Homeಮುಖಪುಟರೈತರ ತಲೆ ಒಡೆಯಿರಿ: ಆದೇಶಿಸಿದ ಅಧಿಕಾರಿ ವಿರುದ್ದ ಕೈಕೊಂಡ ಕ್ರಮಗಳೇನು? ಆರ್‌ಟಿಐ ಅರ್ಜಿ

ರೈತರ ತಲೆ ಒಡೆಯಿರಿ: ಆದೇಶಿಸಿದ ಅಧಿಕಾರಿ ವಿರುದ್ದ ಕೈಕೊಂಡ ಕ್ರಮಗಳೇನು? ಆರ್‌ಟಿಐ ಅರ್ಜಿ

ಅಧಿಕಾರಿ ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆಗೆ ಆದೇಶ ನೀಡುತ್ತಿರುವುದರಿಂದ ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಘಟನೆಯಾಗಿದೆ ಇದು ಎಂದು ಸಾಕೇತ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

- Advertisement -
- Advertisement -

ಶನಿವಾರ ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಇದೀಗ ವಿವಾದದ ಕೇಂದ್ರವಾಗಿ ಮಾರ್ಪಟ್ಟಿದೆ. ಘಟನೆಯಲ್ಲಿ ಹತ್ತು ಜನ ರೈತರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ನಡುವೆ, ಕರ್ನಲ್‌ನ ಸಬ್‌ ಡಿವಿಸನಲ್‌ ಮ್ಯಾಜಿಸ್ಟ್ರೇಟ್‌(ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಅವರು ಲಾಠಿ ಚಾರ್ಜ್‌‌ಗೂ ಮುನ್ನ ಪೊಲೀಸರೊಂದಿಗೆ “ರೈತರ ತಲೆ ಒಡೆಯಿರಿ” ಎಂದು ಹೇಳಿರುವ ವಿಡಿಯೊ ವೈರಲ್ ಆಗಿದೆ.

ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಹರಿಯಾಣ ಸರ್ಕಾರದ ವಿರುದ್ದ ಸಾರ್ವಜನಿಕರ ಆಕ್ರೋಶ ಭುಗಿಲೆದ್ದಿದ್ದು, “ಲಾಠಿ ಚಾರ್ಜ್” ಎಂಬುವುದು ಮೊದಲೇ ತಯಾರಾಗಿದ್ದ ಕಾರ್ಯಸೂಚಿಯೆ ಎಂಬ ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ‘ರೈತರ ತಲೆ ಬುರುಡೆ ಒಡೆಯಿರಿ’ – ಪೊಲೀಸರಿಗೆ ಆದೇಶ ನೀಡುತ್ತಿರುವ ಅಧಿಕಾರಿಯ ವಿಡಿಯೊ ವೈರಲ್!

ಘಟನೆಯಲ್ಲಿ ಆಯುಷ್ ಸಿನ್ಹಾ ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆ ಎಸಗುವಂತೆ ಆದೇಶ ನೀಡಿದ್ದಾರೆ. ಅಲ್ಲದೆ ಅವರ ಆದೇಶವು ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ಯ್ರಕ್ಕೆ ಸಂಬಧಿಸಿದ್ದಾಗಿದೆ. ಈ ಹಿನ್ನಲೆಯಲ್ಲಿ ಅವರ ಕಾನೂನು ಬಾಹಿರ ಆದೇಶದ ವಿರುದ್ದ ಕ್ರಮ ಕೈಗೊಳ್ಳಲಾಗಿದೆಯೆ ಎಂದು ಹೋರಾಟಗಾರ ಸಾಕೇತ್ ಗೋಖಲೆ ಆರ್‌ಟಿಐ ಕಾಯ್ದೆಯ ಅಡಿಯಲ್ಲಿ ಪ್ರಶ್ನಿಸಿದ್ದಾರೆ.

ಸಾಕೇತ್‌ ಗೋಖಲೆ ತಮ್ಮ ಆರ್‌ಟಿಐ ಅರ್ಜಿಯಲ್ಲಿ, ಒಟ್ಟು ನಾಲ್ಕು ಪ್ರಶ್ನೆಗಳನ್ನು ಕೇಳಿದ್ದಾರೆ.

