Homeಕರೋನಾ ತಲ್ಲಣಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ಬಡ ವಿದ್ಯಾರ್ಥಿಗಳು ಒಂದು ವರ್ಷ ಕಲಿಕೆಯಿಂದ ವಂಚಿತರಾದರೆ 3-15 ವಯಸ್ಸಿನ ಮಕ್ಕಳು ಹಿಂದಿನದನ್ನು ಮರೆತು, ಮುಂದಿನದನ್ನು ಕಲಿಯಲಾಗದೆ ಕಷ್ಟಕ್ಕೀಡಾಗಲಿದ್ದಾರೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

- Advertisement -
- Advertisement -

ಶಾಲೆಗಳನ್ನು ತೆರೆಯದೆ ಬಡಮಕ್ಕಳ ಹಿತರಕ್ಷಣೆ ಮಾಡಲು ವಿಫಲವಾಗಿರುವ  ಮಾನ್ಯ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿವೆ. ಇದೇ ಸಮಿತಿ ಡಿಸೆಂಬರ್ 7ರಂದು ಡಿಸೆಂಬರ್ 15ರೊಳಗೆ ಎಲ್ಲಾ ಶಾಲೆಗಳನ್ನು ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ  ನಿರ್ಧಾರವನ್ನು ಈ ಸಮಿತಿ ಖಂಡಿಸಿತ್ತು. ಜೊತೆಗೆ ಬಾಲವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗೆ ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿತ್ತು.

ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲು ನಿರ್ಧರಿಸಬೇಕಿರುವ ಸರಕಾರವು ಜನವರಿ 1ರಿಂದ ಸೀಮಿತ ಮಟ್ಟದಲ್ಲಿ ವಿದ್ಯಾಗಮ ಕಾರ್ಯಕ್ರಮವನ್ನು ಶಾಲಾ ಕೊಠಡಿಗಳಲ್ಲೇ ಆರಂಭಿಸುವುದಾಗಿ ಹೇಳಿದೆ. ಈ ನಿರ್ಧಾರಕ್ಕೆ ರಾಜ್ಯದ ಕೊರೋನ ಕಾರ್ಯಪಡೆ – ತಾಂತ್ರಿಕ ಸಲಹಾ ಸಮಿತಿಯು 10 ಮತ್ತು 12ನೆ ತರಗತಿಗಳನ್ನು ಜನವರಿ 1 ರಿಂದ ತೆರೆಯಬಹುದೆಂದೂ, 6 ರಿಂದ 9 ಮತ್ತು 11ನೇ ತರಗತಿಗಳಿಗೆ ಜನವರಿ 14ರಿಂದ ವಿದ್ಯಾಗಮ ಆರಂಭಿಸಬಹುದೆಂದೂ, 6ಕ್ಕಿಂತ ಕೆಳಗಿನ ತರಗತಿಗಳನ್ನು ತೆರೆಯಲೇಬಾರದೆಂದೂ ಸಲಹೆ ನೀಡಿರುವುದನ್ನು ಪರಿಗಣಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಇದು ಸಂಪೂರ್ಣವಾಗಿ ಅವೈಜ್ಞಾನಿಕವೂ, ಅಪಾಯಕಾರಿಯೂ ಆಗಿದ್ದು, ಮಕ್ಕಳ ಭವಿಷ್ಯವನ್ನು ಶಾಶ್ವತವಾಗಿ ಕೆಡಿಸಲಿದೆ. ಈ ಸಲಹೆಯು ಈ ಶೈಕ್ಷಣಿಕ ವರ್ಷವಿಡೀ ಶಾಲೆಗಳನ್ನು ತೆರೆಯದಿರುವ ಹುನ್ನಾರವೆಂಬುದು ಸ್ಪಷ್ಟವಾಗುತ್ತದೆ ಎಂದು ಸಮಿತಿಯು ಆರೋಪಿಸಿದೆ.

ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಈ ವರದಿಯ ಪ್ರಕಾರ, ಬಡ ವಿದ್ಯಾರ್ಥಿಗಳು ಒಂದು ವರ್ಷ ಕಲಿಕೆಯಿಂದ ವಂಚಿತರಾದರೆ 3-15 ವಯಸ್ಸಿನ ಮಕ್ಕಳು ಹಿಂದಿನದನ್ನು ಮರೆತು, ಮುಂದಿನದನ್ನು ಕಲಿಯಲಾಗದೆ ಕಷ್ಟಕ್ಕೀಡಾಗಲಿದ್ದಾರೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

ಜೊತೆಗೆ, ಈ ಸಂಕಷ್ಟಕ್ಕೆ ಒಳಗಾಗುವ ಬಹುತೇಕ ಮಕ್ಕಳು ಅತ್ಯಂತ ಕೆಳಸ್ತರದ ಸಮುದಾಯಗಳಿಗೆ ಸೇರಿದವರಾಗಿದ್ದು, ಈಗಾಗಲೇ ಬಾಲ್ಯ ವಿವಾಹ ಮತ್ತು ಮಕ್ಕಳ ಸಾಗಾಣಿಕೆ ಹೆಚ್ಚಿರುವ ಸಂದರ್ಭದಲ್ಲಿ, ಶಾಲೆ ತೊರೆದು ಬಾಲ ಕಾರ್ಮಿಕ ಹಾಗು ಜೀತ ಕಾರ್ಮಿಕರಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ರಾಜ್ಯವು ಸೇರಿದಂತೆ ವಿಶ್ವದಾದ್ಯಂತದಿಂದ ಲಭ್ಯವಿರುವ ವರದಿಗಳನುಸಾರ ಕೊರೊನಾ ಸೋಂಕು 10 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಯಾವ ಸಮಸ್ಯೆಯನ್ನು ಉಂಟು ಮಾಡುವುದಿಲ್ಲ. 10ರಿಂದ 20ರವರೆಗಿನ ಮಕ್ಕಳಲ್ಲೂ ಅತಿ ಸೌಮ್ಯ ಸೋಂಕಾಗಿ, ಯಾವುದೇ ಸಮಸ್ಯೆಯನ್ನುಂಟು ಮಾಡದೆ ವಾಸಿಯಾಗುತ್ತದೆ ಎಂದು ವರದಿಯಾಗಿದೆ ಎಂದು ಮಾಹಿತಿ ನೀಡಿದೆ.

ಚಿತ್ರ: ಮೈಸೂರು ಟುಡೆ

ಇದನ್ನೂ ಓದಿ: ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ಇಂತಹ ಸಂದರ್ಭದಲ್ಲಿ ರಾಜ್ಯದ ತಾಂತ್ರಿಕ ಸಲಹಾ ಸಮಿತಿಯು ಈ ವೈಜ್ಞಾನಿಕ ಸತ್ಯಕ್ಕೆ ತೀರಾ ತದ್ವಿರುದ್ಧವಾದ, ಅಸಂಬದ್ಧವಾದ ಸಲಹೆಯನ್ನು ನೀಡಿರುವುದು ಖಂಡನೀಯವಾಗಿದ್ದು, ಮಕ್ಕಳ ಹಿತಾಸಕ್ತಿಗಳಿಗೆ ಮಾರಕವಾದ ಸಲಹೆಗಳನ್ನು ನೀಡುವ ತಾಂತ್ರಿಕ ಸಮಿತಿಯನ್ನು ಈ ಕೂಡಲೇ ರದ್ದು ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದೆ.

ಕೊರೊನಾ ಸೋಂಕಿನಿಂದ ಯಾವುದೇ ಸಮಸ್ಯೆ ಇಲ್ಲವೆಂದು ಹಲವು ವರದಿಗಳು ಬಂದಿರುವ ಕಾರಣ, ಈ ಕೂಡಲೇ ಶಾಲೆಗಳನ್ನು ತೆರೆಯುವುದರಿಂದ ಜೂನ್ ವರೆಗೆ ಈ ಶೈಕ್ಷಣಿಕ ವರ್ಷದ ಪಾಠಗಳನ್ನು ಕಲಿಸುವುದಕ್ಕೂ ಸಾಧ್ಯವಾಗಲಿದೆ ಎಂದು ಸಮಿತಿ ಆಗ್ರಹಿಸಿದೆ.

