HomeಮುಖಪುಟCBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

- Advertisement -
- Advertisement -

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ ಮಂಗಳವಾರ (ಜೂ.3) ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಖುದ್ದು ಹಾಜರಾಗಿದ್ದಾರೆ.

ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಆಗಿ ಮೌಲ್ಯಮಾಪನ ಮಾಡಲು ಈ ವರ್ಷ ಹೊಸ ವ್ಯವಸ್ಥೆಯನ್ನು ಪರಿಚಯಿಸಿತ್ತು. ಈ ವ್ಯವಸ್ಥೆಯ ಜಾರಿಯ ನಂತರ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಮೌಲ್ಯಮಾಪನ ದೋಷಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಜಾರ್ಖಂಡ್‌ನ ರಾಂಚಿಯ ನಿವಾಸಿಯಾದ ಸಾರ್ಥಕ್ ಸಿದ್ಧಾಂತ್, ತನಗೂ ಕೂಡ ಮರುಮೌಲ್ಯಮಾಪನದ ವೇಳೆ ಮಸುಕಾದ ಮತ್ತು ಅಪೂರ್ಣವಾದ ಡಿಜಿಟಲ್ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಗಳು ಸಿಕ್ಕಾಗ ಅದರ ಬೆನ್ನು ಬಿದ್ದಿದ್ದರು.

ನೂರಾರು ಅಧಿಕೃತ ಪ್ರೊಕ್ಯೂರ್‌ಮೆಂಟ್ ದಾಖಲೆಗಳು ಮತ್ತು ಟೆಂಡರ್ ಪತ್ರಗಳನ್ನು ಪರಿಶೀಲಿಸಿದ ಸಾರ್ಥಕ್, ಸಿಬಿಎಸ್ಇ ಮೂರು ಹಂತಗಳಲ್ಲಿ ಟೆಂಡರ್ ನಿಯಮಗಳನ್ನು ಹೇಗೆ ಬದಲಾಯಿಸಿದೆ ಎಂಬುದನ್ನು ಪತ್ತೆಹಚ್ಚಿ ತನ್ನ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದರು.

ಹೈದರಾಬಾದ್ ಮೂಲದ ‘ಕೋಯೆಂಪ್ಟ್ ಎಜು ಟೆಕ್’ ಎಂಬ ಖಾಸಗಿ ವೆಂಡರ್ ಸಂಸ್ಥೆಗೆ ಲಾಭ ಮಾಡಿಕೊಡಲು ಸಿಬಿಎಸ್ಇ ಅರ್ಹತಾ ಮಾನದಂಡಗಳು ಮತ್ತು ತಾಂತ್ರಿಕ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಸಾರ್ಥಕ್ ಕನಿಷ್ಠ 15ಕ್ಕೂ ಹೆಚ್ಚು ಲೋಪದೋಷಗಳನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರು.

ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ನೇತೃತ್ವದ ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿತ್ತು.

ಸಾರ್ಥಕ್ ಸಿದ್ಧಾಂತ್ ಸಿಬಿಎಸ್‌ಸಿಯ ಖರೀದಿ ನಿಯಮಗಳ ಉಲ್ಲಂಘನೆ ಮತ್ತು ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆಯ ಕೊರತೆಯ ಬಗ್ಗೆ ಸಂಸದರ ಮುಂದೆ ದೃಢವಾದ ಪ್ರೆಸೆಂಟೇಶನ್ ನೀಡಿದ್ದಾರೆ ಎಂದು ವರದಿಯಾಗಿದೆ.

ಸಾರ್ಥಕ್ ಅವರ ಈ ಸಾಹಸ ಮತ್ತು ಧೈರ್ಯ ಪ್ರಸ್ತುತ ದೇಶದಾದ್ಯಂತ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರ ಗಮನ ಸೆಳೆದಿದ್ದು, ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸಿಬಿಎಸ್ಇ ಹೊಣೆಗಾರಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ.

ಸಾರ್ಥಕ್ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿರುವ ದಿಗ್ವಿಜಯ್ ಸಿಂಗ್, ‘ಆನ್ ಸ್ಕ್ರೀನ್ ಮಾರ್ಕಿಂಗ್ ವ್ಯವಸ್ಥೆಯಿಂದ ತೊಂದರೆ ಅನುಭವಿಸಿರುವುದಾಗಿ ಹೇಳಿರುವ ಸಾರ್ಥಕ್ ಸಿದ್ಧಾಂತ್ ಸಮಿತಿಯ ಮುಂದೆ ತನ್ನ ಅಭಿಪ್ರಾಯ ಮಂಡಿಸಿದ್ದಾರೆ. ಈ ವಿಷಯದ ಬಗ್ಗೆ ಸಿಬಿಎಸ್‌ಸಿಯ ಪ್ರತಿಕ್ರಿಯೆಯನ್ನೂ ನಾವು ನಿರೀಕ್ಷಿಸುತ್ತಿದ್ದೇವೆ. ಸಿಬಿಎಸ್‌ಸಿ ನೀಡುವ ಉತ್ತರದ ಆಧಾರದಲ್ಲಿ ಸಮಿತಿಯು ಮುಂದಿನ ನಿರ್ಧಾರ ಕೈಗೊಳ್ಳಲಿದೆ’ ಎಂದು ಹೇಳಿದ್ದಾರೆ.

