Homeಕರ್ನಾಟಕಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

ಶೋಷಿತರ ಪ್ರಬಲ ಮಿತ್ರ ಅವರದ್ದೇ ಆದ ಸಂಘಟನೆ: ಜಸ್ಟೀಸ್ ಕೆ.ಚಂದ್ರು

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

- Advertisement -
- Advertisement -

“ಶೋಷಿತರ ಅತ್ಯಂತ ಪ್ರಬಲ‌ ಮಿತ್ರ ಅವರದ್ದೇ ಆದ ಸಂಘಟನೆ” ಎಂದು ಜೈಭೀಮ್‌ ಸಿನೆಮಾಕ್ಕೆ ಪ್ರೇರಣೆಯಾದ, ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು ಹೇಳಿದರು.

ಬೆಂಗಳೂರಿನ ಗಾಂಧಿಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜಸ್ಟೀಸ್ ಎಚ್‌.ಎನ್‌.ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನ್ಯಾಯಾಂಗ ಏನು ಮಾಡಲು ಸಾಧ್ಯವಾಗುತ್ತದೆ? ಸಮಾಜ ಬದಲಾಗಬೇಕಲ್ಲವೇ ಎಂದು ಅನೇಕರು ನಮ್ಮನ್ನು ಕೇಳುತ್ತಾರೆ. ಸಮಾಜ ಬದಲಾಗುವವರೆಗೆ ಶೋಷಿತರಿಗೆ ನ್ಯಾಯ ಬೇಕಲ್ಲವೇ? ಶೋಷಿತರು ಬದುಕಬೇಕಲ್ಲವೇ? ಪ್ರತಿದಿನ ಅವರು ಜೀವನ ಮಾಡಬೇಕಾದರೆ ನ್ಯಾಯಾಂಗ ರಕ್ಷಣೆ ನೀಡಬೇಕು. ಒಬ್ಬ ಸರಿಯಾದ ವಕೀಲ, ಒಬ್ಬ ದಿಟ್ಟತನ ಇರುವ ನ್ಯಾಯಾಧೀಶ, ಒಬ್ಬ ಸರಿಯಾದ ಅಧಿಕಾರಿ ಅಂತಹ ಬದಲಾವಣೆಗಳನ್ನು ತರಬಲ್ಲರು. ಆ ಶಕ್ತಿ ಅವರಿಗೆ ಇರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾಜ ಬದಲಾಗುವವರೆಗೆ ಶೋಷಿತರು ಬದಕಬೇಕಾದ ರೀತಿಯಲ್ಲಿ ನ್ಯಾಯಾಂಗ ಇರಬೇಕು. ಭಾರತದೊಳಗೆ ಶೋಷಿತರ ಸ್ಥಿತಿ ಏನು ಎಂಬುದನ್ನು ನಾನು, ನಾಗಮೋಹನ್ ದಾಸ್ ಥರದವರು ನೋಡಿದ್ದೇವೆ. ‘ಜೈ ಭೀಮ್‌’ ಥರದ ಸಿನೆಮಾಗಳಿಂದ ಲಾಕಪ್‌ ಡೆತ್‌ಗಳು ನಿಂತು ಹೋಗುವುದಿಲ್ಲ. ಆದರೆ ಸಿನೆಮಾ ನೋಡಿದ ಜನರು ಎಚ್ಚೆತ್ತುಕೊಂಡು ಸಂಘಟಿತರಾದಾಗ ಖಂಡಿತ ಇಂತಹ ಘಟನೆಗಳು ನಿಲ್ಲುತ್ತವೆ. ಜೈ ಭೀಮ್‌ ಸಿನೆಮಾ ಬಂದ ಮೇಲೆ ಸಾಕಷ್ಟು ಕಡೆ ಜನರು ಸಂಘಟಿತರಾಗುತ್ತಿದ್ದಾರೆ. ಅನೇಕ ಆದಿವಾಸಿ ಗುಂಪುಗಳು ಸಂಘಟನೆ ಮಾಡಿಕೊಂಡು ಹೋರಾಟಕ್ಕೆ ಇಳಿಯುತ್ತಿರುವುದನ್ನು ನಾವು ಕೇಳಿದ್ದೇವೆ ಎಂದರು.

