Homeಮುಖಪುಟರೈತರ ತಲೆ ಒಡೆಯಿರಿ: ಆದೇಶಿಸಿದ ಅಧಿಕಾರಿ ವಿರುದ್ದ ಕೈಕೊಂಡ ಕ್ರಮಗಳೇನು? ಆರ್‌ಟಿಐ ಅರ್ಜಿ

ರೈತರ ತಲೆ ಒಡೆಯಿರಿ: ಆದೇಶಿಸಿದ ಅಧಿಕಾರಿ ವಿರುದ್ದ ಕೈಕೊಂಡ ಕ್ರಮಗಳೇನು? ಆರ್‌ಟಿಐ ಅರ್ಜಿ

ಅಧಿಕಾರಿ ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆಗೆ ಆದೇಶ ನೀಡುತ್ತಿರುವುದರಿಂದ ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಘಟನೆಯಾಗಿದೆ ಇದು ಎಂದು ಸಾಕೇತ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

- Advertisement -
- Advertisement -

ಶನಿವಾರ ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಇದೀಗ ವಿವಾದದ ಕೇಂದ್ರವಾಗಿ ಮಾರ್ಪಟ್ಟಿದೆ. ಘಟನೆಯಲ್ಲಿ ಹತ್ತು ಜನ ರೈತರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ನಡುವೆ, ಕರ್ನಲ್‌ನ ಸಬ್‌ ಡಿವಿಸನಲ್‌ ಮ್ಯಾಜಿಸ್ಟ್ರೇಟ್‌(ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಅವರು ಲಾಠಿ ಚಾರ್ಜ್‌‌ಗೂ ಮುನ್ನ ಪೊಲೀಸರೊಂದಿಗೆ “ರೈತರ ತಲೆ ಒಡೆಯಿರಿ” ಎಂದು ಹೇಳಿರುವ ವಿಡಿಯೊ ವೈರಲ್ ಆಗಿದೆ.

ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಹರಿಯಾಣ ಸರ್ಕಾರದ ವಿರುದ್ದ ಸಾರ್ವಜನಿಕರ ಆಕ್ರೋಶ ಭುಗಿಲೆದ್ದಿದ್ದು, “ಲಾಠಿ ಚಾರ್ಜ್” ಎಂಬುವುದು ಮೊದಲೇ ತಯಾರಾಗಿದ್ದ ಕಾರ್ಯಸೂಚಿಯೆ ಎಂಬ ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ‘ರೈತರ ತಲೆ ಬುರುಡೆ ಒಡೆಯಿರಿ’ – ಪೊಲೀಸರಿಗೆ ಆದೇಶ ನೀಡುತ್ತಿರುವ ಅಧಿಕಾರಿಯ ವಿಡಿಯೊ ವೈರಲ್!

ಘಟನೆಯಲ್ಲಿ ಆಯುಷ್ ಸಿನ್ಹಾ ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆ ಎಸಗುವಂತೆ ಆದೇಶ ನೀಡಿದ್ದಾರೆ. ಅಲ್ಲದೆ ಅವರ ಆದೇಶವು ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ಯ್ರಕ್ಕೆ ಸಂಬಧಿಸಿದ್ದಾಗಿದೆ. ಈ ಹಿನ್ನಲೆಯಲ್ಲಿ ಅವರ ಕಾನೂನು ಬಾಹಿರ ಆದೇಶದ ವಿರುದ್ದ ಕ್ರಮ ಕೈಗೊಳ್ಳಲಾಗಿದೆಯೆ ಎಂದು ಹೋರಾಟಗಾರ ಸಾಕೇತ್ ಗೋಖಲೆ ಆರ್‌ಟಿಐ ಕಾಯ್ದೆಯ ಅಡಿಯಲ್ಲಿ ಪ್ರಶ್ನಿಸಿದ್ದಾರೆ.

ಸಾಕೇತ್‌ ಗೋಖಲೆ ತಮ್ಮ ಆರ್‌ಟಿಐ ಅರ್ಜಿಯಲ್ಲಿ, ಒಟ್ಟು ನಾಲ್ಕು ಪ್ರಶ್ನೆಗಳನ್ನು ಕೇಳಿದ್ದಾರೆ.

