Homeಕರ್ನಾಟಕಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆಗೆ ಸುಗ್ರಿವಾಜ್ಞೆ : ಸಚಿವ ಸಂಪುಟ ತೀರ್ಮಾನ

ಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆಗೆ ಸುಗ್ರಿವಾಜ್ಞೆ : ಸಚಿವ ಸಂಪುಟ ತೀರ್ಮಾನ

ಸಣ್ಣ ಜಾಗಕ್ಕೆ ಭಾರೀ ಮೊತ್ತದ ಟಿಡಿಆರ್ ವಿತರಿಸುವುದು ರಾಜ್ಯದ ಹಿತಾಸಕ್ತಿಗೆ ಪ್ರತಿಕೂಲ : ಸಚಿವ ಹೆಚ್.ಕೆ ಪಾಟೀಲ್

- Advertisement -
- Advertisement -

ಬೆಂಗಳೂರು ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣದ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶಕ್ಕಾಗಿ ಸುಗ್ರಿವಾಜ್ಞೆ ಹೊರಡಿಸಲು ಶುಕ್ರವಾರ (ಜ.24) ನಡೆದ ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ ಪಾಟೀಲ್, ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ–1996ಕ್ಕೆ ಸಂಬಂಧಪಟ್ಟ ಸಿವಿಲ್‌ ಮೇಲ್ಮನವಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಹಂತದಲ್ಲಿ ಅಭಿವೃದ್ಧಿ ಹಕ್ಕುಗಳನ್ನು(ಟಿಡಿಆರ್‌) ವಿತರಿಸಿದರೆ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದಿದ್ದಾರೆ.

ಅರಮನೆ ಮೈದಾನ ಒಟ್ಟು 472 ಎಕರೆ 16 ಗುಂಟೆ ಜಾಗ ಹೊಂದಿದೆ. 1996ರ ಅಧಿನಿಯಮ ರೂಪಿಸಿದಾಗ 11 ಕೋಟಿ ರೂಪಾಯಿ ಪರಿಹಾರ ನಿಗದಿ ಮಾಡಲಾಗಿತ್ತು. ಇದರಲ್ಲಿ ಒಂದಷ್ಟು ಭಾಗವನ್ನು ರಾಜವಂಶಸ್ಥರು ಪರಿಹಾರವಾಗಿ ಪಡೆದಿದ್ದಾರೆ. ಅಲ್ಲದೇ, ಈ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದಿದೆ. ಇದಕ್ಕೆ ಸುಪ್ರೀಂ ಕೋರ್ಟ್‌ನಿಂದ ಯಾವುದೇ ತಡೆಯಾಜ್ಞೆ ಇಲ್ಲ ಎಂದು ತಿಳಿಸಿದ್ದಾರೆ.

ಆದರೆ, 2024ರ ಡಿಸೆಂಬರ್‌ 10ರಂದು ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ಮತ್ತು ಇತರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ಆ ಆದೇಶದ ಪ್ರಕಾರ ಕರ್ನಾಟಕ ಸ್ಟ್ಯಾಂಪ್‌ ಕಾಯ್ದೆಯ ಸೆಕ್ಷನ್‌ 45 ಬಿಗೆ ಅನುಗುಣವಾಗಿ ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ವಿಸ್ತರಣೆ ಉದ್ದೇಶಕ್ಕಾಗಿ ಅರಮನೆ ಜಾಗವನ್ನು ಮೌಲ್ಯೀಕರಿಸಿ, ವರ್ಗಾವಣೆ ಮಾಡಬಹುದಾದ ಟಿಡಿಆರ್‌ ನೀಡುವಂತೆ ನಿರ್ದೇಶನ ನೀಡಿದೆ ಎಂದು ಹೇಳಿದ್ದಾರೆ.

ಕೇವಲ ಎರಡು ಕಿ.ಮೀ ರಸ್ತೆ ಅಭಿವೃದ್ಧಿಗೆ 3,014 ಕೋಟಿ ರೂಪಾಯಿ ಎಂದರೆ, ಪ್ರತಿ ಎಕರೆಗೆ 200 ಕೋಟಿ ರೂಪಾಯಿ ಆಗುತ್ತದೆ. ಇದರಿಂದ ರಾಜ್ಯದಲ್ಲಿ ಆರ್ಥಿಕವಾಗಿ ಗಂಡಾಂತರ ಪರಿಸ್ಥಿತಿ ಉದ್ಭವವಾಗುತ್ತದೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗದ ಸ್ಥಿತಿಯೂ ಉದ್ಭವಿಸುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುಗ್ರೀವಾಜ್ಞೆ ಜಾರಿ ಮಾಡುವುದರಿಂದ ಅಗತ್ಯವಿರುವಷ್ಟು ಜಾಗವನ್ನು ಬಳಸಿಕೊಳ್ಳಲು ಮತ್ತು ಉದ್ದೇಶಿತ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರಕ್ಕೆ ಅಧಿಕಾರ ದೊರೆಯುತ್ತದೆ. ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಸರ್ಕಾರವು ಈ ಹಿಂದೆ ಕೈಗೊಂಡ ತೀರ್ಮಾನದಂತೆ ಯಾವುದೇ ಮೂಲಸೌಕರ್ಯ ಯೋಜನೆಯಿಂದ ಭಾಗಶಃ ಅಥವಾ ಸಂಪೂರ್ಣವಾಗಿ ಹಿಂದೆ ಸರಿಯಲು ಸುಗ್ರೀವಾಜ್ಞೆ ಅವಕಾಶ ನೀಡುತ್ತದೆ ಎಂದು ವಿವರಿಸಿದ್ದಾರೆ.

ಒಂದು ವೇಳೆ ಸುಪ್ರೀಂ ಕೋರ್ಟ್‌ ಸಿವಿಲ್ ಮೇಲ್ಮನವಿ ವಿಚಾರದಲ್ಲಿ ಸರ್ಕಾರದ ಪರವಾಗಿ ಆದೇಶ ನೀಡಿದರೆ, ಮಾರಾಟ ಅಥವಾ ಬೇರೆ ಯಾವುದೇ ರೀತಿಯಲ್ಲಿ ಬಳಕೆಯಾದ ಜಾಗದ ಟಿಡಿಆರ್‌ ಮೊತ್ತವನ್ನು ಹಿಂಪಡೆಯುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಸುಗ್ರೀವಾಜ್ಞೆಯ ಮೂಲಕ ಅಧಿಕಾರ ಪಡೆಯುವುದೇ ಸೂಕ್ತ ಎಂದು ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು ಎಂದು ಹೆಚ್‌.ಕೆ ಪಾಟೀಲ್ ತಿಳಿಸಿದ್ದಾರೆ.

ಮಂಗಳೂರು – ರಾಮ ಸೇನಾ ದುಷ್ಕರ್ಮಿಗಳ ದಾಳಿಯ ನಂತರ ನಗರಾದಾದ್ಯಂತ ಸಲೂನ್‌ಗಳ ಪರಿಶೀಲನೆಗೆ ಸಜ್ಜಾದ ಪಾಲಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...