Homeಚಳವಳಿಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ಭೂಮಿ ಹಕ್ಕಿಗಾಗಿ ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ.

- Advertisement -
- Advertisement -

ಇತ್ತೀಚೆಗೆ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರವರು ನಮ್ಮ ರಾಜ್ಯದ ಮಗಳೊಬ್ಬಳು ದೇಶದ ಮೊದಲ ಪ್ರಜೆಯಾಗಲಿರುವುದರಿಂದ ನಾವು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನು ಬೆಂಬಲಿಸುವುದಾಗಿ ಘೋಷಿಸಿದರು. ಆದಿವಾಸಿ ಜನರ ಅಭಿವೃದ್ದಿಗಾಗಿ ಅವರಿಗೆ ಮತಹಾಕುವುದಾಗಿ ತಿಳಿಸಿದರು. ಆದರೆ ಅದೇ ಸಂದರ್ಭದಲ್ಲಿ ರಾಜ್ಯದ ಸಂಬಲ್‌ಪುರದ ಸ್ಲಂ ಅನ್ನು ಏಕಾಏಕಿ ತೆರವುಗೊಳಿಸಿ 1200ಕ್ಕೂ ಹೆಚ್ಚು ಆದಿವಾಸಿ-ದಲಿತರನ್ನು ಜನರನ್ನು ಬೀದಿಗೆ ತಳ್ಳಿದ್ದಾರೆ. ಇದು ಅವರ ಅಭಿವೃದ್ದಿ ಮಾದರಿಯಾಗಿದೆ.

ರಾಜ್ಯದ ಸಂಬಲ್ಪುರದಲ್ಲಿನ ಘುಂಘುಟಿಪಾರ ಸ್ಲಂನಲ್ಲಿ 400 ವರ್ಷಗಳಿಂದ 250ಕ್ಕೂ ಹೆಚ್ಚು ದಲಿತ-ಆದಿವಾಸಿ ಕುಟುಂಬಗಳು ವಾಸಿಸುತ್ತಿವೆ. 200ಕ್ಕೂ ಹೆಚ್ಚು ಶಾಲೆಗೆ ಹೋಗುವ ಮಕ್ಕಳೊಂದಿಗೆ 1200 ಜನರು ಇಲ್ಲಿ ವಾಸವಿದ್ದು, ಬಹುತೇಕರು ದಲಿತರಾಗಿದ್ದಾರೆ. ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುವ ಈ ಜನರು ಯಾರಿಗೂ ತೊಂದರೆ ಕೊಟ್ಟಿದ್ದಿಲ್ಲ. ಆದರೆ ಸ್ಲಂನಿಂದ ಸ್ವಲ್ಪ ದೂರದಲ್ಲಿರುವ ಸಮಲೇಶ್ವರಿ ದೇವಾಲಯ ವಿಸ್ತರಣೆಯ ಭಾಗವಾಗಿ ಒಂದಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಸರ್ಕಾರ ಯೋಜಿಸಿದೆ. ಅದಕ್ಕಾಗಿ ಸ್ಲಂ ಅನ್ನು ತೆರವುಗೊಳಿಸುತ್ತಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದು, ಹೋರಾಟಕ್ಕೆ ಮುಂದಾಗಿದ್ದಾರೆ.