ಲೋಕಸಭೆಯ 21 ಸದಸ್ಯರು ಹಾಗೂ ರಾಜ್ಯಸಭೆಯ 10 ಸದಸ್ಯರನ್ನು ಒಳಗೊಂಡಿರುವ ಈ ಸಂಸದೀಯ ಸ್ಥಾಯಿ ಸಮಿತಿಯ ನೇತೃತ್ವವನ್ನು ದಿಗ್ವಿಜಯ್ ಸಿಂಗ್ ವಹಿಸಿದ್ದಾರೆ. ಸಿಬಿಎಸ್‌ಸಿಯ ಆನ್ ಸ್ಕ್ರೀನ್ ಮಾರ್ಕಿಂಗ್ ಪೋರ್ಟಲ್ ಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ 9 ಮತ್ತು 10ನೇ ತರಗತಿಗಳಲ್ಲಿ ತ್ರಿಭಾಷಾ ಸೂತ್ರದ ಅನುಷ್ಠಾನದ ಕುರಿತು ವ್ಯಕ್ತವಾಗಿರುವ ಕಳವಳಗಳನ್ನೂ ಸಮಿತಿ ಪರಿಶೀಲಿಸುತ್ತಿದೆ.

ಪ್ರಸ್ತುತ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬಿಎಸ್‌ಸಿ ಅಧ್ಯಕ್ಷರ ಅಭಿಪ್ರಾಯಗಳನ್ನೂ ಸಮಿತಿ ಆಲಿಸಿದೆ ಎಂದು ವರದಿಗಳು ತಿಳಿಸಿವೆ.

ಸಂಸದೀಯ ಸಮಿತಿಯ ಮುಂದೆ ಸಾಕ್ಷ್ಯಾಧಾರ ಅಥವಾ ಅಗತ್ಯ ಮಾಹಿತಿಯನ್ನು ಸಲ್ಲಿಸಲು ಯಾವುದೇ ಅಧಿಕಾರಿ ವಿಫಲರಾದರೆ ಅಥವಾ ಸಮಿತಿಯ ಕಾರ್ಯಕ್ಕೆ ಸಹಕರಿಸದಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಲೋಕಸಭೆಯ ಹಕ್ಕುಚ್ಯುತಿ ನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅವಕಾಶವಿದೆ.

ಏನಿದು ಆನ್-ಸ್ಕ್ರೀನ್ ಮಾರ್ಕಿಂಗ್ ?

ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಎನ್ನುವುದು ವಿದ್ಯಾರ್ಥಿಗಳ ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಕಂಪ್ಯೂಟರ್ ಸ್ಕ್ರೀನ್ (ತೆರೆ) ಮೇಲೆಯೇ ಡಿಜಿಟಲ್ ಆಗಿ ಮೌಲ್ಯಮಾಪನ ಮಾಡುವ ಒಂದು ಆಧುನಿಕ ತಂತ್ರಜ್ಞಾನ ವ್ಯವಸ್ಥೆಯಾಗಿದೆ.

ಸಿಬಿಎಸ್ಇ ಸೇರಿದಂತೆ ಪ್ರಮುಖ ಪರೀಕ್ಷಾ ಮಂಡಳಿಗಳು ಮೌಲ್ಯಮಾಪನ ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಪಾರದರ್ಶಕತೆ ತರಲು ಈ ವ್ಯವಸ್ಥೆಯನ್ನು ಬಳಸುತ್ತಿವೆ.

ವಿದ್ಯಾರ್ಥಿಗಳು ಬರೆದ ಭೌತಿಕ ಉತ್ತರ ಪತ್ರಿಕೆಗಳನ್ನು ಮೊದಲು ಹೈ-ಸ್ಪೀಡ್ ಸ್ಕ್ಯಾನರ್‌ಗಳ ಮೂಲಕ ಡಿಜಿಟಲ್ ಪ್ರತಿಗಳಾಗಿ (PDF/Image) ಪರಿವರ್ತಿಸಲಾಗುತ್ತದೆ.

