Homeಮುಖಪುಟರೈತರ ತಲೆ ಒಡೆಯಿರಿ: ಆದೇಶಿಸಿದ ಅಧಿಕಾರಿ ವಿರುದ್ದ ಕೈಕೊಂಡ ಕ್ರಮಗಳೇನು? ಆರ್‌ಟಿಐ ಅರ್ಜಿ

ರೈತರ ತಲೆ ಒಡೆಯಿರಿ: ಆದೇಶಿಸಿದ ಅಧಿಕಾರಿ ವಿರುದ್ದ ಕೈಕೊಂಡ ಕ್ರಮಗಳೇನು? ಆರ್‌ಟಿಐ ಅರ್ಜಿ

ಅಧಿಕಾರಿ ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆಗೆ ಆದೇಶ ನೀಡುತ್ತಿರುವುದರಿಂದ ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಘಟನೆಯಾಗಿದೆ ಇದು ಎಂದು ಸಾಕೇತ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

- Advertisement -
- Advertisement -

ಶನಿವಾರ ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಇದೀಗ ವಿವಾದದ ಕೇಂದ್ರವಾಗಿ ಮಾರ್ಪಟ್ಟಿದೆ. ಘಟನೆಯಲ್ಲಿ ಹತ್ತು ಜನ ರೈತರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ನಡುವೆ, ಕರ್ನಲ್‌ನ ಸಬ್‌ ಡಿವಿಸನಲ್‌ ಮ್ಯಾಜಿಸ್ಟ್ರೇಟ್‌(ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಅವರು ಲಾಠಿ ಚಾರ್ಜ್‌‌ಗೂ ಮುನ್ನ ಪೊಲೀಸರೊಂದಿಗೆ “ರೈತರ ತಲೆ ಒಡೆಯಿರಿ” ಎಂದು ಹೇಳಿರುವ ವಿಡಿಯೊ ವೈರಲ್ ಆಗಿದೆ.

ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಹರಿಯಾಣ ಸರ್ಕಾರದ ವಿರುದ್ದ ಸಾರ್ವಜನಿಕರ ಆಕ್ರೋಶ ಭುಗಿಲೆದ್ದಿದ್ದು, “ಲಾಠಿ ಚಾರ್ಜ್” ಎಂಬುವುದು ಮೊದಲೇ ತಯಾರಾಗಿದ್ದ ಕಾರ್ಯಸೂಚಿಯೆ ಎಂಬ ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ‘ರೈತರ ತಲೆ ಬುರುಡೆ ಒಡೆಯಿರಿ’ – ಪೊಲೀಸರಿಗೆ ಆದೇಶ ನೀಡುತ್ತಿರುವ ಅಧಿಕಾರಿಯ ವಿಡಿಯೊ ವೈರಲ್!

ಘಟನೆಯಲ್ಲಿ ಆಯುಷ್ ಸಿನ್ಹಾ ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆ ಎಸಗುವಂತೆ ಆದೇಶ ನೀಡಿದ್ದಾರೆ. ಅಲ್ಲದೆ ಅವರ ಆದೇಶವು ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ಯ್ರಕ್ಕೆ ಸಂಬಧಿಸಿದ್ದಾಗಿದೆ. ಈ ಹಿನ್ನಲೆಯಲ್ಲಿ ಅವರ ಕಾನೂನು ಬಾಹಿರ ಆದೇಶದ ವಿರುದ್ದ ಕ್ರಮ ಕೈಗೊಳ್ಳಲಾಗಿದೆಯೆ ಎಂದು ಹೋರಾಟಗಾರ ಸಾಕೇತ್ ಗೋಖಲೆ ಆರ್‌ಟಿಐ ಕಾಯ್ದೆಯ ಅಡಿಯಲ್ಲಿ ಪ್ರಶ್ನಿಸಿದ್ದಾರೆ.

ಸಾಕೇತ್‌ ಗೋಖಲೆ ತಮ್ಮ ಆರ್‌ಟಿಐ ಅರ್ಜಿಯಲ್ಲಿ, ಒಟ್ಟು ನಾಲ್ಕು ಪ್ರಶ್ನೆಗಳನ್ನು ಕೇಳಿದ್ದಾರೆ.

