Homeಚಳವಳಿಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಭೂಮಿ ಹಕ್ಕಿಗಾಗಿ ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ.

- Advertisement -
- Advertisement -

ಇತ್ತೀಚೆಗೆ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರವರು ನಮ್ಮ ರಾಜ್ಯದ ಮಗಳೊಬ್ಬಳು ದೇಶದ ಮೊದಲ ಪ್ರಜೆಯಾಗಲಿರುವುದರಿಂದ ನಾವು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನು ಬೆಂಬಲಿಸುವುದಾಗಿ ಘೋಷಿಸಿದರು. ಆದಿವಾಸಿ ಜನರ ಅಭಿವೃದ್ದಿಗಾಗಿ ಅವರಿಗೆ ಮತಹಾಕುವುದಾಗಿ ತಿಳಿಸಿದರು. ಆದರೆ ಅದೇ ಸಂದರ್ಭದಲ್ಲಿ ರಾಜ್ಯದ ಸಂಬಲ್‌ಪುರದ ಸ್ಲಂ ಅನ್ನು ಏಕಾಏಕಿ ತೆರವುಗೊಳಿಸಿ 1200ಕ್ಕೂ ಹೆಚ್ಚು ಆದಿವಾಸಿ-ದಲಿತರನ್ನು ಜನರನ್ನು ಬೀದಿಗೆ ತಳ್ಳಿದ್ದಾರೆ. ಇದು ಅವರ ಅಭಿವೃದ್ದಿ ಮಾದರಿಯಾಗಿದೆ.

ರಾಜ್ಯದ ಸಂಬಲ್ಪುರದಲ್ಲಿನ ಘುಂಘುಟಿಪಾರ ಸ್ಲಂನಲ್ಲಿ 400 ವರ್ಷಗಳಿಂದ 250ಕ್ಕೂ ಹೆಚ್ಚು ದಲಿತ-ಆದಿವಾಸಿ ಕುಟುಂಬಗಳು ವಾಸಿಸುತ್ತಿವೆ. 200ಕ್ಕೂ ಹೆಚ್ಚು ಶಾಲೆಗೆ ಹೋಗುವ ಮಕ್ಕಳೊಂದಿಗೆ 1200 ಜನರು ಇಲ್ಲಿ ವಾಸವಿದ್ದು, ಬಹುತೇಕರು ದಲಿತರಾಗಿದ್ದಾರೆ. ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುವ ಈ ಜನರು ಯಾರಿಗೂ ತೊಂದರೆ ಕೊಟ್ಟಿದ್ದಿಲ್ಲ. ಆದರೆ ಸ್ಲಂನಿಂದ ಸ್ವಲ್ಪ ದೂರದಲ್ಲಿರುವ ಸಮಲೇಶ್ವರಿ ದೇವಾಲಯ ವಿಸ್ತರಣೆಯ ಭಾಗವಾಗಿ ಒಂದಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಸರ್ಕಾರ ಯೋಜಿಸಿದೆ. ಅದಕ್ಕಾಗಿ ಸ್ಲಂ ಅನ್ನು ತೆರವುಗೊಳಿಸುತ್ತಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದು, ಹೋರಾಟಕ್ಕೆ ಮುಂದಾಗಿದ್ದಾರೆ.

