Homeಚಳವಳಿಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಭೂಮಿ ಹಕ್ಕಿಗಾಗಿ ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ.

- Advertisement -
- Advertisement -

ಇತ್ತೀಚೆಗೆ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರವರು ನಮ್ಮ ರಾಜ್ಯದ ಮಗಳೊಬ್ಬಳು ದೇಶದ ಮೊದಲ ಪ್ರಜೆಯಾಗಲಿರುವುದರಿಂದ ನಾವು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನು ಬೆಂಬಲಿಸುವುದಾಗಿ ಘೋಷಿಸಿದರು. ಆದಿವಾಸಿ ಜನರ ಅಭಿವೃದ್ದಿಗಾಗಿ ಅವರಿಗೆ ಮತಹಾಕುವುದಾಗಿ ತಿಳಿಸಿದರು. ಆದರೆ ಅದೇ ಸಂದರ್ಭದಲ್ಲಿ ರಾಜ್ಯದ ಸಂಬಲ್‌ಪುರದ ಸ್ಲಂ ಅನ್ನು ಏಕಾಏಕಿ ತೆರವುಗೊಳಿಸಿ 1200ಕ್ಕೂ ಹೆಚ್ಚು ಆದಿವಾಸಿ-ದಲಿತರನ್ನು ಜನರನ್ನು ಬೀದಿಗೆ ತಳ್ಳಿದ್ದಾರೆ. ಇದು ಅವರ ಅಭಿವೃದ್ದಿ ಮಾದರಿಯಾಗಿದೆ.

ರಾಜ್ಯದ ಸಂಬಲ್ಪುರದಲ್ಲಿನ ಘುಂಘುಟಿಪಾರ ಸ್ಲಂನಲ್ಲಿ 400 ವರ್ಷಗಳಿಂದ 250ಕ್ಕೂ ಹೆಚ್ಚು ದಲಿತ-ಆದಿವಾಸಿ ಕುಟುಂಬಗಳು ವಾಸಿಸುತ್ತಿವೆ. 200ಕ್ಕೂ ಹೆಚ್ಚು ಶಾಲೆಗೆ ಹೋಗುವ ಮಕ್ಕಳೊಂದಿಗೆ 1200 ಜನರು ಇಲ್ಲಿ ವಾಸವಿದ್ದು, ಬಹುತೇಕರು ದಲಿತರಾಗಿದ್ದಾರೆ. ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುವ ಈ ಜನರು ಯಾರಿಗೂ ತೊಂದರೆ ಕೊಟ್ಟಿದ್ದಿಲ್ಲ. ಆದರೆ ಸ್ಲಂನಿಂದ ಸ್ವಲ್ಪ ದೂರದಲ್ಲಿರುವ ಸಮಲೇಶ್ವರಿ ದೇವಾಲಯ ವಿಸ್ತರಣೆಯ ಭಾಗವಾಗಿ ಒಂದಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಸರ್ಕಾರ ಯೋಜಿಸಿದೆ. ಅದಕ್ಕಾಗಿ ಸ್ಲಂ ಅನ್ನು ತೆರವುಗೊಳಿಸುತ್ತಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದು, ಹೋರಾಟಕ್ಕೆ ಮುಂದಾಗಿದ್ದಾರೆ.