ಸ್ಕ್ಯಾನ್ ಮಾಡಿದ ಈ ಪ್ರತಿಗಳನ್ನು ಅತ್ಯಂತ ಸುರಕ್ಷಿತವಾದ ಕೇಂದ್ರೀಕೃತ ಸರ್ವರ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಮೌಲ್ಯಮಾಪಕರು (ಶಿಕ್ಷಕರು) ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್ ಪರದೆಯ ಮೇಲೆ ಉತ್ತರ ಪತ್ರಿಕೆಗಳನ್ನು ನೋಡಿ, ಡಿಜಿಟಲ್ ಪೆನ್ ಅಥವಾ ಮೌಸ್ ಬಳಸಿ ತಪ್ಪು-ಒಪ್ಪುಗಳನ್ನು ಗುರುತಿಸುತ್ತಾರೆ.

ಪ್ರತಿ ಪ್ರಶ್ನೆಗೆ ಬರುವ ಅಂಕಗಳನ್ನು ಸಾಫ್ಟ್‌ವೇರ್‌ನಲ್ಲೇ ನೇರವಾಗಿ ನಮೂದಿಸಲಾಗುತ್ತದೆ. ಸಿಸ್ಟಮ್ ಸ್ವಯಂಚಾಲಿತವಾಗಿ ಒಟ್ಟು ಅಂಕಗಳನ್ನು ಲೆಕ್ಕ ಹಾಕುತ್ತದೆ.

ಮೌಲ್ಯಮಾಪನ ಮುಗಿದ ತಕ್ಷಣ ಅಂಕಗಳು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಆಗುವುದರಿಂದ ಫಲಿತಾಂಶ ಬೇಗ ಸಿಗುತ್ತದೆ. ಕಂಪ್ಯೂಟರ್ ತಾನಾಗಿಯೇ ಒಟ್ಟು ಅಂಕಗಳನ್ನು ಕೂಡುವುದರಿಂದ ಶಿಕ್ಷಕರು ಮಾಡುವ ಗಣಿತದ ತಪ್ಪುಗಳು ಇಲ್ಲಿ ಇರುವುದಿಲ್ಲ ಎನ್ನಲಾಗುತ್ತದೆ.

ಸಾಫ್ಟ್‌ವೇರ್‌ನಲ್ಲಿ ಎಲ್ಲ ಪ್ರಶ್ನೆಗಳಿಗೂ ಅಂಕ ನೀಡುವವರೆಗೂ ಸಬ್ಮಿಟ್ ಮಾಡಲು ಸಾಧ್ಯವಾಗದ ಕಾರಣ, ಯಾವುದೇ ಉತ್ತರ ಮೌಲ್ಯಮಾಪನವಾಗದೆ ಬಿಟ್ಟುಹೋಗುವ ಸಾಧ್ಯತೆ ಇರುವುದಿಲ್ಲ. ಭೌತಿಕ ಉತ್ತರ ಪತ್ರಿಕೆಗಳು ಕಳೆದುಹೋಗುವ ಅಥವಾ ಹಾನಿಯಾಗುವ ಭಯ ಇರುವುದಿಲ್ಲ.

ಸಾರ್ಥಕ್ ಸಿದ್ಧಾಂತ್ ಪ್ರಕರಣದಲ್ಲಿ ಉಂಟಾದ ಸಮಸ್ಯೆಗಳೇನು?

ಒಎಸ್‌ಎಂ ತಂತ್ರಜ್ಞಾನ ಒಳ್ಳೆಯದೇ ಆದರೂ, ಸಿಬಿಎಸ್ಇ ಬಳಸಿದ ವೆಂಡರ್ ಸಾಫ್ಟ್‌ವೇರ್‌ನಲ್ಲಿ ಗಂಭೀರ ಲೋಪಗಳಿದ್ದವು ಎಂದು ಸಾರ್ಥಕ್ ಆರೋಪಿಸಿದ್ದಾರೆ.

ಪೇಪರ್‌ಗಳನ್ನು ಸರಿಯಾಗಿ ಸ್ಕ್ಯಾನ್ ಮಾಡದ ಕಾರಣ ಶಿಕ್ಷಕರಿಗೆ ಉತ್ತರಗಳು ಸ್ಪಷ್ಟವಾಗಿ ಕಾಣಿಸದೆ ತಪ್ಪು ಮೌಲ್ಯಮಾಪನವಾಗಿದೆ. ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಿದಾಗ ಅವರಿಗೆ ಅಪೂರ್ಣ ಮತ್ತು ಕತ್ತರಿಸಿದ ಡಿಜಿಟಲ್ ಪ್ರತಿಗಳು ಸಿಕ್ಕಿವೆ. ಸಾಫ್ಟ್‌ವೇರ್ ಸರ್ವರ್‌ಗಳು ಸರಿಯಾಗಿ ಕೆಲಸ ಮಾಡದೆ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂದು ಸಾರ್ಥಕ್ ಹೇಳಿದ್ದಾರೆ.
















 

 

 

 

 

  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...