ದೇವಾಯಲಯವನ್ನು ಸುಂದರಗೊಳಿಸುವುದಕ್ಕಾಗಿ ಸರ್ಕಾರ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ. ಇದಕ್ಕಾಗಿ ನಮಗೆ ಮುಂಚಿತವಾಗಿ ಯಾವುದೇ ನೋಟಿಸ್, ನೀಡಿಲ್ಲ. ಸಮರ್ಪಕ ಪುನರ್ವಸತಿ ಕಲ್ಪಿಸುತ್ತಿಲ್ಲ. ದೇವಾಲಯದ ಇತರ ಬದಿಗಳಲ್ಲಿರುವ ಮನೆಗಳನ್ನು ಮುಟ್ಟದೆ ನಮ್ಮನ್ನು ಮಾತ್ರ ಇಲ್ಲಿಂದ ತೆರವುಗೊಳಿಸುವುದು ಯಾವ ನ್ಯಾಯ? ನಾವು ಇಲ್ಲಿಯೇ ಸುತ್ತ-ಮುತ್ತಾ ದಿನಗೂಲಿ ಮಾಡುತ್ತಿದ್ದೇವೆ. ಈಗ ನಮ್ಮನ್ನು ನಗರದಿಂದ ದೂರಕ್ಕೆ ತಳ್ಳಿದರೆ ಏನು ಮಾಡುವುದು? ಬಡವರಾದ ನಮ್ಮನ್ನೆ ಗುರಿಯಾಗಿಸುವುದು ಏಕೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಂಬರ ಮೊಹಾಂತಿ ಅವರು ಈ ಕುರಿತು ಪ್ರತಿಕ್ರಿಯಿಸಿ, “ದುರ್ಗಪಾಲಿ ಪ್ರದೇಶದಲ್ಲಿ ಜಿಲ್ಲಾಡಳಿತವು ಈಗಾಗಲೇ ಹೊಸ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರೂ, ಸ್ಲಂ ನಿವಾಸಿಗಳು ಕೆಲಸ ಮಾಡುವ ಸ್ಥಳದಿಂದ ದೂರವಿರುವುದರಿಂದ ಅಲ್ಲಿಗೆ ಸ್ಥಳಾಂತರಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಪ್ರಸ್ತಾವನೆಯ ಪ್ರಕಾರ, AWAS ಯೋಜನೆಯಡಿಯಲ್ಲಿ 3 ಲಕ್ಷ ರೂಪಾಯಿಗಳ ಸಹಾಯದ ಜೊತೆಗೆ ಪ್ರತಿ ಮನೆಗೆ 75,000 ರೂ. ನೀಡಲು ನಾವು ನಿರ್ಧಿರಿಸಿದ್ದೇವೆ” ಎಂದಿದ್ದಾರೆ.

ಬಲವಂತವಾಗಿ ತೆರವು ಕಾರ್ಯಾಚರಣೆ ನಡೆಸುತ್ತಿರುವುದರ ವಿರುದ್ಧ ದಲಿತ-ಆದಿವಾಸಿ ಸಂಘಟನೆಗಳು ಜುಲೈ 12ರಿಂದಲೂ ಹೋರಾಟ ನಡೆಸುತ್ತಿದ್ದಾರೆ. ಅಧಿಕಾರಿಗಳು ಸ್ಪಂದಿಸದಿದ್ದಾಗ ಸಿಎಂ ಮನೆ ಕಡೆಗೆ ಪಾದಯಾತ್ರೆ ಆರಂಭಿಸಿದ್ದಾರೆ. ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ. ಈ ಬಡಜನರ ಹೋರಾಟಕ್ಕೆ ಹಲವು ಸಂಘಟನೆಗಳು ಕೈಜೋಡಿಸಿವೆ.

ಇದು ಒರಿಸ್ಸಾ ಮಾತ್ರವಲ್ಲದೆ ಇಡೀ ದೇಶದಲ್ಲಿನ ಬಡವರ ಪರಿಸ್ಥಿತಿ ಇದೆ ಆಗಿದೆ. ಪೌರಕಾರ್ಮಿಕರಾಗಿ, ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತ ಸ್ಲಂಗಳಲ್ಲಿ ವಾಸಿಸುತ್ತಿರುವ ಜನರಿಗೆ ಸ್ವಂತ ಮನೆ ಎಂಬುದು ಕನಸಾಗಿದೆ. ನಗರದ ಮಧ್ಯಭಾಗದಲ್ಲಿ ಶತಮಾನಗಳಿಂದ ದುಡಿಯುತ್ತಿದ್ದರೂ ಅವರಿಗೆ ಸೌಲಭ್ಯ ಒದಗಿಸದ ಸರ್ಕಾರ ಬೆಲೆ ಬಾಳುವ ಆ ಜಾಗ ಕಬಳಿಸಲು ಅವರನ್ನು ದೂರಕ್ಕೆ ಎತ್ತಂಗಡಿ ಮಾಡುತ್ತಿವೆ. ಈ ಕುರಿತು ನಡೆಯುತ್ತಿರುವ ಹೋರಾಟಗಳನ್ನು ದಮನ ಮಾಡುತ್ತಿವೆ. ಇದು ದೇಶದ ಕ್ರೂರ ವಾಸ್ತವವಾಗಿದೆ. ಆದರೂ ಆ ಬಡಜನರು ತಮ್ಮ ನ್ಯಾಯಯುತ ಹಕ್ಕಿಗಾಗಿ ದನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...