Homeಮುಖಪುಟರೈತರ ತಲೆ ಒಡೆಯಿರಿ: ಆದೇಶಿಸಿದ ಅಧಿಕಾರಿ ವಿರುದ್ದ ಕೈಕೊಂಡ ಕ್ರಮಗಳೇನು? ಆರ್‌ಟಿಐ ಅರ್ಜಿ

ರೈತರ ತಲೆ ಒಡೆಯಿರಿ: ಆದೇಶಿಸಿದ ಅಧಿಕಾರಿ ವಿರುದ್ದ ಕೈಕೊಂಡ ಕ್ರಮಗಳೇನು? ಆರ್‌ಟಿಐ ಅರ್ಜಿ

ಅಧಿಕಾರಿ ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆಗೆ ಆದೇಶ ನೀಡುತ್ತಿರುವುದರಿಂದ ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಘಟನೆಯಾಗಿದೆ ಇದು ಎಂದು ಸಾಕೇತ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

- Advertisement -
- Advertisement -

ಶನಿವಾರ ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಇದೀಗ ವಿವಾದದ ಕೇಂದ್ರವಾಗಿ ಮಾರ್ಪಟ್ಟಿದೆ. ಘಟನೆಯಲ್ಲಿ ಹತ್ತು ಜನ ರೈತರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ನಡುವೆ, ಕರ್ನಲ್‌ನ ಸಬ್‌ ಡಿವಿಸನಲ್‌ ಮ್ಯಾಜಿಸ್ಟ್ರೇಟ್‌(ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಅವರು ಲಾಠಿ ಚಾರ್ಜ್‌‌ಗೂ ಮುನ್ನ ಪೊಲೀಸರೊಂದಿಗೆ “ರೈತರ ತಲೆ ಒಡೆಯಿರಿ” ಎಂದು ಹೇಳಿರುವ ವಿಡಿಯೊ ವೈರಲ್ ಆಗಿದೆ.

ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಹರಿಯಾಣ ಸರ್ಕಾರದ ವಿರುದ್ದ ಸಾರ್ವಜನಿಕರ ಆಕ್ರೋಶ ಭುಗಿಲೆದ್ದಿದ್ದು, “ಲಾಠಿ ಚಾರ್ಜ್” ಎಂಬುವುದು ಮೊದಲೇ ತಯಾರಾಗಿದ್ದ ಕಾರ್ಯಸೂಚಿಯೆ ಎಂಬ ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ‘ರೈತರ ತಲೆ ಬುರುಡೆ ಒಡೆಯಿರಿ’ – ಪೊಲೀಸರಿಗೆ ಆದೇಶ ನೀಡುತ್ತಿರುವ ಅಧಿಕಾರಿಯ ವಿಡಿಯೊ ವೈರಲ್!

ಘಟನೆಯಲ್ಲಿ ಆಯುಷ್ ಸಿನ್ಹಾ ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆ ಎಸಗುವಂತೆ ಆದೇಶ ನೀಡಿದ್ದಾರೆ. ಅಲ್ಲದೆ ಅವರ ಆದೇಶವು ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ಯ್ರಕ್ಕೆ ಸಂಬಧಿಸಿದ್ದಾಗಿದೆ. ಈ ಹಿನ್ನಲೆಯಲ್ಲಿ ಅವರ ಕಾನೂನು ಬಾಹಿರ ಆದೇಶದ ವಿರುದ್ದ ಕ್ರಮ ಕೈಗೊಳ್ಳಲಾಗಿದೆಯೆ ಎಂದು ಹೋರಾಟಗಾರ ಸಾಕೇತ್ ಗೋಖಲೆ ಆರ್‌ಟಿಐ ಕಾಯ್ದೆಯ ಅಡಿಯಲ್ಲಿ ಪ್ರಶ್ನಿಸಿದ್ದಾರೆ.

ಸಾಕೇತ್‌ ಗೋಖಲೆ ತಮ್ಮ ಆರ್‌ಟಿಐ ಅರ್ಜಿಯಲ್ಲಿ, ಒಟ್ಟು ನಾಲ್ಕು ಪ್ರಶ್ನೆಗಳನ್ನು ಕೇಳಿದ್ದಾರೆ.

