Homeಮುಖಪುಟಗಿಗ್ ಕಾರ್ಮಿಕರ ಕಾಯ್ದೆಗೆ ಸುಗ್ರೀವಾಜ್ಞೆ | ಐತಿಹಾಸಿಕ ಹೆಜ್ಜೆ ಎಂದ ರಾಹುಲ್ ಗಾಂಧಿ

ಗಿಗ್ ಕಾರ್ಮಿಕರ ಕಾಯ್ದೆಗೆ ಸುಗ್ರೀವಾಜ್ಞೆ | ಐತಿಹಾಸಿಕ ಹೆಜ್ಜೆ ಎಂದ ರಾಹುಲ್ ಗಾಂಧಿ

- Advertisement -
- Advertisement -

ಫ್ಲಾಟ್‌ಫಾರ್ಮ್‌ ಆಧಾರಿತ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿರುವ ಕಾನೂನಿಗೆ ಸುಗ್ರೀವಾಜ್ಞೆಯನ್ನು ಹೊರಡಿಸಿರುವ ಕರ್ನಾಟಕ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಶ್ಲಾಘಿಸಿದ್ದಾರೆ. ದೇಶದ ಪ್ರತಿ ರಾಜ್ಯಕ್ಕೂ ಪಕ್ಷದ ದೃಷ್ಟಿಕೋನ ಇದಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಗಿಗ್ ಕಾರ್ಮಿಕರ ಕಾಯ್ದೆಗೆ

ಮಂಗಳವಾರ ಹೊರಡಿಸಲಾದ ಸುಗ್ರೀವಾಜ್ಞೆಯು ಕಲ್ಯಾಣ ಮಂಡಳಿಯ ಸ್ಥಾಪನೆ ಮತ್ತು ಗಿಗ್ ಕಾರ್ಮಿಕರಿಗಾಗಿ ಮೀಸಲಾದ ಕಲ್ಯಾಣ ನಿಧಿಯನ್ನು ರಚಿಸುವ ಪ್ರಸ್ತಾಪವನ್ನು ಹೊಂದಿದೆ.

” ‘ರೇಟಿಂಗ್ ನಹಿ, ಹಕ್ ಚಾಹಿಯೇ’. ‘ಇನ್ಸಾನ್ ಹೈ ಹಮ್, ಗುಲಾಮ್ ನಹಿ’. ಗಿಗ್ ಕಾರ್ಮಿಕರ ಈ ಪ್ರಬಲ ಮಾತುಗಳು ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ನನ್ನ ಮನಸ್ಸಿನಲ್ಲಿ ಉಳಿದವು,” ಎಂದು ರಾಹುಲ್ ಗಾಂಧಿ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಕರ್ನಾಟಕದ ನಮ್ಮ ಕಾಂಗ್ರೆಸ್ ಸರ್ಕಾರ ಗಿಗ್ ಕಾರ್ಮಿಕರ ಹಕ್ಕುಗಳು, ಘನತೆ ಮತ್ತು ರಕ್ಷಣೆಯನ್ನು ಖಾತರಿಪಡಿಸುವ ಸುಗ್ರೀವಾಜ್ಞೆಯನ್ನು ಹೊರಡಿಸುವ ಮೂಲಕ ಐತಿಹಾಸಿಕ ಹೆಜ್ಜೆ ಇಟ್ಟಿದೆ… ಈ ಕಾರ್ಮಿಕರು ನಮಗೆ ಆಹಾರವನ್ನು ತರುತ್ತಾರೆ, ಅಗತ್ಯ ವಸ್ತುಗಳನ್ನು ತಲುಪಿಸುತ್ತಾರೆ ಮತ್ತು ಸೆಕೆ, ಚಳಿ ಮತ್ತು ಮಳೆಯಲ್ಲಿ ನಮ್ಮನ್ನು ಸುರಕ್ಷಿತವಾಗಿ ಇರಿಸುತ್ತಾರೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಹೇಳಿದ್ದಾರೆ.

