Homeಚಳವಳಿಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಭೂಮಿ ಹಕ್ಕಿಗಾಗಿ ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ.

- Advertisement -
- Advertisement -

ಇತ್ತೀಚೆಗೆ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರವರು ನಮ್ಮ ರಾಜ್ಯದ ಮಗಳೊಬ್ಬಳು ದೇಶದ ಮೊದಲ ಪ್ರಜೆಯಾಗಲಿರುವುದರಿಂದ ನಾವು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನು ಬೆಂಬಲಿಸುವುದಾಗಿ ಘೋಷಿಸಿದರು. ಆದಿವಾಸಿ ಜನರ ಅಭಿವೃದ್ದಿಗಾಗಿ ಅವರಿಗೆ ಮತಹಾಕುವುದಾಗಿ ತಿಳಿಸಿದರು. ಆದರೆ ಅದೇ ಸಂದರ್ಭದಲ್ಲಿ ರಾಜ್ಯದ ಸಂಬಲ್‌ಪುರದ ಸ್ಲಂ ಅನ್ನು ಏಕಾಏಕಿ ತೆರವುಗೊಳಿಸಿ 1200ಕ್ಕೂ ಹೆಚ್ಚು ಆದಿವಾಸಿ-ದಲಿತರನ್ನು ಜನರನ್ನು ಬೀದಿಗೆ ತಳ್ಳಿದ್ದಾರೆ. ಇದು ಅವರ ಅಭಿವೃದ್ದಿ ಮಾದರಿಯಾಗಿದೆ.

ರಾಜ್ಯದ ಸಂಬಲ್ಪುರದಲ್ಲಿನ ಘುಂಘುಟಿಪಾರ ಸ್ಲಂನಲ್ಲಿ 400 ವರ್ಷಗಳಿಂದ 250ಕ್ಕೂ ಹೆಚ್ಚು ದಲಿತ-ಆದಿವಾಸಿ ಕುಟುಂಬಗಳು ವಾಸಿಸುತ್ತಿವೆ. 200ಕ್ಕೂ ಹೆಚ್ಚು ಶಾಲೆಗೆ ಹೋಗುವ ಮಕ್ಕಳೊಂದಿಗೆ 1200 ಜನರು ಇಲ್ಲಿ ವಾಸವಿದ್ದು, ಬಹುತೇಕರು ದಲಿತರಾಗಿದ್ದಾರೆ. ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುವ ಈ ಜನರು ಯಾರಿಗೂ ತೊಂದರೆ ಕೊಟ್ಟಿದ್ದಿಲ್ಲ. ಆದರೆ ಸ್ಲಂನಿಂದ ಸ್ವಲ್ಪ ದೂರದಲ್ಲಿರುವ ಸಮಲೇಶ್ವರಿ ದೇವಾಲಯ ವಿಸ್ತರಣೆಯ ಭಾಗವಾಗಿ ಒಂದಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಸರ್ಕಾರ ಯೋಜಿಸಿದೆ. ಅದಕ್ಕಾಗಿ ಸ್ಲಂ ಅನ್ನು ತೆರವುಗೊಳಿಸುತ್ತಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದು, ಹೋರಾಟಕ್ಕೆ ಮುಂದಾಗಿದ್ದಾರೆ.

