Homeಕರೋನಾ ತಲ್ಲಣಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ಬಡ ವಿದ್ಯಾರ್ಥಿಗಳು ಒಂದು ವರ್ಷ ಕಲಿಕೆಯಿಂದ ವಂಚಿತರಾದರೆ 3-15 ವಯಸ್ಸಿನ ಮಕ್ಕಳು ಹಿಂದಿನದನ್ನು ಮರೆತು, ಮುಂದಿನದನ್ನು ಕಲಿಯಲಾಗದೆ ಕಷ್ಟಕ್ಕೀಡಾಗಲಿದ್ದಾರೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

- Advertisement -
- Advertisement -

ಶಾಲೆಗಳನ್ನು ತೆರೆಯದೆ ಬಡಮಕ್ಕಳ ಹಿತರಕ್ಷಣೆ ಮಾಡಲು ವಿಫಲವಾಗಿರುವ  ಮಾನ್ಯ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿವೆ. ಇದೇ ಸಮಿತಿ ಡಿಸೆಂಬರ್ 7ರಂದು ಡಿಸೆಂಬರ್ 15ರೊಳಗೆ ಎಲ್ಲಾ ಶಾಲೆಗಳನ್ನು ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ  ನಿರ್ಧಾರವನ್ನು ಈ ಸಮಿತಿ ಖಂಡಿಸಿತ್ತು. ಜೊತೆಗೆ ಬಾಲವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗೆ ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿತ್ತು.

ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲು ನಿರ್ಧರಿಸಬೇಕಿರುವ ಸರಕಾರವು ಜನವರಿ 1ರಿಂದ ಸೀಮಿತ ಮಟ್ಟದಲ್ಲಿ ವಿದ್ಯಾಗಮ ಕಾರ್ಯಕ್ರಮವನ್ನು ಶಾಲಾ ಕೊಠಡಿಗಳಲ್ಲೇ ಆರಂಭಿಸುವುದಾಗಿ ಹೇಳಿದೆ. ಈ ನಿರ್ಧಾರಕ್ಕೆ ರಾಜ್ಯದ ಕೊರೋನ ಕಾರ್ಯಪಡೆ – ತಾಂತ್ರಿಕ ಸಲಹಾ ಸಮಿತಿಯು 10 ಮತ್ತು 12ನೆ ತರಗತಿಗಳನ್ನು ಜನವರಿ 1 ರಿಂದ ತೆರೆಯಬಹುದೆಂದೂ, 6 ರಿಂದ 9 ಮತ್ತು 11ನೇ ತರಗತಿಗಳಿಗೆ ಜನವರಿ 14ರಿಂದ ವಿದ್ಯಾಗಮ ಆರಂಭಿಸಬಹುದೆಂದೂ, 6ಕ್ಕಿಂತ ಕೆಳಗಿನ ತರಗತಿಗಳನ್ನು ತೆರೆಯಲೇಬಾರದೆಂದೂ ಸಲಹೆ ನೀಡಿರುವುದನ್ನು ಪರಿಗಣಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಇದು ಸಂಪೂರ್ಣವಾಗಿ ಅವೈಜ್ಞಾನಿಕವೂ, ಅಪಾಯಕಾರಿಯೂ ಆಗಿದ್ದು, ಮಕ್ಕಳ ಭವಿಷ್ಯವನ್ನು ಶಾಶ್ವತವಾಗಿ ಕೆಡಿಸಲಿದೆ. ಈ ಸಲಹೆಯು ಈ ಶೈಕ್ಷಣಿಕ ವರ್ಷವಿಡೀ ಶಾಲೆಗಳನ್ನು ತೆರೆಯದಿರುವ ಹುನ್ನಾರವೆಂಬುದು ಸ್ಪಷ್ಟವಾಗುತ್ತದೆ ಎಂದು ಸಮಿತಿಯು ಆರೋಪಿಸಿದೆ.

ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಈ ವರದಿಯ ಪ್ರಕಾರ, ಬಡ ವಿದ್ಯಾರ್ಥಿಗಳು ಒಂದು ವರ್ಷ ಕಲಿಕೆಯಿಂದ ವಂಚಿತರಾದರೆ 3-15 ವಯಸ್ಸಿನ ಮಕ್ಕಳು ಹಿಂದಿನದನ್ನು ಮರೆತು, ಮುಂದಿನದನ್ನು ಕಲಿಯಲಾಗದೆ ಕಷ್ಟಕ್ಕೀಡಾಗಲಿದ್ದಾರೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

ಜೊತೆಗೆ, ಈ ಸಂಕಷ್ಟಕ್ಕೆ ಒಳಗಾಗುವ ಬಹುತೇಕ ಮಕ್ಕಳು ಅತ್ಯಂತ ಕೆಳಸ್ತರದ ಸಮುದಾಯಗಳಿಗೆ ಸೇರಿದವರಾಗಿದ್ದು, ಈಗಾಗಲೇ ಬಾಲ್ಯ ವಿವಾಹ ಮತ್ತು ಮಕ್ಕಳ ಸಾಗಾಣಿಕೆ ಹೆಚ್ಚಿರುವ ಸಂದರ್ಭದಲ್ಲಿ, ಶಾಲೆ ತೊರೆದು ಬಾಲ ಕಾರ್ಮಿಕ ಹಾಗು ಜೀತ ಕಾರ್ಮಿಕರಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ರಾಜ್ಯವು ಸೇರಿದಂತೆ ವಿಶ್ವದಾದ್ಯಂತದಿಂದ ಲಭ್ಯವಿರುವ ವರದಿಗಳನುಸಾರ ಕೊರೊನಾ ಸೋಂಕು 10 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಯಾವ ಸಮಸ್ಯೆಯನ್ನು ಉಂಟು ಮಾಡುವುದಿಲ್ಲ. 10ರಿಂದ 20ರವರೆಗಿನ ಮಕ್ಕಳಲ್ಲೂ ಅತಿ ಸೌಮ್ಯ ಸೋಂಕಾಗಿ, ಯಾವುದೇ ಸಮಸ್ಯೆಯನ್ನುಂಟು ಮಾಡದೆ ವಾಸಿಯಾಗುತ್ತದೆ ಎಂದು ವರದಿಯಾಗಿದೆ ಎಂದು ಮಾಹಿತಿ ನೀಡಿದೆ.

ಚಿತ್ರ: ಮೈಸೂರು ಟುಡೆ

ಇದನ್ನೂ ಓದಿ: ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ಇಂತಹ ಸಂದರ್ಭದಲ್ಲಿ ರಾಜ್ಯದ ತಾಂತ್ರಿಕ ಸಲಹಾ ಸಮಿತಿಯು ಈ ವೈಜ್ಞಾನಿಕ ಸತ್ಯಕ್ಕೆ ತೀರಾ ತದ್ವಿರುದ್ಧವಾದ, ಅಸಂಬದ್ಧವಾದ ಸಲಹೆಯನ್ನು ನೀಡಿರುವುದು ಖಂಡನೀಯವಾಗಿದ್ದು, ಮಕ್ಕಳ ಹಿತಾಸಕ್ತಿಗಳಿಗೆ ಮಾರಕವಾದ ಸಲಹೆಗಳನ್ನು ನೀಡುವ ತಾಂತ್ರಿಕ ಸಮಿತಿಯನ್ನು ಈ ಕೂಡಲೇ ರದ್ದು ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದೆ.

ಕೊರೊನಾ ಸೋಂಕಿನಿಂದ ಯಾವುದೇ ಸಮಸ್ಯೆ ಇಲ್ಲವೆಂದು ಹಲವು ವರದಿಗಳು ಬಂದಿರುವ ಕಾರಣ, ಈ ಕೂಡಲೇ ಶಾಲೆಗಳನ್ನು ತೆರೆಯುವುದರಿಂದ ಜೂನ್ ವರೆಗೆ ಈ ಶೈಕ್ಷಣಿಕ ವರ್ಷದ ಪಾಠಗಳನ್ನು ಕಲಿಸುವುದಕ್ಕೂ ಸಾಧ್ಯವಾಗಲಿದೆ ಎಂದು ಸಮಿತಿ ಆಗ್ರಹಿಸಿದೆ.

