Homeಮುಖಪುಟಬಡ್ಡಿದರ ಕಡಿತಗೊಳಿಸಿ 'ನಿನ್ನೆ' ಆದೇಶ: 'ಇಂದು' ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

ಬಡ್ಡಿದರ ಕಡಿತಗೊಳಿಸಿ ‘ನಿನ್ನೆ’ ಆದೇಶ: ‘ಇಂದು’ ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

- Advertisement -
- Advertisement -

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರದಲ್ಲಿ ಬುಧವಾರ ಭಾರೀ ಕಡಿತವನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಆ ಆದೇಶವನ್ನು ಇಂದು ಬೆಳಿಗ್ಗೆಯೇ ಹಿಂಪಡೆದುಕೊಂಡಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು ಅಥವಾ ಎನ್‌ಎಸ್‌ಸಿ ಮತ್ತು ಸಾರ್ವಜನಿಕ ಭವಿಷ್ಯ ನಿಧಿ ಅಥವಾ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳ ಕಡಿತವನ್ನು ಸರ್ಕಾರ ನಿನ್ನೆ ಘೋಷಿಸಿತ್ತು.

ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು 2020-2021ರ ಕೊನೆಯ ತ್ರೈಮಾಸಿಕದಲ್ಲಿ ಅಸ್ತಿತ್ವದಲ್ಲಿದ್ದ ದರಗಳಲ್ಲಿಯೇ ಮುಂದುವರಿಯುತ್ತವೆ (ಅಂದರೆ ಮಾರ್ಚ್ 2021 ರ ಹೊತ್ತಿಗೆ ಇದ್ದ ದರಗಳು). ಈ ಸಂಬಂಧಿ ಹೊರಡಿಸಲಾದ ಆದೇಶಗಳನ್ನು ಹಿಂಪಡೆಯಲಾಗುತ್ತದೆ” ಎಂದು ಹೇಳಿದ್ದಾರೆ.

ನಿನ್ನೆ ಸಂಜೆ, ಆರ್ಥಿಕ ವರ್ಷದ ಕೊನೆಯ ದಿನದಂದು, ಮಧ್ಯಮ ವರ್ಗದ ಠೇವಣಿದಾರರಿಗೆ ಭಾರಿ ಹೊಡೆತ ಬೀಳುವಂತೆ ಸರ್ಕಾರವು 2021-22ರ ಮೊದಲ ತ್ರೈಮಾಸಿಕದಲ್ಲಿ ಶೇ 1.1 ರಷ್ಟು ಬಡ್ಡಿದರಗಳಲ್ಲಿ ಭಾರಿ ಕಡಿತವನ್ನು ಘೋಷಿಸಿತ್ತು. ಆದರೆ ಎರಡನೇ ಸುತ್ತಿನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಿನ್ನೆ ಹೊರಡಿಸಿದ್ದ ಆದೇಶ ಏನು?

 

ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ಉಳಿತಾಯ ಖಾತೆಯ ಮೇಲಿನ ವಾರ್ಷಿಕ ಬಡ್ಡಿದರವನ್ನು ಶೇ.4ರಿಂದ ಶೇ.3.5ಕ್ಕೆ ಇಳಿಸಲಾಗಿತ್ತು. ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಬಡ್ಡಿದರವನ್ನು ಶೇ.7.1ರಿಂದ ಶೇ.6.4ಕ್ಕೆ ಇಳಿಸಲಾಗಿತ್ತು. ಎಪ್ರಿಲ್ 1ರಿಂದ ಪರಿಷ್ಕೃತ ಬಡ್ಡಿದರಗಳು ಜಾರಿಗೆ ಬರಲಿವೆ ಎಂದು ಸರ್ಕಾರ ಹೇಳಿತ್ತು.

ರಾಷ್ಟ್ರೀಯ ಉಳಿತಾಯ ಸರ್ಟಿಫಿಕೇಟ್ (ಎನ್‌ಎಸ್‌ಸಿ)ನ ಬಡ್ಡಿದರ ಶೇ.5.9 ಹಾಗೂ ಶೇ.7.6ರಷ್ಟಿದ್ದ ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿದರವನ್ನು ಶೇ.6.9ಕ್ಕೆ ನಿಗದಿಪಡಿಸಲಾಗಿತ್ತು.

ಐದು ವರ್ಷಗಳ ಅವಧಿಯ ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಬಡ್ಡಿದರವನ್ನು ಶೇ.7.4ರಿಂದ ಶೇ.6.5ಕ್ಕೆ ಇಳಿಸಲಾಗಿತ್ತು. ಕಿಸಾನ್ ವಿಕಾಸ್ ಪತ್ರದ (ಕೆವಿಪಿ) ಬಡ್ಡಿದರವನ್ನು ಶೇ.6.2ಕ್ಕೆ ಕಡಿತಗೊಳಿಸಲಾಗಿದೆ. 2020-21ರ ಸಾಲಿನಲ್ಲಿ ಕೆವಿಪಿ ಬಡ್ಡಿದರ ಶೇ.6.9ರಷ್ಟಿತ್ತು.

ಅಂಚೆ ಕಚೇರಿ ಉಳಿತಾಯ ಠೇವಣಿ ಮೇಲಿನ ಬಡ್ಡಿದರವನ್ನು ಶೇ.3.5 ಶೇಕಡಕ್ಕೆ ಇಳಿಸಲಾಗಿದ್ದರೆ, ಒಂದರಿಂದ ಐದು ವರ್ಷಗಳ ಅವಧಿಯ ಠೇವಣಿಗೆ (ಟರ್ಮ್ ಡೆಪಾಸಿಟ್) ಶೇ.4.4ರಿಂದ 4.1ರರೆಗೆ ಬಡ್ಡಿದರ ದೊರೆಯಲಿದೆ. ಐದು ವರ್ಷಗಳ ಅವಧಿಯ ರಿಕರಿಂಗ್ ಡೆಪಾಸಿಟ್ ಮೇಲಿನ ಬಡ್ಡಿದರವನ್ನು ಶೇ.5.8ಕ್ಕೆ ಇಳಿಸಲಾಗಿತ್ತು.

ಕಳೆದ ಒಂದು ವರ್ಷದಲ್ಲಿ ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿರುವುದು ಇದು ಎರಡನೇ ಬಾರಿಯಾಗಿತ್ತು. 2020-21ರ ಸಾಲಿನ ಹಣಕಾಸು ವರ್ಷದಲ್ಲಿ ಕೇಂದ್ರ ಸರಕಾವು ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರವನ್ನು ಶೇ.1ರಷ್ಟು ಕಡಿತಗೊಳಿಸಿತ್ತು.

ಆದರೆ ಈಗ ಈ ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದೆ.


ಇದನ್ನೂ ಓದಿ: ಇಂದು ಎರಡನೇ ಹಂತದ ಚುನಾವಣೆ: ಎಲ್ಲರ ಚಿತ್ತ ಪಶ್ಚಿಮ ಬಂಗಾಳದ ನಂದಿಗ್ರಾಮದತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...