Homeಮುಖಪುಟಒರಿಸ್ಸಾ ಸಿಎಂ ಪಟ್ನಾಯಕ್‌ ಪತ್ರ : NPR ಮುಂದೂಡಲು ಕೇಂದ್ರದ ಚಿಂತನೆ?

ಒರಿಸ್ಸಾ ಸಿಎಂ ಪಟ್ನಾಯಕ್‌ ಪತ್ರ : NPR ಮುಂದೂಡಲು ಕೇಂದ್ರದ ಚಿಂತನೆ?

ಎನ್‌ಪಿಆರ್‌ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರವೇ ನವೀನ್‌ ಪಟ್ನಾಯಕ್‌ರವರಿಗೆ ಹೇಳಿ ಪತ್ರ ಬರೆಸಿಕೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಸಮಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೊಂದಣಿಯನ್ನು ನಿಲ್ಲಿಸಬೇಕು ಎಂಬ ಕೂಗು ದಿನೇ ದಿನೇ ಜೋರಾಗುತ್ತಿದೆ. ಇದೇ ವಿಷಯವಾಗಿ ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದು ಎನ್‌ಪಿಆರ್‌ ಮುಂದೂಡುವಂತೆ ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ, ಏಪ್ರಿಲ್ 1 ರಿಂದ ಹಲವು ರಾಜ್ಯಗಳಲ್ಲಿ ಪ್ರಾರಂಭವಾಗಬೇಕಿದ್ದ, ಎನ್‌ಪಿಆರ್ ಪ್ರಕ್ರಿಯೆಯನ್ನು ಅನಿರ್ಧಿಷ್ಟಾವಧಿ ಕಾಲ ಮುಂದೂಡಲಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಪ್ರಧಾನಿಯವರಿಗೆ ಪತ್ರ ಬರೆದಿದ್ದ ನವೀನ್ ಪಟ್ನಾಯಕ್ ಅವರು “ಸದ್ಯಕ್ಕೆ ನಾವೆಲ್ಲ ಕೊರೊನಾ ಸಾಂಕ್ರಾಮಿಕವನ್ನು ತಡೆಯುವುದಕ್ಕೆ ಹೋರಾಟದಲ್ಲಿ ನಿರತರಾಗಿದ್ದೇವೆ. ಈ ಸಮಯದಲ್ಲಿ ಜನಗಣತಿ ಮತ್ತು ಅದರ ಜೊತೆಗಿನ ಎಲ್ಲ ಚಟುವಟಿಕೆಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸುವುದು ಅಪಾಯಕಾರಿಯಾಗಿದೆ. ಈ ನಿಟ್ಟಿನಲ್ಲಿ ಜನಗಣತಿ ಮತ್ತು ಅದರ ಜೊತೆಗಿನ ಚಟುವಟಿಕೆಗಳನ್ನು ಮುಂದೂಡಬೇಕು” ಎಂದು ಹೇಳಿದ್ದರು.

ನವೀನ್ ಪಟ್ನಾಯಕ್ ಅವರು ಕೇಂದ್ರ ಸರ್ಕಾರ ಹೊಸ ನಾಗರಿಕ ತಿದ್ದುಪಡಿ ಕಾಯ್ದೆಗೆ (ಸಿಎಎ)  ಒಪ್ಪಿಗೆ ಸೂಚಿಸಿದ್ದರೂ, 2020ರ ಎನ್‌ಪಿಆರ್ ಪ್ರಕ್ರಿಯೆಯಲ್ಲಿ, ಕೇಳಲಿದ್ದ ತಂದೆ-ತಾಯಿಯರ ಹುಟ್ಟಿದ ದಿನಾಂಕ ಮತ್ತು ಜನ್ಮ ಸ್ಥಳಗಳ ಮಾಹಿತಿ ಬಗೆಗಿನ ಪ್ರಶ್ನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು.

