Homeಕರ್ನಾಟಕಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

ಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

- Advertisement -
- Advertisement -

“ಶೋಷಿತರ ಅತ್ಯಂತ ಪ್ರಬಲ‌ ಮಿತ್ರ ಅವರದ್ದೇ ಆದ ಸಂಘಟನೆ” ಎಂದು ಜೈಭೀಮ್‌ ಸಿನೆಮಾಕ್ಕೆ ಪ್ರೇರಣೆಯಾದ, ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು ಹೇಳಿದರು.

ಬೆಂಗಳೂರಿನ ಗಾಂಧಿಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜಸ್ಟೀಸ್ ಎಚ್‌.ಎನ್‌.ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನ್ಯಾಯಾಂಗ ಏನು ಮಾಡಲು ಸಾಧ್ಯವಾಗುತ್ತದೆ? ಸಮಾಜ ಬದಲಾಗಬೇಕಲ್ಲವೇ ಎಂದು ಅನೇಕರು ನಮ್ಮನ್ನು ಕೇಳುತ್ತಾರೆ. ಸಮಾಜ ಬದಲಾಗುವವರೆಗೆ ಶೋಷಿತರಿಗೆ ನ್ಯಾಯ ಬೇಕಲ್ಲವೇ? ಶೋಷಿತರು ಬದುಕಬೇಕಲ್ಲವೇ? ಪ್ರತಿದಿನ ಅವರು ಜೀವನ ಮಾಡಬೇಕಾದರೆ ನ್ಯಾಯಾಂಗ ರಕ್ಷಣೆ ನೀಡಬೇಕು. ಒಬ್ಬ ಸರಿಯಾದ ವಕೀಲ, ಒಬ್ಬ ದಿಟ್ಟತನ ಇರುವ ನ್ಯಾಯಾಧೀಶ, ಒಬ್ಬ ಸರಿಯಾದ ಅಧಿಕಾರಿ ಅಂತಹ ಬದಲಾವಣೆಗಳನ್ನು ತರಬಲ್ಲರು. ಆ ಶಕ್ತಿ ಅವರಿಗೆ ಇರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾಜ ಬದಲಾಗುವವರೆಗೆ ಶೋಷಿತರು ಬದಕಬೇಕಾದ ರೀತಿಯಲ್ಲಿ ನ್ಯಾಯಾಂಗ ಇರಬೇಕು. ಭಾರತದೊಳಗೆ ಶೋಷಿತರ ಸ್ಥಿತಿ ಏನು ಎಂಬುದನ್ನು ನಾನು, ನಾಗಮೋಹನ್ ದಾಸ್ ಥರದವರು ನೋಡಿದ್ದೇವೆ. ‘ಜೈ ಭೀಮ್‌’ ಥರದ ಸಿನೆಮಾಗಳಿಂದ ಲಾಕಪ್‌ ಡೆತ್‌ಗಳು ನಿಂತು ಹೋಗುವುದಿಲ್ಲ. ಆದರೆ ಸಿನೆಮಾ ನೋಡಿದ ಜನರು ಎಚ್ಚೆತ್ತುಕೊಂಡು ಸಂಘಟಿತರಾದಾಗ ಖಂಡಿತ ಇಂತಹ ಘಟನೆಗಳು ನಿಲ್ಲುತ್ತವೆ. ಜೈ ಭೀಮ್‌ ಸಿನೆಮಾ ಬಂದ ಮೇಲೆ ಸಾಕಷ್ಟು ಕಡೆ ಜನರು ಸಂಘಟಿತರಾಗುತ್ತಿದ್ದಾರೆ. ಅನೇಕ ಆದಿವಾಸಿ ಗುಂಪುಗಳು ಸಂಘಟನೆ ಮಾಡಿಕೊಂಡು ಹೋರಾಟಕ್ಕೆ ಇಳಿಯುತ್ತಿರುವುದನ್ನು ನಾವು ಕೇಳಿದ್ದೇವೆ ಎಂದರು.

