Homeಕರ್ನಾಟಕಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

ಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

- Advertisement -
- Advertisement -

“ಶೋಷಿತರ ಅತ್ಯಂತ ಪ್ರಬಲ‌ ಮಿತ್ರ ಅವರದ್ದೇ ಆದ ಸಂಘಟನೆ” ಎಂದು ಜೈಭೀಮ್‌ ಸಿನೆಮಾಕ್ಕೆ ಪ್ರೇರಣೆಯಾದ, ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು ಹೇಳಿದರು.

ಬೆಂಗಳೂರಿನ ಗಾಂಧಿಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜಸ್ಟೀಸ್ ಎಚ್‌.ಎನ್‌.ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನ್ಯಾಯಾಂಗ ಏನು ಮಾಡಲು ಸಾಧ್ಯವಾಗುತ್ತದೆ? ಸಮಾಜ ಬದಲಾಗಬೇಕಲ್ಲವೇ ಎಂದು ಅನೇಕರು ನಮ್ಮನ್ನು ಕೇಳುತ್ತಾರೆ. ಸಮಾಜ ಬದಲಾಗುವವರೆಗೆ ಶೋಷಿತರಿಗೆ ನ್ಯಾಯ ಬೇಕಲ್ಲವೇ? ಶೋಷಿತರು ಬದುಕಬೇಕಲ್ಲವೇ? ಪ್ರತಿದಿನ ಅವರು ಜೀವನ ಮಾಡಬೇಕಾದರೆ ನ್ಯಾಯಾಂಗ ರಕ್ಷಣೆ ನೀಡಬೇಕು. ಒಬ್ಬ ಸರಿಯಾದ ವಕೀಲ, ಒಬ್ಬ ದಿಟ್ಟತನ ಇರುವ ನ್ಯಾಯಾಧೀಶ, ಒಬ್ಬ ಸರಿಯಾದ ಅಧಿಕಾರಿ ಅಂತಹ ಬದಲಾವಣೆಗಳನ್ನು ತರಬಲ್ಲರು. ಆ ಶಕ್ತಿ ಅವರಿಗೆ ಇರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾಜ ಬದಲಾಗುವವರೆಗೆ ಶೋಷಿತರು ಬದಕಬೇಕಾದ ರೀತಿಯಲ್ಲಿ ನ್ಯಾಯಾಂಗ ಇರಬೇಕು. ಭಾರತದೊಳಗೆ ಶೋಷಿತರ ಸ್ಥಿತಿ ಏನು ಎಂಬುದನ್ನು ನಾನು, ನಾಗಮೋಹನ್ ದಾಸ್ ಥರದವರು ನೋಡಿದ್ದೇವೆ. ‘ಜೈ ಭೀಮ್‌’ ಥರದ ಸಿನೆಮಾಗಳಿಂದ ಲಾಕಪ್‌ ಡೆತ್‌ಗಳು ನಿಂತು ಹೋಗುವುದಿಲ್ಲ. ಆದರೆ ಸಿನೆಮಾ ನೋಡಿದ ಜನರು ಎಚ್ಚೆತ್ತುಕೊಂಡು ಸಂಘಟಿತರಾದಾಗ ಖಂಡಿತ ಇಂತಹ ಘಟನೆಗಳು ನಿಲ್ಲುತ್ತವೆ. ಜೈ ಭೀಮ್‌ ಸಿನೆಮಾ ಬಂದ ಮೇಲೆ ಸಾಕಷ್ಟು ಕಡೆ ಜನರು ಸಂಘಟಿತರಾಗುತ್ತಿದ್ದಾರೆ. ಅನೇಕ ಆದಿವಾಸಿ ಗುಂಪುಗಳು ಸಂಘಟನೆ ಮಾಡಿಕೊಂಡು ಹೋರಾಟಕ್ಕೆ ಇಳಿಯುತ್ತಿರುವುದನ್ನು ನಾವು ಕೇಳಿದ್ದೇವೆ ಎಂದರು.

