Homeಕರೋನಾ ತಲ್ಲಣಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ಬಡ ವಿದ್ಯಾರ್ಥಿಗಳು ಒಂದು ವರ್ಷ ಕಲಿಕೆಯಿಂದ ವಂಚಿತರಾದರೆ 3-15 ವಯಸ್ಸಿನ ಮಕ್ಕಳು ಹಿಂದಿನದನ್ನು ಮರೆತು, ಮುಂದಿನದನ್ನು ಕಲಿಯಲಾಗದೆ ಕಷ್ಟಕ್ಕೀಡಾಗಲಿದ್ದಾರೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

- Advertisement -
- Advertisement -

ಶಾಲೆಗಳನ್ನು ತೆರೆಯದೆ ಬಡಮಕ್ಕಳ ಹಿತರಕ್ಷಣೆ ಮಾಡಲು ವಿಫಲವಾಗಿರುವ  ಮಾನ್ಯ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿವೆ. ಇದೇ ಸಮಿತಿ ಡಿಸೆಂಬರ್ 7ರಂದು ಡಿಸೆಂಬರ್ 15ರೊಳಗೆ ಎಲ್ಲಾ ಶಾಲೆಗಳನ್ನು ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ  ನಿರ್ಧಾರವನ್ನು ಈ ಸಮಿತಿ ಖಂಡಿಸಿತ್ತು. ಜೊತೆಗೆ ಬಾಲವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗೆ ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿತ್ತು.

ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲು ನಿರ್ಧರಿಸಬೇಕಿರುವ ಸರಕಾರವು ಜನವರಿ 1ರಿಂದ ಸೀಮಿತ ಮಟ್ಟದಲ್ಲಿ ವಿದ್ಯಾಗಮ ಕಾರ್ಯಕ್ರಮವನ್ನು ಶಾಲಾ ಕೊಠಡಿಗಳಲ್ಲೇ ಆರಂಭಿಸುವುದಾಗಿ ಹೇಳಿದೆ. ಈ ನಿರ್ಧಾರಕ್ಕೆ ರಾಜ್ಯದ ಕೊರೋನ ಕಾರ್ಯಪಡೆ – ತಾಂತ್ರಿಕ ಸಲಹಾ ಸಮಿತಿಯು 10 ಮತ್ತು 12ನೆ ತರಗತಿಗಳನ್ನು ಜನವರಿ 1 ರಿಂದ ತೆರೆಯಬಹುದೆಂದೂ, 6 ರಿಂದ 9 ಮತ್ತು 11ನೇ ತರಗತಿಗಳಿಗೆ ಜನವರಿ 14ರಿಂದ ವಿದ್ಯಾಗಮ ಆರಂಭಿಸಬಹುದೆಂದೂ, 6ಕ್ಕಿಂತ ಕೆಳಗಿನ ತರಗತಿಗಳನ್ನು ತೆರೆಯಲೇಬಾರದೆಂದೂ ಸಲಹೆ ನೀಡಿರುವುದನ್ನು ಪರಿಗಣಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಇದು ಸಂಪೂರ್ಣವಾಗಿ ಅವೈಜ್ಞಾನಿಕವೂ, ಅಪಾಯಕಾರಿಯೂ ಆಗಿದ್ದು, ಮಕ್ಕಳ ಭವಿಷ್ಯವನ್ನು ಶಾಶ್ವತವಾಗಿ ಕೆಡಿಸಲಿದೆ. ಈ ಸಲಹೆಯು ಈ ಶೈಕ್ಷಣಿಕ ವರ್ಷವಿಡೀ ಶಾಲೆಗಳನ್ನು ತೆರೆಯದಿರುವ ಹುನ್ನಾರವೆಂಬುದು ಸ್ಪಷ್ಟವಾಗುತ್ತದೆ ಎಂದು ಸಮಿತಿಯು ಆರೋಪಿಸಿದೆ.

ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಈ ವರದಿಯ ಪ್ರಕಾರ, ಬಡ ವಿದ್ಯಾರ್ಥಿಗಳು ಒಂದು ವರ್ಷ ಕಲಿಕೆಯಿಂದ ವಂಚಿತರಾದರೆ 3-15 ವಯಸ್ಸಿನ ಮಕ್ಕಳು ಹಿಂದಿನದನ್ನು ಮರೆತು, ಮುಂದಿನದನ್ನು ಕಲಿಯಲಾಗದೆ ಕಷ್ಟಕ್ಕೀಡಾಗಲಿದ್ದಾರೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

ಜೊತೆಗೆ, ಈ ಸಂಕಷ್ಟಕ್ಕೆ ಒಳಗಾಗುವ ಬಹುತೇಕ ಮಕ್ಕಳು ಅತ್ಯಂತ ಕೆಳಸ್ತರದ ಸಮುದಾಯಗಳಿಗೆ ಸೇರಿದವರಾಗಿದ್ದು, ಈಗಾಗಲೇ ಬಾಲ್ಯ ವಿವಾಹ ಮತ್ತು ಮಕ್ಕಳ ಸಾಗಾಣಿಕೆ ಹೆಚ್ಚಿರುವ ಸಂದರ್ಭದಲ್ಲಿ, ಶಾಲೆ ತೊರೆದು ಬಾಲ ಕಾರ್ಮಿಕ ಹಾಗು ಜೀತ ಕಾರ್ಮಿಕರಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ರಾಜ್ಯವು ಸೇರಿದಂತೆ ವಿಶ್ವದಾದ್ಯಂತದಿಂದ ಲಭ್ಯವಿರುವ ವರದಿಗಳನುಸಾರ ಕೊರೊನಾ ಸೋಂಕು 10 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಯಾವ ಸಮಸ್ಯೆಯನ್ನು ಉಂಟು ಮಾಡುವುದಿಲ್ಲ. 10ರಿಂದ 20ರವರೆಗಿನ ಮಕ್ಕಳಲ್ಲೂ ಅತಿ ಸೌಮ್ಯ ಸೋಂಕಾಗಿ, ಯಾವುದೇ ಸಮಸ್ಯೆಯನ್ನುಂಟು ಮಾಡದೆ ವಾಸಿಯಾಗುತ್ತದೆ ಎಂದು ವರದಿಯಾಗಿದೆ ಎಂದು ಮಾಹಿತಿ ನೀಡಿದೆ.

ಚಿತ್ರ: ಮೈಸೂರು ಟುಡೆ

ಇದನ್ನೂ ಓದಿ: ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ಇಂತಹ ಸಂದರ್ಭದಲ್ಲಿ ರಾಜ್ಯದ ತಾಂತ್ರಿಕ ಸಲಹಾ ಸಮಿತಿಯು ಈ ವೈಜ್ಞಾನಿಕ ಸತ್ಯಕ್ಕೆ ತೀರಾ ತದ್ವಿರುದ್ಧವಾದ, ಅಸಂಬದ್ಧವಾದ ಸಲಹೆಯನ್ನು ನೀಡಿರುವುದು ಖಂಡನೀಯವಾಗಿದ್ದು, ಮಕ್ಕಳ ಹಿತಾಸಕ್ತಿಗಳಿಗೆ ಮಾರಕವಾದ ಸಲಹೆಗಳನ್ನು ನೀಡುವ ತಾಂತ್ರಿಕ ಸಮಿತಿಯನ್ನು ಈ ಕೂಡಲೇ ರದ್ದು ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದೆ.

ಕೊರೊನಾ ಸೋಂಕಿನಿಂದ ಯಾವುದೇ ಸಮಸ್ಯೆ ಇಲ್ಲವೆಂದು ಹಲವು ವರದಿಗಳು ಬಂದಿರುವ ಕಾರಣ, ಈ ಕೂಡಲೇ ಶಾಲೆಗಳನ್ನು ತೆರೆಯುವುದರಿಂದ ಜೂನ್ ವರೆಗೆ ಈ ಶೈಕ್ಷಣಿಕ ವರ್ಷದ ಪಾಠಗಳನ್ನು ಕಲಿಸುವುದಕ್ಕೂ ಸಾಧ್ಯವಾಗಲಿದೆ ಎಂದು ಸಮಿತಿ ಆಗ್ರಹಿಸಿದೆ.