  1. “ಆಯುಷ್ ಸಿನ್ಹಾ ವಿರುದ್ಧ ಕರ್ನಲ್‌ ಜಿಲ್ಲಾಡಳಿತ, ಯಾವುದೇ ಔಪಚಾರಿಕ ದೂರನ್ನು ಸ್ವೀಕರಿಸಿದೆಯೆ?”
  2. ಆಯುಷ್ ಸಿನ್ಹಾ ಅವರು ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದಿಸಿದ ಈ ಆಘಾತಕಾರಿ ಘಟನೆಯ ಬಗ್ಗೆ ಕರ್ನಲ್‌ ಜಿಲ್ಲಾಡಳಿತ ಯಾವುದೆ ಕ್ರಮ ತೆಗೆದುಕೊಂಡಿದೆಯೆ? ಒಂದು ವೇಳೆ ಕ್ರಮ ತೆಗೆದುಕೊಳ್ಳದಿದ್ದರೆ, ಅದರ ಕಾರಣಗಳನ್ನು ತಿಳಿಸಿ 
  3. ಕೇಂದ್ರ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳು, 1964 ಮತ್ತು ಇತರ ಸಂಬಂಧಿತ ನಿಯಮಗಳ ಅಡಿಯಲ್ಲಿ ಅಗತ್ಯವಿರುವಂತೆ ಇಲಾಖಾ ವಿಚಾರಣೆಗೆ SDM ಆಯುಷ್ ಸಿನ್ಹಾ ಅವರಿಗೆ ಶೋ ಕಾಸ್ ನೋಟಿಸ್ ನೀಡಲಾಗಿದೆಯೇ?
  4. “ಘಟನೆಗೆ ಸಂಬಂಧಿಸಿದಂತೆ ಕರ್ನಲ್‌ ಜಿಲ್ಲಾಡಳಿತ ಸ್ವೀಕರಿಸಿದ ಅಥವಾ ಕಳುಹಿಸಿದ ಎಲ್ಲಾ ದಾಖಲೆಗಳನ್ನು ದಯವಿಟ್ಟು ಒದಗಿಸಿ” ಎಂದು ಸಾಕೇತ್‌ ಗೋಖಲೆ ಆರ್‌ಟಿಐ ಕಾಯ್ದೆಯ ಅಡಿಯಲ್ಲಿ ಕೇಳಿದ್ದಾರೆ.

ಇದನ್ನೂ ಓದಿ: ರೈತರ ಮೇಲಿನ ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಹರಿಯಾಣ ಸಿಎಂ

ಅಷ್ಟೆ ಅಲ್ಲದೆ, “ಆಯುಷ್ ಸಿನ್ಹಾ ಅವರು ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆಗೆ ಆದೇಶ ನೀಡುತ್ತಿರುವುದರಿಂದ ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಘಟನೆಯಾಗಿದೆ ಇದು” ಎಂದು ಸಾಕೇತ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ತಾನು ಅರ್ಜಿ ಸಲ್ಲಿಸಿರುವುದನ್ನು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಸಾಕೇತ್‌, “ಎಸ್‌ಡಿಎಂ ಆಯುಷ್‌ ಸಿನ್ಹಾ ಐಎಎಸ್‌ ಮತ್ತು ಸಾರ್ವಜನಿಕ ಸೇವಕನಾಗಲು ಅರ್ಹನಲ್ಲ. ಅವರನ್ನು ಸೇವೆಯಿಂದ ವಜಾ ಮಾಡಲೇಬೇಕು ಎಂದು” ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ರೈತರ ಮೇಲೆ ಲಾಠಿ ಚಾರ್ಜ್‌ ಆಗುವುದಕ್ಕಿಂತಲೂ ಮುಂಚೆಯೆ ಆಯುಷ್‌ ಸಿನ್ಹಾ, “ಇದು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ. ಅವರು ಯಾರಾದರೂ ಆಗಿರಲಿ, ಎಲ್ಲಿಂದ ಬಂದಿರಲಾಗಿರಲಿ ಯಾರೊಬ್ಬರೂ ಬ್ಯಾರಿಕೇಡ್‌ನಿಂದ ಮುಂದೆ ಹೋಗಬಾರದು. ಒಂದು ವೇಳೆ ಬಂದರೆ ಅವರ ತಲೆಬುರುಡೆಯನ್ನು ಒಡೆಯಿರಿ. ಯಾವುದೇ ಸೂಚನೆ ಅಥವಾ ನಿರ್ದೇಶನದ ಅಗತ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಪೊಲೀಸ್ ಪಡೆಯಿದೆ” ಎಂದು ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರನ್ನು ನಿಭಾಯಿಸಲು ನಿಯೋಜಿಸಲಾದ ಪೊಲೀಸರಿಗೆ ಹೇಳಿದ್ದರು.

ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಹೊರತಾಗಿಯೂ ಲಾಠಿ ಚಾರ್ಜ್‌ನಲ್ಲಿ ಹತ್ತಾರು ರೈತರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರೈತ ಸಂಘಟನೆ ಆರೋಪಿಸಿದೆ.

ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಭಾಗವಹಿಸಿದ್ದ ಸಭೆಯನ್ನು ವಿರೋಧಿಸಿ ರೈತರು ಕರ್ನಾಲ್ ಬಳಿಯ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಜಮಾಯಿಸಿದ್ದರು. ಈ ವೇಳೆ ಪೊಲೀಸರು ಅವರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ರೈತರ ರಕ್ತಸಿಕ್ತವಾಗಿರುವ ದೇಹಗಳ ಹಲವಾರು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...