  1. “ಆಯುಷ್ ಸಿನ್ಹಾ ವಿರುದ್ಧ ಕರ್ನಲ್‌ ಜಿಲ್ಲಾಡಳಿತ, ಯಾವುದೇ ಔಪಚಾರಿಕ ದೂರನ್ನು ಸ್ವೀಕರಿಸಿದೆಯೆ?”
  2. ಆಯುಷ್ ಸಿನ್ಹಾ ಅವರು ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದಿಸಿದ ಈ ಆಘಾತಕಾರಿ ಘಟನೆಯ ಬಗ್ಗೆ ಕರ್ನಲ್‌ ಜಿಲ್ಲಾಡಳಿತ ಯಾವುದೆ ಕ್ರಮ ತೆಗೆದುಕೊಂಡಿದೆಯೆ? ಒಂದು ವೇಳೆ ಕ್ರಮ ತೆಗೆದುಕೊಳ್ಳದಿದ್ದರೆ, ಅದರ ಕಾರಣಗಳನ್ನು ತಿಳಿಸಿ 
  3. ಕೇಂದ್ರ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳು, 1964 ಮತ್ತು ಇತರ ಸಂಬಂಧಿತ ನಿಯಮಗಳ ಅಡಿಯಲ್ಲಿ ಅಗತ್ಯವಿರುವಂತೆ ಇಲಾಖಾ ವಿಚಾರಣೆಗೆ SDM ಆಯುಷ್ ಸಿನ್ಹಾ ಅವರಿಗೆ ಶೋ ಕಾಸ್ ನೋಟಿಸ್ ನೀಡಲಾಗಿದೆಯೇ?
  4. “ಘಟನೆಗೆ ಸಂಬಂಧಿಸಿದಂತೆ ಕರ್ನಲ್‌ ಜಿಲ್ಲಾಡಳಿತ ಸ್ವೀಕರಿಸಿದ ಅಥವಾ ಕಳುಹಿಸಿದ ಎಲ್ಲಾ ದಾಖಲೆಗಳನ್ನು ದಯವಿಟ್ಟು ಒದಗಿಸಿ” ಎಂದು ಸಾಕೇತ್‌ ಗೋಖಲೆ ಆರ್‌ಟಿಐ ಕಾಯ್ದೆಯ ಅಡಿಯಲ್ಲಿ ಕೇಳಿದ್ದಾರೆ.

ಇದನ್ನೂ ಓದಿ: ರೈತರ ಮೇಲಿನ ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಹರಿಯಾಣ ಸಿಎಂ

ಅಷ್ಟೆ ಅಲ್ಲದೆ, “ಆಯುಷ್ ಸಿನ್ಹಾ ಅವರು ನಾಗರಿಕರ ವಿರುದ್ಧ ತೀವ್ರ ದೈಹಿಕ ಹಿಂಸೆಗೆ ಆದೇಶ ನೀಡುತ್ತಿರುವುದರಿಂದ ಜನರ ಪ್ರಾಣ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಘಟನೆಯಾಗಿದೆ ಇದು” ಎಂದು ಸಾಕೇತ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ತಾನು ಅರ್ಜಿ ಸಲ್ಲಿಸಿರುವುದನ್ನು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಸಾಕೇತ್‌, “ಎಸ್‌ಡಿಎಂ ಆಯುಷ್‌ ಸಿನ್ಹಾ ಐಎಎಸ್‌ ಮತ್ತು ಸಾರ್ವಜನಿಕ ಸೇವಕನಾಗಲು ಅರ್ಹನಲ್ಲ. ಅವರನ್ನು ಸೇವೆಯಿಂದ ವಜಾ ಮಾಡಲೇಬೇಕು ಎಂದು” ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ರೈತರ ಮೇಲೆ ಲಾಠಿ ಚಾರ್ಜ್‌ ಆಗುವುದಕ್ಕಿಂತಲೂ ಮುಂಚೆಯೆ ಆಯುಷ್‌ ಸಿನ್ಹಾ, “ಇದು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ. ಅವರು ಯಾರಾದರೂ ಆಗಿರಲಿ, ಎಲ್ಲಿಂದ ಬಂದಿರಲಾಗಿರಲಿ ಯಾರೊಬ್ಬರೂ ಬ್ಯಾರಿಕೇಡ್‌ನಿಂದ ಮುಂದೆ ಹೋಗಬಾರದು. ಒಂದು ವೇಳೆ ಬಂದರೆ ಅವರ ತಲೆಬುರುಡೆಯನ್ನು ಒಡೆಯಿರಿ. ಯಾವುದೇ ಸೂಚನೆ ಅಥವಾ ನಿರ್ದೇಶನದ ಅಗತ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಪೊಲೀಸ್ ಪಡೆಯಿದೆ” ಎಂದು ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರನ್ನು ನಿಭಾಯಿಸಲು ನಿಯೋಜಿಸಲಾದ ಪೊಲೀಸರಿಗೆ ಹೇಳಿದ್ದರು.

ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಹೊರತಾಗಿಯೂ ಲಾಠಿ ಚಾರ್ಜ್‌ನಲ್ಲಿ ಹತ್ತಾರು ರೈತರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರೈತ ಸಂಘಟನೆ ಆರೋಪಿಸಿದೆ.

ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಭಾಗವಹಿಸಿದ್ದ ಸಭೆಯನ್ನು ವಿರೋಧಿಸಿ ರೈತರು ಕರ್ನಾಲ್ ಬಳಿಯ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಜಮಾಯಿಸಿದ್ದರು. ಈ ವೇಳೆ ಪೊಲೀಸರು ಅವರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ರೈತರ ರಕ್ತಸಿಕ್ತವಾಗಿರುವ ದೇಹಗಳ ಹಲವಾರು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...