Homeಚಳವಳಿಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಭೂಮಿ ಹಕ್ಕಿಗಾಗಿ ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ.

- Advertisement -
- Advertisement -

ಇತ್ತೀಚೆಗೆ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರವರು ನಮ್ಮ ರಾಜ್ಯದ ಮಗಳೊಬ್ಬಳು ದೇಶದ ಮೊದಲ ಪ್ರಜೆಯಾಗಲಿರುವುದರಿಂದ ನಾವು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನು ಬೆಂಬಲಿಸುವುದಾಗಿ ಘೋಷಿಸಿದರು. ಆದಿವಾಸಿ ಜನರ ಅಭಿವೃದ್ದಿಗಾಗಿ ಅವರಿಗೆ ಮತಹಾಕುವುದಾಗಿ ತಿಳಿಸಿದರು. ಆದರೆ ಅದೇ ಸಂದರ್ಭದಲ್ಲಿ ರಾಜ್ಯದ ಸಂಬಲ್‌ಪುರದ ಸ್ಲಂ ಅನ್ನು ಏಕಾಏಕಿ ತೆರವುಗೊಳಿಸಿ 1200ಕ್ಕೂ ಹೆಚ್ಚು ಆದಿವಾಸಿ-ದಲಿತರನ್ನು ಜನರನ್ನು ಬೀದಿಗೆ ತಳ್ಳಿದ್ದಾರೆ. ಇದು ಅವರ ಅಭಿವೃದ್ದಿ ಮಾದರಿಯಾಗಿದೆ.

ರಾಜ್ಯದ ಸಂಬಲ್ಪುರದಲ್ಲಿನ ಘುಂಘುಟಿಪಾರ ಸ್ಲಂನಲ್ಲಿ 400 ವರ್ಷಗಳಿಂದ 250ಕ್ಕೂ ಹೆಚ್ಚು ದಲಿತ-ಆದಿವಾಸಿ ಕುಟುಂಬಗಳು ವಾಸಿಸುತ್ತಿವೆ. 200ಕ್ಕೂ ಹೆಚ್ಚು ಶಾಲೆಗೆ ಹೋಗುವ ಮಕ್ಕಳೊಂದಿಗೆ 1200 ಜನರು ಇಲ್ಲಿ ವಾಸವಿದ್ದು, ಬಹುತೇಕರು ದಲಿತರಾಗಿದ್ದಾರೆ. ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುವ ಈ ಜನರು ಯಾರಿಗೂ ತೊಂದರೆ ಕೊಟ್ಟಿದ್ದಿಲ್ಲ. ಆದರೆ ಸ್ಲಂನಿಂದ ಸ್ವಲ್ಪ ದೂರದಲ್ಲಿರುವ ಸಮಲೇಶ್ವರಿ ದೇವಾಲಯ ವಿಸ್ತರಣೆಯ ಭಾಗವಾಗಿ ಒಂದಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಸರ್ಕಾರ ಯೋಜಿಸಿದೆ. ಅದಕ್ಕಾಗಿ ಸ್ಲಂ ಅನ್ನು ತೆರವುಗೊಳಿಸುತ್ತಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದು, ಹೋರಾಟಕ್ಕೆ ಮುಂದಾಗಿದ್ದಾರೆ.

