಸದುದ್ದೇಶದಿಂದ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...