ದೇವಾಯಲಯವನ್ನು ಸುಂದರಗೊಳಿಸುವುದಕ್ಕಾಗಿ ಸರ್ಕಾರ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ. ಇದಕ್ಕಾಗಿ ನಮಗೆ ಮುಂಚಿತವಾಗಿ ಯಾವುದೇ ನೋಟಿಸ್, ನೀಡಿಲ್ಲ. ಸಮರ್ಪಕ ಪುನರ್ವಸತಿ ಕಲ್ಪಿಸುತ್ತಿಲ್ಲ. ದೇವಾಲಯದ ಇತರ ಬದಿಗಳಲ್ಲಿರುವ ಮನೆಗಳನ್ನು ಮುಟ್ಟದೆ ನಮ್ಮನ್ನು ಮಾತ್ರ ಇಲ್ಲಿಂದ ತೆರವುಗೊಳಿಸುವುದು ಯಾವ ನ್ಯಾಯ? ನಾವು ಇಲ್ಲಿಯೇ ಸುತ್ತ-ಮುತ್ತಾ ದಿನಗೂಲಿ ಮಾಡುತ್ತಿದ್ದೇವೆ. ಈಗ ನಮ್ಮನ್ನು ನಗರದಿಂದ ದೂರಕ್ಕೆ ತಳ್ಳಿದರೆ ಏನು ಮಾಡುವುದು? ಬಡವರಾದ ನಮ್ಮನ್ನೆ ಗುರಿಯಾಗಿಸುವುದು ಏಕೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಂಬರ ಮೊಹಾಂತಿ ಅವರು ಈ ಕುರಿತು ಪ್ರತಿಕ್ರಿಯಿಸಿ, “ದುರ್ಗಪಾಲಿ ಪ್ರದೇಶದಲ್ಲಿ ಜಿಲ್ಲಾಡಳಿತವು ಈಗಾಗಲೇ ಹೊಸ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರೂ, ಸ್ಲಂ ನಿವಾಸಿಗಳು ಕೆಲಸ ಮಾಡುವ ಸ್ಥಳದಿಂದ ದೂರವಿರುವುದರಿಂದ ಅಲ್ಲಿಗೆ ಸ್ಥಳಾಂತರಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಪ್ರಸ್ತಾವನೆಯ ಪ್ರಕಾರ, AWAS ಯೋಜನೆಯಡಿಯಲ್ಲಿ 3 ಲಕ್ಷ ರೂಪಾಯಿಗಳ ಸಹಾಯದ ಜೊತೆಗೆ ಪ್ರತಿ ಮನೆಗೆ 75,000 ರೂ. ನೀಡಲು ನಾವು ನಿರ್ಧಿರಿಸಿದ್ದೇವೆ” ಎಂದಿದ್ದಾರೆ.

ಬಲವಂತವಾಗಿ ತೆರವು ಕಾರ್ಯಾಚರಣೆ ನಡೆಸುತ್ತಿರುವುದರ ವಿರುದ್ಧ ದಲಿತ-ಆದಿವಾಸಿ ಸಂಘಟನೆಗಳು ಜುಲೈ 12ರಿಂದಲೂ ಹೋರಾಟ ನಡೆಸುತ್ತಿದ್ದಾರೆ. ಅಧಿಕಾರಿಗಳು ಸ್ಪಂದಿಸದಿದ್ದಾಗ ಸಿಎಂ ಮನೆ ಕಡೆಗೆ ಪಾದಯಾತ್ರೆ ಆರಂಭಿಸಿದ್ದಾರೆ. ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ. ಈ ಬಡಜನರ ಹೋರಾಟಕ್ಕೆ ಹಲವು ಸಂಘಟನೆಗಳು ಕೈಜೋಡಿಸಿವೆ.

ಇದು ಒರಿಸ್ಸಾ ಮಾತ್ರವಲ್ಲದೆ ಇಡೀ ದೇಶದಲ್ಲಿನ ಬಡವರ ಪರಿಸ್ಥಿತಿ ಇದೆ ಆಗಿದೆ. ಪೌರಕಾರ್ಮಿಕರಾಗಿ, ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತ ಸ್ಲಂಗಳಲ್ಲಿ ವಾಸಿಸುತ್ತಿರುವ ಜನರಿಗೆ ಸ್ವಂತ ಮನೆ ಎಂಬುದು ಕನಸಾಗಿದೆ. ನಗರದ ಮಧ್ಯಭಾಗದಲ್ಲಿ ಶತಮಾನಗಳಿಂದ ದುಡಿಯುತ್ತಿದ್ದರೂ ಅವರಿಗೆ ಸೌಲಭ್ಯ ಒದಗಿಸದ ಸರ್ಕಾರ ಬೆಲೆ ಬಾಳುವ ಆ ಜಾಗ ಕಬಳಿಸಲು ಅವರನ್ನು ದೂರಕ್ಕೆ ಎತ್ತಂಗಡಿ ಮಾಡುತ್ತಿವೆ. ಈ ಕುರಿತು ನಡೆಯುತ್ತಿರುವ ಹೋರಾಟಗಳನ್ನು ದಮನ ಮಾಡುತ್ತಿವೆ. ಇದು ದೇಶದ ಕ್ರೂರ ವಾಸ್ತವವಾಗಿದೆ. ಆದರೂ ಆ ಬಡಜನರು ತಮ್ಮ ನ್ಯಾಯಯುತ ಹಕ್ಕಿಗಾಗಿ ದನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...