ದೇವಾಯಲಯವನ್ನು ಸುಂದರಗೊಳಿಸುವುದಕ್ಕಾಗಿ ಸರ್ಕಾರ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ. ಇದಕ್ಕಾಗಿ ನಮಗೆ ಮುಂಚಿತವಾಗಿ ಯಾವುದೇ ನೋಟಿಸ್, ನೀಡಿಲ್ಲ. ಸಮರ್ಪಕ ಪುನರ್ವಸತಿ ಕಲ್ಪಿಸುತ್ತಿಲ್ಲ. ದೇವಾಲಯದ ಇತರ ಬದಿಗಳಲ್ಲಿರುವ ಮನೆಗಳನ್ನು ಮುಟ್ಟದೆ ನಮ್ಮನ್ನು ಮಾತ್ರ ಇಲ್ಲಿಂದ ತೆರವುಗೊಳಿಸುವುದು ಯಾವ ನ್ಯಾಯ? ನಾವು ಇಲ್ಲಿಯೇ ಸುತ್ತ-ಮುತ್ತಾ ದಿನಗೂಲಿ ಮಾಡುತ್ತಿದ್ದೇವೆ. ಈಗ ನಮ್ಮನ್ನು ನಗರದಿಂದ ದೂರಕ್ಕೆ ತಳ್ಳಿದರೆ ಏನು ಮಾಡುವುದು? ಬಡವರಾದ ನಮ್ಮನ್ನೆ ಗುರಿಯಾಗಿಸುವುದು ಏಕೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಂಬರ ಮೊಹಾಂತಿ ಅವರು ಈ ಕುರಿತು ಪ್ರತಿಕ್ರಿಯಿಸಿ, “ದುರ್ಗಪಾಲಿ ಪ್ರದೇಶದಲ್ಲಿ ಜಿಲ್ಲಾಡಳಿತವು ಈಗಾಗಲೇ ಹೊಸ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರೂ, ಸ್ಲಂ ನಿವಾಸಿಗಳು ಕೆಲಸ ಮಾಡುವ ಸ್ಥಳದಿಂದ ದೂರವಿರುವುದರಿಂದ ಅಲ್ಲಿಗೆ ಸ್ಥಳಾಂತರಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಪ್ರಸ್ತಾವನೆಯ ಪ್ರಕಾರ, AWAS ಯೋಜನೆಯಡಿಯಲ್ಲಿ 3 ಲಕ್ಷ ರೂಪಾಯಿಗಳ ಸಹಾಯದ ಜೊತೆಗೆ ಪ್ರತಿ ಮನೆಗೆ 75,000 ರೂ. ನೀಡಲು ನಾವು ನಿರ್ಧಿರಿಸಿದ್ದೇವೆ” ಎಂದಿದ್ದಾರೆ.

ಬಲವಂತವಾಗಿ ತೆರವು ಕಾರ್ಯಾಚರಣೆ ನಡೆಸುತ್ತಿರುವುದರ ವಿರುದ್ಧ ದಲಿತ-ಆದಿವಾಸಿ ಸಂಘಟನೆಗಳು ಜುಲೈ 12ರಿಂದಲೂ ಹೋರಾಟ ನಡೆಸುತ್ತಿದ್ದಾರೆ. ಅಧಿಕಾರಿಗಳು ಸ್ಪಂದಿಸದಿದ್ದಾಗ ಸಿಎಂ ಮನೆ ಕಡೆಗೆ ಪಾದಯಾತ್ರೆ ಆರಂಭಿಸಿದ್ದಾರೆ. ಅಂಬೇಡ್ಕರ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆಯವರ ಫೋಟೊಗಳನ್ನು ಹಿಡಿದು ಜೈಭೀಮ್ ಘೋಷಣೆ ಕೂಗುತ್ತಾ ಪಾದಯಾತ್ರೆ ಮುಂದುವರೆದಿದೆ. ಈ ಬಡಜನರ ಹೋರಾಟಕ್ಕೆ ಹಲವು ಸಂಘಟನೆಗಳು ಕೈಜೋಡಿಸಿವೆ.

ಇದು ಒರಿಸ್ಸಾ ಮಾತ್ರವಲ್ಲದೆ ಇಡೀ ದೇಶದಲ್ಲಿನ ಬಡವರ ಪರಿಸ್ಥಿತಿ ಇದೆ ಆಗಿದೆ. ಪೌರಕಾರ್ಮಿಕರಾಗಿ, ದಿನಗೂಲಿ ಕಾರ್ಮಿಕರಾಗಿ ದುಡಿಯುತ್ತ ಸ್ಲಂಗಳಲ್ಲಿ ವಾಸಿಸುತ್ತಿರುವ ಜನರಿಗೆ ಸ್ವಂತ ಮನೆ ಎಂಬುದು ಕನಸಾಗಿದೆ. ನಗರದ ಮಧ್ಯಭಾಗದಲ್ಲಿ ಶತಮಾನಗಳಿಂದ ದುಡಿಯುತ್ತಿದ್ದರೂ ಅವರಿಗೆ ಸೌಲಭ್ಯ ಒದಗಿಸದ ಸರ್ಕಾರ ಬೆಲೆ ಬಾಳುವ ಆ ಜಾಗ ಕಬಳಿಸಲು ಅವರನ್ನು ದೂರಕ್ಕೆ ಎತ್ತಂಗಡಿ ಮಾಡುತ್ತಿವೆ. ಈ ಕುರಿತು ನಡೆಯುತ್ತಿರುವ ಹೋರಾಟಗಳನ್ನು ದಮನ ಮಾಡುತ್ತಿವೆ. ಇದು ದೇಶದ ಕ್ರೂರ ವಾಸ್ತವವಾಗಿದೆ. ಆದರೂ ಆ ಬಡಜನರು ತಮ್ಮ ನ್ಯಾಯಯುತ ಹಕ್ಕಿಗಾಗಿ ದನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...