Homeಕರೋನಾ ತಲ್ಲಣಉಚಿತ ಕೊರೊನಾ ಲಸಿಕೆ ನೀಡುವುದಾಗಿ ಒರಿಸ್ಸಾ ಘೋಷಣೆ

ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಒರಿಸ್ಸಾ ಘೋಷಣೆ

ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಈಗಾಗಲೇ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿವೆ.

- Advertisement -
- Advertisement -

18 ರಿಂದ 45 ವರ್ಷ ವಯಸ್ಸಿನವರಿಗೆ ಉಚಿತ ವ್ಯಾಕ್ಸಿನೇಷನ್ ಘೋಷಿಸುವ ಸರ್ಕಾರಗಳ ಪಟ್ಟಿಯಲ್ಲಿ ಒರಿಸ್ಸಾ ಕೂಡಾ ಸೇರಿಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ನವೀನ್‌‌ ಪಟ್ನಾಯಕ್ ಈ ಘೋಷಣೆಯನ್ನು ಮಾಡಿದ್ದು, ಎಲ್ಲಾ ಜನರ ಚುಚ್ಚುಮದ್ದಿನ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ. 18 ರಿಂದ 45 ವರ್ಷದ ಜನರಿಗೆ ವ್ಯಾಕ್ಸಿನೇಷನ್ ಮೇ 1 ರಿಂದ ಪ್ರಾರಂಭವಾಗುತ್ತದೆ.

ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಈಗಾಗಲೇ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿವೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

3.87 ಕೋಟಿ ಡೋಸ್ ಲಸಿಕೆಗಳನ್ನು ಸರ್ಕಾರ ಭಾನುವಾರ ಆದೇಶಿಸಿದೆ. ಭಾರತ್ ಬಯೋಟೆಕ್‌ನಿಂದ 10.34 ಲಕ್ಷ ಡೋಸ್ ಕೋವಾಕ್ಸಿನ್ ಅನ್ನು ಆದೇಶಿಸಲಾಗಿದ್ದು, 377 ಲಕ್ಷ ಡೋಸ್ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಪಡೆಯಲಾಗುತ್ತದೆ. ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಶನ್‌ನ ವ್ಯಾಪ್ತಿಯ ಜನರಿಗೆ ಕೋವಾಕ್ಸಿನ್ ಹಾಗೂ ಉಳಿದಂತೆ ಒಡಿಶಾದಾದ್ಯಂತ ಕೋವಿಶೀಲ್ಡ್ ಅನ್ನು ನೀಡಲಾಗುವುದು ಎಂದು ತಿಳಿದು ಬಂದಿದೆ.

ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದ ನವೀನ್ ಪಟ್ನಾಯಕ್, “ಸುಮಾರು ಎರಡು ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ. ಲಸಿಕೆಗಳನ್ನು ಖರೀದಿಸಲು ರಾಜ್ಯ ಸರ್ಕಾರ 2,000 ಕೋಟಿ ರೂ. ಖರ್ಚು ಮಾಡುತ್ತದೆ. ವ್ಯಾಕ್ಸಿನೇಷನ್ಗಾಗಿ ನೀವು ಏನನ್ನೂ ಖರ್ಚು ಮಾಡಬೇಕಾಗಿಲ್ಲ. ಇದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಎಲ್ಲಾ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ನಿಮ್ಮ ಜವಾಬ್ದಾರಿಯನ್ನು ನೀವು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ಗುಜರಾತ್, ಮಹಾರಾಷ್ಟ್ರ ಮತ್ತು ಚತ್ತೀಸ್‌ಗಡದಂತಹ ರಾಜ್ಯಗಳಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದೆ. ಮಾರಣಾಂತಿಕ ವೈರಸ್‌ಗೆ ಬಲಿಯಾಗುವವರ ಅಂತ್ಯ ಸಂಸ್ಕಾರ ಮಾಡಲು ಕೂಡಾ ಸ್ಥಳವಿಲ್ಲದ ಪರಿಸ್ಥಿತಿ ಏರ್ಪಟ್ಟಿದೆ. ದೇಶವು ತನ್ನ ಇತಿಹಾಸದಲ್ಲಿ ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ಎದುರಿಸಲಿಲ್ಲ ಎಂದು ಮುಖ್ಯಮಂತ್ರಿ ಪಟ್ನಾಯಕ್ ಹೇಳಿದ್ದಾರೆ.

ಒರಿಸ್ಸಾದಲ್ಲಿ ಇದುವರೆಗೂ 4 ಲಕ್ಷ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 1981 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 3.59 ಲಕ್ಷ ಜನರು ಇರುವರೆಗೂ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ: ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...