HomeಮುಖಪುಟCBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

- Advertisement -
- Advertisement -

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ ಮಂಗಳವಾರ (ಜೂ.3) ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಖುದ್ದು ಹಾಜರಾಗಿದ್ದಾರೆ.

ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಆಗಿ ಮೌಲ್ಯಮಾಪನ ಮಾಡಲು ಈ ವರ್ಷ ಹೊಸ ವ್ಯವಸ್ಥೆಯನ್ನು ಪರಿಚಯಿಸಿತ್ತು. ಈ ವ್ಯವಸ್ಥೆಯ ಜಾರಿಯ ನಂತರ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಮೌಲ್ಯಮಾಪನ ದೋಷಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಜಾರ್ಖಂಡ್‌ನ ರಾಂಚಿಯ ನಿವಾಸಿಯಾದ ಸಾರ್ಥಕ್ ಸಿದ್ಧಾಂತ್, ತನಗೂ ಕೂಡ ಮರುಮೌಲ್ಯಮಾಪನದ ವೇಳೆ ಮಸುಕಾದ ಮತ್ತು ಅಪೂರ್ಣವಾದ ಡಿಜಿಟಲ್ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಗಳು ಸಿಕ್ಕಾಗ ಅದರ ಬೆನ್ನು ಬಿದ್ದಿದ್ದರು.

ನೂರಾರು ಅಧಿಕೃತ ಪ್ರೊಕ್ಯೂರ್‌ಮೆಂಟ್ ದಾಖಲೆಗಳು ಮತ್ತು ಟೆಂಡರ್ ಪತ್ರಗಳನ್ನು ಪರಿಶೀಲಿಸಿದ ಸಾರ್ಥಕ್, ಸಿಬಿಎಸ್ಇ ಮೂರು ಹಂತಗಳಲ್ಲಿ ಟೆಂಡರ್ ನಿಯಮಗಳನ್ನು ಹೇಗೆ ಬದಲಾಯಿಸಿದೆ ಎಂಬುದನ್ನು ಪತ್ತೆಹಚ್ಚಿ ತನ್ನ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದರು.

ಹೈದರಾಬಾದ್ ಮೂಲದ ‘ಕೋಯೆಂಪ್ಟ್ ಎಜು ಟೆಕ್’ ಎಂಬ ಖಾಸಗಿ ವೆಂಡರ್ ಸಂಸ್ಥೆಗೆ ಲಾಭ ಮಾಡಿಕೊಡಲು ಸಿಬಿಎಸ್ಇ ಅರ್ಹತಾ ಮಾನದಂಡಗಳು ಮತ್ತು ತಾಂತ್ರಿಕ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಸಾರ್ಥಕ್ ಕನಿಷ್ಠ 15ಕ್ಕೂ ಹೆಚ್ಚು ಲೋಪದೋಷಗಳನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರು.

ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ನೇತೃತ್ವದ ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿತ್ತು.

ಸಾರ್ಥಕ್ ಸಿದ್ಧಾಂತ್ ಸಿಬಿಎಸ್‌ಸಿಯ ಖರೀದಿ ನಿಯಮಗಳ ಉಲ್ಲಂಘನೆ ಮತ್ತು ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆಯ ಕೊರತೆಯ ಬಗ್ಗೆ ಸಂಸದರ ಮುಂದೆ ದೃಢವಾದ ಪ್ರೆಸೆಂಟೇಶನ್ ನೀಡಿದ್ದಾರೆ ಎಂದು ವರದಿಯಾಗಿದೆ.

ಸಾರ್ಥಕ್ ಅವರ ಈ ಸಾಹಸ ಮತ್ತು ಧೈರ್ಯ ಪ್ರಸ್ತುತ ದೇಶದಾದ್ಯಂತ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರ ಗಮನ ಸೆಳೆದಿದ್ದು, ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸಿಬಿಎಸ್ಇ ಹೊಣೆಗಾರಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ.

ಸಾರ್ಥಕ್ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿರುವ ದಿಗ್ವಿಜಯ್ ಸಿಂಗ್, ‘ಆನ್ ಸ್ಕ್ರೀನ್ ಮಾರ್ಕಿಂಗ್ ವ್ಯವಸ್ಥೆಯಿಂದ ತೊಂದರೆ ಅನುಭವಿಸಿರುವುದಾಗಿ ಹೇಳಿರುವ ಸಾರ್ಥಕ್ ಸಿದ್ಧಾಂತ್ ಸಮಿತಿಯ ಮುಂದೆ ತನ್ನ ಅಭಿಪ್ರಾಯ ಮಂಡಿಸಿದ್ದಾರೆ. ಈ ವಿಷಯದ ಬಗ್ಗೆ ಸಿಬಿಎಸ್‌ಸಿಯ ಪ್ರತಿಕ್ರಿಯೆಯನ್ನೂ ನಾವು ನಿರೀಕ್ಷಿಸುತ್ತಿದ್ದೇವೆ. ಸಿಬಿಎಸ್‌ಸಿ ನೀಡುವ ಉತ್ತರದ ಆಧಾರದಲ್ಲಿ ಸಮಿತಿಯು ಮುಂದಿನ ನಿರ್ಧಾರ ಕೈಗೊಳ್ಳಲಿದೆ’ ಎಂದು ಹೇಳಿದ್ದಾರೆ.