  1. “ಆಯುಷ್ ಸಿನ್ಹಾ ವಿರುದ್ಧ ಕರ್ನಲ್‌ ಜಿಲ್ಲಾಡಳಿತ, ಯಾವುದೇ ಔಪಚಾರಿಕ ದೂರನ್ನು ಸ್ವೀಕರಿಸಿದೆಯೆ?”
  2. ಆಯುಷ್ ಸಿನ್ಹಾ ಅವರು ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದಿಸಿದ ಈ ಆಘಾತಕಾರಿ ಘಟನೆಯ ಬಗ್ಗೆ ಕರ್ನಲ್‌ ಜಿಲ್ಲಾಡಳಿತ ಯಾವುದೆ ಕ್ರಮ ತೆಗೆದುಕೊಂಡಿದೆಯೆ? ಒಂದು ವೇಳೆ ಕ್ರಮ ತೆಗೆದುಕೊಳ್ಳದಿದ್ದರೆ, ಅದರ ಕಾರಣಗಳನ್ನು ತಿಳಿಸಿ 
  3. ಕೇಂದ್ರ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳು, 1964 ಮತ್ತು ಇತರ ಸಂಬಂಧಿತ ನಿಯಮಗಳ ಅಡಿಯಲ್ಲಿ ಅಗತ್ಯವಿರುವಂತೆ ಇಲಾಖಾ ವಿಚಾರಣೆಗೆ SDM ಆಯುಷ್ ಸಿನ್ಹಾ ಅವರಿಗೆ ಶೋ ಕಾಸ್ ನೋಟಿಸ್ ನೀಡಲಾಗಿದೆಯೇ?
  4. “ಘಟನೆಗೆ ಸಂಬಂಧಿಸಿದಂತೆ ಕರ್ನಲ್‌ ಜಿಲ್ಲಾಡಳಿತ ಸ್ವೀಕರಿಸಿದ ಅಥವಾ ಕಳುಹಿಸಿದ ಎಲ್ಲಾ ದಾಖಲೆಗಳನ್ನು ದಯವಿಟ್ಟು ಒದಗಿಸಿ” ಎಂದು ಸಾಕೇತ್‌ ಗೋಖಲೆ ಆರ್‌ಟಿಐ ಕಾಯ್ದೆಯ ಅಡಿಯಲ್ಲಿ ಕೇಳಿದ್ದಾರೆ.

ಇದನ್ನೂ ಓದಿ: ರೈತರ ಮೇಲಿನ ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಹರಿಯಾಣ ಸಿಎಂ

ಅಷ್ಟೆ ಅಲ್ಲದೆ, “ಆಯುಷ್ ಸಿನ್ಹಾ ಅವರು ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆಗೆ ಆದೇಶ ನೀಡುತ್ತಿರುವುದರಿಂದ ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಘಟನೆಯಾಗಿದೆ ಇದು” ಎಂದು ಸಾಕೇತ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ತಾನು ಅರ್ಜಿ ಸಲ್ಲಿಸಿರುವುದನ್ನು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಸಾಕೇತ್‌, “ಎಸ್‌ಡಿಎಂ ಆಯುಷ್‌ ಸಿನ್ಹಾ ಐಎಎಸ್‌ ಮತ್ತು ಸಾರ್ವಜನಿಕ ಸೇವಕನಾಗಲು ಅರ್ಹನಲ್ಲ. ಅವರನ್ನು ಸೇವೆಯಿಂದ ವಜಾ ಮಾಡಲೇಬೇಕು ಎಂದು” ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ರೈತರ ಮೇಲೆ ಲಾಠಿ ಚಾರ್ಜ್‌ ಆಗುವುದಕ್ಕಿಂತಲೂ ಮುಂಚೆಯೆ ಆಯುಷ್‌ ಸಿನ್ಹಾ, “ಇದು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ. ಅವರು ಯಾರಾದರೂ ಆಗಿರಲಿ, ಎಲ್ಲಿಂದ ಬಂದಿರಲಾಗಿರಲಿ ಯಾರೊಬ್ಬರೂ ಬ್ಯಾರಿಕೇಡ್‌ನಿಂದ ಮುಂದೆ ಹೋಗಬಾರದು. ಒಂದು ವೇಳೆ ಬಂದರೆ ಅವರ ತಲೆಬುರುಡೆಯನ್ನು ಒಡೆಯಿರಿ. ಯಾವುದೇ ಸೂಚನೆ ಅಥವಾ ನಿರ್ದೇಶನದ ಅಗತ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಪೊಲೀಸ್ ಪಡೆಯಿದೆ” ಎಂದು ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರನ್ನು ನಿಭಾಯಿಸಲು ನಿಯೋಜಿಸಲಾದ ಪೊಲೀಸರಿಗೆ ಹೇಳಿದ್ದರು.

ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಹೊರತಾಗಿಯೂ ಲಾಠಿ ಚಾರ್ಜ್‌ನಲ್ಲಿ ಹತ್ತಾರು ರೈತರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರೈತ ಸಂಘಟನೆ ಆರೋಪಿಸಿದೆ.

ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಭಾಗವಹಿಸಿದ್ದ ಸಭೆಯನ್ನು ವಿರೋಧಿಸಿ ರೈತರು ಕರ್ನಾಲ್ ಬಳಿಯ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಜಮಾಯಿಸಿದ್ದರು. ಈ ವೇಳೆ ಪೊಲೀಸರು ಅವರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ರೈತರ ರಕ್ತಸಿಕ್ತವಾಗಿರುವ ದೇಹಗಳ ಹಲವಾರು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...