Homeಕರ್ನಾಟಕಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆಗೆ ಸುಗ್ರಿವಾಜ್ಞೆ : ಸಚಿವ ಸಂಪುಟ ತೀರ್ಮಾನ

ಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆಗೆ ಸುಗ್ರಿವಾಜ್ಞೆ : ಸಚಿವ ಸಂಪುಟ ತೀರ್ಮಾನ

ಸಣ್ಣ ಜಾಗಕ್ಕೆ ಭಾರೀ ಮೊತ್ತದ ಟಿಡಿಆರ್ ವಿತರಿಸುವುದು ರಾಜ್ಯದ ಹಿತಾಸಕ್ತಿಗೆ ಪ್ರತಿಕೂಲ : ಸಚಿವ ಹೆಚ್.ಕೆ ಪಾಟೀಲ್

- Advertisement -
- Advertisement -

ಬೆಂಗಳೂರು ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣದ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶಕ್ಕಾಗಿ ಸುಗ್ರಿವಾಜ್ಞೆ ಹೊರಡಿಸಲು ಶುಕ್ರವಾರ (ಜ.24) ನಡೆದ ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ ಪಾಟೀಲ್, ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ–1996ಕ್ಕೆ ಸಂಬಂಧಪಟ್ಟ ಸಿವಿಲ್‌ ಮೇಲ್ಮನವಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಹಂತದಲ್ಲಿ ಅಭಿವೃದ್ಧಿ ಹಕ್ಕುಗಳನ್ನು(ಟಿಡಿಆರ್‌) ವಿತರಿಸಿದರೆ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದಿದ್ದಾರೆ.

ಅರಮನೆ ಮೈದಾನ ಒಟ್ಟು 472 ಎಕರೆ 16 ಗುಂಟೆ ಜಾಗ ಹೊಂದಿದೆ. 1996ರ ಅಧಿನಿಯಮ ರೂಪಿಸಿದಾಗ 11 ಕೋಟಿ ರೂಪಾಯಿ ಪರಿಹಾರ ನಿಗದಿ ಮಾಡಲಾಗಿತ್ತು. ಇದರಲ್ಲಿ ಒಂದಷ್ಟು ಭಾಗವನ್ನು ರಾಜವಂಶಸ್ಥರು ಪರಿಹಾರವಾಗಿ ಪಡೆದಿದ್ದಾರೆ. ಅಲ್ಲದೇ, ಈ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದಿದೆ. ಇದಕ್ಕೆ ಸುಪ್ರೀಂ ಕೋರ್ಟ್‌ನಿಂದ ಯಾವುದೇ ತಡೆಯಾಜ್ಞೆ ಇಲ್ಲ ಎಂದು ತಿಳಿಸಿದ್ದಾರೆ.

ಆದರೆ, 2024ರ ಡಿಸೆಂಬರ್‌ 10ರಂದು ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ಮತ್ತು ಇತರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ಆ ಆದೇಶದ ಪ್ರಕಾರ ಕರ್ನಾಟಕ ಸ್ಟ್ಯಾಂಪ್‌ ಕಾಯ್ದೆಯ ಸೆಕ್ಷನ್‌ 45 ಬಿಗೆ ಅನುಗುಣವಾಗಿ ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ವಿಸ್ತರಣೆ ಉದ್ದೇಶಕ್ಕಾಗಿ ಅರಮನೆ ಜಾಗವನ್ನು ಮೌಲ್ಯೀಕರಿಸಿ, ವರ್ಗಾವಣೆ ಮಾಡಬಹುದಾದ ಟಿಡಿಆರ್‌ ನೀಡುವಂತೆ ನಿರ್ದೇಶನ ನೀಡಿದೆ ಎಂದು ಹೇಳಿದ್ದಾರೆ.

ಕೇವಲ ಎರಡು ಕಿ.ಮೀ ರಸ್ತೆ ಅಭಿವೃದ್ಧಿಗೆ 3,014 ಕೋಟಿ ರೂಪಾಯಿ ಎಂದರೆ, ಪ್ರತಿ ಎಕರೆಗೆ 200 ಕೋಟಿ ರೂಪಾಯಿ ಆಗುತ್ತದೆ. ಇದರಿಂದ ರಾಜ್ಯದಲ್ಲಿ ಆರ್ಥಿಕವಾಗಿ ಗಂಡಾಂತರ ಪರಿಸ್ಥಿತಿ ಉದ್ಭವವಾಗುತ್ತದೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗದ ಸ್ಥಿತಿಯೂ ಉದ್ಭವಿಸುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುಗ್ರೀವಾಜ್ಞೆ ಜಾರಿ ಮಾಡುವುದರಿಂದ ಅಗತ್ಯವಿರುವಷ್ಟು ಜಾಗವನ್ನು ಬಳಸಿಕೊಳ್ಳಲು ಮತ್ತು ಉದ್ದೇಶಿತ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರಕ್ಕೆ ಅಧಿಕಾರ ದೊರೆಯುತ್ತದೆ. ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಸರ್ಕಾರವು ಈ ಹಿಂದೆ ಕೈಗೊಂಡ ತೀರ್ಮಾನದಂತೆ ಯಾವುದೇ ಮೂಲಸೌಕರ್ಯ ಯೋಜನೆಯಿಂದ ಭಾಗಶಃ ಅಥವಾ ಸಂಪೂರ್ಣವಾಗಿ ಹಿಂದೆ ಸರಿಯಲು ಸುಗ್ರೀವಾಜ್ಞೆ ಅವಕಾಶ ನೀಡುತ್ತದೆ ಎಂದು ವಿವರಿಸಿದ್ದಾರೆ.

ಒಂದು ವೇಳೆ ಸುಪ್ರೀಂ ಕೋರ್ಟ್‌ ಸಿವಿಲ್ ಮೇಲ್ಮನವಿ ವಿಚಾರದಲ್ಲಿ ಸರ್ಕಾರದ ಪರವಾಗಿ ಆದೇಶ ನೀಡಿದರೆ, ಮಾರಾಟ ಅಥವಾ ಬೇರೆ ಯಾವುದೇ ರೀತಿಯಲ್ಲಿ ಬಳಕೆಯಾದ ಜಾಗದ ಟಿಡಿಆರ್‌ ಮೊತ್ತವನ್ನು ಹಿಂಪಡೆಯುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಸುಗ್ರೀವಾಜ್ಞೆಯ ಮೂಲಕ ಅಧಿಕಾರ ಪಡೆಯುವುದೇ ಸೂಕ್ತ ಎಂದು ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು ಎಂದು ಹೆಚ್‌.ಕೆ ಪಾಟೀಲ್ ತಿಳಿಸಿದ್ದಾರೆ.

ಮಂಗಳೂರು – ರಾಮ ಸೇನಾ ದುಷ್ಕರ್ಮಿಗಳ ದಾಳಿಯ ನಂತರ ನಗರಾದಾದ್ಯಂತ ಸಲೂನ್‌ಗಳ ಪರಿಶೀಲನೆಗೆ ಸಜ್ಜಾದ ಪಾಲಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....