ಲೋಕಸಭೆಯ 21 ಸದಸ್ಯರು ಹಾಗೂ ರಾಜ್ಯಸಭೆಯ 10 ಸದಸ್ಯರನ್ನು ಒಳಗೊಂಡಿರುವ ಈ ಸಂಸದೀಯ ಸ್ಥಾಯಿ ಸಮಿತಿಯ ನೇತೃತ್ವವನ್ನು ದಿಗ್ವಿಜಯ್ ಸಿಂಗ್ ವಹಿಸಿದ್ದಾರೆ. ಸಿಬಿಎಸ್‌ಸಿಯ ಆನ್ ಸ್ಕ್ರೀನ್ ಮಾರ್ಕಿಂಗ್ ಪೋರ್ಟಲ್ ಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ 9 ಮತ್ತು 10ನೇ ತರಗತಿಗಳಲ್ಲಿ ತ್ರಿಭಾಷಾ ಸೂತ್ರದ ಅನುಷ್ಠಾನದ ಕುರಿತು ವ್ಯಕ್ತವಾಗಿರುವ ಕಳವಳಗಳನ್ನೂ ಸಮಿತಿ ಪರಿಶೀಲಿಸುತ್ತಿದೆ.

ಪ್ರಸ್ತುತ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬಿಎಸ್‌ಸಿ ಅಧ್ಯಕ್ಷರ ಅಭಿಪ್ರಾಯಗಳನ್ನೂ ಸಮಿತಿ ಆಲಿಸಿದೆ ಎಂದು ವರದಿಗಳು ತಿಳಿಸಿವೆ.

ಸಂಸದೀಯ ಸಮಿತಿಯ ಮುಂದೆ ಸಾಕ್ಷ್ಯಾಧಾರ ಅಥವಾ ಅಗತ್ಯ ಮಾಹಿತಿಯನ್ನು ಸಲ್ಲಿಸಲು ಯಾವುದೇ ಅಧಿಕಾರಿ ವಿಫಲರಾದರೆ ಅಥವಾ ಸಮಿತಿಯ ಕಾರ್ಯಕ್ಕೆ ಸಹಕರಿಸದಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಲೋಕಸಭೆಯ ಹಕ್ಕುಚ್ಯುತಿ ನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅವಕಾಶವಿದೆ.

ಏನಿದು ಆನ್-ಸ್ಕ್ರೀನ್ ಮಾರ್ಕಿಂಗ್ ?

ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಎನ್ನುವುದು ವಿದ್ಯಾರ್ಥಿಗಳ ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಕಂಪ್ಯೂಟರ್ ಸ್ಕ್ರೀನ್ (ತೆರೆ) ಮೇಲೆಯೇ ಡಿಜಿಟಲ್ ಆಗಿ ಮೌಲ್ಯಮಾಪನ ಮಾಡುವ ಒಂದು ಆಧುನಿಕ ತಂತ್ರಜ್ಞಾನ ವ್ಯವಸ್ಥೆಯಾಗಿದೆ.

ಸಿಬಿಎಸ್ಇ ಸೇರಿದಂತೆ ಪ್ರಮುಖ ಪರೀಕ್ಷಾ ಮಂಡಳಿಗಳು ಮೌಲ್ಯಮಾಪನ ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಪಾರದರ್ಶಕತೆ ತರಲು ಈ ವ್ಯವಸ್ಥೆಯನ್ನು ಬಳಸುತ್ತಿವೆ.

ವಿದ್ಯಾರ್ಥಿಗಳು ಬರೆದ ಭೌತಿಕ ಉತ್ತರ ಪತ್ರಿಕೆಗಳನ್ನು ಮೊದಲು ಹೈ-ಸ್ಪೀಡ್ ಸ್ಕ್ಯಾನರ್‌ಗಳ ಮೂಲಕ ಡಿಜಿಟಲ್ ಪ್ರತಿಗಳಾಗಿ (PDF/Image) ಪರಿವರ್ತಿಸಲಾಗುತ್ತದೆ.

