Homeಕರೋನಾ ತಲ್ಲಣಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ಬಡ ವಿದ್ಯಾರ್ಥಿಗಳು ಒಂದು ವರ್ಷ ಕಲಿಕೆಯಿಂದ ವಂಚಿತರಾದರೆ 3-15 ವಯಸ್ಸಿನ ಮಕ್ಕಳು ಹಿಂದಿನದನ್ನು ಮರೆತು, ಮುಂದಿನದನ್ನು ಕಲಿಯಲಾಗದೆ ಕಷ್ಟಕ್ಕೀಡಾಗಲಿದ್ದಾರೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

- Advertisement -
- Advertisement -

ಶಾಲೆಗಳನ್ನು ತೆರೆಯದೆ ಬಡಮಕ್ಕಳ ಹಿತರಕ್ಷಣೆ ಮಾಡಲು ವಿಫಲವಾಗಿರುವ  ಮಾನ್ಯ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿವೆ. ಇದೇ ಸಮಿತಿ ಡಿಸೆಂಬರ್ 7ರಂದು ಡಿಸೆಂಬರ್ 15ರೊಳಗೆ ಎಲ್ಲಾ ಶಾಲೆಗಳನ್ನು ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ  ನಿರ್ಧಾರವನ್ನು ಈ ಸಮಿತಿ ಖಂಡಿಸಿತ್ತು. ಜೊತೆಗೆ ಬಾಲವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗೆ ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿತ್ತು.

ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲು ನಿರ್ಧರಿಸಬೇಕಿರುವ ಸರಕಾರವು ಜನವರಿ 1ರಿಂದ ಸೀಮಿತ ಮಟ್ಟದಲ್ಲಿ ವಿದ್ಯಾಗಮ ಕಾರ್ಯಕ್ರಮವನ್ನು ಶಾಲಾ ಕೊಠಡಿಗಳಲ್ಲೇ ಆರಂಭಿಸುವುದಾಗಿ ಹೇಳಿದೆ. ಈ ನಿರ್ಧಾರಕ್ಕೆ ರಾಜ್ಯದ ಕೊರೋನ ಕಾರ್ಯಪಡೆ – ತಾಂತ್ರಿಕ ಸಲಹಾ ಸಮಿತಿಯು 10 ಮತ್ತು 12ನೆ ತರಗತಿಗಳನ್ನು ಜನವರಿ 1 ರಿಂದ ತೆರೆಯಬಹುದೆಂದೂ, 6 ರಿಂದ 9 ಮತ್ತು 11ನೇ ತರಗತಿಗಳಿಗೆ ಜನವರಿ 14ರಿಂದ ವಿದ್ಯಾಗಮ ಆರಂಭಿಸಬಹುದೆಂದೂ, 6ಕ್ಕಿಂತ ಕೆಳಗಿನ ತರಗತಿಗಳನ್ನು ತೆರೆಯಲೇಬಾರದೆಂದೂ ಸಲಹೆ ನೀಡಿರುವುದನ್ನು ಪರಿಗಣಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಇದು ಸಂಪೂರ್ಣವಾಗಿ ಅವೈಜ್ಞಾನಿಕವೂ, ಅಪಾಯಕಾರಿಯೂ ಆಗಿದ್ದು, ಮಕ್ಕಳ ಭವಿಷ್ಯವನ್ನು ಶಾಶ್ವತವಾಗಿ ಕೆಡಿಸಲಿದೆ. ಈ ಸಲಹೆಯು ಈ ಶೈಕ್ಷಣಿಕ ವರ್ಷವಿಡೀ ಶಾಲೆಗಳನ್ನು ತೆರೆಯದಿರುವ ಹುನ್ನಾರವೆಂಬುದು ಸ್ಪಷ್ಟವಾಗುತ್ತದೆ ಎಂದು ಸಮಿತಿಯು ಆರೋಪಿಸಿದೆ.

ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಈ ವರದಿಯ ಪ್ರಕಾರ, ಬಡ ವಿದ್ಯಾರ್ಥಿಗಳು ಒಂದು ವರ್ಷ ಕಲಿಕೆಯಿಂದ ವಂಚಿತರಾದರೆ 3-15 ವಯಸ್ಸಿನ ಮಕ್ಕಳು ಹಿಂದಿನದನ್ನು ಮರೆತು, ಮುಂದಿನದನ್ನು ಕಲಿಯಲಾಗದೆ ಕಷ್ಟಕ್ಕೀಡಾಗಲಿದ್ದಾರೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

ಜೊತೆಗೆ, ಈ ಸಂಕಷ್ಟಕ್ಕೆ ಒಳಗಾಗುವ ಬಹುತೇಕ ಮಕ್ಕಳು ಅತ್ಯಂತ ಕೆಳಸ್ತರದ ಸಮುದಾಯಗಳಿಗೆ ಸೇರಿದವರಾಗಿದ್ದು, ಈಗಾಗಲೇ ಬಾಲ್ಯ ವಿವಾಹ ಮತ್ತು ಮಕ್ಕಳ ಸಾಗಾಣಿಕೆ ಹೆಚ್ಚಿರುವ ಸಂದರ್ಭದಲ್ಲಿ, ಶಾಲೆ ತೊರೆದು ಬಾಲ ಕಾರ್ಮಿಕ ಹಾಗು ಜೀತ ಕಾರ್ಮಿಕರಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ರಾಜ್ಯವು ಸೇರಿದಂತೆ ವಿಶ್ವದಾದ್ಯಂತದಿಂದ ಲಭ್ಯವಿರುವ ವರದಿಗಳನುಸಾರ ಕೊರೊನಾ ಸೋಂಕು 10 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಯಾವ ಸಮಸ್ಯೆಯನ್ನು ಉಂಟು ಮಾಡುವುದಿಲ್ಲ. 10ರಿಂದ 20ರವರೆಗಿನ ಮಕ್ಕಳಲ್ಲೂ ಅತಿ ಸೌಮ್ಯ ಸೋಂಕಾಗಿ, ಯಾವುದೇ ಸಮಸ್ಯೆಯನ್ನುಂಟು ಮಾಡದೆ ವಾಸಿಯಾಗುತ್ತದೆ ಎಂದು ವರದಿಯಾಗಿದೆ ಎಂದು ಮಾಹಿತಿ ನೀಡಿದೆ.

ಚಿತ್ರ: ಮೈಸೂರು ಟುಡೆ

ಇದನ್ನೂ ಓದಿ: ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ಇಂತಹ ಸಂದರ್ಭದಲ್ಲಿ ರಾಜ್ಯದ ತಾಂತ್ರಿಕ ಸಲಹಾ ಸಮಿತಿಯು ಈ ವೈಜ್ಞಾನಿಕ ಸತ್ಯಕ್ಕೆ ತೀರಾ ತದ್ವಿರುದ್ಧವಾದ, ಅಸಂಬದ್ಧವಾದ ಸಲಹೆಯನ್ನು ನೀಡಿರುವುದು ಖಂಡನೀಯವಾಗಿದ್ದು, ಮಕ್ಕಳ ಹಿತಾಸಕ್ತಿಗಳಿಗೆ ಮಾರಕವಾದ ಸಲಹೆಗಳನ್ನು ನೀಡುವ ತಾಂತ್ರಿಕ ಸಮಿತಿಯನ್ನು ಈ ಕೂಡಲೇ ರದ್ದು ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದೆ.

ಕೊರೊನಾ ಸೋಂಕಿನಿಂದ ಯಾವುದೇ ಸಮಸ್ಯೆ ಇಲ್ಲವೆಂದು ಹಲವು ವರದಿಗಳು ಬಂದಿರುವ ಕಾರಣ, ಈ ಕೂಡಲೇ ಶಾಲೆಗಳನ್ನು ತೆರೆಯುವುದರಿಂದ ಜೂನ್ ವರೆಗೆ ಈ ಶೈಕ್ಷಣಿಕ ವರ್ಷದ ಪಾಠಗಳನ್ನು ಕಲಿಸುವುದಕ್ಕೂ ಸಾಧ್ಯವಾಗಲಿದೆ ಎಂದು ಸಮಿತಿ ಆಗ್ರಹಿಸಿದೆ.