  1. “ಆಯುಷ್ ಸಿನ್ಹಾ ವಿರುದ್ಧ ಕರ್ನಲ್‌ ಜಿಲ್ಲಾಡಳಿತ, ಯಾವುದೇ ಔಪಚಾರಿಕ ದೂರನ್ನು ಸ್ವೀಕರಿಸಿದೆಯೆ?”
  2. ಆಯುಷ್ ಸಿನ್ಹಾ ಅವರು ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದಿಸಿದ ಈ ಆಘಾತಕಾರಿ ಘಟನೆಯ ಬಗ್ಗೆ ಕರ್ನಲ್‌ ಜಿಲ್ಲಾಡಳಿತ ಯಾವುದೆ ಕ್ರಮ ತೆಗೆದುಕೊಂಡಿದೆಯೆ? ಒಂದು ವೇಳೆ ಕ್ರಮ ತೆಗೆದುಕೊಳ್ಳದಿದ್ದರೆ, ಅದರ ಕಾರಣಗಳನ್ನು ತಿಳಿಸಿ 
  3. ಕೇಂದ್ರ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳು, 1964 ಮತ್ತು ಇತರ ಸಂಬಂಧಿತ ನಿಯಮಗಳ ಅಡಿಯಲ್ಲಿ ಅಗತ್ಯವಿರುವಂತೆ ಇಲಾಖಾ ವಿಚಾರಣೆಗೆ SDM ಆಯುಷ್ ಸಿನ್ಹಾ ಅವರಿಗೆ ಶೋ ಕಾಸ್ ನೋಟಿಸ್ ನೀಡಲಾಗಿದೆಯೇ?
  4. “ಘಟನೆಗೆ ಸಂಬಂಧಿಸಿದಂತೆ ಕರ್ನಲ್‌ ಜಿಲ್ಲಾಡಳಿತ ಸ್ವೀಕರಿಸಿದ ಅಥವಾ ಕಳುಹಿಸಿದ ಎಲ್ಲಾ ದಾಖಲೆಗಳನ್ನು ದಯವಿಟ್ಟು ಒದಗಿಸಿ” ಎಂದು ಸಾಕೇತ್‌ ಗೋಖಲೆ ಆರ್‌ಟಿಐ ಕಾಯ್ದೆಯ ಅಡಿಯಲ್ಲಿ ಕೇಳಿದ್ದಾರೆ.

ಇದನ್ನೂ ಓದಿ: ರೈತರ ಮೇಲಿನ ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಹರಿಯಾಣ ಸಿಎಂ

ಅಷ್ಟೆ ಅಲ್ಲದೆ, “ಆಯುಷ್ ಸಿನ್ಹಾ ಅವರು ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆಗೆ ಆದೇಶ ನೀಡುತ್ತಿರುವುದರಿಂದ ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಘಟನೆಯಾಗಿದೆ ಇದು” ಎಂದು ಸಾಕೇತ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ತಾನು ಅರ್ಜಿ ಸಲ್ಲಿಸಿರುವುದನ್ನು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಸಾಕೇತ್‌, “ಎಸ್‌ಡಿಎಂ ಆಯುಷ್‌ ಸಿನ್ಹಾ ಐಎಎಸ್‌ ಮತ್ತು ಸಾರ್ವಜನಿಕ ಸೇವಕನಾಗಲು ಅರ್ಹನಲ್ಲ. ಅವರನ್ನು ಸೇವೆಯಿಂದ ವಜಾ ಮಾಡಲೇಬೇಕು ಎಂದು” ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ರೈತರ ಮೇಲೆ ಲಾಠಿ ಚಾರ್ಜ್‌ ಆಗುವುದಕ್ಕಿಂತಲೂ ಮುಂಚೆಯೆ ಆಯುಷ್‌ ಸಿನ್ಹಾ, “ಇದು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ. ಅವರು ಯಾರಾದರೂ ಆಗಿರಲಿ, ಎಲ್ಲಿಂದ ಬಂದಿರಲಾಗಿರಲಿ ಯಾರೊಬ್ಬರೂ ಬ್ಯಾರಿಕೇಡ್‌ನಿಂದ ಮುಂದೆ ಹೋಗಬಾರದು. ಒಂದು ವೇಳೆ ಬಂದರೆ ಅವರ ತಲೆಬುರುಡೆಯನ್ನು ಒಡೆಯಿರಿ. ಯಾವುದೇ ಸೂಚನೆ ಅಥವಾ ನಿರ್ದೇಶನದ ಅಗತ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಪೊಲೀಸ್ ಪಡೆಯಿದೆ” ಎಂದು ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರನ್ನು ನಿಭಾಯಿಸಲು ನಿಯೋಜಿಸಲಾದ ಪೊಲೀಸರಿಗೆ ಹೇಳಿದ್ದರು.

ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಹೊರತಾಗಿಯೂ ಲಾಠಿ ಚಾರ್ಜ್‌ನಲ್ಲಿ ಹತ್ತಾರು ರೈತರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರೈತ ಸಂಘಟನೆ ಆರೋಪಿಸಿದೆ.

ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಭಾಗವಹಿಸಿದ್ದ ಸಭೆಯನ್ನು ವಿರೋಧಿಸಿ ರೈತರು ಕರ್ನಾಲ್ ಬಳಿಯ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಜಮಾಯಿಸಿದ್ದರು. ಈ ವೇಳೆ ಪೊಲೀಸರು ಅವರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ರೈತರ ರಕ್ತಸಿಕ್ತವಾಗಿರುವ ದೇಹಗಳ ಹಲವಾರು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...