ಸ್ಕ್ಯಾನ್ ಮಾಡಿದ ಈ ಪ್ರತಿಗಳನ್ನು ಅತ್ಯಂತ ಸುರಕ್ಷಿತವಾದ ಕೇಂದ್ರೀಕೃತ ಸರ್ವರ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಮೌಲ್ಯಮಾಪಕರು (ಶಿಕ್ಷಕರು) ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್ ಪರದೆಯ ಮೇಲೆ ಉತ್ತರ ಪತ್ರಿಕೆಗಳನ್ನು ನೋಡಿ, ಡಿಜಿಟಲ್ ಪೆನ್ ಅಥವಾ ಮೌಸ್ ಬಳಸಿ ತಪ್ಪು-ಒಪ್ಪುಗಳನ್ನು ಗುರುತಿಸುತ್ತಾರೆ.

ಪ್ರತಿ ಪ್ರಶ್ನೆಗೆ ಬರುವ ಅಂಕಗಳನ್ನು ಸಾಫ್ಟ್‌ವೇರ್‌ನಲ್ಲೇ ನೇರವಾಗಿ ನಮೂದಿಸಲಾಗುತ್ತದೆ. ಸಿಸ್ಟಮ್ ಸ್ವಯಂಚಾಲಿತವಾಗಿ ಒಟ್ಟು ಅಂಕಗಳನ್ನು ಲೆಕ್ಕ ಹಾಕುತ್ತದೆ.

ಮೌಲ್ಯಮಾಪನ ಮುಗಿದ ತಕ್ಷಣ ಅಂಕಗಳು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಆಗುವುದರಿಂದ ಫಲಿತಾಂಶ ಬೇಗ ಸಿಗುತ್ತದೆ. ಕಂಪ್ಯೂಟರ್ ತಾನಾಗಿಯೇ ಒಟ್ಟು ಅಂಕಗಳನ್ನು ಕೂಡುವುದರಿಂದ ಶಿಕ್ಷಕರು ಮಾಡುವ ಗಣಿತದ ತಪ್ಪುಗಳು ಇಲ್ಲಿ ಇರುವುದಿಲ್ಲ ಎನ್ನಲಾಗುತ್ತದೆ.

ಸಾಫ್ಟ್‌ವೇರ್‌ನಲ್ಲಿ ಎಲ್ಲ ಪ್ರಶ್ನೆಗಳಿಗೂ ಅಂಕ ನೀಡುವವರೆಗೂ ಸಬ್ಮಿಟ್ ಮಾಡಲು ಸಾಧ್ಯವಾಗದ ಕಾರಣ, ಯಾವುದೇ ಉತ್ತರ ಮೌಲ್ಯಮಾಪನವಾಗದೆ ಬಿಟ್ಟುಹೋಗುವ ಸಾಧ್ಯತೆ ಇರುವುದಿಲ್ಲ. ಭೌತಿಕ ಉತ್ತರ ಪತ್ರಿಕೆಗಳು ಕಳೆದುಹೋಗುವ ಅಥವಾ ಹಾನಿಯಾಗುವ ಭಯ ಇರುವುದಿಲ್ಲ.

ಸಾರ್ಥಕ್ ಸಿದ್ಧಾಂತ್ ಪ್ರಕರಣದಲ್ಲಿ ಉಂಟಾದ ಸಮಸ್ಯೆಗಳೇನು?

ಒಎಸ್‌ಎಂ ತಂತ್ರಜ್ಞಾನ ಒಳ್ಳೆಯದೇ ಆದರೂ, ಸಿಬಿಎಸ್ಇ ಬಳಸಿದ ವೆಂಡರ್ ಸಾಫ್ಟ್‌ವೇರ್‌ನಲ್ಲಿ ಗಂಭೀರ ಲೋಪಗಳಿದ್ದವು ಎಂದು ಸಾರ್ಥಕ್ ಆರೋಪಿಸಿದ್ದಾರೆ.

ಪೇಪರ್‌ಗಳನ್ನು ಸರಿಯಾಗಿ ಸ್ಕ್ಯಾನ್ ಮಾಡದ ಕಾರಣ ಶಿಕ್ಷಕರಿಗೆ ಉತ್ತರಗಳು ಸ್ಪಷ್ಟವಾಗಿ ಕಾಣಿಸದೆ ತಪ್ಪು ಮೌಲ್ಯಮಾಪನವಾಗಿದೆ. ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಿದಾಗ ಅವರಿಗೆ ಅಪೂರ್ಣ ಮತ್ತು ಕತ್ತರಿಸಿದ ಡಿಜಿಟಲ್ ಪ್ರತಿಗಳು ಸಿಕ್ಕಿವೆ. ಸಾಫ್ಟ್‌ವೇರ್ ಸರ್ವರ್‌ಗಳು ಸರಿಯಾಗಿ ಕೆಲಸ ಮಾಡದೆ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂದು ಸಾರ್ಥಕ್ ಹೇಳಿದ್ದಾರೆ.
















 

 

 

 

 

  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...