Homeದಲಿತ್ ಫೈಲ್ಸ್ಒರಿಸ್ಸಾ | ದಲಿತ ವಿದ್ಯಾರ್ಥಿನಿ ಮೇಲೆ ಪದೇ ಪದೇ ಸಾಮೂಹಿಕ ಅತ್ಯಾಚಾರ

ಒರಿಸ್ಸಾ | ದಲಿತ ವಿದ್ಯಾರ್ಥಿನಿ ಮೇಲೆ ಪದೇ ಪದೇ ಸಾಮೂಹಿಕ ಅತ್ಯಾಚಾರ

- Advertisement -
- Advertisement -

19 ವರ್ಷದ ದಲಿತ ವಿದ್ಯಾರ್ಥಿನಿಯನ್ನು ಆಕೆಯ ಗೆಳೆಯ ಮತ್ತು ಇತರ ಐವರು ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರವೆಸಗಿರುವ ಭೀಕರ ಘಟನೆ ಒರಿಸ್ಸಾದ ಕಟಕ್ ಜಿಲ್ಲೆಯಲ್ಲಿ ನಡೆದಿದೆ ಎಂದು ಶುಕ್ರವಾರ ವರದಿಯಾಗಿದೆ. ಘಟನೆಯು ಕಳೆದ ತಿಂಗಳು ದಸರಾ ವೇಳೆ ನಡೆದಿದ್ದು, ಎರಡು ದಿನಗಳ ಹಿಂದೆ ಯುವತಿ ಬಾದಂಬಾಡಿ ಠಾಣೆಗೆ ದೂರು ನೀಡಿದ ಬಳಿಕವಷ್ಟೇ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ದಲಿತ ವಿದ್ಯಾರ್ಥಿನಿ

ಘಟನೆಗೆ ಸಂಬಂಧಿಸಿ ಸಂತ್ರಸ್ತೆ ಯುವತಿಯ ಗೆಳೆಯ, ಕೆಫೆ ಮಾಲೀಕ ಮತ್ತು ಅಪ್ರಾಪ್ತ ಬಾಲಕ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ಪ್ಲಸ್ III ವಾಣಿಜ್ಯ ವಿದ್ಯಾರ್ಥಿನಿಯಾಗಿದ್ದು, ದಸರಾ ಸಮಯದಲ್ಲಿ ಅವರ ಹುಟ್ಟುಹಬ್ಬವನ್ನು ಆಚರಿಸಲು ಗೆಳೆಯ ಆಹ್ವಾನಿಸಿದ್ದನು ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನ್ನ ಗೆಳೆಯನ ಆಹ್ವಾನದಂತೆ, ಸಂತ್ರಸ್ತೆ ಪುರಿಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕಥಗಡ ಸಾಹಿಯಲ್ಲಿರುವ ಕೆಫೆಗೆ ಬಂದಿದ್ದರು. ಅಲ್ಲಿ ಅವರು ಯುವತಿಯ ಹುಟ್ಟುಹಬ್ಬವನ್ನು ಆಚರಿಸಿದ ನಂತರ, ಆರೋಪಿಯು ಯುವತಿಯೊಂದಿಗೆ ದೈಹಿಕ ಸಂಬಂಧ ಮಾಡಿದ್ದ ಎಂದು ವರದಿಯಾಗಿದೆ. ದಲಿತ ವಿದ್ಯಾರ್ಥಿನಿ

“ಈ ವೇಳೆ ಯುವತಿಯ ಗೆಳೆಯ, ಕೆಫೆಯ ಮಾಲೀಕನ ಸಹಾಯದಿಂದ, ಅವರ ಕೆಲವು ಖಾಸಗಿ ಕೃತ್ಯಗಳನ್ನು ತನ್ನ ಫೋನ್‌ನಲ್ಲಿ ರಹಸ್ಯವಾಗಿ ಸೆರೆಹಿಡಿದಿದ್ದನು. ಇದರ ನಂತರ ಅವರು ಆ ವಿಡಿಯೊವನ್ನು ಬಳಸಿ ಯುವತಿಯನ್ನು ಬ್ಲ್ಯಾಕ್‌ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಮಾಡಿದ್ದಾರೆ. ಅಪ್ರಾಪ್ತ ಹುಡುಗ ಮತ್ತು ಯುವತಿಯ ಗೆಳೆಯನ ಸ್ನೇಹಿತರು ಸೇರಿದಂತೆ ನಾಲ್ವರು ಕೂಡಾ ಅಪರಾಧದಲ್ಲಿ ಸೇರಿಕೊಂಡಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

ಆರಂಭದಲ್ಲಿ ಸಂತ್ರಸ್ತೆ ಭಯದಿಂದ ಯಾರೊಂದಿಗೂ ವಿಷಯವನ್ನು ಬಹಿರಂಗಪಡಿಸದಿದ್ದರೂ, ಲೈಂಗಿಕ ದೌರ್ಜನ್ಯವನ್ನು ಸಹಿಸಲಾರದೆ ಪೊಲೀಸ್ ಠಾಣೆಗೆ ತೆರಳಿ ಆರೋಪಿಯನ್ನು ಬಂಧಿಸುವಂತೆ ಕೋರಿದ್ದಾರೆ.

ದೂರಿನ ಆಧಾರದ ಮೇಲೆ ಬಾದಂಬಾಡಿ ಪೊಲೀಸ್ ಠಾಣೆಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಕಲಂ 3, ಬಿಎನ್‌ಎಸ್ ಸೆಕ್ಷನ್ 70, 351 ಮತ್ತು 296 ಮತ್ತು ಐಟಿ ಕಾಯ್ದೆಯ ಕಲಂ 67(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಪ್ರಾಥಮಿಕ ತನಿಖೆಯ ನಂತರ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ವೀಡಿಯೊಗಳನ್ನು ಅಗತ್ಯ ಪರಿಶೀಲನೆಗಾಗಿ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು” ಎಂದು ಕಟಕ್ ಡಿಸಿಪಿ ಜಗಮೋಹನ್ ಮೀನಾ ತಿಳಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ | ದಲಿತ ಗುತ್ತಿಗೆ ಕಾರ್ಮಿಕ ವ್ಯಕ್ತಿಗೆ ಬಂದೂಕು ತೋರಿಸಿ ಲೈಂಗಿಕ ಶೋಷಣೆ

ಹರಿಯಾಣ | ದಲಿತ ಗುತ್ತಿಗೆ ಕಾರ್ಮಿಕ ವ್ಯಕ್ತಿಗೆ ಬಂದೂಕು ತೋರಿಸಿ ಲೈಂಗಿಕ ಶೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...