Homeಕರ್ನಾಟಕನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ: ಸಚಿವ ಸಂಪುಟ ಸಭೆ ಇ

ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ: ಸಚಿವ ಸಂಪುಟ ಸಭೆ ಇ

- Advertisement -
- Advertisement -

ರಾಜ್ಯದಲ್ಲಿ ಉಂಟಾಗಿರುವ ಕನ್ನಡ ನಾಮಫಲಕ ಗೊಂದಲಕ್ಕೆ ಇತಿಶ್ರಿ ಹಾಡಲು ಸರ್ಕಾರ ಮುಂದಾಗಿದ್ದು, ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಸುಗ್ರಿವಾಜ್ಞೆ ಹೊರಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಮಸೂದೆ’ ಮಂಡಿಸಿ ಅನುಮೋದನೆ ಪಡೆಯಲಾಗಿತ್ತು. ಈ ಮಸೂದೆ ಪ್ರಕಾರ, ಶೇ.50:50 ಅನುಪಾತದ ನಿಯಮವಿದೆ. ಅಂದರೆ, ನಾಮಫಲಕಗಳಲ್ಲಿ ಶೇ.50ರಷ್ಟು ಕನ್ನಡ ಕಡ್ಡಾಯಗೊಳಿಸಲಾಗಿದೆ.

ಇತ್ತೀಚೆಗೆ ಸಿದ್ದರಾಮಯ್ಯ ಸರ್ಕಾರ ಶೇ. 60ರಷ್ಟು ಕನ್ನಡ ಕಡ್ಡಾಯ ಮಾಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆ ಮಸೂದೆಗೆ ತಿದ್ದುಪಡಿ ತರಲು ಸರ್ಕಾರ ನಿರ್ಧರಿಸಿದೆ. ಫೆಬ್ರವರಿ 28ರೊಳಗೆ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗೋರಿಕೋದ್ಯಮಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.

ಕನ್ನಡ ಸಂಸ್ಕೃತಿ ನಿರ್ದೇಶಕರ ಬದಲಿಗೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದವರನ್ನು ಸಂಚಾಲಕರನ್ನಾಗಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯವರನ್ನು ಸದಸ್ಯರನ್ನಾಗಿ ಮಾಡಲಾಗುವುದು. ಈ ಅಂಶವು ತಿದ್ದುಪಡಿಯಲ್ಲಿ ಒಳಗೊಂಡಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ತಿಳಿಸಿದ್ದಾರೆ.

ನಾಮಫಲಕಗಳಲ್ಲಿ ಮೇಲಿನ ಅರ್ಧಭಾಗದಲ್ಲಿ ಕನ್ನಡ ಹೆಸರು ಅಳವಡಿಸಬೇಕು ಎಂದು ಈ ಹಿಂದೆ ಕಾನೂನು ಹೇಳಿತ್ತು. ಸಿದ್ದರಾಮಯ್ಯ ಸರ್ಕಾರ ಮೇಲಿನ ಅರ್ಧ ಭಾಗದ ಬದಲು, ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಿದೆ. ನಾಮಫಲಕಗಳಲ್ಲಿ ಕನ್ನಡ ಹೆಸರು ಮೇಲಿನ ಭಾಗದಲ್ಲೇ ಇರಬೇಕೆಂದು ಸೂಚಿಸಿದೆ.

ನಾಮಫಲಕಗಳಲ್ಲಿ ಕನ್ನಡ ಬಳಸದೇ ಇರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣಗೌಡರ ಬಣದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ದೇವನಹಳ್ಳಿ ಸಮೀಪದ ಸಾದಹಳ್ಳಿ ಗೇಟ್‌ನಿಂದ ಹೊರಟ ಮೆರವಣಿಗೆ ಭಾರೀ ಸಂಚಲನ ಮೂಡಿಸಿತ್ತು. ಕರವೇ ಕಾರ್ಯಕರ್ತರು ಕೆಲವು ಕಡೆಗಳಲ್ಲಿ ನಾಮಫಲಕಗಳನ್ನು ಒಡೆದು ಹಾಕಿದ್ದರು. ಇದರಿಂದ ಹೋರಾಟ ಹಿಂಸೆಗೆ ತಿರುಗಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು.

ನಾರಾಯಣಗೌಡ ಸೇರಿದಂತೆ 40ಕ್ಕೂ ಹೆಚ್ಚು ಜನರನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿತ್ತು. ಅವರಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ರಕ್ಷಣಾ ವೇದಿಕೆಯು, ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಶುಕ್ರವಾರದಿಂದ ಆರಂಭಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರ ಹೋರಾಟವನ್ನು ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು ಬೆಂಬಲಿಸಿದ್ದವು.

2023ರ ಮಾರ್ಚ್‌ ತಿಂಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಸೆಕ್ಷನ್‌ 17(6) ರಲ್ಲಿ ನಾಮಫಲಕಗಳಲ್ಲಿನ ಅರ್ಧ ಭಾಗವು (ಶೇ.50) ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿತ್ತು. ಇದೀಗ ನಿಯಮಕ್ಕೆ ತಿದ್ದುಪಡಿ ತಂದು ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿನ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ : ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ವಿಸ್ತೃತ ಪೀಠಕ್ಕೆ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...