ಇದಲ್ಲದೇ, ಶಾಲೆಗಳನ್ನು ತೆರೆಯದೇ ಇರುವುದು ಮಕ್ಕಳ ಶಿಕ್ಷಣದ ಹಕ್ಕು, ಆಹಾರದ ಹಕ್ಕು, ಮಾನವಾಧಿಕಾರ ಮತ್ತಿತರ ಎಲ್ಲಾ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅದರಲ್ಲೂ 3-10 ವಯಸ್ಸಿನ ಮಕ್ಕಳ, ದೈಹಿಕ, ಮಾನಸಿಕ, ಶೈಕ್ಷಣಿಕ ಮತ್ತು ಮಿದುಳಿನ ಬೆಳವಣಿಗೆಗಳ ಮೇಲೆ ಶಾಶ್ವತವಾದ ಹಾನಿಯನ್ನುಂಟು ಮಾಡಲಿವೆ ಎಂದು ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ಇವುಗಳ ನಡುವೆ, ಶಾಲೆ ಆರಂಭಿಸದಿದ್ದರೇ, ಸಮಿತಿ ಈ ಹಿಂದೆಯೇ ತಿಳಿಸಿರುವಂತೆ ನಮ್ಮೂರ ಶಾಲೆಗಳನ್ನು ನಾವೇ ತೆರೆಯುವ ಅಭಿಯಾನವನ್ನು ಇನ್ನಷ್ಟು ವ್ಯಾಪಕವಾಗಿ ನಡೆಸಲಿದ್ದೇವೆ ಎಂದು ಘೋಷಿದ್ದಾರೆ. ಜೊತೆಗೆ ಕರ್ನಾಟಕದ ಬಡವಿದ್ಯಾರ್ಥಿಗಳ ಹಿತರಕ್ಷಣೆ ಮಾಡಲು ವಿಫಲವಾಗಿರುವ ಮಾನ್ಯ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

Mushroom rasam likely to be included in midday meals at Karnataka government schools- The New Indian Express
PC: EPS

ಮಾವಳ್ಳಿ ಶಂಕರ್, ಜ್ಯೋತಿ ಕೆ, ವಾಸುದೇವ ರೆಡ್ಡಿ ಕೆ, ಸರೋವರ್ ಬೆಂಕೀಕೆರೆ, ಡಾ.ಶ್ರೀನಿವಾಸ್, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ, ಪುಷ್ಪರಾಜ್ ಬೋಳೂರು, ಡಾ. ನಿರಂಜನಾರಾಧ್ಯ ವಿಪಿ, ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಡಾ.ಯೋಗಾನಂದ ರೆಡ್ಡಿ,  ಡಾ. ಸಿದ್ದನಗೌಡ ಪಾಟೀಲ, ಡಾ. ವಡ್ಡಗೆರೆ ನಾಗರಾಜಯ್ಯ, ಶ್ರೀಪಾದ ಭಟ್, ಡಾ. ಬಿಆರ್ ಮಂಜುನಾಥ್, ಬಿ.ಆರ್ ಭಾಸ್ಕರ್ ಪ್ರಸಾದ್, ಡಾ.ಕೆಎಸ್ ಜನಾರ್ಧನ, ಡಾ. ಹೆಚ್ ಜಿ ಜಯಲಕ್ಷ್ಮಿ, ಪ್ರೊ. ನರೇಂದ್ರ ನಾಯಕ್,  ಡಾ. ಪಿವಿ ಭಂಡಾರಿ, ಡಾ. ವಾಣಿ ಕೋರಿ, ಡಾ. ಬಾಲಸರಸ್ವತಿ, ಡಾ. ಭಾನು ಪ್ರಕಾಶ್ ಎಎಸ್, ರಾಜಾರಾಂ ತಲ್ಲೂರು, ಜಿ ರವಿ, ಪಾರ್ಥಸಾರಥಿ ಕೆಎಸ್, ಭಾರತಿ ಪ್ರಶಾಂತ್ ಮುಂತಾದವರು ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರೈತರು ಮಾತು ಕೇಳಲು ಇನ್ನೆಷ್ಟು ರೈತರ ಬಲಿಬೇಕು?: ಕೃಷಿ ಮಸೂದೆ ಹರಿದು ಆಕ್ರೋಶ ಹೊರಹಾಕಿದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...