ಇದಲ್ಲದೇ, ಶಾಲೆಗಳನ್ನು ತೆರೆಯದೇ ಇರುವುದು ಮಕ್ಕಳ ಶಿಕ್ಷಣದ ಹಕ್ಕು, ಆಹಾರದ ಹಕ್ಕು, ಮಾನವಾಧಿಕಾರ ಮತ್ತಿತರ ಎಲ್ಲಾ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅದರಲ್ಲೂ 3-10 ವಯಸ್ಸಿನ ಮಕ್ಕಳ, ದೈಹಿಕ, ಮಾನಸಿಕ, ಶೈಕ್ಷಣಿಕ ಮತ್ತು ಮಿದುಳಿನ ಬೆಳವಣಿಗೆಗಳ ಮೇಲೆ ಶಾಶ್ವತವಾದ ಹಾನಿಯನ್ನುಂಟು ಮಾಡಲಿವೆ ಎಂದು ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ಇವುಗಳ ನಡುವೆ, ಶಾಲೆ ಆರಂಭಿಸದಿದ್ದರೇ, ಸಮಿತಿ ಈ ಹಿಂದೆಯೇ ತಿಳಿಸಿರುವಂತೆ ನಮ್ಮೂರ ಶಾಲೆಗಳನ್ನು ನಾವೇ ತೆರೆಯುವ ಅಭಿಯಾನವನ್ನು ಇನ್ನಷ್ಟು ವ್ಯಾಪಕವಾಗಿ ನಡೆಸಲಿದ್ದೇವೆ ಎಂದು ಘೋಷಿದ್ದಾರೆ. ಜೊತೆಗೆ ಕರ್ನಾಟಕದ ಬಡವಿದ್ಯಾರ್ಥಿಗಳ ಹಿತರಕ್ಷಣೆ ಮಾಡಲು ವಿಫಲವಾಗಿರುವ ಮಾನ್ಯ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

Mushroom rasam likely to be included in midday meals at Karnataka government schools- The New Indian Express
PC: EPS

ಮಾವಳ್ಳಿ ಶಂಕರ್, ಜ್ಯೋತಿ ಕೆ, ವಾಸುದೇವ ರೆಡ್ಡಿ ಕೆ, ಸರೋವರ್ ಬೆಂಕೀಕೆರೆ, ಡಾ.ಶ್ರೀನಿವಾಸ್, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ, ಪುಷ್ಪರಾಜ್ ಬೋಳೂರು, ಡಾ. ನಿರಂಜನಾರಾಧ್ಯ ವಿಪಿ, ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಡಾ.ಯೋಗಾನಂದ ರೆಡ್ಡಿ,  ಡಾ. ಸಿದ್ದನಗೌಡ ಪಾಟೀಲ, ಡಾ. ವಡ್ಡಗೆರೆ ನಾಗರಾಜಯ್ಯ, ಶ್ರೀಪಾದ ಭಟ್, ಡಾ. ಬಿಆರ್ ಮಂಜುನಾಥ್, ಬಿ.ಆರ್ ಭಾಸ್ಕರ್ ಪ್ರಸಾದ್, ಡಾ.ಕೆಎಸ್ ಜನಾರ್ಧನ, ಡಾ. ಹೆಚ್ ಜಿ ಜಯಲಕ್ಷ್ಮಿ, ಪ್ರೊ. ನರೇಂದ್ರ ನಾಯಕ್,  ಡಾ. ಪಿವಿ ಭಂಡಾರಿ, ಡಾ. ವಾಣಿ ಕೋರಿ, ಡಾ. ಬಾಲಸರಸ್ವತಿ, ಡಾ. ಭಾನು ಪ್ರಕಾಶ್ ಎಎಸ್, ರಾಜಾರಾಂ ತಲ್ಲೂರು, ಜಿ ರವಿ, ಪಾರ್ಥಸಾರಥಿ ಕೆಎಸ್, ಭಾರತಿ ಪ್ರಶಾಂತ್ ಮುಂತಾದವರು ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರೈತರು ಮಾತು ಕೇಳಲು ಇನ್ನೆಷ್ಟು ರೈತರ ಬಲಿಬೇಕು?: ಕೃಷಿ ಮಸೂದೆ ಹರಿದು ಆಕ್ರೋಶ ಹೊರಹಾಕಿದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...