Homeಕರ್ನಾಟಕಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

ಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

- Advertisement -
- Advertisement -

“ಶೋಷಿತರ ಅತ್ಯಂತ ಪ್ರಬಲ‌ ಮಿತ್ರ ಅವರದ್ದೇ ಆದ ಸಂಘಟನೆ” ಎಂದು ಜೈಭೀಮ್‌ ಸಿನೆಮಾಕ್ಕೆ ಪ್ರೇರಣೆಯಾದ, ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು ಹೇಳಿದರು.

ಬೆಂಗಳೂರಿನ ಗಾಂಧಿಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜಸ್ಟೀಸ್ ಎಚ್‌.ಎನ್‌.ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನ್ಯಾಯಾಂಗ ಏನು ಮಾಡಲು ಸಾಧ್ಯವಾಗುತ್ತದೆ? ಸಮಾಜ ಬದಲಾಗಬೇಕಲ್ಲವೇ ಎಂದು ಅನೇಕರು ನಮ್ಮನ್ನು ಕೇಳುತ್ತಾರೆ. ಸಮಾಜ ಬದಲಾಗುವವರೆಗೆ ಶೋಷಿತರಿಗೆ ನ್ಯಾಯ ಬೇಕಲ್ಲವೇ? ಶೋಷಿತರು ಬದುಕಬೇಕಲ್ಲವೇ? ಪ್ರತಿದಿನ ಅವರು ಜೀವನ ಮಾಡಬೇಕಾದರೆ ನ್ಯಾಯಾಂಗ ರಕ್ಷಣೆ ನೀಡಬೇಕು. ಒಬ್ಬ ಸರಿಯಾದ ವಕೀಲ, ಒಬ್ಬ ದಿಟ್ಟತನ ಇರುವ ನ್ಯಾಯಾಧೀಶ, ಒಬ್ಬ ಸರಿಯಾದ ಅಧಿಕಾರಿ ಅಂತಹ ಬದಲಾವಣೆಗಳನ್ನು ತರಬಲ್ಲರು. ಆ ಶಕ್ತಿ ಅವರಿಗೆ ಇರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾಜ ಬದಲಾಗುವವರೆಗೆ ಶೋಷಿತರು ಬದಕಬೇಕಾದ ರೀತಿಯಲ್ಲಿ ನ್ಯಾಯಾಂಗ ಇರಬೇಕು. ಭಾರತದೊಳಗೆ ಶೋಷಿತರ ಸ್ಥಿತಿ ಏನು ಎಂಬುದನ್ನು ನಾನು, ನಾಗಮೋಹನ್ ದಾಸ್ ಥರದವರು ನೋಡಿದ್ದೇವೆ. ‘ಜೈ ಭೀಮ್‌’ ಥರದ ಸಿನೆಮಾಗಳಿಂದ ಲಾಕಪ್‌ ಡೆತ್‌ಗಳು ನಿಂತು ಹೋಗುವುದಿಲ್ಲ. ಆದರೆ ಸಿನೆಮಾ ನೋಡಿದ ಜನರು ಎಚ್ಚೆತ್ತುಕೊಂಡು ಸಂಘಟಿತರಾದಾಗ ಖಂಡಿತ ಇಂತಹ ಘಟನೆಗಳು ನಿಲ್ಲುತ್ತವೆ. ಜೈ ಭೀಮ್‌ ಸಿನೆಮಾ ಬಂದ ಮೇಲೆ ಸಾಕಷ್ಟು ಕಡೆ ಜನರು ಸಂಘಟಿತರಾಗುತ್ತಿದ್ದಾರೆ. ಅನೇಕ ಆದಿವಾಸಿ ಗುಂಪುಗಳು ಸಂಘಟನೆ ಮಾಡಿಕೊಂಡು ಹೋರಾಟಕ್ಕೆ ಇಳಿಯುತ್ತಿರುವುದನ್ನು ನಾವು ಕೇಳಿದ್ದೇವೆ ಎಂದರು.