ದೇವಾಯಲಯವನ್ನು ಸುಂದರಗೊಳಿಸುವುದಕ್ಕಾಗಿ ಸರ್ಕಾರ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ. ಇದಕ್ಕಾಗಿ ನಮಗೆ ಮುಂಚಿತವಾಗಿ ಯಾವುದೇ ನೋಟಿಸ್, ನೀಡಿಲ್ಲ. ಸಮರ್ಪಕ ಪುನರ್ವಸತಿ ಕಲ್ಪಿಸುತ್ತಿಲ್ಲ. ದೇವಾಲಯದ ಇತರ ಬದಿಗಳಲ್ಲಿರುವ ಮನೆಗಳನ್ನು ಮುಟ್ಟದೆ ನಮ್ಮನ್ನು ಮಾತ್ರ ಇಲ್ಲಿಂದ ತೆರವುಗೊಳಿಸುವುದು ಯಾವ ನ್ಯಾಯ? ನಾವು ಇಲ್ಲಿಯೇ ಸುತ್ತ-ಮುತ್ತಾ ದಿನಗೂಲಿ ಮಾಡುತ್ತಿದ್ದೇವೆ. ಈಗ ನಮ್ಮನ್ನು ನಗರದಿಂದ ದೂರಕ್ಕೆ ತಳ್ಳಿದರೆ ಏನು ಮಾಡುವುದು? ಬಡವರಾದ ನಮ್ಮನ್ನೆ ಗುರಿಯಾಗಿಸುವುದು ಏಕೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಂಬರ ಮೊಹಾಂತಿ ಅವರು ಈ ಕುರಿತು ಪ್ರತಿಕ್ರಿಯಿಸಿ, “ದುರ್ಗಪಾಲಿ ಪ್ರದೇಶದಲ್ಲಿ ಜಿಲ್ಲಾಡಳಿತವು ಈಗಾಗಲೇ ಹೊಸ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರೂ, ಸ್ಲಂ ನಿವಾಸಿಗಳು ಕೆಲಸ ಮಾಡುವ ಸ್ಥಳದಿಂದ ದೂರವಿರುವುದರಿಂದ ಅಲ್ಲಿಗೆ ಸ್ಥಳಾಂತರಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಪ್ರಸ್ತಾವನೆಯ ಪ್ರಕಾರ, AWAS ಯೋಜನೆಯಡಿಯಲ್ಲಿ 3 ಲಕ್ಷ ರೂಪಾಯಿಗಳ ಸಹಾಯದ ಜೊತೆಗೆ ಪ್ರತಿ ಮನೆಗೆ 75,000 ರೂ. ನೀಡಲು ನಾವು ನಿರ್ಧಿರಿಸಿದ್ದೇವೆ” ಎಂದಿದ್ದಾರೆ.

ಬಲವಂತವಾಗಿ ತೆರವು ಕಾರ್ಯಾಚರಣೆ ನಡೆಸುತ್ತಿರುವುದರ ವಿರುದ್ಧ ದಲಿತ-ಆದಿವಾಸಿ ಸಂಘಟನೆಗಳು ಜುಲೈ 12ರಿಂದಲೂ ಹೋರಾಟ ನಡೆಸುತ್ತಿದ್ದಾರೆ. ಅಧಿಕಾರಿಗಳು ಸ್ಪಂದಿಸದಿದ್ದಾಗ ಸಿಎಂ ಮನೆ ಕಡೆಗೆ ಪಾದಯಾತ್ರೆ ಆರಂಭಿಸಿದ್ದಾರೆ. ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ. ಈ ಬಡಜನರ ಹೋರಾಟಕ್ಕೆ ಹಲವು ಸಂಘಟನೆಗಳು ಕೈಜೋಡಿಸಿವೆ.

ಇದು ಒರಿಸ್ಸಾ ಮಾತ್ರವಲ್ಲದೆ ಇಡೀ ದೇಶದಲ್ಲಿನ ಬಡವರ ಪರಿಸ್ಥಿತಿ ಇದೆ ಆಗಿದೆ. ಪೌರಕಾರ್ಮಿಕರಾಗಿ, ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತ ಸ್ಲಂಗಳಲ್ಲಿ ವಾಸಿಸುತ್ತಿರುವ ಜನರಿಗೆ ಸ್ವಂತ ಮನೆ ಎಂಬುದು ಕನಸಾಗಿದೆ. ನಗರದ ಮಧ್ಯಭಾಗದಲ್ಲಿ ಶತಮಾನಗಳಿಂದ ದುಡಿಯುತ್ತಿದ್ದರೂ ಅವರಿಗೆ ಸೌಲಭ್ಯ ಒದಗಿಸದ ಸರ್ಕಾರ ಬೆಲೆ ಬಾಳುವ ಆ ಜಾಗ ಕಬಳಿಸಲು ಅವರನ್ನು ದೂರಕ್ಕೆ ಎತ್ತಂಗಡಿ ಮಾಡುತ್ತಿವೆ. ಈ ಕುರಿತು ನಡೆಯುತ್ತಿರುವ ಹೋರಾಟಗಳನ್ನು ದಮನ ಮಾಡುತ್ತಿವೆ. ಇದು ದೇಶದ ಕ್ರೂರ ವಾಸ್ತವವಾಗಿದೆ. ಆದರೂ ಆ ಬಡಜನರು ತಮ್ಮ ನ್ಯಾಯಯುತ ಹಕ್ಕಿಗಾಗಿ ದನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...