HomeಮುಖಪುಟPFI ಮತ್ತದರ ಅಂಗಸಂಸ್ಥೆಗಳ ಸಾಮಾಜಿಕ ಮಾಧ್ಯಮ ಖಾತೆ ಹಾಗೂ ವೆಬ್‌ಸೈಟ್‌‌ ನಿರ್ಬಂಧಕ್ಕೆ ಆದೇಶ

PFI ಮತ್ತದರ ಅಂಗಸಂಸ್ಥೆಗಳ ಸಾಮಾಜಿಕ ಮಾಧ್ಯಮ ಖಾತೆ ಹಾಗೂ ವೆಬ್‌ಸೈಟ್‌‌ ನಿರ್ಬಂಧಕ್ಕೆ ಆದೇಶ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಎಂಟು ಅಂಗಸಂಸ್ಥೆಗಳ ಚಟುವಟಿಕೆಗಳನ್ನು ಪ್ರಚಾರ ಮಾಡುವುದನ್ನು ತಡೆಯಲು ಅವರ ವೆಬ್‌ಸೈಟ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಲು ಒಕ್ಕೂಟ ಸರ್ಕಾರವು ಆದೇಶಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ. ಮಂಗಳವಾರ ತಡರಾತ್ರಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಸಂಘಟನೆಯನ್ನು ಸರ್ಕಾರ ನಿಷೇಧಿಸಿತ್ತು.

ಪಿಎಫ್‌ಐ, ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರೆಹಬ್ ಫೌಂಡೇಶನ್ (ಕೇರಳ)ನ ಟ್ವಿಟರ್‌‌, ಫೇಸ್‌ಬುಕ್, ಇನ್ಸ್‌ಟಾಗ್ರಾಂ ಖಾತೆಗಳು, ಯೂಟ್ಯೂಬ್‌ ಚಾನಲ್‌ಗಳು ಅಥವಾ ಅದರ ಆನ್‌ಲೈನ್‌ ಉಪಸ್ಥಿತಿಯನ್ನು ಶಾಶ್ವತವಾಗಿ ನಿರ್ಬಂಧಿಸಲಾಗಿದೆ. ಈ ಸಂಘಟನೆಗಳು ಪೋಸ್ಟ್ ಮಾಡಿದ ವಿಷಯವನ್ನು ಸಹ ತೆಗೆದುಹಾಕಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಿಎಫ್‌ಐ, ಆರ್‌ಐಎಫ್‌ ಮತ್ತು ಎಐಐಸಿ ವೆಬ್‌ಸೈಟ್‌ಗಳನ್ನು ಈಗಾಗಲೆ ನಿರ್ಬಂಧಿಸಲಾಗಿದೆ. ದೂರಸಂಪರ್ಕ ಇಲಾಖೆಯ ಆದೇಶದ ಮೇರೆಗೆ ಇತರರ ವೇದಿಕೆಯನ್ನೂ ನಿರ್ಬಂಧಿಸುವ ಪ್ರಕ್ರಿಯೆಯಲ್ಲಿದೆ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಹೇಳಿದೆ.

ಇದನ್ನೂ ಓದಿ: ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

ಭಯೋತ್ಪಾದಕ ಸಂಘಟನೆ ಎಂದು ಘೋಷಣೆಯಾಗಿರುವ ಪಿಎಫ್‌ಐಗೆ ಸಂಬಂಧಿಸಿದ ಖಾತೆಗಳು ಅಥವಾ ಅದಕ್ಕೆ ಸಂಬಂಧಪಟ್ಟ ಯಾವುದೇ ವಿಷಯವನ್ನು ತೆಗೆದುಹಾಕಲು ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ನಿರ್ದೇಶನಗಳನ್ನು ಕಳುಹಿಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಪಿಎಫ್‌ಐ ಅನ್ನು “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸಲಾಗಿದ್ದು, ಅವರು ಯಾವುದೇ ಪತ್ರಿಕಾ ಹೇಳಿಕೆಗಳನ್ನು ನೀಡುವುದನ್ನು ನಿರ್ಬಂಧಿಸಲಾಗಿದೆ.

ಪಿಎಫ್‌ಐ, ಸಿಎಫ್‌ಐ, ಆರ್‌ಐಎಫ್ ಮತ್ತು ಇತರ ಅಂಗಸಂಸ್ಥೆಗಳಿಗೆ ಲಿಂಕ್ ಮಾಡಲಾದ ವಾಟ್ಸಾಪ್ ಖಾತೆಗಳ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಯಾವುದೇ ದೇಶ ವಿರೋಧಿ ಚಟುವಟಿಕೆಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಹೇಳಿದೆ.

ಇದನ್ನೂ ಓದಿ: PFI ನಿಷೇಧ ಸಾಲದು, RSS ಅನ್ನು ಕೂಡ ನಿಷೇಧಿಸಬೇಕು: ಕಾಂಗ್ರೆಸ್ ಸಂಸದನ ಆಗ್ರಹ

ಪಿಎಫ್‌ಐ ಅಥವಾ ಅದರ ಯಾವುದೇ ಅಂಗಸಂಸ್ಥೆಗಳು ತಮ್ಮ ಚಟುವಟಿಕೆಗಳಿಗಾಗಿ ಯಾವುದೇ ಪ್ರಾಕ್ಸಿ ಸಾಮಾಜಿಕ ಮಾಧ್ಯಮ ಖಾತೆಗಳು ಅಥವಾ ವೆಬ್‌ಸೈಟ್‌ಗಳನ್ನು ತೆರೆದರೆ, ಅವುಗಳನ್ನು ಸಹ ನಿರ್ಬಂಧಿಸಬಹುದು ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...