ಇದಲ್ಲದೇ, ಶಾಲೆಗಳನ್ನು ತೆರೆಯದೇ ಇರುವುದು ಮಕ್ಕಳ ಶಿಕ್ಷಣದ ಹಕ್ಕು, ಆಹಾರದ ಹಕ್ಕು, ಮಾನವಾಧಿಕಾರ ಮತ್ತಿತರ ಎಲ್ಲಾ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅದರಲ್ಲೂ 3-10 ವಯಸ್ಸಿನ ಮಕ್ಕಳ, ದೈಹಿಕ, ಮಾನಸಿಕ, ಶೈಕ್ಷಣಿಕ ಮತ್ತು ಮಿದುಳಿನ ಬೆಳವಣಿಗೆಗಳ ಮೇಲೆ ಶಾಶ್ವತವಾದ ಹಾನಿಯನ್ನುಂಟು ಮಾಡಲಿವೆ ಎಂದು ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ಇವುಗಳ ನಡುವೆ, ಶಾಲೆ ಆರಂಭಿಸದಿದ್ದರೇ, ಸಮಿತಿ ಈ ಹಿಂದೆಯೇ ತಿಳಿಸಿರುವಂತೆ ನಮ್ಮೂರ ಶಾಲೆಗಳನ್ನು ನಾವೇ ತೆರೆಯುವ ಅಭಿಯಾನವನ್ನು ಇನ್ನಷ್ಟು ವ್ಯಾಪಕವಾಗಿ ನಡೆಸಲಿದ್ದೇವೆ ಎಂದು ಘೋಷಿದ್ದಾರೆ. ಜೊತೆಗೆ ಕರ್ನಾಟಕದ ಬಡವಿದ್ಯಾರ್ಥಿಗಳ ಹಿತರಕ್ಷಣೆ ಮಾಡಲು ವಿಫಲವಾಗಿರುವ ಮಾನ್ಯ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

Mushroom rasam likely to be included in midday meals at Karnataka government schools- The New Indian Express
PC: EPS

ಮಾವಳ್ಳಿ ಶಂಕರ್, ಜ್ಯೋತಿ ಕೆ, ವಾಸುದೇವ ರೆಡ್ಡಿ ಕೆ, ಸರೋವರ್ ಬೆಂಕೀಕೆರೆ, ಡಾ.ಶ್ರೀನಿವಾಸ್, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ, ಪುಷ್ಪರಾಜ್ ಬೋಳೂರು, ಡಾ. ನಿರಂಜನಾರಾಧ್ಯ ವಿಪಿ, ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಡಾ.ಯೋಗಾನಂದ ರೆಡ್ಡಿ,  ಡಾ. ಸಿದ್ದನಗೌಡ ಪಾಟೀಲ, ಡಾ. ವಡ್ಡಗೆರೆ ನಾಗರಾಜಯ್ಯ, ಶ್ರೀಪಾದ ಭಟ್, ಡಾ. ಬಿಆರ್ ಮಂಜುನಾಥ್, ಬಿ.ಆರ್ ಭಾಸ್ಕರ್ ಪ್ರಸಾದ್, ಡಾ.ಕೆಎಸ್ ಜನಾರ್ಧನ, ಡಾ. ಹೆಚ್ ಜಿ ಜಯಲಕ್ಷ್ಮಿ, ಪ್ರೊ. ನರೇಂದ್ರ ನಾಯಕ್,  ಡಾ. ಪಿವಿ ಭಂಡಾರಿ, ಡಾ. ವಾಣಿ ಕೋರಿ, ಡಾ. ಬಾಲಸರಸ್ವತಿ, ಡಾ. ಭಾನು ಪ್ರಕಾಶ್ ಎಎಸ್, ರಾಜಾರಾಂ ತಲ್ಲೂರು, ಜಿ ರವಿ, ಪಾರ್ಥಸಾರಥಿ ಕೆಎಸ್, ಭಾರತಿ ಪ್ರಶಾಂತ್ ಮುಂತಾದವರು ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರೈತರು ಮಾತು ಕೇಳಲು ಇನ್ನೆಷ್ಟು ರೈತರ ಬಲಿಬೇಕು?: ಕೃಷಿ ಮಸೂದೆ ಹರಿದು ಆಕ್ರೋಶ ಹೊರಹಾಕಿದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...