Homeಮುಖಪುಟಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

- Advertisement -
- Advertisement -

ಒರಿಸ್ಸಾ ರಾಜ್ಯದ ಪುರಿಯ ಬ್ರಹ್ಮಗಿರಿ ಪೊಲೀಸ್‌ ವ್ಯಾಪ್ತಿಗೆ ಒಳಪಡುವ ಸತಪಾದದ ನಾಥಪುರ್‌ ಗ್ರಾಮದಲ್ಲಿ ಭಾನುವಾರ ಎರಡು ಬಣಗಳ ನಡುವೆ ಘರ್ಷಣೆ ನಡೆದಿದೆ.

ಪರಸ್ಪರ ಬಾಂಬುಗಳನ್ನು ಎಸೆದಿರುವ ಗುಂಪು ಘರ್ಷಣೆಯಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ, ಇಬ್ಬರು ಗಂಭೀರರಾಗಿದ್ದಾರೆ, 20 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ ಎಂದು ‘ಒರಿಸ್ಸಾ ಪೋಸ್ಟ್‌’ ವರದಿ ಮಾಡಿದೆ. ಘಟನೆ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊಗಳು ವೈರಲ್ ಆಗಿವೆ.

ಚಿಲಿಕಾದ ಕೃಷ್ಣಪ್ರಸಾದ್ ಬ್ಲಾಕ್‌ನ ಬ್ರಹ್ಮಪದ ಗ್ರಾಮದಿಂದ ಹೊರಹಾಕಲ್ಪಟ್ಟ ಸುಮಾರು 30 ದಲಿತ ಕುಟುಂಬಗಳು ಸುಮಾರು ಆರು ತಿಂಗಳಿಂದ ಸತಪದದ ನಾಥಪುರ್ ಗ್ರಾಮದ ಬಳಿ ಹುಲ್ಲುಗಾವಲು ಭೂಮಿಯಲ್ಲಿ ನೆಲೆಸಿದ್ದರು ಎಂದು ಮೂಲಗಳು ಹೇಳಿವೆ.

ಆದರೆ ಇದು ನಾಥಾಪುರ ಗ್ರಾಮಸ್ಥರಿಗೆ ಇಷ್ಟವಿರದ ಕಾರಣ ಎರಡು ಗುಂಪುಗಳ ನಡುವೆ ವೈಮನಸ್ಸು ಉಂಟಾಗಿತ್ತು. ದಲಿತರನ್ನು ತೆರವು ಮಾಡುವಂತೆ ನಾಥಾಪುರ ಗ್ರಾಮಸ್ಥರು ಸ್ಥಳೀಯ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದರು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಘಟನೆ ನಡೆದಿದೆ ಎಂದು ಸದ್ಯದ ಮೂಲಗಳು ತಿಳಿಸಿವೆ.

ಹಲವು ಘರ್ಷಣೆಗಳ ನಂತರ ದಲಿತರು ಗೋಮಾಳವನ್ನು ತೆರವು ಮಾಡಲು ಒಪ್ಪಿದರು. ದಲಿತರು ಗೋಮಾಳದಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಬಯಸಿದ್ದರು. ಸಮಸ್ಯೆ ಪರಿಹರಿಸುವ ಸಲುವಾಗಿ, ಎರಡು ಗುಂಪುಗಳ ನಡುವೆ ಭಾನುವಾರ ಸಭೆ ಕರೆಯಲಾಯಿತು. ನಾಥಪುರ ಗ್ರಾಮಸ್ಥರ ಗುಂಪು ಭಾನುವಾರ ದಲಿತರನ್ನು ಸಂಪರ್ಕಿಸಿತ್ತು.

ಗ್ರಾಮಸ್ಥರು ಹಾಗೂ ದಲಿತರು ಪರಸ್ಪರ ಬಾಂಬ್‌ ಎಸೆದಿದ್ದಾರೆ ಎಂದು ಒಡಿಸ್ಸಾ ಪೋಸ್ಟ್‌ ವರದಿ ಮಾಡಿದೆ. ಸುಮಾರು 20 ಗುಡಿಸಲುಗಳು ಸುಟ್ಟು ಹೋಗಿವೆ ಮತ್ತು ಎರಡೂ ಗುಂಪಿನ ಕನಿಷ್ಠ 10 ಜನರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಬ್ರಹ್ಮಗಿರಿ ನಿಲ್ದಾಣದಿಂದ ಅಗ್ನಿಶಾಮಕ ಟೆಂಡರ್ ಸ್ಥಳಕ್ಕೆ ತಲುಪಿ, ಬೆಂಕಿ ನಂದಿಸುವ ಪ್ರಯತ್ನ ಮಾಡಿತು. ಆ ಹೊತ್ತಿಗೆ ಗುಡಿಸಲುಗಳು ಸುಟ್ಟುಹೋಗಿವೆ. ಮತ್ತೊಂದೆಡೆ ದಲಿತರು ನ್ಯಾಯಕ್ಕಾಗಿ ಒತ್ತಾಯಿಸಿ ಪುರಿ-ಸತಪದ ರಸ್ತೆಯಲ್ಲಿ ಧರಣಿ ನಡೆಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೂರಾರು ವಾಹನಗಳು ನಿಂತಿದ್ದವು.

ರಸ್ತೆ ತಡೆಯನ್ನು ಪೊಲೀಸರು ತೆರವು ಮಾಡಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಕನಿಷ್ಠ ಎರಡು ತುಕಡಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಗಾಯಾಳುಗಳನ್ನು ಪುರಿ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುರಿ ಪೊಲೀಸ್ ವರಿಷ್ಠಾಧಿಕಾರಿ ಕೆವಿ ಸಿಂಗ್ ಅವರು ಹೆಚ್ಚುವರಿ ಎಸ್ಪಿ ಮಿಹಾರ್ ಕುಮಾರ್ ಪಾಂಡಾ ಮತ್ತು ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು.


ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...