ಇದನ್ನೂ ಓದಿರಿ: ಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

ಬ್ರಿಟಿಷರ ಕಾಲದಲ್ಲಿ ಸಾರ್ವಜನಿಕರನ್ನು ಅಪರಾಧಿಗಳೆಂದು ಬಿಂಬಿಸುವ ಕಾನೂನುಗಳು ಜಾರಿಯಾದವು. ಅನೇಕ ಬುಡಕಟ್ಟು ಸಮುದಾಯಗಳನ್ನು ಕ್ರಿಮಿನಲ್‌ಗಳು ಎಂದು ಪಟ್ಟಿ ಮಾಡಲಾಯಿತು. ಬ್ರಿಟಿಷರು ನಮ್ಮ ದೇಶವನ್ನು ಬಿಟ್ಟು ಹೋದರೂ ಟ್ರೈಬ್‌ಗಳನ್ನು ಕ್ರಿಮಿನಲ್‌ಗಳಾಗಿ ನೋಡುವ ಮನಸ್ಥಿತಿ ಮಾತ್ರ ಪೊಲೀಸರಲ್ಲಿ ಇನ್ನೂ ಹಾಗೇ ಇದೆ ಎಂದು ವಿಷಾದಿಸಿದರು.

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿದರು.

ಇಂದು ಪೊಲೀಸರು ಒಂದು ಚಾರ್ಜ್‌‌ಶೀಟ್‌ ಅಥವಾ ದೂರು ಬರೆದರೆ ಅದರ ಮೇಲೆ ‘ಕೆ.ಆರ್‌.’, ‘ಐ.ಆರ್‌.’ ಎಂದು ಬರೆಯುತ್ತಾರೆ. ಕೆ.ಆರ್‌. ಎಂದರೆ- ಕೊರಗ, ಐ.ಆರ್‌. ಎಂದರೆ ಇರುಳಿಗ ಎಂದರ್ಥ. ಪೊಲೀಸರ ಮನಸ್ಸಿನಲ್ಲಿರುವ ಪೂರ್ವಗ್ರಹದಿಂದಾಗಿ ಹೆಸರಿನ ಮುಂದೆ ಹೀಗೆ ಬರೆಯಲಾಗುತ್ತಿದೆ. ಹೆಸರಿನ ಮುಂದಿನ ಇನ್ಶಿಯಲ್‌ ನೋಡಿದ ತಕ್ಷಣ ಅಧಿಕಾರಿಗಳು, ಈ ಜನರನ್ನು ಅಪರಾಧಿಗಳು ಎಂದು ಮೊದಲೇ ತೀರ್ಮಾನ ಮಾಡಿಬಿಡುತ್ತಾರೆ. ಅಲ್ಲೇ ತೀರ್ಪು ಕೊಟ್ಟು, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲದಂತೆ ಶಿಕ್ಷೆಗೊಳಪಡಿಸುವುದನ್ನು ನೋಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಬುಡಕಟ್ಟು ಸಮುದಾಯಗಳನ್ನು ಬ್ರಿಟೀಷರು ‘ಕ್ರಿಮಿನಲ್ ಟ್ರೈಬ್’ ಗಳೆಂದು ಗುರುತಿಸುವ ಕಾಯ್ದೆ‌ಮಾಡಿದರು. ಇದನ್ನು ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ವಿರೋಧಿಸಿದರೂ ಸ್ವಾತಂತ್ರ್ಯ ಬರುವವರೆಗೂ ಆ ಕಾನೂನು ಹಾಗೇ ಇತ್ತು.‌ 1947ರ ನಂತರ ಕಾಂಗ್ರೆಸ್‌ ಆ ಕಾಯ್ದೆಯನ್ನು ವಾಪಾಸ್ ತೆಗೆದುಕೊಂಡಿತು, ಆದರೆ ಪೊಲೀಸರ ದೃಷ್ಟಿಕೋನ ಬದಲಾಗಲಿಲ್ಲ. ಈಗಲೂ ಬುಡಕಟ್ಟು ಜನರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದು, ಎನ್ ಕೌಂಟರ್ ಮಾಡುವುದು, ಲಾಕಪ್‌ಗಳಲ್ಲಿ ಹಿಂಸಿಸುವುದು ಮತ್ತು ಕೊಲ್ಲುವುದು ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳಿದರು.

ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಬೇಕಾಗಿದೆ. ಆ ಬದಲಾವಣೆಗಾಗಿ ಜನರನ್ನು ಬದಲಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ನಾನು ಮತ್ತು ನಾಗಮೋಹನ್ ದಾಸ್ ಥರದ ನಿವೃತ್ತ ನ್ಯಾಯಾಧೀಶರು ನಿಜವಾದ ಅಧಿಕಾರವನ್ನು ಈಗ ಹೊಂದಿಲ್ಲ. ಆದರೂ ಪರಿಣಾಮಕಾರಿಯಾದ ಒಂದು ಅಧಿಕಾರ ನಮಗಿದೆ. ನಾವು ಜನರ ಮುಂದೆ ಹೋಗಬಹುದು, ಈ ನ್ಯಾಯಾಂಗ ಜನರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂಬುದನ್ನು ಬಿಚ್ಚಿಡಬಹುದು. ನ್ಯಾಯಾಂಗ ಬದಲಿಸಲಾಗದ್ದನ್ನು ಜನರು ಬದಲಿಸಬಲ್ಲರು. ಹೀಗಾಗಿ ಶೋಷಿತರನ್ನು ಎಚ್ಚರಿಸಬೇಕು ಎಂಬ ಕಾರಣಕ್ಕಾಗಿ ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂದರು. ಈ ದೇಶದ ಶೋಷಿತರಿಗೆ ಶಿಕ್ಷಣ ಎನ್ನುವುದು ಖಂಡಿತವಾಗಿಯೂ ಬಿಡುಗಡೆಯ ಹಾದಿ ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಜಸ್ಟೀಸ್‌ ನಾಗಮೋಹನ ದಾಸ್ ಮಾತನಾಡಿ, “ಭಾರತ ಗಣರಾಜ್ಯವಾದ ಬಳಿಕ ನಾವು ಒಂದಿಷ್ಟು ಸಾಧನೆಯನ್ನು ಮಾಡಿದ್ದೇವೆ. ಆದರೆ ಇಂದು ಹಲವು ಸಮಸ್ಯೆಗಳು, ಸವಾಲುಗಳು ನಮ್ಮನ್ನು ಕಾಡುತ್ತಿವೆ. ನಾವೆಲ್ಲ ಹೋರಾಟ ಮಾಡಿದಾಗ ಮೂಢನಂಬಿಕೆಗಳ ನಿಷೇಧ ಕಾಯ್ದೆ ಜಾರಿಗೆ ಬಂತು. ಆದರೆ ಒಂದೇ ಒಂದು ಪ್ರಕರಣ ದಾಖಲಾಗಲಿಲ್ಲ. ಚುನಾವಣೆಯಲ್ಲಿ ಜಾತಿ, ಹಣ, ಧರ್ಮದ ಪ್ರಭಾವವನ್ನು ಯಾವ ರೀತಿ ಮುಕ್ತ ಮಾಡಬೇಕು? ಜನಪ್ರತಿನಿಧಿಗಳು ತಮಗೆ ಇಷ್ಟಬಂದಾಗ ರಾಜೀನಾಮೆ ಕೊಟ್ಟು ಉಪಚುನಾವಣೆಯನ್ನು ನಮ್ಮ ಮೇಲೆ ಏರುವಂತಹ ಸಂದರ್ಭದಲ್ಲಿ ಏನು ಮಾಡಬೇಕು? ಪರಿಹಾರ ಏನು ಎಂಬುದನ್ನು ಪುಸ್ತಕದಲ್ಲಿ ಪ್ರಸ್ತಾಪ ಮಾಡಿದ್ದೇನೆ” ಎಂದು ತಿಳಿಸಿದರು.

ಚಿಂತಕರಾದ ಬಿ.ಟಿ ಲಲಿತಾ ನಾಯಕ್, ಮಾವಳ್ಳಿ ಶಂಕರ್, ರಾಜಶೇಖರ್ ಮೂರ್ತಿ, ಗೋಪಾಲಕೃಷ್ಣ, ಪ್ರೊ.ಬರಗೂರು ರಾಮಚಂದ್ರಪ್ಪ ಹಾಜರಿದ್ದರು.


ಇದನ್ನೂ ಓದಿರಿ: ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...