Homeಕರೋನಾ ತಲ್ಲಣಉಚಿತ ಕೊರೊನಾ ಲಸಿಕೆ ನೀಡುವುದಾಗಿ ಒರಿಸ್ಸಾ ಘೋಷಣೆ

ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಒರಿಸ್ಸಾ ಘೋಷಣೆ

ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಈಗಾಗಲೇ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿವೆ.

- Advertisement -
- Advertisement -

18 ರಿಂದ 45 ವರ್ಷ ವಯಸ್ಸಿನವರಿಗೆ ಉಚಿತ ವ್ಯಾಕ್ಸಿನೇಷನ್ ಘೋಷಿಸುವ ಸರ್ಕಾರಗಳ ಪಟ್ಟಿಯಲ್ಲಿ ಒರಿಸ್ಸಾ ಕೂಡಾ ಸೇರಿಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ನವೀನ್‌‌ ಪಟ್ನಾಯಕ್ ಈ ಘೋಷಣೆಯನ್ನು ಮಾಡಿದ್ದು, ಎಲ್ಲಾ ಜನರ ಚುಚ್ಚುಮದ್ದಿನ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ. 18 ರಿಂದ 45 ವರ್ಷದ ಜನರಿಗೆ ವ್ಯಾಕ್ಸಿನೇಷನ್ ಮೇ 1 ರಿಂದ ಪ್ರಾರಂಭವಾಗುತ್ತದೆ.

ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಈಗಾಗಲೇ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿವೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

3.87 ಕೋಟಿ ಡೋಸ್ ಲಸಿಕೆಗಳನ್ನು ಸರ್ಕಾರ ಭಾನುವಾರ ಆದೇಶಿಸಿದೆ. ಭಾರತ್ ಬಯೋಟೆಕ್‌ನಿಂದ 10.34 ಲಕ್ಷ ಡೋಸ್ ಕೋವಾಕ್ಸಿನ್ ಅನ್ನು ಆದೇಶಿಸಲಾಗಿದ್ದು, 377 ಲಕ್ಷ ಡೋಸ್ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಪಡೆಯಲಾಗುತ್ತದೆ. ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಶನ್‌ನ ವ್ಯಾಪ್ತಿಯ ಜನರಿಗೆ ಕೋವಾಕ್ಸಿನ್ ಹಾಗೂ ಉಳಿದಂತೆ ಒಡಿಶಾದಾದ್ಯಂತ ಕೋವಿಶೀಲ್ಡ್ ಅನ್ನು ನೀಡಲಾಗುವುದು ಎಂದು ತಿಳಿದು ಬಂದಿದೆ.

ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದ ನವೀನ್ ಪಟ್ನಾಯಕ್, “ಸುಮಾರು ಎರಡು ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ. ಲಸಿಕೆಗಳನ್ನು ಖರೀದಿಸಲು ರಾಜ್ಯ ಸರ್ಕಾರ 2,000 ಕೋಟಿ ರೂ. ಖರ್ಚು ಮಾಡುತ್ತದೆ. ವ್ಯಾಕ್ಸಿನೇಷನ್ಗಾಗಿ ನೀವು ಏನನ್ನೂ ಖರ್ಚು ಮಾಡಬೇಕಾಗಿಲ್ಲ. ಇದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಎಲ್ಲಾ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ನಿಮ್ಮ ಜವಾಬ್ದಾರಿಯನ್ನು ನೀವು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ಗುಜರಾತ್, ಮಹಾರಾಷ್ಟ್ರ ಮತ್ತು ಚತ್ತೀಸ್‌ಗಡದಂತಹ ರಾಜ್ಯಗಳಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದೆ. ಮಾರಣಾಂತಿಕ ವೈರಸ್‌ಗೆ ಬಲಿಯಾಗುವವರ ಅಂತ್ಯ ಸಂಸ್ಕಾರ ಮಾಡಲು ಕೂಡಾ ಸ್ಥಳವಿಲ್ಲದ ಪರಿಸ್ಥಿತಿ ಏರ್ಪಟ್ಟಿದೆ. ದೇಶವು ತನ್ನ ಇತಿಹಾಸದಲ್ಲಿ ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ಎದುರಿಸಲಿಲ್ಲ ಎಂದು ಮುಖ್ಯಮಂತ್ರಿ ಪಟ್ನಾಯಕ್ ಹೇಳಿದ್ದಾರೆ.

ಒರಿಸ್ಸಾದಲ್ಲಿ ಇದುವರೆಗೂ 4 ಲಕ್ಷ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 1981 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 3.59 ಲಕ್ಷ ಜನರು ಇರುವರೆಗೂ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ: ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...