ಇದನ್ನೂ ಓದಿರಿ: ಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

ಬ್ರಿಟಿಷರ ಕಾಲದಲ್ಲಿ ಸಾರ್ವಜನಿಕರನ್ನು ಅಪರಾಧಿಗಳೆಂದು ಬಿಂಬಿಸುವ ಕಾನೂನುಗಳು ಜಾರಿಯಾದವು. ಅನೇಕ ಬುಡಕಟ್ಟು ಸಮುದಾಯಗಳನ್ನು ಕ್ರಿಮಿನಲ್‌ಗಳು ಎಂದು ಪಟ್ಟಿ ಮಾಡಲಾಯಿತು. ಬ್ರಿಟಿಷರು ನಮ್ಮ ದೇಶವನ್ನು ಬಿಟ್ಟು ಹೋದರೂ ಟ್ರೈಬ್‌ಗಳನ್ನು ಕ್ರಿಮಿನಲ್‌ಗಳಾಗಿ ನೋಡುವ ಮನಸ್ಥಿತಿ ಮಾತ್ರ ಪೊಲೀಸರಲ್ಲಿ ಇನ್ನೂ ಹಾಗೇ ಇದೆ ಎಂದು ವಿಷಾದಿಸಿದರು.

‘ಜೈ ಭೀಮ್‌’ ಸಿನಿಮಾಕ್ಕೆ ಸ್ಫೂರ್ತಿಯಾಗಿರುವ ಜಸ್ಟೀಸ್ ಕೆ.ಚಂದ್ರು ಅವರು ಬೆಂಗಳೂರಿನ ಗಾಂಧಿಭವನದಲ್ಲಿ ಜಸ್ಟೀಸ್ ನಾಗಮೋಹನ ದಾಸ್ ಅವರ ‘ಮಾನವ ಹಕ್ಕುಗಳು’ ಕೃತಿ ಬಿಡುಗಡೆಗೊಳಿಸಿದರು.

ಇಂದು ಪೊಲೀಸರು ಒಂದು ಚಾರ್ಜ್‌‌ಶೀಟ್‌ ಅಥವಾ ದೂರು ಬರೆದರೆ ಅದರ ಮೇಲೆ ‘ಕೆ.ಆರ್‌.’, ‘ಐ.ಆರ್‌.’ ಎಂದು ಬರೆಯುತ್ತಾರೆ. ಕೆ.ಆರ್‌. ಎಂದರೆ- ಕೊರಗ, ಐ.ಆರ್‌. ಎಂದರೆ ಇರುಳಿಗ ಎಂದರ್ಥ. ಪೊಲೀಸರ ಮನಸ್ಸಿನಲ್ಲಿರುವ ಪೂರ್ವಗ್ರಹದಿಂದಾಗಿ ಹೆಸರಿನ ಮುಂದೆ ಹೀಗೆ ಬರೆಯಲಾಗುತ್ತಿದೆ. ಹೆಸರಿನ ಮುಂದಿನ ಇನ್ಶಿಯಲ್‌ ನೋಡಿದ ತಕ್ಷಣ ಅಧಿಕಾರಿಗಳು, ಈ ಜನರನ್ನು ಅಪರಾಧಿಗಳು ಎಂದು ಮೊದಲೇ ತೀರ್ಮಾನ ಮಾಡಿಬಿಡುತ್ತಾರೆ. ಅಲ್ಲೇ ತೀರ್ಪು ಕೊಟ್ಟು, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲದಂತೆ ಶಿಕ್ಷೆಗೊಳಪಡಿಸುವುದನ್ನು ನೋಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಬುಡಕಟ್ಟು ಸಮುದಾಯಗಳನ್ನು ಬ್ರಿಟೀಷರು ‘ಕ್ರಿಮಿನಲ್ ಟ್ರೈಬ್’ ಗಳೆಂದು ಗುರುತಿಸುವ ಕಾಯ್ದೆ‌ಮಾಡಿದರು. ಇದನ್ನು ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ವಿರೋಧಿಸಿದರೂ ಸ್ವಾತಂತ್ರ್ಯ ಬರುವವರೆಗೂ ಆ ಕಾನೂನು ಹಾಗೇ ಇತ್ತು.‌ 1947ರ ನಂತರ ಕಾಂಗ್ರೆಸ್‌ ಆ ಕಾಯ್ದೆಯನ್ನು ವಾಪಾಸ್ ತೆಗೆದುಕೊಂಡಿತು, ಆದರೆ ಪೊಲೀಸರ ದೃಷ್ಟಿಕೋನ ಬದಲಾಗಲಿಲ್ಲ. ಈಗಲೂ ಬುಡಕಟ್ಟು ಜನರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದು, ಎನ್ ಕೌಂಟರ್ ಮಾಡುವುದು, ಲಾಕಪ್‌ಗಳಲ್ಲಿ ಹಿಂಸಿಸುವುದು ಮತ್ತು ಕೊಲ್ಲುವುದು ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳಿದರು.

ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಬೇಕಾಗಿದೆ. ಆ ಬದಲಾವಣೆಗಾಗಿ ಜನರನ್ನು ಬದಲಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ನಾನು ಮತ್ತು ನಾಗಮೋಹನ್ ದಾಸ್ ಥರದ ನಿವೃತ್ತ ನ್ಯಾಯಾಧೀಶರು ನಿಜವಾದ ಅಧಿಕಾರವನ್ನು ಈಗ ಹೊಂದಿಲ್ಲ. ಆದರೂ ಪರಿಣಾಮಕಾರಿಯಾದ ಒಂದು ಅಧಿಕಾರ ನಮಗಿದೆ. ನಾವು ಜನರ ಮುಂದೆ ಹೋಗಬಹುದು, ಈ ನ್ಯಾಯಾಂಗ ಜನರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂಬುದನ್ನು ಬಿಚ್ಚಿಡಬಹುದು. ನ್ಯಾಯಾಂಗ ಬದಲಿಸಲಾಗದ್ದನ್ನು ಜನರು ಬದಲಿಸಬಲ್ಲರು. ಹೀಗಾಗಿ ಶೋಷಿತರನ್ನು ಎಚ್ಚರಿಸಬೇಕು ಎಂಬ ಕಾರಣಕ್ಕಾಗಿ ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂದರು. ಈ ದೇಶದ ಶೋಷಿತರಿಗೆ ಶಿಕ್ಷಣ ಎನ್ನುವುದು ಖಂಡಿತವಾಗಿಯೂ ಬಿಡುಗಡೆಯ ಹಾದಿ ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಜಸ್ಟೀಸ್‌ ನಾಗಮೋಹನ ದಾಸ್ ಮಾತನಾಡಿ, “ಭಾರತ ಗಣರಾಜ್ಯವಾದ ಬಳಿಕ ನಾವು ಒಂದಿಷ್ಟು ಸಾಧನೆಯನ್ನು ಮಾಡಿದ್ದೇವೆ. ಆದರೆ ಇಂದು ಹಲವು ಸಮಸ್ಯೆಗಳು, ಸವಾಲುಗಳು ನಮ್ಮನ್ನು ಕಾಡುತ್ತಿವೆ. ನಾವೆಲ್ಲ ಹೋರಾಟ ಮಾಡಿದಾಗ ಮೂಢನಂಬಿಕೆಗಳ ನಿಷೇಧ ಕಾಯ್ದೆ ಜಾರಿಗೆ ಬಂತು. ಆದರೆ ಒಂದೇ ಒಂದು ಪ್ರಕರಣ ದಾಖಲಾಗಲಿಲ್ಲ. ಚುನಾವಣೆಯಲ್ಲಿ ಜಾತಿ, ಹಣ, ಧರ್ಮದ ಪ್ರಭಾವವನ್ನು ಯಾವ ರೀತಿ ಮುಕ್ತ ಮಾಡಬೇಕು? ಜನಪ್ರತಿನಿಧಿಗಳು ತಮಗೆ ಇಷ್ಟಬಂದಾಗ ರಾಜೀನಾಮೆ ಕೊಟ್ಟು ಉಪಚುನಾವಣೆಯನ್ನು ನಮ್ಮ ಮೇಲೆ ಏರುವಂತಹ ಸಂದರ್ಭದಲ್ಲಿ ಏನು ಮಾಡಬೇಕು? ಪರಿಹಾರ ಏನು ಎಂಬುದನ್ನು ಪುಸ್ತಕದಲ್ಲಿ ಪ್ರಸ್ತಾಪ ಮಾಡಿದ್ದೇನೆ” ಎಂದು ತಿಳಿಸಿದರು.

ಚಿಂತಕರಾದ ಬಿ.ಟಿ ಲಲಿತಾ ನಾಯಕ್, ಮಾವಳ್ಳಿ ಶಂಕರ್, ರಾಜಶೇಖರ್ ಮೂರ್ತಿ, ಗೋಪಾಲಕೃಷ್ಣ, ಪ್ರೊ.ಬರಗೂರು ರಾಮಚಂದ್ರಪ್ಪ ಹಾಜರಿದ್ದರು.


ಇದನ್ನೂ ಓದಿರಿ: ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...