Homeಕರ್ನಾಟಕನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ: ಸಚಿವ ಸಂಪುಟ ಸಭೆ ಇ

ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ: ಸಚಿವ ಸಂಪುಟ ಸಭೆ ಇ

- Advertisement -
- Advertisement -

ರಾಜ್ಯದಲ್ಲಿ ಉಂಟಾಗಿರುವ ಕನ್ನಡ ನಾಮಫಲಕ ಗೊಂದಲಕ್ಕೆ ಇತಿಶ್ರಿ ಹಾಡಲು ಸರ್ಕಾರ ಮುಂದಾಗಿದ್ದು, ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಸುಗ್ರಿವಾಜ್ಞೆ ಹೊರಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಮಸೂದೆ’ ಮಂಡಿಸಿ ಅನುಮೋದನೆ ಪಡೆಯಲಾಗಿತ್ತು. ಈ ಮಸೂದೆ ಪ್ರಕಾರ, ಶೇ.50:50 ಅನುಪಾತದ ನಿಯಮವಿದೆ. ಅಂದರೆ, ನಾಮಫಲಕಗಳಲ್ಲಿ ಶೇ.50ರಷ್ಟು ಕನ್ನಡ ಕಡ್ಡಾಯಗೊಳಿಸಲಾಗಿದೆ.

ಇತ್ತೀಚೆಗೆ ಸಿದ್ದರಾಮಯ್ಯ ಸರ್ಕಾರ ಶೇ. 60ರಷ್ಟು ಕನ್ನಡ ಕಡ್ಡಾಯ ಮಾಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆ ಮಸೂದೆಗೆ ತಿದ್ದುಪಡಿ ತರಲು ಸರ್ಕಾರ ನಿರ್ಧರಿಸಿದೆ. ಫೆಬ್ರವರಿ 28ರೊಳಗೆ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗೋರಿಕೋದ್ಯಮಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.

ಕನ್ನಡ ಸಂಸ್ಕೃತಿ ನಿರ್ದೇಶಕರ ಬದಲಿಗೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದವರನ್ನು ಸಂಚಾಲಕರನ್ನಾಗಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯವರನ್ನು ಸದಸ್ಯರನ್ನಾಗಿ ಮಾಡಲಾಗುವುದು. ಈ ಅಂಶವು ತಿದ್ದುಪಡಿಯಲ್ಲಿ ಒಳಗೊಂಡಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ತಿಳಿಸಿದ್ದಾರೆ.

ನಾಮಫಲಕಗಳಲ್ಲಿ ಮೇಲಿನ ಅರ್ಧಭಾಗದಲ್ಲಿ ಕನ್ನಡ ಹೆಸರು ಅಳವಡಿಸಬೇಕು ಎಂದು ಈ ಹಿಂದೆ ಕಾನೂನು ಹೇಳಿತ್ತು. ಸಿದ್ದರಾಮಯ್ಯ ಸರ್ಕಾರ ಮೇಲಿನ ಅರ್ಧ ಭಾಗದ ಬದಲು, ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಿದೆ. ನಾಮಫಲಕಗಳಲ್ಲಿ ಕನ್ನಡ ಹೆಸರು ಮೇಲಿನ ಭಾಗದಲ್ಲೇ ಇರಬೇಕೆಂದು ಸೂಚಿಸಿದೆ.

ನಾಮಫಲಕಗಳಲ್ಲಿ ಕನ್ನಡ ಬಳಸದೇ ಇರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣಗೌಡರ ಬಣದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ದೇವನಹಳ್ಳಿ ಸಮೀಪದ ಸಾದಹಳ್ಳಿ ಗೇಟ್‌ನಿಂದ ಹೊರಟ ಮೆರವಣಿಗೆ ಭಾರೀ ಸಂಚಲನ ಮೂಡಿಸಿತ್ತು. ಕರವೇ ಕಾರ್ಯಕರ್ತರು ಕೆಲವು ಕಡೆಗಳಲ್ಲಿ ನಾಮಫಲಕಗಳನ್ನು ಒಡೆದು ಹಾಕಿದ್ದರು. ಇದರಿಂದ ಹೋರಾಟ ಹಿಂಸೆಗೆ ತಿರುಗಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು.

ನಾರಾಯಣಗೌಡ ಸೇರಿದಂತೆ 40ಕ್ಕೂ ಹೆಚ್ಚು ಜನರನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿತ್ತು. ಅವರಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ರಕ್ಷಣಾ ವೇದಿಕೆಯು, ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಶುಕ್ರವಾರದಿಂದ ಆರಂಭಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರ ಹೋರಾಟವನ್ನು ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು ಬೆಂಬಲಿಸಿದ್ದವು.

2023ರ ಮಾರ್ಚ್‌ ತಿಂಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಸೆಕ್ಷನ್‌ 17(6) ರಲ್ಲಿ ನಾಮಫಲಕಗಳಲ್ಲಿನ ಅರ್ಧ ಭಾಗವು (ಶೇ.50) ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿತ್ತು. ಇದೀಗ ನಿಯಮಕ್ಕೆ ತಿದ್ದುಪಡಿ ತಂದು ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿನ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ : ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ವಿಸ್ತೃತ ಪೀಠಕ್ಕೆ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...