Homeರಾಷ್ಟ್ರೀಯಅರುಣಾಚಲ ಪ್ರದೇಶ: ಹೋಟೆಲ್‌ಗಳ ಬೋರ್ಡ್‌ಗಳಲ್ಲಿ ‘ಗೋಮಾಂಸ’ ಪದ ಬರೆಯದಂತೆ ಆದೇಶ; ಆಕ್ರೋಶದ ನಂತರ ಆದೇಶ ವಾಪಾಸ್‌...

ಅರುಣಾಚಲ ಪ್ರದೇಶ: ಹೋಟೆಲ್‌ಗಳ ಬೋರ್ಡ್‌ಗಳಲ್ಲಿ ‘ಗೋಮಾಂಸ’ ಪದ ಬರೆಯದಂತೆ ಆದೇಶ; ಆಕ್ರೋಶದ ನಂತರ ಆದೇಶ ವಾಪಾಸ್‌ ಪಡೆದ ಜಿಲ್ಲಾಡಳಿತ

ಮಾಂಸಾಹಾರ ಸೇವನೆಗೆ ಯಾವುದೇ ನಿರ್ಬಂಧವಿಲ್ಲದಿದ್ದರೂ ಹೆದ್ದಾರಿಗಳ ಉದ್ದಕ್ಕೂ ತೆರೆದ ಪ್ರದರ್ಶನವು ರಾಜಧಾನಿಯ ಕೆಟ್ಟ ಚಿತ್ರವನ್ನು ಬಿಂಬಿಸುತ್ತದೆ ಎಂದು ಜಿಲ್ಲಾಧಿಕಾರಿ ಸಮರ್ಥಿಸಿದ್ದರು

- Advertisement -
- Advertisement -

ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಲ್ಲಿರುವ ಎಲ್ಲಾ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ‘ದನದ ಮಾಂಸ (ಗೋಮಾಂಸ)’ ಎಂದು ಬರೆದಿರುವ ಬೋರ್ಡ್‌ಗಳನ್ನು ತೆಗೆದುಹಾಕಬೇಕು ಎಂದು ಜಿಲ್ಲಾಡಳಿತ ಆದೇಶ ಮಾಡಿತ್ತು. ಇದೀಗ ಈ ಆದೇಶವನ್ನು ಮುಂದಿನ ಸೂಚನೆವರೆಗೆ ತಡೆಹಿಡಿಯಲಾಗಿದೆ ಎಂದ ವರದಿಯಾಗಿದೆ.

ಜುಲೈ 13ರ ಬುಧವಾರದಂದು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ಸೋಮವಾರದೊಳಗೆ “ದನದ ಮಾಂಸ (ಬೀಫ್‌)” ಎಂಬ ಪದವುಳ್ಳ ಬೋಡ್‌ಗಳನ್ನು ತೆಗೆದುಹಾಕುವಂತೆ ಸರ್ಕಾರ ಆದೇಶ ಮಾಡಿತ್ತು. ಆದೇಶವನ್ನು ಉಲ್ಲಂಘಿಸಿದವರಿಗೆ 2,000 ರೂಪಾಯಿ ದಂಡ ಹಾಗೂ ಹೋಟೆಲ್‌ಗಳ ಟ್ರೇಡ್ ಲೈಸೆನ್ಸ್ ರದ್ದುಪಡಿಸುವುದಾಗಿ ಬೆದರಿಕೆಯನ್ನೂ ಹಾಕಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರದ ಈ ಆದೇಶವನ್ನು ಅರುಣಾಚಲ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ACCI) ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ವಿರೋಧಿಸಿದ್ದು, ಪ್ರತಿಭಟನೆಗಳು ನಡೆಸಿದ್ದವು. ಪ್ರತಿಭಟನಾಕಾರರು ಇದನ್ನು ‘ಅನಾವಶ್ಯಕ’ ಎಂದು ಕರೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ಇದನ್ನೂ ಓದಿ: ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ಜುಲೈ 13 ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ರಾಜಧಾನಿ ಇಟಾನಗರದ ಜಿಲ್ಲಾಡಳಿತವು, “ಭಾರತೀಯ ಸಂವಿಧಾನದ ಜಾತ್ಯತೀತ ಮನೋಭಾವವನ್ನು ನಂಬುತ್ತೇವೆ. ಆದರೆ ‘ದನದ ಮಾಂಸ’ ಎಂಬ ಪದದ ಬಹಿರಂಗ ಪ್ರದರ್ಶನವು ಸಮುದಾಯದ ಕೆಲವು ವರ್ಗಗಳ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆಯಿದೆ. ಜೊತಗೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉಂಟುಮಾಡಬಹುದು” ಎಂದು ಹೇಳಿತ್ತು.

ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಅರುಣಾಚಲ ಪ್ರದೇಶ ಘಟಕ, “ಈ ಆದೇಶವು ಅಶಾಂತಿಯನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿದೆ” ಎಂದು ಹೇಳಿತ್ತು.

ಈ ಆದೇಶವನ್ನು ವಾಪಾಸು ಪಡೆಯುವಂತೆ ಯುವ ಕಾಂಗ್ರೆಸ್‌ ಅಗ್ರಹಿಸಿತ್ತು. “ಅರುಣಾಚಲ ಪ್ರದೇಶದ ನಾಗರಿಕರು ಅನಾದಿ ಕಾಲದಿಂದಲೂ ಗೋಮಾಂಸ ಸೇವಿಸುತ್ತಿದ್ದಾರೆ. ಇದು ಯಾವುದೇ ಸಮುದಾಯದ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದಿಲ್ಲ” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ತಾರ್ ಜಾನ್ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದರು. ಜಿಲ್ಲಾಡಳಿತದ ಹಠಾತ್ ಮತ್ತು ಆಶ್ಚರ್ಯಕರ ಆದೇಶವು ರಾಜ್ಯದ ವಿವಿಧ ಗುಂಪುಗಳ ಜನರ ಮನಸ್ಸಿನಲ್ಲಿ, ವಿಶೇಷವಾಗಿ ರಾಜಧಾನಿಯಲ್ಲಿ ಕಳವಳವನ್ನು ಸೃಷ್ಟಿಸಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ರಾಜಧಾನಿ ಇಟಾನಗರದ ನಹರ್ಲಗುನ್‌ನ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಜಿಲ್ಲಾಧಿಕಾರಿ) ಅವರು ಈ ಆದೇಶವನ್ನು ಹೊರಡಿಸಿದ್ದರು. “ಮಾಂಸಾಹಾರ ಸೇವನೆಗೆ ಯಾವುದೇ ನಿರ್ಬಂಧವಿಲ್ಲದಿದ್ದರೂ ಹೆದ್ದಾರಿಗಳ ಉದ್ದಕ್ಕೂ ತೆರೆದ ಪ್ರದರ್ಶನವು ರಾಜಧಾನಿಯನ್ನು ಕೆಟ್ಟದಾಗಿ ಬಿಂಬಿಸುತ್ತದೆ” ಎಂದು ಅವರು ಹೇಳಿದ್ದರು. ಆದೇಶಕ್ಕೆ ಕೋಮು ಬಣ್ಣ ಬಳಿಯದಂತೆ ಮನವಿ ಮಾಡಿದ್ದ ಜಿಲ್ಲಾಧಿಕಾರಿ, ಮುಂಜಾಗ್ರತಾ ಕ್ರಮವಾಗಿ ಸದುದ್ದೇಶದಿಂದ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...