Homeಮುಖಪುಟಗಿಗ್ ಕಾರ್ಮಿಕರ ಕಾಯ್ದೆಗೆ ಸುಗ್ರೀವಾಜ್ಞೆ | ಐತಿಹಾಸಿಕ ಹೆಜ್ಜೆ ಎಂದ ರಾಹುಲ್ ಗಾಂಧಿ

ಗಿಗ್ ಕಾರ್ಮಿಕರ ಕಾಯ್ದೆಗೆ ಸುಗ್ರೀವಾಜ್ಞೆ | ಐತಿಹಾಸಿಕ ಹೆಜ್ಜೆ ಎಂದ ರಾಹುಲ್ ಗಾಂಧಿ

- Advertisement -
- Advertisement -

ಫ್ಲಾಟ್‌ಫಾರ್ಮ್‌ ಆಧಾರಿತ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿರುವ ಕಾನೂನಿಗೆ ಸುಗ್ರೀವಾಜ್ಞೆಯನ್ನು ಹೊರಡಿಸಿರುವ ಕರ್ನಾಟಕ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಶ್ಲಾಘಿಸಿದ್ದಾರೆ. ದೇಶದ ಪ್ರತಿ ರಾಜ್ಯಕ್ಕೂ ಪಕ್ಷದ ದೃಷ್ಟಿಕೋನ ಇದಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಗಿಗ್ ಕಾರ್ಮಿಕರ ಕಾಯ್ದೆಗೆ

ಮಂಗಳವಾರ ಹೊರಡಿಸಲಾದ ಸುಗ್ರೀವಾಜ್ಞೆಯು ಕಲ್ಯಾಣ ಮಂಡಳಿಯ ಸ್ಥಾಪನೆ ಮತ್ತು ಗಿಗ್ ಕಾರ್ಮಿಕರಿಗಾಗಿ ಮೀಸಲಾದ ಕಲ್ಯಾಣ ನಿಧಿಯನ್ನು ರಚಿಸುವ ಪ್ರಸ್ತಾಪವನ್ನು ಹೊಂದಿದೆ.

” ‘ರೇಟಿಂಗ್ ನಹಿ, ಹಕ್ ಚಾಹಿಯೇ’. ‘ಇನ್ಸಾನ್ ಹೈ ಹಮ್, ಗುಲಾಮ್ ನಹಿ’. ಗಿಗ್ ಕಾರ್ಮಿಕರ ಈ ಪ್ರಬಲ ಮಾತುಗಳು ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ನನ್ನ ಮನಸ್ಸಿನಲ್ಲಿ ಉಳಿದವು,” ಎಂದು ರಾಹುಲ್ ಗಾಂಧಿ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಕರ್ನಾಟಕದ ನಮ್ಮ ಕಾಂಗ್ರೆಸ್ ಸರ್ಕಾರ ಗಿಗ್ ಕಾರ್ಮಿಕರ ಹಕ್ಕುಗಳು, ಘನತೆ ಮತ್ತು ರಕ್ಷಣೆಯನ್ನು ಖಾತರಿಪಡಿಸುವ ಸುಗ್ರೀವಾಜ್ಞೆಯನ್ನು ಹೊರಡಿಸುವ ಮೂಲಕ ಐತಿಹಾಸಿಕ ಹೆಜ್ಜೆ ಇಟ್ಟಿದೆ… ಈ ಕಾರ್ಮಿಕರು ನಮಗೆ ಆಹಾರವನ್ನು ತರುತ್ತಾರೆ, ಅಗತ್ಯ ವಸ್ತುಗಳನ್ನು ತಲುಪಿಸುತ್ತಾರೆ ಮತ್ತು ಸೆಕೆ, ಚಳಿ ಮತ್ತು ಮಳೆಯಲ್ಲಿ ನಮ್ಮನ್ನು ಸುರಕ್ಷಿತವಾಗಿ ಇರಿಸುತ್ತಾರೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಹೇಳಿದ್ದಾರೆ.