ಇದಲ್ಲದೇ, ಶಾಲೆಗಳನ್ನು ತೆರೆಯದೇ ಇರುವುದು ಮಕ್ಕಳ ಶಿಕ್ಷಣದ ಹಕ್ಕು, ಆಹಾರದ ಹಕ್ಕು, ಮಾನವಾಧಿಕಾರ ಮತ್ತಿತರ ಎಲ್ಲಾ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅದರಲ್ಲೂ 3-10 ವಯಸ್ಸಿನ ಮಕ್ಕಳ, ದೈಹಿಕ, ಮಾನಸಿಕ, ಶೈಕ್ಷಣಿಕ ಮತ್ತು ಮಿದುಳಿನ ಬೆಳವಣಿಗೆಗಳ ಮೇಲೆ ಶಾಶ್ವತವಾದ ಹಾನಿಯನ್ನುಂಟು ಮಾಡಲಿವೆ ಎಂದು ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ಇವುಗಳ ನಡುವೆ, ಶಾಲೆ ಆರಂಭಿಸದಿದ್ದರೇ, ಸಮಿತಿ ಈ ಹಿಂದೆಯೇ ತಿಳಿಸಿರುವಂತೆ ನಮ್ಮೂರ ಶಾಲೆಗಳನ್ನು ನಾವೇ ತೆರೆಯುವ ಅಭಿಯಾನವನ್ನು ಇನ್ನಷ್ಟು ವ್ಯಾಪಕವಾಗಿ ನಡೆಸಲಿದ್ದೇವೆ ಎಂದು ಘೋಷಿದ್ದಾರೆ. ಜೊತೆಗೆ ಕರ್ನಾಟಕದ ಬಡವಿದ್ಯಾರ್ಥಿಗಳ ಹಿತರಕ್ಷಣೆ ಮಾಡಲು ವಿಫಲವಾಗಿರುವ ಮಾನ್ಯ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

Mushroom rasam likely to be included in midday meals at Karnataka government schools- The New Indian Express
PC: EPS

ಮಾವಳ್ಳಿ ಶಂಕರ್, ಜ್ಯೋತಿ ಕೆ, ವಾಸುದೇವ ರೆಡ್ಡಿ ಕೆ, ಸರೋವರ್ ಬೆಂಕೀಕೆರೆ, ಡಾ.ಶ್ರೀನಿವಾಸ್, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ, ಪುಷ್ಪರಾಜ್ ಬೋಳೂರು, ಡಾ. ನಿರಂಜನಾರಾಧ್ಯ ವಿಪಿ, ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಡಾ.ಯೋಗಾನಂದ ರೆಡ್ಡಿ,  ಡಾ. ಸಿದ್ದನಗೌಡ ಪಾಟೀಲ, ಡಾ. ವಡ್ಡಗೆರೆ ನಾಗರಾಜಯ್ಯ, ಶ್ರೀಪಾದ ಭಟ್, ಡಾ. ಬಿಆರ್ ಮಂಜುನಾಥ್, ಬಿ.ಆರ್ ಭಾಸ್ಕರ್ ಪ್ರಸಾದ್, ಡಾ.ಕೆಎಸ್ ಜನಾರ್ಧನ, ಡಾ. ಹೆಚ್ ಜಿ ಜಯಲಕ್ಷ್ಮಿ, ಪ್ರೊ. ನರೇಂದ್ರ ನಾಯಕ್,  ಡಾ. ಪಿವಿ ಭಂಡಾರಿ, ಡಾ. ವಾಣಿ ಕೋರಿ, ಡಾ. ಬಾಲಸರಸ್ವತಿ, ಡಾ. ಭಾನು ಪ್ರಕಾಶ್ ಎಎಸ್, ರಾಜಾರಾಂ ತಲ್ಲೂರು, ಜಿ ರವಿ, ಪಾರ್ಥಸಾರಥಿ ಕೆಎಸ್, ಭಾರತಿ ಪ್ರಶಾಂತ್ ಮುಂತಾದವರು ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರೈತರು ಮಾತು ಕೇಳಲು ಇನ್ನೆಷ್ಟು ರೈತರ ಬಲಿಬೇಕು?: ಕೃಷಿ ಮಸೂದೆ ಹರಿದು ಆಕ್ರೋಶ ಹೊರಹಾಕಿದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...