2020ನೇ ಜನಗಣತಿ ಮತ್ತು ಎನ್‌ಪಿಆರ್ ಪ್ರಕ್ರಿಯೆ ನಡೆಸಲು ಜನಸಂಪನ್ಮೂಲವನ್ನು ರಾಜ್ಯ ಸರ್ಕಾರಗಳೇ ಒದಗಿಸಬೇಕಾಗಿರುವ ಸಂದರ್ಭ ಇರುವುದರಿಂದ, ಕೊರೊನ ಭೀತಿಯ ಈ ಸಮಯದಲ್ಲಿ ಇದು ಹೆಚ್ಚಿನ ಸಮಸ್ಯೆ ಒಡ್ಡಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯ.

ಸಾಮಾನ್ಯವಾಗಿ ಜನಗಣತಿ ಮಾಡಲು ಶಾಲಾಶಿಕ್ಷಕರನ್ನು ನೇಮಿಸಲಾಗುತ್ತದೆ. ಈ ಶಾಲಾ ಶಿಕ್ಷಕ ಶಿಕ್ಷಕಿಯರು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹ ಮಾಡುವುದು ವಾಡಿಕೆ. ಈಗ ಕೊರೊನಾ ಸಾಂಕ್ರಾಮಿಕ ಭೀತಿಯಲ್ಲಿ ಶಿಕ್ಷಕರು ಮನೆಮನೆಗೆ ತೆರಳಿ ಈ ಕೆಲಸ ಮಾಡುವುದರ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಯಲಾಗಿದೆ.

ಪಟ್ನಾಯಕ್ ಅವರು ಬರೆದ ಪತ್ರದಲ್ಲಿ “ದೇಶದ ಮೊದಲ ಹಂತದ ಜನಗಣತಿಯಲ್ಲಿ ಸುಮಾರು 30 ಲಕ್ಷ ಜನ ಮನೆ ಮನೆಗೆ ತೆರಳಬೇಕಿದೆ. ಅವರಿಗೆಲ್ಲಾ ವಿಸ್ತೃತ ತರಬೇತಿ ನೀಡಬೇಕಿದೆ” ಆದುದರಿಂದ ಈ ಸಮಯದಲ್ಲಿ ಈ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಹೇಳಿದ್ದಾರೆ.

ಜನಗಣತಿಗೆ ಎಲ್ಲ ರಾಜ್ಯಗಳು ಸಹಕರಿಸಲೇಬೆಕಿದೆ. ಆದರೆ ಎನ್‌ಪಿಆರ್‌ಗೆ ಆ ನಿರ್ಬಂಧ ಇಲ್ಲ. ಈಗಾಗಲೇ ಪಶ್ಚಿಮ ಬಂಗಾಳ, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ರಾಜಸ್ಥಾನ, ಪಂಜಾಬ್, ಮಧ್ಯಪ್ರದೇಶ, ಚತ್ತೀಸ್ ಘಡ ಮತ್ತು ಪುದುಚೆರಿ ವಿಧಾನಸಭೆಗಳಲ್ಲಿ ಎನ್‌ಪಿಆರ್ ಪ್ರಕ್ರಿಯೆ ವಿರುದ್ಧ ನಿರ್ಣಯ ತೆಗೆದುಕೊಳ್ಳಲಾಗಿದೆ.

ಈ ಎಲ್ಲಾ ಕಾರಣಗಳಿಂದಾಗಿ ಎನ್‌ಪಿಆರ್ ಪ್ರಕ್ರಿಯೆ ಅನಿರ್ಧಿಷ್ಟ ಕಾಲಾವಧಿಯವರೆಗೆ ಮುಂದೂಡುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. ಇನ್ನೊಂದೆಡೆ ಎನ್‌ಪಿಆರ್‌ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರವೇ ನವೀನ್‌ ಪಟ್ನಾಯಕ್‌ರವರಿಗೆ ಹೇಳಿ ಪತ್ರ ಬರೆಸಿಕೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...