Homeಚಳವಳಿಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಭೂಮಿ ಹಕ್ಕಿಗಾಗಿ ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ.

- Advertisement -
- Advertisement -

ಇತ್ತೀಚೆಗೆ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರವರು ನಮ್ಮ ರಾಜ್ಯದ ಮಗಳೊಬ್ಬಳು ದೇಶದ ಮೊದಲ ಪ್ರಜೆಯಾಗಲಿರುವುದರಿಂದ ನಾವು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನು ಬೆಂಬಲಿಸುವುದಾಗಿ ಘೋಷಿಸಿದರು. ಆದಿವಾಸಿ ಜನರ ಅಭಿವೃದ್ದಿಗಾಗಿ ಅವರಿಗೆ ಮತಹಾಕುವುದಾಗಿ ತಿಳಿಸಿದರು. ಆದರೆ ಅದೇ ಸಂದರ್ಭದಲ್ಲಿ ರಾಜ್ಯದ ಸಂಬಲ್‌ಪುರದ ಸ್ಲಂ ಅನ್ನು ಏಕಾಏಕಿ ತೆರವುಗೊಳಿಸಿ 1200ಕ್ಕೂ ಹೆಚ್ಚು ಆದಿವಾಸಿ-ದಲಿತರನ್ನು ಜನರನ್ನು ಬೀದಿಗೆ ತಳ್ಳಿದ್ದಾರೆ. ಇದು ಅವರ ಅಭಿವೃದ್ದಿ ಮಾದರಿಯಾಗಿದೆ.

ರಾಜ್ಯದ ಸಂಬಲ್ಪುರದಲ್ಲಿನ ಘುಂಘುಟಿಪಾರ ಸ್ಲಂನಲ್ಲಿ 400 ವರ್ಷಗಳಿಂದ 250ಕ್ಕೂ ಹೆಚ್ಚು ದಲಿತ-ಆದಿವಾಸಿ ಕುಟುಂಬಗಳು ವಾಸಿಸುತ್ತಿವೆ. 200ಕ್ಕೂ ಹೆಚ್ಚು ಶಾಲೆಗೆ ಹೋಗುವ ಮಕ್ಕಳೊಂದಿಗೆ 1200 ಜನರು ಇಲ್ಲಿ ವಾಸವಿದ್ದು, ಬಹುತೇಕರು ದಲಿತರಾಗಿದ್ದಾರೆ. ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುವ ಈ ಜನರು ಯಾರಿಗೂ ತೊಂದರೆ ಕೊಟ್ಟಿದ್ದಿಲ್ಲ. ಆದರೆ ಸ್ಲಂನಿಂದ ಸ್ವಲ್ಪ ದೂರದಲ್ಲಿರುವ ಸಮಲೇಶ್ವರಿ ದೇವಾಲಯ ವಿಸ್ತರಣೆಯ ಭಾಗವಾಗಿ ಒಂದಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಸರ್ಕಾರ ಯೋಜಿಸಿದೆ. ಅದಕ್ಕಾಗಿ ಸ್ಲಂ ಅನ್ನು ತೆರವುಗೊಳಿಸುತ್ತಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದು, ಹೋರಾಟಕ್ಕೆ ಮುಂದಾಗಿದ್ದಾರೆ.