ಇಷ್ಟೆಲ್ಲ ಕಷ್ಟ ಬಂದದೂ, ಅವರನ್ನು ಯಾವುದೆ ವಿವರಣೆಯಿಲ್ಲದೆ ಅವರ ಅಪ್ಲಿಕೇಶನ್‌ಗಳಿಂದ ಹೆಚ್ಚಾಗಿ ನಿರ್ಬಂಧಿಸಲಾಗುತ್ತದೆ, ಅನಾರೋಗ್ಯ ರಜೆ ನಿರಾಕರಿಸಲಾಗುತ್ತದೆ ಮತ್ತು ಅಪಾರದರ್ಶಕ ಅಲ್ಗಾರಿದಮ್‌ಗಳ ಪ್ರಕಾರ ಅವರಿಗೆ ಪಾವತಿ ಮಾಡಲಾಗುತ್ತದೆ ಎಂದು ರಾಹುಲ್ ಹೇಳಿದ್ದಾರೆ. “ನಾವು ಅದನ್ನು ಬದಲಾಯಿಸುತ್ತಿದ್ದೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಕರ್ನಾಟಕದ ಹೊಸ ಸುಗ್ರೀವಾಜ್ಞೆಯು ಸಾಮಾಜಿಕ ಭದ್ರತೆ, ನ್ಯಾಯಯುತ ಒಪ್ಪಂದಗಳು, ಅಲ್ಗಾರಿದಮಿಕ್ ವೇತನದಲ್ಲಿ ಪಾರದರ್ಶಕತೆ ಮತ್ತು ಅನಿಯಂತ್ರಿತ ನಿರ್ಬಂಧವನ್ನು ಕೊನೆಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

“ನಾವೀನ್ಯತೆ ಮತ್ತು ನ್ಯಾಯವಾಗಿ ನಡೆಯುವ ಮೂಲಕ ತಂತ್ರಜ್ಞಾನವು ಜನರಿಗೆ ಸೇವೆ ಸಲ್ಲಿಸಬೇಕು. ರಾಜಸ್ಥಾನವು ದಾರಿ ತೋರಿಸಿದೆ. ಕರ್ನಾಟಕ ಕಾರ್ಯನಿರ್ವಹಿಸಿದೆ. ತೆಲಂಗಾಣ ಮುಂದಿನ ಗುರಿ” ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಪ್ರಕಾರ, ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕೆಲಸವು ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ ಮತ್ತು ಕೆಲಸದ ಸಂಬಂಧಗಳನ್ನು ಮರುರೂಪಿಸುತ್ತಿದೆ. ಹಾಗಾಗಿ ಕಾರ್ಮಿಕರ ಹಕ್ಕುಗಳ ಈ ಹೊಸ ವ್ಯವಸ್ಥೆಯ ಕೇಂದ್ರದಲ್ಲಿರಬೇಕು ಎಂದು ಹೇಳಿದ್ದಾರೆ. “ಇದು ನಮ್ಮ ದೃಷ್ಟಿಕೋನ ಮತ್ತು ನಾವು ಅದನ್ನು ಪ್ರತಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೊಂಡೊಯ್ಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಯು 15 ಸದಸ್ಯರನ್ನು ಹೊಂದಿರುತ್ತದೆ. ಕಾರ್ಮಿಕ ಸಚಿವರ ನೇತೃತ್ವದ ಇರುವ ಈ ಮಂಡಳಿಯಲ್ಲಿ ನಾಲ್ವರು ಗಿಗ್ ಕಾರ್ಮಿಕರು, ನಾಲ್ವರು ಗಿಗ್ ಅಗ್ರಿಗೇಟರ್‌ಗಳ ಪ್ರತಿನಿಧಿಗಳು ಮತ್ತು ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಾಗರಿಕ ಸಮಾಜದ ಇಬ್ಬರು ಪ್ರತಿನಿಧಿಗಳನ್ನು ಹೊಂದಿರುತ್ತದೆ. ಅವರೆಲ್ಲರನ್ನೂ ರಾಜ್ಯ ಸರ್ಕಾರವು ನಾಮನಿರ್ದೇಶನ ಮಾಡುತ್ತದೆ. ಗಿಗ್ ಕಾರ್ಮಿಕರ ಕಾಯ್ದೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...