Homeಮುಖಪುಟಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

- Advertisement -
- Advertisement -

ಒರಿಸ್ಸಾ ರಾಜ್ಯದ ಪುರಿಯ ಬ್ರಹ್ಮಗಿರಿ ಪೊಲೀಸ್‌ ವ್ಯಾಪ್ತಿಗೆ ಒಳಪಡುವ ಸತಪಾದದ ನಾಥಪುರ್‌ ಗ್ರಾಮದಲ್ಲಿ ಭಾನುವಾರ ಎರಡು ಬಣಗಳ ನಡುವೆ ಘರ್ಷಣೆ ನಡೆದಿದೆ.

ಪರಸ್ಪರ ಬಾಂಬುಗಳನ್ನು ಎಸೆದಿರುವ ಗುಂಪು ಘರ್ಷಣೆಯಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ, ಇಬ್ಬರು ಗಂಭೀರರಾಗಿದ್ದಾರೆ, 20 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ ಎಂದು ‘ಒರಿಸ್ಸಾ ಪೋಸ್ಟ್‌’ ವರದಿ ಮಾಡಿದೆ. ಘಟನೆ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊಗಳು ವೈರಲ್ ಆಗಿವೆ.

ಚಿಲಿಕಾದ ಕೃಷ್ಣಪ್ರಸಾದ್ ಬ್ಲಾಕ್‌ನ ಬ್ರಹ್ಮಪದ ಗ್ರಾಮದಿಂದ ಹೊರಹಾಕಲ್ಪಟ್ಟ ಸುಮಾರು 30 ದಲಿತ ಕುಟುಂಬಗಳು ಸುಮಾರು ಆರು ತಿಂಗಳಿಂದ ಸತಪದದ ನಾಥಪುರ್ ಗ್ರಾಮದ ಬಳಿ ಹುಲ್ಲುಗಾವಲು ಭೂಮಿಯಲ್ಲಿ ನೆಲೆಸಿದ್ದರು ಎಂದು ಮೂಲಗಳು ಹೇಳಿವೆ.

ಆದರೆ ಇದು ನಾಥಾಪುರ ಗ್ರಾಮಸ್ಥರಿಗೆ ಇಷ್ಟವಿರದ ಕಾರಣ ಎರಡು ಗುಂಪುಗಳ ನಡುವೆ ವೈಮನಸ್ಸು ಉಂಟಾಗಿತ್ತು. ದಲಿತರನ್ನು ತೆರವು ಮಾಡುವಂತೆ ನಾಥಾಪುರ ಗ್ರಾಮಸ್ಥರು ಸ್ಥಳೀಯ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದರು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಘಟನೆ ನಡೆದಿದೆ ಎಂದು ಸದ್ಯದ ಮೂಲಗಳು ತಿಳಿಸಿವೆ.

ಹಲವು ಘರ್ಷಣೆಗಳ ನಂತರ ದಲಿತರು ಗೋಮಾಳವನ್ನು ತೆರವು ಮಾಡಲು ಒಪ್ಪಿದರು. ದಲಿತರು ಗೋಮಾಳದಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಬಯಸಿದ್ದರು. ಸಮಸ್ಯೆ ಪರಿಹರಿಸುವ ಸಲುವಾಗಿ, ಎರಡು ಗುಂಪುಗಳ ನಡುವೆ ಭಾನುವಾರ ಸಭೆ ಕರೆಯಲಾಯಿತು. ನಾಥಪುರ ಗ್ರಾಮಸ್ಥರ ಗುಂಪು ಭಾನುವಾರ ದಲಿತರನ್ನು ಸಂಪರ್ಕಿಸಿತ್ತು.

ಗ್ರಾಮಸ್ಥರು ಹಾಗೂ ದಲಿತರು ಪರಸ್ಪರ ಬಾಂಬ್‌ ಎಸೆದಿದ್ದಾರೆ ಎಂದು ಒಡಿಸ್ಸಾ ಪೋಸ್ಟ್‌ ವರದಿ ಮಾಡಿದೆ. ಸುಮಾರು 20 ಗುಡಿಸಲುಗಳು ಸುಟ್ಟು ಹೋಗಿವೆ ಮತ್ತು ಎರಡೂ ಗುಂಪಿನ ಕನಿಷ್ಠ 10 ಜನರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಬ್ರಹ್ಮಗಿರಿ ನಿಲ್ದಾಣದಿಂದ ಅಗ್ನಿಶಾಮಕ ಟೆಂಡರ್ ಸ್ಥಳಕ್ಕೆ ತಲುಪಿ, ಬೆಂಕಿ ನಂದಿಸುವ ಪ್ರಯತ್ನ ಮಾಡಿತು. ಆ ಹೊತ್ತಿಗೆ ಗುಡಿಸಲುಗಳು ಸುಟ್ಟುಹೋಗಿವೆ. ಮತ್ತೊಂದೆಡೆ ದಲಿತರು ನ್ಯಾಯಕ್ಕಾಗಿ ಒತ್ತಾಯಿಸಿ ಪುರಿ-ಸತಪದ ರಸ್ತೆಯಲ್ಲಿ ಧರಣಿ ನಡೆಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೂರಾರು ವಾಹನಗಳು ನಿಂತಿದ್ದವು.

ರಸ್ತೆ ತಡೆಯನ್ನು ಪೊಲೀಸರು ತೆರವು ಮಾಡಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಕನಿಷ್ಠ ಎರಡು ತುಕಡಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಗಾಯಾಳುಗಳನ್ನು ಪುರಿ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುರಿ ಪೊಲೀಸ್ ವರಿಷ್ಠಾಧಿಕಾರಿ ಕೆವಿ ಸಿಂಗ್ ಅವರು ಹೆಚ್ಚುವರಿ ಎಸ್ಪಿ ಮಿಹಾರ್ ಕುಮಾರ್ ಪಾಂಡಾ ಮತ್ತು ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು.


ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...