ಇದನ್ನೂ ಓದಿರಿ: ಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

ಬ್ರಿಟಿಷರ ಕಾಲದಲ್ಲಿ ಸಾರ್ವಜನಿಕರನ್ನು ಅಪರಾಧಿಗಳೆಂದು ಬಿಂಬಿಸುವ ಕಾನೂನುಗಳು ಜಾರಿಯಾದವು. ಅನೇಕ ಬುಡಕಟ್ಟು ಸಮುದಾಯಗಳನ್ನು ಕ್ರಿಮಿನಲ್‌ಗಳು ಎಂದು ಪಟ್ಟಿ ಮಾಡಲಾಯಿತು. ಬ್ರಿಟಿಷರು ನಮ್ಮ ದೇಶವನ್ನು ಬಿಟ್ಟು ಹೋದರೂ ಟ್ರೈಬ್‌ಗಳನ್ನು ಕ್ರಿಮಿನಲ್‌ಗಳಾಗಿ ನೋಡುವ ಮನಸ್ಥಿತಿ ಮಾತ್ರ ಪೊಲೀಸರಲ್ಲಿ ಇನ್ನೂ ಹಾಗೇ ಇದೆ ಎಂದು ವಿಷಾದಿಸಿದರು.

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿದರು.

ಇಂದು ಪೊಲೀಸರು ಒಂದು ಚಾರ್ಜ್‌‌ಶೀಟ್‌ ಅಥವಾ ದೂರು ಬರೆದರೆ ಅದರ ಮೇಲೆ ‘ಕೆ.ಆರ್‌.’, ‘ಐ.ಆರ್‌.’ ಎಂದು ಬರೆಯುತ್ತಾರೆ. ಕೆ.ಆರ್‌. ಎಂದರೆ- ಕೊರಗ, ಐ.ಆರ್‌. ಎಂದರೆ ಇರುಳಿಗ ಎಂದರ್ಥ. ಪೊಲೀಸರ ಮನಸ್ಸಿನಲ್ಲಿರುವ ಪೂರ್ವಗ್ರಹದಿಂದಾಗಿ ಹೆಸರಿನ ಮುಂದೆ ಹೀಗೆ ಬರೆಯಲಾಗುತ್ತಿದೆ. ಹೆಸರಿನ ಮುಂದಿನ ಇನ್ಶಿಯಲ್‌ ನೋಡಿದ ತಕ್ಷಣ ಅಧಿಕಾರಿಗಳು, ಈ ಜನರನ್ನು ಅಪರಾಧಿಗಳು ಎಂದು ಮೊದಲೇ ತೀರ್ಮಾನ ಮಾಡಿಬಿಡುತ್ತಾರೆ. ಅಲ್ಲೇ ತೀರ್ಪು ಕೊಟ್ಟು, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲದಂತೆ ಶಿಕ್ಷೆಗೊಳಪಡಿಸುವುದನ್ನು ನೋಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಬುಡಕಟ್ಟು ಸಮುದಾಯಗಳನ್ನು ಬ್ರಿಟೀಷರು ‘ಕ್ರಿಮಿನಲ್ ಟ್ರೈಬ್’ ಗಳೆಂದು ಗುರುತಿಸುವ ಕಾಯ್ದೆ‌ಮಾಡಿದರು. ಇದನ್ನು ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ವಿರೋಧಿಸಿದರೂ ಸ್ವಾತಂತ್ರ್ಯ ಬರುವವರೆಗೂ ಆ ಕಾನೂನು ಹಾಗೇ ಇತ್ತು.‌ 1947ರ ನಂತರ ಕಾಂಗ್ರೆಸ್‌ ಆ ಕಾಯ್ದೆಯನ್ನು ವಾಪಾಸ್ ತೆಗೆದುಕೊಂಡಿತು, ಆದರೆ ಪೊಲೀಸರ ದೃಷ್ಟಿಕೋನ ಬದಲಾಗಲಿಲ್ಲ. ಈಗಲೂ ಬುಡಕಟ್ಟು ಜನರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದು, ಎನ್ ಕೌಂಟರ್ ಮಾಡುವುದು, ಲಾಕಪ್‌ಗಳಲ್ಲಿ ಹಿಂಸಿಸುವುದು ಮತ್ತು ಕೊಲ್ಲುವುದು ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳಿದರು.

ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಬೇಕಾಗಿದೆ. ಆ ಬದಲಾವಣೆಗಾಗಿ ಜನರನ್ನು ಬದಲಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ನಾನು ಮತ್ತು ನಾಗಮೋಹನ್ ದಾಸ್ ಥರದ ನಿವೃತ್ತ ನ್ಯಾಯಾಧೀಶರು ನಿಜವಾದ ಅಧಿಕಾರವನ್ನು ಈಗ ಹೊಂದಿಲ್ಲ. ಆದರೂ ಪರಿಣಾಮಕಾರಿಯಾದ ಒಂದು ಅಧಿಕಾರ ನಮಗಿದೆ. ನಾವು ಜನರ ಮುಂದೆ ಹೋಗಬಹುದು, ಈ ನ್ಯಾಯಾಂಗ ಜನರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂಬುದನ್ನು ಬಿಚ್ಚಿಡಬಹುದು. ನ್ಯಾಯಾಂಗ ಬದಲಿಸಲಾಗದ್ದನ್ನು ಜನರು ಬದಲಿಸಬಲ್ಲರು. ಹೀಗಾಗಿ ಶೋಷಿತರನ್ನು ಎಚ್ಚರಿಸಬೇಕು ಎಂಬ ಕಾರಣಕ್ಕಾಗಿ ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂದರು. ಈ ದೇಶದ ಶೋಷಿತರಿಗೆ ಶಿಕ್ಷಣ ಎನ್ನುವುದು ಖಂಡಿತವಾಗಿಯೂ ಬಿಡುಗಡೆಯ ಹಾದಿ ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಜಸ್ಟೀಸ್‌ ನಾಗಮೋಹನ ದಾಸ್ ಮಾತನಾಡಿ, “ಭಾರತ ಗಣರಾಜ್ಯವಾದ ಬಳಿಕ ನಾವು ಒಂದಿಷ್ಟು ಸಾಧನೆಯನ್ನು ಮಾಡಿದ್ದೇವೆ. ಆದರೆ ಇಂದು ಹಲವು ಸಮಸ್ಯೆಗಳು, ಸವಾಲುಗಳು ನಮ್ಮನ್ನು ಕಾಡುತ್ತಿವೆ. ನಾವೆಲ್ಲ ಹೋರಾಟ ಮಾಡಿದಾಗ ಮೂಢನಂಬಿಕೆಗಳ ನಿಷೇಧ ಕಾಯ್ದೆ ಜಾರಿಗೆ ಬಂತು. ಆದರೆ ಒಂದೇ ಒಂದು ಪ್ರಕರಣ ದಾಖಲಾಗಲಿಲ್ಲ. ಚುನಾವಣೆಯಲ್ಲಿ ಜಾತಿ, ಹಣ, ಧರ್ಮದ ಪ್ರಭಾವವನ್ನು ಯಾವ ರೀತಿ ಮುಕ್ತ ಮಾಡಬೇಕು? ಜನಪ್ರತಿನಿಧಿಗಳು ತಮಗೆ ಇಷ್ಟಬಂದಾಗ ರಾಜೀನಾಮೆ ಕೊಟ್ಟು ಉಪಚುನಾವಣೆಯನ್ನು ನಮ್ಮ ಮೇಲೆ ಏರುವಂತಹ ಸಂದರ್ಭದಲ್ಲಿ ಏನು ಮಾಡಬೇಕು? ಪರಿಹಾರ ಏನು ಎಂಬುದನ್ನು ಪುಸ್ತಕದಲ್ಲಿ ಪ್ರಸ್ತಾಪ ಮಾಡಿದ್ದೇನೆ” ಎಂದು ತಿಳಿಸಿದರು.

ಚಿಂತಕರಾದ ಬಿ.ಟಿ ಲಲಿತಾ ನಾಯಕ್, ಮಾವಳ್ಳಿ ಶಂಕರ್, ರಾಜಶೇಖರ್ ಮೂರ್ತಿ, ಗೋಪಾಲಕೃಷ್ಣ, ಪ್ರೊ.ಬರಗೂರು ರಾಮಚಂದ್ರಪ್ಪ ಹಾಜರಿದ್ದರು.


ಇದನ್ನೂ ಓದಿರಿ: ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...