ಇದನ್ನೂ ಓದಿರಿ: ಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

ಬ್ರಿಟಿಷರ ಕಾಲದಲ್ಲಿ ಸಾರ್ವಜನಿಕರನ್ನು ಅಪರಾಧಿಗಳೆಂದು ಬಿಂಬಿಸುವ ಕಾನೂನುಗಳು ಜಾರಿಯಾದವು. ಅನೇಕ ಬುಡಕಟ್ಟು ಸಮುದಾಯಗಳನ್ನು ಕ್ರಿಮಿನಲ್‌ಗಳು ಎಂದು ಪಟ್ಟಿ ಮಾಡಲಾಯಿತು. ಬ್ರಿಟಿಷರು ನಮ್ಮ ದೇಶವನ್ನು ಬಿಟ್ಟು ಹೋದರೂ ಟ್ರೈಬ್‌ಗಳನ್ನು ಕ್ರಿಮಿನಲ್‌ಗಳಾಗಿ ನೋಡುವ ಮನಸ್ಥಿತಿ ಮಾತ್ರ ಪೊಲೀಸರಲ್ಲಿ ಇನ್ನೂ ಹಾಗೇ ಇದೆ ಎಂದು ವಿಷಾದಿಸಿದರು.

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿದರು.

ಇಂದು ಪೊಲೀಸರು ಒಂದು ಚಾರ್ಜ್‌‌ಶೀಟ್‌ ಅಥವಾ ದೂರು ಬರೆದರೆ ಅದರ ಮೇಲೆ ‘ಕೆ.ಆರ್‌.’, ‘ಐ.ಆರ್‌.’ ಎಂದು ಬರೆಯುತ್ತಾರೆ. ಕೆ.ಆರ್‌. ಎಂದರೆ- ಕೊರಗ, ಐ.ಆರ್‌. ಎಂದರೆ ಇರುಳಿಗ ಎಂದರ್ಥ. ಪೊಲೀಸರ ಮನಸ್ಸಿನಲ್ಲಿರುವ ಪೂರ್ವಗ್ರಹದಿಂದಾಗಿ ಹೆಸರಿನ ಮುಂದೆ ಹೀಗೆ ಬರೆಯಲಾಗುತ್ತಿದೆ. ಹೆಸರಿನ ಮುಂದಿನ ಇನ್ಶಿಯಲ್‌ ನೋಡಿದ ತಕ್ಷಣ ಅಧಿಕಾರಿಗಳು, ಈ ಜನರನ್ನು ಅಪರಾಧಿಗಳು ಎಂದು ಮೊದಲೇ ತೀರ್ಮಾನ ಮಾಡಿಬಿಡುತ್ತಾರೆ. ಅಲ್ಲೇ ತೀರ್ಪು ಕೊಟ್ಟು, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲದಂತೆ ಶಿಕ್ಷೆಗೊಳಪಡಿಸುವುದನ್ನು ನೋಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಬುಡಕಟ್ಟು ಸಮುದಾಯಗಳನ್ನು ಬ್ರಿಟೀಷರು ‘ಕ್ರಿಮಿನಲ್ ಟ್ರೈಬ್’ ಗಳೆಂದು ಗುರುತಿಸುವ ಕಾಯ್ದೆ‌ಮಾಡಿದರು. ಇದನ್ನು ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ವಿರೋಧಿಸಿದರೂ ಸ್ವಾತಂತ್ರ್ಯ ಬರುವವರೆಗೂ ಆ ಕಾನೂನು ಹಾಗೇ ಇತ್ತು.‌ 1947ರ ನಂತರ ಕಾಂಗ್ರೆಸ್‌ ಆ ಕಾಯ್ದೆಯನ್ನು ವಾಪಾಸ್ ತೆಗೆದುಕೊಂಡಿತು, ಆದರೆ ಪೊಲೀಸರ ದೃಷ್ಟಿಕೋನ ಬದಲಾಗಲಿಲ್ಲ. ಈಗಲೂ ಬುಡಕಟ್ಟು ಜನರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದು, ಎನ್ ಕೌಂಟರ್ ಮಾಡುವುದು, ಲಾಕಪ್‌ಗಳಲ್ಲಿ ಹಿಂಸಿಸುವುದು ಮತ್ತು ಕೊಲ್ಲುವುದು ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳಿದರು.

ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಬೇಕಾಗಿದೆ. ಆ ಬದಲಾವಣೆಗಾಗಿ ಜನರನ್ನು ಬದಲಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ನಾನು ಮತ್ತು ನಾಗಮೋಹನ್ ದಾಸ್ ಥರದ ನಿವೃತ್ತ ನ್ಯಾಯಾಧೀಶರು ನಿಜವಾದ ಅಧಿಕಾರವನ್ನು ಈಗ ಹೊಂದಿಲ್ಲ. ಆದರೂ ಪರಿಣಾಮಕಾರಿಯಾದ ಒಂದು ಅಧಿಕಾರ ನಮಗಿದೆ. ನಾವು ಜನರ ಮುಂದೆ ಹೋಗಬಹುದು, ಈ ನ್ಯಾಯಾಂಗ ಜನರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂಬುದನ್ನು ಬಿಚ್ಚಿಡಬಹುದು. ನ್ಯಾಯಾಂಗ ಬದಲಿಸಲಾಗದ್ದನ್ನು ಜನರು ಬದಲಿಸಬಲ್ಲರು. ಹೀಗಾಗಿ ಶೋಷಿತರನ್ನು ಎಚ್ಚರಿಸಬೇಕು ಎಂಬ ಕಾರಣಕ್ಕಾಗಿ ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂದರು. ಈ ದೇಶದ ಶೋಷಿತರಿಗೆ ಶಿಕ್ಷಣ ಎನ್ನುವುದು ಖಂಡಿತವಾಗಿಯೂ ಬಿಡುಗಡೆಯ ಹಾದಿ ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಜಸ್ಟೀಸ್‌ ನಾಗಮೋಹನ ದಾಸ್ ಮಾತನಾಡಿ, “ಭಾರತ ಗಣರಾಜ್ಯವಾದ ಬಳಿಕ ನಾವು ಒಂದಿಷ್ಟು ಸಾಧನೆಯನ್ನು ಮಾಡಿದ್ದೇವೆ. ಆದರೆ ಇಂದು ಹಲವು ಸಮಸ್ಯೆಗಳು, ಸವಾಲುಗಳು ನಮ್ಮನ್ನು ಕಾಡುತ್ತಿವೆ. ನಾವೆಲ್ಲ ಹೋರಾಟ ಮಾಡಿದಾಗ ಮೂಢನಂಬಿಕೆಗಳ ನಿಷೇಧ ಕಾಯ್ದೆ ಜಾರಿಗೆ ಬಂತು. ಆದರೆ ಒಂದೇ ಒಂದು ಪ್ರಕರಣ ದಾಖಲಾಗಲಿಲ್ಲ. ಚುನಾವಣೆಯಲ್ಲಿ ಜಾತಿ, ಹಣ, ಧರ್ಮದ ಪ್ರಭಾವವನ್ನು ಯಾವ ರೀತಿ ಮುಕ್ತ ಮಾಡಬೇಕು? ಜನಪ್ರತಿನಿಧಿಗಳು ತಮಗೆ ಇಷ್ಟಬಂದಾಗ ರಾಜೀನಾಮೆ ಕೊಟ್ಟು ಉಪಚುನಾವಣೆಯನ್ನು ನಮ್ಮ ಮೇಲೆ ಏರುವಂತಹ ಸಂದರ್ಭದಲ್ಲಿ ಏನು ಮಾಡಬೇಕು? ಪರಿಹಾರ ಏನು ಎಂಬುದನ್ನು ಪುಸ್ತಕದಲ್ಲಿ ಪ್ರಸ್ತಾಪ ಮಾಡಿದ್ದೇನೆ” ಎಂದು ತಿಳಿಸಿದರು.

ಚಿಂತಕರಾದ ಬಿ.ಟಿ ಲಲಿತಾ ನಾಯಕ್, ಮಾವಳ್ಳಿ ಶಂಕರ್, ರಾಜಶೇಖರ್ ಮೂರ್ತಿ, ಗೋಪಾಲಕೃಷ್ಣ, ಪ್ರೊ.ಬರಗೂರು ರಾಮಚಂದ್ರಪ್ಪ ಹಾಜರಿದ್ದರು.


ಇದನ್ನೂ ಓದಿರಿ: ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...