ದೇವಾಯಲಯವನ್ನು ಸುಂದರಗೊಳಿಸುವುದಕ್ಕಾಗಿ ಸರ್ಕಾರ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ. ಇದಕ್ಕಾಗಿ ನಮಗೆ ಮುಂಚಿತವಾಗಿ ಯಾವುದೇ ನೋಟಿಸ್, ನೀಡಿಲ್ಲ. ಸಮರ್ಪಕ ಪುನರ್ವಸತಿ ಕಲ್ಪಿಸುತ್ತಿಲ್ಲ. ದೇವಾಲಯದ ಇತರ ಬದಿಗಳಲ್ಲಿರುವ ಮನೆಗಳನ್ನು ಮುಟ್ಟದೆ ನಮ್ಮನ್ನು ಮಾತ್ರ ಇಲ್ಲಿಂದ ತೆರವುಗೊಳಿಸುವುದು ಯಾವ ನ್ಯಾಯ? ನಾವು ಇಲ್ಲಿಯೇ ಸುತ್ತ-ಮುತ್ತಾ ದಿನಗೂಲಿ ಮಾಡುತ್ತಿದ್ದೇವೆ. ಈಗ ನಮ್ಮನ್ನು ನಗರದಿಂದ ದೂರಕ್ಕೆ ತಳ್ಳಿದರೆ ಏನು ಮಾಡುವುದು? ಬಡವರಾದ ನಮ್ಮನ್ನೆ ಗುರಿಯಾಗಿಸುವುದು ಏಕೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಂಬರ ಮೊಹಾಂತಿ ಅವರು ಈ ಕುರಿತು ಪ್ರತಿಕ್ರಿಯಿಸಿ, “ದುರ್ಗಪಾಲಿ ಪ್ರದೇಶದಲ್ಲಿ ಜಿಲ್ಲಾಡಳಿತವು ಈಗಾಗಲೇ ಹೊಸ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರೂ, ಸ್ಲಂ ನಿವಾಸಿಗಳು ಕೆಲಸ ಮಾಡುವ ಸ್ಥಳದಿಂದ ದೂರವಿರುವುದರಿಂದ ಅಲ್ಲಿಗೆ ಸ್ಥಳಾಂತರಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಪ್ರಸ್ತಾವನೆಯ ಪ್ರಕಾರ, AWAS ಯೋಜನೆಯಡಿಯಲ್ಲಿ 3 ಲಕ್ಷ ರೂಪಾಯಿಗಳ ಸಹಾಯದ ಜೊತೆಗೆ ಪ್ರತಿ ಮನೆಗೆ 75,000 ರೂ. ನೀಡಲು ನಾವು ನಿರ್ಧಿರಿಸಿದ್ದೇವೆ” ಎಂದಿದ್ದಾರೆ.

ಬಲವಂತವಾಗಿ ತೆರವು ಕಾರ್ಯಾಚರಣೆ ನಡೆಸುತ್ತಿರುವುದರ ವಿರುದ್ಧ ದಲಿತ-ಆದಿವಾಸಿ ಸಂಘಟನೆಗಳು ಜುಲೈ 12ರಿಂದಲೂ ಹೋರಾಟ ನಡೆಸುತ್ತಿದ್ದಾರೆ. ಅಧಿಕಾರಿಗಳು ಸ್ಪಂದಿಸದಿದ್ದಾಗ ಸಿಎಂ ಮನೆ ಕಡೆಗೆ ಪಾದಯಾತ್ರೆ ಆರಂಭಿಸಿದ್ದಾರೆ. ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ. ಈ ಬಡಜನರ ಹೋರಾಟಕ್ಕೆ ಹಲವು ಸಂಘಟನೆಗಳು ಕೈಜೋಡಿಸಿವೆ.

ಇದು ಒರಿಸ್ಸಾ ಮಾತ್ರವಲ್ಲದೆ ಇಡೀ ದೇಶದಲ್ಲಿನ ಬಡವರ ಪರಿಸ್ಥಿತಿ ಇದೆ ಆಗಿದೆ. ಪೌರಕಾರ್ಮಿಕರಾಗಿ, ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತ ಸ್ಲಂಗಳಲ್ಲಿ ವಾಸಿಸುತ್ತಿರುವ ಜನರಿಗೆ ಸ್ವಂತ ಮನೆ ಎಂಬುದು ಕನಸಾಗಿದೆ. ನಗರದ ಮಧ್ಯಭಾಗದಲ್ಲಿ ಶತಮಾನಗಳಿಂದ ದುಡಿಯುತ್ತಿದ್ದರೂ ಅವರಿಗೆ ಸೌಲಭ್ಯ ಒದಗಿಸದ ಸರ್ಕಾರ ಬೆಲೆ ಬಾಳುವ ಆ ಜಾಗ ಕಬಳಿಸಲು ಅವರನ್ನು ದೂರಕ್ಕೆ ಎತ್ತಂಗಡಿ ಮಾಡುತ್ತಿವೆ. ಈ ಕುರಿತು ನಡೆಯುತ್ತಿರುವ ಹೋರಾಟಗಳನ್ನು ದಮನ ಮಾಡುತ್ತಿವೆ. ಇದು ದೇಶದ ಕ್ರೂರ ವಾಸ್ತವವಾಗಿದೆ. ಆದರೂ ಆ ಬಡಜನರು ತಮ್ಮ ನ್ಯಾಯಯುತ ಹಕ್ಕಿಗಾಗಿ ದನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...