Homeಕರ್ನಾಟಕಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

ಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

- Advertisement -
- Advertisement -

“ಶೋಷಿತರ ಅತ್ಯಂತ ಪ್ರಬಲ‌ ಮಿತ್ರ ಅವರದ್ದೇ ಆದ ಸಂಘಟನೆ” ಎಂದು ಜೈಭೀಮ್‌ ಸಿನೆಮಾಕ್ಕೆ ಪ್ರೇರಣೆಯಾದ, ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು ಹೇಳಿದರು.

ಬೆಂಗಳೂರಿನ ಗಾಂಧಿಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜಸ್ಟೀಸ್ ಎಚ್‌.ಎನ್‌.ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನ್ಯಾಯಾಂಗ ಏನು ಮಾಡಲು ಸಾಧ್ಯವಾಗುತ್ತದೆ? ಸಮಾಜ ಬದಲಾಗಬೇಕಲ್ಲವೇ ಎಂದು ಅನೇಕರು ನಮ್ಮನ್ನು ಕೇಳುತ್ತಾರೆ. ಸಮಾಜ ಬದಲಾಗುವವರೆಗೆ ಶೋಷಿತರಿಗೆ ನ್ಯಾಯ ಬೇಕಲ್ಲವೇ? ಶೋಷಿತರು ಬದುಕಬೇಕಲ್ಲವೇ? ಪ್ರತಿದಿನ ಅವರು ಜೀವನ ಮಾಡಬೇಕಾದರೆ ನ್ಯಾಯಾಂಗ ರಕ್ಷಣೆ ನೀಡಬೇಕು. ಒಬ್ಬ ಸರಿಯಾದ ವಕೀಲ, ಒಬ್ಬ ದಿಟ್ಟತನ ಇರುವ ನ್ಯಾಯಾಧೀಶ, ಒಬ್ಬ ಸರಿಯಾದ ಅಧಿಕಾರಿ ಅಂತಹ ಬದಲಾವಣೆಗಳನ್ನು ತರಬಲ್ಲರು. ಆ ಶಕ್ತಿ ಅವರಿಗೆ ಇರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾಜ ಬದಲಾಗುವವರೆಗೆ ಶೋಷಿತರು ಬದಕಬೇಕಾದ ರೀತಿಯಲ್ಲಿ ನ್ಯಾಯಾಂಗ ಇರಬೇಕು. ಭಾರತದೊಳಗೆ ಶೋಷಿತರ ಸ್ಥಿತಿ ಏನು ಎಂಬುದನ್ನು ನಾನು, ನಾಗಮೋಹನ್ ದಾಸ್ ಥರದವರು ನೋಡಿದ್ದೇವೆ. ‘ಜೈ ಭೀಮ್‌’ ಥರದ ಸಿನೆಮಾಗಳಿಂದ ಲಾಕಪ್‌ ಡೆತ್‌ಗಳು ನಿಂತು ಹೋಗುವುದಿಲ್ಲ. ಆದರೆ ಸಿನೆಮಾ ನೋಡಿದ ಜನರು ಎಚ್ಚೆತ್ತುಕೊಂಡು ಸಂಘಟಿತರಾದಾಗ ಖಂಡಿತ ಇಂತಹ ಘಟನೆಗಳು ನಿಲ್ಲುತ್ತವೆ. ಜೈ ಭೀಮ್‌ ಸಿನೆಮಾ ಬಂದ ಮೇಲೆ ಸಾಕಷ್ಟು ಕಡೆ ಜನರು ಸಂಘಟಿತರಾಗುತ್ತಿದ್ದಾರೆ. ಅನೇಕ ಆದಿವಾಸಿ ಗುಂಪುಗಳು ಸಂಘಟನೆ ಮಾಡಿಕೊಂಡು ಹೋರಾಟಕ್ಕೆ ಇಳಿಯುತ್ತಿರುವುದನ್ನು ನಾವು ಕೇಳಿದ್ದೇವೆ ಎಂದರು.