ಇಷ್ಟೆಲ್ಲ ಕಷ್ಟ ಬಂದದೂ, ಅವರನ್ನು ಯಾವುದೆ ವಿವರಣೆಯಿಲ್ಲದೆ ಅವರ ಅಪ್ಲಿಕೇಶನ್‌ಗಳಿಂದ ಹೆಚ್ಚಾಗಿ ನಿರ್ಬಂಧಿಸಲಾಗುತ್ತದೆ, ಅನಾರೋಗ್ಯ ರಜೆ ನಿರಾಕರಿಸಲಾಗುತ್ತದೆ ಮತ್ತು ಅಪಾರದರ್ಶಕ ಅಲ್ಗಾರಿದಮ್‌ಗಳ ಪ್ರಕಾರ ಅವರಿಗೆ ಪಾವತಿ ಮಾಡಲಾಗುತ್ತದೆ ಎಂದು ರಾಹುಲ್ ಹೇಳಿದ್ದಾರೆ. “ನಾವು ಅದನ್ನು ಬದಲಾಯಿಸುತ್ತಿದ್ದೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಕರ್ನಾಟಕದ ಹೊಸ ಸುಗ್ರೀವಾಜ್ಞೆಯು ಸಾಮಾಜಿಕ ಭದ್ರತೆ, ನ್ಯಾಯಯುತ ಒಪ್ಪಂದಗಳು, ಅಲ್ಗಾರಿದಮಿಕ್ ವೇತನದಲ್ಲಿ ಪಾರದರ್ಶಕತೆ ಮತ್ತು ಅನಿಯಂತ್ರಿತ ನಿರ್ಬಂಧವನ್ನು ಕೊನೆಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

“ನಾವೀನ್ಯತೆ ಮತ್ತು ನ್ಯಾಯವಾಗಿ ನಡೆಯುವ ಮೂಲಕ ತಂತ್ರಜ್ಞಾನವು ಜನರಿಗೆ ಸೇವೆ ಸಲ್ಲಿಸಬೇಕು. ರಾಜಸ್ಥಾನವು ದಾರಿ ತೋರಿಸಿದೆ. ಕರ್ನಾಟಕ ಕಾರ್ಯನಿರ್ವಹಿಸಿದೆ. ತೆಲಂಗಾಣ ಮುಂದಿನ ಗುರಿ” ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಪ್ರಕಾರ, ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕೆಲಸವು ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ ಮತ್ತು ಕೆಲಸದ ಸಂಬಂಧಗಳನ್ನು ಮರುರೂಪಿಸುತ್ತಿದೆ. ಹಾಗಾಗಿ ಕಾರ್ಮಿಕರ ಹಕ್ಕುಗಳ ಈ ಹೊಸ ವ್ಯವಸ್ಥೆಯ ಕೇಂದ್ರದಲ್ಲಿರಬೇಕು ಎಂದು ಹೇಳಿದ್ದಾರೆ. “ಇದು ನಮ್ಮ ದೃಷ್ಟಿಕೋನ ಮತ್ತು ನಾವು ಅದನ್ನು ಪ್ರತಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೊಂಡೊಯ್ಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಯು 15 ಸದಸ್ಯರನ್ನು ಹೊಂದಿರುತ್ತದೆ. ಕಾರ್ಮಿಕ ಸಚಿವರ ನೇತೃತ್ವದ ಇರುವ ಈ ಮಂಡಳಿಯಲ್ಲಿ ನಾಲ್ವರು ಗಿಗ್ ಕಾರ್ಮಿಕರು, ನಾಲ್ವರು ಗಿಗ್ ಅಗ್ರಿಗೇಟರ್‌ಗಳ ಪ್ರತಿನಿಧಿಗಳು ಮತ್ತು ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಾಗರಿಕ ಸಮಾಜದ ಇಬ್ಬರು ಪ್ರತಿನಿಧಿಗಳನ್ನು ಹೊಂದಿರುತ್ತದೆ. ಅವರೆಲ್ಲರನ್ನೂ ರಾಜ್ಯ ಸರ್ಕಾರವು ನಾಮನಿರ್ದೇಶನ ಮಾಡುತ್ತದೆ. ಗಿಗ್ ಕಾರ್ಮಿಕರ ಕಾಯ್ದೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...