Homeಚಳವಳಿಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಭೂಮಿ ಹಕ್ಕಿಗಾಗಿ ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ.

- Advertisement -
- Advertisement -

ಇತ್ತೀಚೆಗೆ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರವರು ನಮ್ಮ ರಾಜ್ಯದ ಮಗಳೊಬ್ಬಳು ದೇಶದ ಮೊದಲ ಪ್ರಜೆಯಾಗಲಿರುವುದರಿಂದ ನಾವು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನು ಬೆಂಬಲಿಸುವುದಾಗಿ ಘೋಷಿಸಿದರು. ಆದಿವಾಸಿ ಜನರ ಅಭಿವೃದ್ದಿಗಾಗಿ ಅವರಿಗೆ ಮತಹಾಕುವುದಾಗಿ ತಿಳಿಸಿದರು. ಆದರೆ ಅದೇ ಸಂದರ್ಭದಲ್ಲಿ ರಾಜ್ಯದ ಸಂಬಲ್‌ಪುರದ ಸ್ಲಂ ಅನ್ನು ಏಕಾಏಕಿ ತೆರವುಗೊಳಿಸಿ 1200ಕ್ಕೂ ಹೆಚ್ಚು ಆದಿವಾಸಿ-ದಲಿತರನ್ನು ಜನರನ್ನು ಬೀದಿಗೆ ತಳ್ಳಿದ್ದಾರೆ. ಇದು ಅವರ ಅಭಿವೃದ್ದಿ ಮಾದರಿಯಾಗಿದೆ.

ರಾಜ್ಯದ ಸಂಬಲ್ಪುರದಲ್ಲಿನ ಘುಂಘುಟಿಪಾರ ಸ್ಲಂನಲ್ಲಿ 400 ವರ್ಷಗಳಿಂದ 250ಕ್ಕೂ ಹೆಚ್ಚು ದಲಿತ-ಆದಿವಾಸಿ ಕುಟುಂಬಗಳು ವಾಸಿಸುತ್ತಿವೆ. 200ಕ್ಕೂ ಹೆಚ್ಚು ಶಾಲೆಗೆ ಹೋಗುವ ಮಕ್ಕಳೊಂದಿಗೆ 1200 ಜನರು ಇಲ್ಲಿ ವಾಸವಿದ್ದು, ಬಹುತೇಕರು ದಲಿತರಾಗಿದ್ದಾರೆ. ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುವ ಈ ಜನರು ಯಾರಿಗೂ ತೊಂದರೆ ಕೊಟ್ಟಿದ್ದಿಲ್ಲ. ಆದರೆ ಸ್ಲಂನಿಂದ ಸ್ವಲ್ಪ ದೂರದಲ್ಲಿರುವ ಸಮಲೇಶ್ವರಿ ದೇವಾಲಯ ವಿಸ್ತರಣೆಯ ಭಾಗವಾಗಿ ಒಂದಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಸರ್ಕಾರ ಯೋಜಿಸಿದೆ. ಅದಕ್ಕಾಗಿ ಸ್ಲಂ ಅನ್ನು ತೆರವುಗೊಳಿಸುತ್ತಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದು, ಹೋರಾಟಕ್ಕೆ ಮುಂದಾಗಿದ್ದಾರೆ.