ಇದನ್ನೂ ಓದಿರಿ: ಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

ಬ್ರಿಟಿಷರ ಕಾಲದಲ್ಲಿ ಸಾರ್ವಜನಿಕರನ್ನು ಅಪರಾಧಿಗಳೆಂದು ಬಿಂಬಿಸುವ ಕಾನೂನುಗಳು ಜಾರಿಯಾದವು. ಅನೇಕ ಬುಡಕಟ್ಟು ಸಮುದಾಯಗಳನ್ನು ಕ್ರಿಮಿನಲ್‌ಗಳು ಎಂದು ಪಟ್ಟಿ ಮಾಡಲಾಯಿತು. ಬ್ರಿಟಿಷರು ನಮ್ಮ ದೇಶವನ್ನು ಬಿಟ್ಟು ಹೋದರೂ ಟ್ರೈಬ್‌ಗಳನ್ನು ಕ್ರಿಮಿನಲ್‌ಗಳಾಗಿ ನೋಡುವ ಮನಸ್ಥಿತಿ ಮಾತ್ರ ಪೊಲೀಸರಲ್ಲಿ ಇನ್ನೂ ಹಾಗೇ ಇದೆ ಎಂದು ವಿಷಾದಿಸಿದರು.

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿದರು.

ಇಂದು ಪೊಲೀಸರು ಒಂದು ಚಾರ್ಜ್‌‌ಶೀಟ್‌ ಅಥವಾ ದೂರು ಬರೆದರೆ ಅದರ ಮೇಲೆ ‘ಕೆ.ಆರ್‌.’, ‘ಐ.ಆರ್‌.’ ಎಂದು ಬರೆಯುತ್ತಾರೆ. ಕೆ.ಆರ್‌. ಎಂದರೆ- ಕೊರಗ, ಐ.ಆರ್‌. ಎಂದರೆ ಇರುಳಿಗ ಎಂದರ್ಥ. ಪೊಲೀಸರ ಮನಸ್ಸಿನಲ್ಲಿರುವ ಪೂರ್ವಗ್ರಹದಿಂದಾಗಿ ಹೆಸರಿನ ಮುಂದೆ ಹೀಗೆ ಬರೆಯಲಾಗುತ್ತಿದೆ. ಹೆಸರಿನ ಮುಂದಿನ ಇನ್ಶಿಯಲ್‌ ನೋಡಿದ ತಕ್ಷಣ ಅಧಿಕಾರಿಗಳು, ಈ ಜನರನ್ನು ಅಪರಾಧಿಗಳು ಎಂದು ಮೊದಲೇ ತೀರ್ಮಾನ ಮಾಡಿಬಿಡುತ್ತಾರೆ. ಅಲ್ಲೇ ತೀರ್ಪು ಕೊಟ್ಟು, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲದಂತೆ ಶಿಕ್ಷೆಗೊಳಪಡಿಸುವುದನ್ನು ನೋಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಬುಡಕಟ್ಟು ಸಮುದಾಯಗಳನ್ನು ಬ್ರಿಟೀಷರು ‘ಕ್ರಿಮಿನಲ್ ಟ್ರೈಬ್’ ಗಳೆಂದು ಗುರುತಿಸುವ ಕಾಯ್ದೆ‌ಮಾಡಿದರು. ಇದನ್ನು ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ವಿರೋಧಿಸಿದರೂ ಸ್ವಾತಂತ್ರ್ಯ ಬರುವವರೆಗೂ ಆ ಕಾನೂನು ಹಾಗೇ ಇತ್ತು.‌ 1947ರ ನಂತರ ಕಾಂಗ್ರೆಸ್‌ ಆ ಕಾಯ್ದೆಯನ್ನು ವಾಪಾಸ್ ತೆಗೆದುಕೊಂಡಿತು, ಆದರೆ ಪೊಲೀಸರ ದೃಷ್ಟಿಕೋನ ಬದಲಾಗಲಿಲ್ಲ. ಈಗಲೂ ಬುಡಕಟ್ಟು ಜನರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದು, ಎನ್ ಕೌಂಟರ್ ಮಾಡುವುದು, ಲಾಕಪ್‌ಗಳಲ್ಲಿ ಹಿಂಸಿಸುವುದು ಮತ್ತು ಕೊಲ್ಲುವುದು ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳಿದರು.

ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಬೇಕಾಗಿದೆ. ಆ ಬದಲಾವಣೆಗಾಗಿ ಜನರನ್ನು ಬದಲಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ನಾನು ಮತ್ತು ನಾಗಮೋಹನ್ ದಾಸ್ ಥರದ ನಿವೃತ್ತ ನ್ಯಾಯಾಧೀಶರು ನಿಜವಾದ ಅಧಿಕಾರವನ್ನು ಈಗ ಹೊಂದಿಲ್ಲ. ಆದರೂ ಪರಿಣಾಮಕಾರಿಯಾದ ಒಂದು ಅಧಿಕಾರ ನಮಗಿದೆ. ನಾವು ಜನರ ಮುಂದೆ ಹೋಗಬಹುದು, ಈ ನ್ಯಾಯಾಂಗ ಜನರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂಬುದನ್ನು ಬಿಚ್ಚಿಡಬಹುದು. ನ್ಯಾಯಾಂಗ ಬದಲಿಸಲಾಗದ್ದನ್ನು ಜನರು ಬದಲಿಸಬಲ್ಲರು. ಹೀಗಾಗಿ ಶೋಷಿತರನ್ನು ಎಚ್ಚರಿಸಬೇಕು ಎಂಬ ಕಾರಣಕ್ಕಾಗಿ ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂದರು. ಈ ದೇಶದ ಶೋಷಿತರಿಗೆ ಶಿಕ್ಷಣ ಎನ್ನುವುದು ಖಂಡಿತವಾಗಿಯೂ ಬಿಡುಗಡೆಯ ಹಾದಿ ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಜಸ್ಟೀಸ್‌ ನಾಗಮೋಹನ ದಾಸ್ ಮಾತನಾಡಿ, “ಭಾರತ ಗಣರಾಜ್ಯವಾದ ಬಳಿಕ ನಾವು ಒಂದಿಷ್ಟು ಸಾಧನೆಯನ್ನು ಮಾಡಿದ್ದೇವೆ. ಆದರೆ ಇಂದು ಹಲವು ಸಮಸ್ಯೆಗಳು, ಸವಾಲುಗಳು ನಮ್ಮನ್ನು ಕಾಡುತ್ತಿವೆ. ನಾವೆಲ್ಲ ಹೋರಾಟ ಮಾಡಿದಾಗ ಮೂಢನಂಬಿಕೆಗಳ ನಿಷೇಧ ಕಾಯ್ದೆ ಜಾರಿಗೆ ಬಂತು. ಆದರೆ ಒಂದೇ ಒಂದು ಪ್ರಕರಣ ದಾಖಲಾಗಲಿಲ್ಲ. ಚುನಾವಣೆಯಲ್ಲಿ ಜಾತಿ, ಹಣ, ಧರ್ಮದ ಪ್ರಭಾವವನ್ನು ಯಾವ ರೀತಿ ಮುಕ್ತ ಮಾಡಬೇಕು? ಜನಪ್ರತಿನಿಧಿಗಳು ತಮಗೆ ಇಷ್ಟಬಂದಾಗ ರಾಜೀನಾಮೆ ಕೊಟ್ಟು ಉಪಚುನಾವಣೆಯನ್ನು ನಮ್ಮ ಮೇಲೆ ಏರುವಂತಹ ಸಂದರ್ಭದಲ್ಲಿ ಏನು ಮಾಡಬೇಕು? ಪರಿಹಾರ ಏನು ಎಂಬುದನ್ನು ಪುಸ್ತಕದಲ್ಲಿ ಪ್ರಸ್ತಾಪ ಮಾಡಿದ್ದೇನೆ” ಎಂದು ತಿಳಿಸಿದರು.

ಚಿಂತಕರಾದ ಬಿ.ಟಿ ಲಲಿತಾ ನಾಯಕ್, ಮಾವಳ್ಳಿ ಶಂಕರ್, ರಾಜಶೇಖರ್ ಮೂರ್ತಿ, ಗೋಪಾಲಕೃಷ್ಣ, ಪ್ರೊ.ಬರಗೂರು ರಾಮಚಂದ್ರಪ್ಪ ಹಾಜರಿದ್ದರು.


ಇದನ್ನೂ ಓದಿರಿ: ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...