Homeಮುಖಪುಟಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

- Advertisement -
- Advertisement -

ಒರಿಸ್ಸಾ ರಾಜ್ಯದ ಪುರಿಯ ಬ್ರಹ್ಮಗಿರಿ ಪೊಲೀಸ್‌ ವ್ಯಾಪ್ತಿಗೆ ಒಳಪಡುವ ಸತಪಾದದ ನಾಥಪುರ್‌ ಗ್ರಾಮದಲ್ಲಿ ಭಾನುವಾರ ಎರಡು ಬಣಗಳ ನಡುವೆ ಘರ್ಷಣೆ ನಡೆದಿದೆ.

ಪರಸ್ಪರ ಬಾಂಬುಗಳನ್ನು ಎಸೆದಿರುವ ಗುಂಪು ಘರ್ಷಣೆಯಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ, ಇಬ್ಬರು ಗಂಭೀರರಾಗಿದ್ದಾರೆ, 20 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ ಎಂದು ‘ಒರಿಸ್ಸಾ ಪೋಸ್ಟ್‌’ ವರದಿ ಮಾಡಿದೆ. ಘಟನೆ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊಗಳು ವೈರಲ್ ಆಗಿವೆ.

ಚಿಲಿಕಾದ ಕೃಷ್ಣಪ್ರಸಾದ್ ಬ್ಲಾಕ್‌ನ ಬ್ರಹ್ಮಪದ ಗ್ರಾಮದಿಂದ ಹೊರಹಾಕಲ್ಪಟ್ಟ ಸುಮಾರು 30 ದಲಿತ ಕುಟುಂಬಗಳು ಸುಮಾರು ಆರು ತಿಂಗಳಿಂದ ಸತಪದದ ನಾಥಪುರ್ ಗ್ರಾಮದ ಬಳಿ ಹುಲ್ಲುಗಾವಲು ಭೂಮಿಯಲ್ಲಿ ನೆಲೆಸಿದ್ದರು ಎಂದು ಮೂಲಗಳು ಹೇಳಿವೆ.

ಆದರೆ ಇದು ನಾಥಾಪುರ ಗ್ರಾಮಸ್ಥರಿಗೆ ಇಷ್ಟವಿರದ ಕಾರಣ ಎರಡು ಗುಂಪುಗಳ ನಡುವೆ ವೈಮನಸ್ಸು ಉಂಟಾಗಿತ್ತು. ದಲಿತರನ್ನು ತೆರವು ಮಾಡುವಂತೆ ನಾಥಾಪುರ ಗ್ರಾಮಸ್ಥರು ಸ್ಥಳೀಯ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದರು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಘಟನೆ ನಡೆದಿದೆ ಎಂದು ಸದ್ಯದ ಮೂಲಗಳು ತಿಳಿಸಿವೆ.

ಹಲವು ಘರ್ಷಣೆಗಳ ನಂತರ ದಲಿತರು ಗೋಮಾಳವನ್ನು ತೆರವು ಮಾಡಲು ಒಪ್ಪಿದರು. ದಲಿತರು ಗೋಮಾಳದಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಬಯಸಿದ್ದರು. ಸಮಸ್ಯೆ ಪರಿಹರಿಸುವ ಸಲುವಾಗಿ, ಎರಡು ಗುಂಪುಗಳ ನಡುವೆ ಭಾನುವಾರ ಸಭೆ ಕರೆಯಲಾಯಿತು. ನಾಥಪುರ ಗ್ರಾಮಸ್ಥರ ಗುಂಪು ಭಾನುವಾರ ದಲಿತರನ್ನು ಸಂಪರ್ಕಿಸಿತ್ತು.

ಗ್ರಾಮಸ್ಥರು ಹಾಗೂ ದಲಿತರು ಪರಸ್ಪರ ಬಾಂಬ್‌ ಎಸೆದಿದ್ದಾರೆ ಎಂದು ಒಡಿಸ್ಸಾ ಪೋಸ್ಟ್‌ ವರದಿ ಮಾಡಿದೆ. ಸುಮಾರು 20 ಗುಡಿಸಲುಗಳು ಸುಟ್ಟು ಹೋಗಿವೆ ಮತ್ತು ಎರಡೂ ಗುಂಪಿನ ಕನಿಷ್ಠ 10 ಜನರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಬ್ರಹ್ಮಗಿರಿ ನಿಲ್ದಾಣದಿಂದ ಅಗ್ನಿಶಾಮಕ ಟೆಂಡರ್ ಸ್ಥಳಕ್ಕೆ ತಲುಪಿ, ಬೆಂಕಿ ನಂದಿಸುವ ಪ್ರಯತ್ನ ಮಾಡಿತು. ಆ ಹೊತ್ತಿಗೆ ಗುಡಿಸಲುಗಳು ಸುಟ್ಟುಹೋಗಿವೆ. ಮತ್ತೊಂದೆಡೆ ದಲಿತರು ನ್ಯಾಯಕ್ಕಾಗಿ ಒತ್ತಾಯಿಸಿ ಪುರಿ-ಸತಪದ ರಸ್ತೆಯಲ್ಲಿ ಧರಣಿ ನಡೆಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೂರಾರು ವಾಹನಗಳು ನಿಂತಿದ್ದವು.

ರಸ್ತೆ ತಡೆಯನ್ನು ಪೊಲೀಸರು ತೆರವು ಮಾಡಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಕನಿಷ್ಠ ಎರಡು ತುಕಡಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಗಾಯಾಳುಗಳನ್ನು ಪುರಿ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುರಿ ಪೊಲೀಸ್ ವರಿಷ್ಠಾಧಿಕಾರಿ ಕೆವಿ ಸಿಂಗ್ ಅವರು ಹೆಚ್ಚುವರಿ ಎಸ್ಪಿ ಮಿಹಾರ್ ಕುಮಾರ್ ಪಾಂಡಾ ಮತ್ತು ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು.


ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...