ದೇವಾಯಲಯವನ್ನು ಸುಂದರಗೊಳಿಸುವುದಕ್ಕಾಗಿ ಸರ್ಕಾರ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ. ಇದಕ್ಕಾಗಿ ನಮಗೆ ಮುಂಚಿತವಾಗಿ ಯಾವುದೇ ನೋಟಿಸ್, ನೀಡಿಲ್ಲ. ಸಮರ್ಪಕ ಪುನರ್ವಸತಿ ಕಲ್ಪಿಸುತ್ತಿಲ್ಲ. ದೇವಾಲಯದ ಇತರ ಬದಿಗಳಲ್ಲಿರುವ ಮನೆಗಳನ್ನು ಮುಟ್ಟದೆ ನಮ್ಮನ್ನು ಮಾತ್ರ ಇಲ್ಲಿಂದ ತೆರವುಗೊಳಿಸುವುದು ಯಾವ ನ್ಯಾಯ? ನಾವು ಇಲ್ಲಿಯೇ ಸುತ್ತ-ಮುತ್ತಾ ದಿನಗೂಲಿ ಮಾಡುತ್ತಿದ್ದೇವೆ. ಈಗ ನಮ್ಮನ್ನು ನಗರದಿಂದ ದೂರಕ್ಕೆ ತಳ್ಳಿದರೆ ಏನು ಮಾಡುವುದು? ಬಡವರಾದ ನಮ್ಮನ್ನೆ ಗುರಿಯಾಗಿಸುವುದು ಏಕೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಂಬರ ಮೊಹಾಂತಿ ಅವರು ಈ ಕುರಿತು ಪ್ರತಿಕ್ರಿಯಿಸಿ, “ದುರ್ಗಪಾಲಿ ಪ್ರದೇಶದಲ್ಲಿ ಜಿಲ್ಲಾಡಳಿತವು ಈಗಾಗಲೇ ಹೊಸ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರೂ, ಸ್ಲಂ ನಿವಾಸಿಗಳು ಕೆಲಸ ಮಾಡುವ ಸ್ಥಳದಿಂದ ದೂರವಿರುವುದರಿಂದ ಅಲ್ಲಿಗೆ ಸ್ಥಳಾಂತರಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಪ್ರಸ್ತಾವನೆಯ ಪ್ರಕಾರ, AWAS ಯೋಜನೆಯಡಿಯಲ್ಲಿ 3 ಲಕ್ಷ ರೂಪಾಯಿಗಳ ಸಹಾಯದ ಜೊತೆಗೆ ಪ್ರತಿ ಮನೆಗೆ 75,000 ರೂ. ನೀಡಲು ನಾವು ನಿರ್ಧಿರಿಸಿದ್ದೇವೆ” ಎಂದಿದ್ದಾರೆ.

ಬಲವಂತವಾಗಿ ತೆರವು ಕಾರ್ಯಾಚರಣೆ ನಡೆಸುತ್ತಿರುವುದರ ವಿರುದ್ಧ ದಲಿತ-ಆದಿವಾಸಿ ಸಂಘಟನೆಗಳು ಜುಲೈ 12ರಿಂದಲೂ ಹೋರಾಟ ನಡೆಸುತ್ತಿದ್ದಾರೆ. ಅಧಿಕಾರಿಗಳು ಸ್ಪಂದಿಸದಿದ್ದಾಗ ಸಿಎಂ ಮನೆ ಕಡೆಗೆ ಪಾದಯಾತ್ರೆ ಆರಂಭಿಸಿದ್ದಾರೆ. ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ. ಈ ಬಡಜನರ ಹೋರಾಟಕ್ಕೆ ಹಲವು ಸಂಘಟನೆಗಳು ಕೈಜೋಡಿಸಿವೆ.

ಇದು ಒರಿಸ್ಸಾ ಮಾತ್ರವಲ್ಲದೆ ಇಡೀ ದೇಶದಲ್ಲಿನ ಬಡವರ ಪರಿಸ್ಥಿತಿ ಇದೆ ಆಗಿದೆ. ಪೌರಕಾರ್ಮಿಕರಾಗಿ, ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತ ಸ್ಲಂಗಳಲ್ಲಿ ವಾಸಿಸುತ್ತಿರುವ ಜನರಿಗೆ ಸ್ವಂತ ಮನೆ ಎಂಬುದು ಕನಸಾಗಿದೆ. ನಗರದ ಮಧ್ಯಭಾಗದಲ್ಲಿ ಶತಮಾನಗಳಿಂದ ದುಡಿಯುತ್ತಿದ್ದರೂ ಅವರಿಗೆ ಸೌಲಭ್ಯ ಒದಗಿಸದ ಸರ್ಕಾರ ಬೆಲೆ ಬಾಳುವ ಆ ಜಾಗ ಕಬಳಿಸಲು ಅವರನ್ನು ದೂರಕ್ಕೆ ಎತ್ತಂಗಡಿ ಮಾಡುತ್ತಿವೆ. ಈ ಕುರಿತು ನಡೆಯುತ್ತಿರುವ ಹೋರಾಟಗಳನ್ನು ದಮನ ಮಾಡುತ್ತಿವೆ. ಇದು ದೇಶದ ಕ್ರೂರ ವಾಸ್ತವವಾಗಿದೆ. ಆದರೂ ಆ ಬಡಜನರು ತಮ್ಮ ನ್ಯಾಯಯುತ ಹಕ್ಕಿಗಾಗಿ ದನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...