ದೇವಾಯಲಯವನ್ನು ಸುಂದರಗೊಳಿಸುವುದಕ್ಕಾಗಿ ಸರ್ಕಾರ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ. ಇದಕ್ಕಾಗಿ ನಮಗೆ ಮುಂಚಿತವಾಗಿ ಯಾವುದೇ ನೋಟಿಸ್, ನೀಡಿಲ್ಲ. ಸಮರ್ಪಕ ಪುನರ್ವಸತಿ ಕಲ್ಪಿಸುತ್ತಿಲ್ಲ. ದೇವಾಲಯದ ಇತರ ಬದಿಗಳಲ್ಲಿರುವ ಮನೆಗಳನ್ನು ಮುಟ್ಟದೆ ನಮ್ಮನ್ನು ಮಾತ್ರ ಇಲ್ಲಿಂದ ತೆರವುಗೊಳಿಸುವುದು ಯಾವ ನ್ಯಾಯ? ನಾವು ಇಲ್ಲಿಯೇ ಸುತ್ತ-ಮುತ್ತಾ ದಿನಗೂಲಿ ಮಾಡುತ್ತಿದ್ದೇವೆ. ಈಗ ನಮ್ಮನ್ನು ನಗರದಿಂದ ದೂರಕ್ಕೆ ತಳ್ಳಿದರೆ ಏನು ಮಾಡುವುದು? ಬಡವರಾದ ನಮ್ಮನ್ನೆ ಗುರಿಯಾಗಿಸುವುದು ಏಕೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಂಬರ ಮೊಹಾಂತಿ ಅವರು ಈ ಕುರಿತು ಪ್ರತಿಕ್ರಿಯಿಸಿ, “ದುರ್ಗಪಾಲಿ ಪ್ರದೇಶದಲ್ಲಿ ಜಿಲ್ಲಾಡಳಿತವು ಈಗಾಗಲೇ ಹೊಸ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರೂ, ಸ್ಲಂ ನಿವಾಸಿಗಳು ಕೆಲಸ ಮಾಡುವ ಸ್ಥಳದಿಂದ ದೂರವಿರುವುದರಿಂದ ಅಲ್ಲಿಗೆ ಸ್ಥಳಾಂತರಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಪ್ರಸ್ತಾವನೆಯ ಪ್ರಕಾರ, AWAS ಯೋಜನೆಯಡಿಯಲ್ಲಿ 3 ಲಕ್ಷ ರೂಪಾಯಿಗಳ ಸಹಾಯದ ಜೊತೆಗೆ ಪ್ರತಿ ಮನೆಗೆ 75,000 ರೂ. ನೀಡಲು ನಾವು ನಿರ್ಧಿರಿಸಿದ್ದೇವೆ” ಎಂದಿದ್ದಾರೆ.

ಬಲವಂತವಾಗಿ ತೆರವು ಕಾರ್ಯಾಚರಣೆ ನಡೆಸುತ್ತಿರುವುದರ ವಿರುದ್ಧ ದಲಿತ-ಆದಿವಾಸಿ ಸಂಘಟನೆಗಳು ಜುಲೈ 12ರಿಂದಲೂ ಹೋರಾಟ ನಡೆಸುತ್ತಿದ್ದಾರೆ. ಅಧಿಕಾರಿಗಳು ಸ್ಪಂದಿಸದಿದ್ದಾಗ ಸಿಎಂ ಮನೆ ಕಡೆಗೆ ಪಾದಯಾತ್ರೆ ಆರಂಭಿಸಿದ್ದಾರೆ. ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ. ಈ ಬಡಜನರ ಹೋರಾಟಕ್ಕೆ ಹಲವು ಸಂಘಟನೆಗಳು ಕೈಜೋಡಿಸಿವೆ.

ಇದು ಒರಿಸ್ಸಾ ಮಾತ್ರವಲ್ಲದೆ ಇಡೀ ದೇಶದಲ್ಲಿನ ಬಡವರ ಪರಿಸ್ಥಿತಿ ಇದೆ ಆಗಿದೆ. ಪೌರಕಾರ್ಮಿಕರಾಗಿ, ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತ ಸ್ಲಂಗಳಲ್ಲಿ ವಾಸಿಸುತ್ತಿರುವ ಜನರಿಗೆ ಸ್ವಂತ ಮನೆ ಎಂಬುದು ಕನಸಾಗಿದೆ. ನಗರದ ಮಧ್ಯಭಾಗದಲ್ಲಿ ಶತಮಾನಗಳಿಂದ ದುಡಿಯುತ್ತಿದ್ದರೂ ಅವರಿಗೆ ಸೌಲಭ್ಯ ಒದಗಿಸದ ಸರ್ಕಾರ ಬೆಲೆ ಬಾಳುವ ಆ ಜಾಗ ಕಬಳಿಸಲು ಅವರನ್ನು ದೂರಕ್ಕೆ ಎತ್ತಂಗಡಿ ಮಾಡುತ್ತಿವೆ. ಈ ಕುರಿತು ನಡೆಯುತ್ತಿರುವ ಹೋರಾಟಗಳನ್ನು ದಮನ ಮಾಡುತ್ತಿವೆ. ಇದು ದೇಶದ ಕ್ರೂರ ವಾಸ್ತವವಾಗಿದೆ. ಆದರೂ ಆ ಬಡಜನರು ತಮ್ಮ ನ್ಯಾಯಯುತ ಹಕ್ಕಿಗಾಗಿ ದನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...