HomeಮುಖಪುಟCBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

- Advertisement -
- Advertisement -

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ ಮಂಗಳವಾರ (ಜೂ.3) ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಖುದ್ದು ಹಾಜರಾಗಿದ್ದಾರೆ.

ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಆಗಿ ಮೌಲ್ಯಮಾಪನ ಮಾಡಲು ಈ ವರ್ಷ ಹೊಸ ವ್ಯವಸ್ಥೆಯನ್ನು ಪರಿಚಯಿಸಿತ್ತು. ಈ ವ್ಯವಸ್ಥೆಯ ಜಾರಿಯ ನಂತರ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಮೌಲ್ಯಮಾಪನ ದೋಷಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಜಾರ್ಖಂಡ್‌ನ ರಾಂಚಿಯ ನಿವಾಸಿಯಾದ ಸಾರ್ಥಕ್ ಸಿದ್ಧಾಂತ್, ತನಗೂ ಕೂಡ ಮರುಮೌಲ್ಯಮಾಪನದ ವೇಳೆ ಮಸುಕಾದ ಮತ್ತು ಅಪೂರ್ಣವಾದ ಡಿಜಿಟಲ್ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಗಳು ಸಿಕ್ಕಾಗ ಅದರ ಬೆನ್ನು ಬಿದ್ದಿದ್ದರು.

ನೂರಾರು ಅಧಿಕೃತ ಪ್ರೊಕ್ಯೂರ್‌ಮೆಂಟ್ ದಾಖಲೆಗಳು ಮತ್ತು ಟೆಂಡರ್ ಪತ್ರಗಳನ್ನು ಪರಿಶೀಲಿಸಿದ ಸಾರ್ಥಕ್, ಸಿಬಿಎಸ್ಇ ಮೂರು ಹಂತಗಳಲ್ಲಿ ಟೆಂಡರ್ ನಿಯಮಗಳನ್ನು ಹೇಗೆ ಬದಲಾಯಿಸಿದೆ ಎಂಬುದನ್ನು ಪತ್ತೆಹಚ್ಚಿ ತನ್ನ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದರು.

ಹೈದರಾಬಾದ್ ಮೂಲದ ‘ಕೋಯೆಂಪ್ಟ್ ಎಜು ಟೆಕ್’ ಎಂಬ ಖಾಸಗಿ ವೆಂಡರ್ ಸಂಸ್ಥೆಗೆ ಲಾಭ ಮಾಡಿಕೊಡಲು ಸಿಬಿಎಸ್ಇ ಅರ್ಹತಾ ಮಾನದಂಡಗಳು ಮತ್ತು ತಾಂತ್ರಿಕ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಸಾರ್ಥಕ್ ಕನಿಷ್ಠ 15ಕ್ಕೂ ಹೆಚ್ಚು ಲೋಪದೋಷಗಳನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರು.

ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ನೇತೃತ್ವದ ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿತ್ತು.

ಸಾರ್ಥಕ್ ಸಿದ್ಧಾಂತ್ ಸಿಬಿಎಸ್‌ಸಿಯ ಖರೀದಿ ನಿಯಮಗಳ ಉಲ್ಲಂಘನೆ ಮತ್ತು ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆಯ ಕೊರತೆಯ ಬಗ್ಗೆ ಸಂಸದರ ಮುಂದೆ ದೃಢವಾದ ಪ್ರೆಸೆಂಟೇಶನ್ ನೀಡಿದ್ದಾರೆ ಎಂದು ವರದಿಯಾಗಿದೆ.

ಸಾರ್ಥಕ್ ಅವರ ಈ ಸಾಹಸ ಮತ್ತು ಧೈರ್ಯ ಪ್ರಸ್ತುತ ದೇಶದಾದ್ಯಂತ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರ ಗಮನ ಸೆಳೆದಿದ್ದು, ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸಿಬಿಎಸ್ಇ ಹೊಣೆಗಾರಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ.

ಸಾರ್ಥಕ್ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿರುವ ದಿಗ್ವಿಜಯ್ ಸಿಂಗ್, ‘ಆನ್ ಸ್ಕ್ರೀನ್ ಮಾರ್ಕಿಂಗ್ ವ್ಯವಸ್ಥೆಯಿಂದ ತೊಂದರೆ ಅನುಭವಿಸಿರುವುದಾಗಿ ಹೇಳಿರುವ ಸಾರ್ಥಕ್ ಸಿದ್ಧಾಂತ್ ಸಮಿತಿಯ ಮುಂದೆ ತನ್ನ ಅಭಿಪ್ರಾಯ ಮಂಡಿಸಿದ್ದಾರೆ. ಈ ವಿಷಯದ ಬಗ್ಗೆ ಸಿಬಿಎಸ್‌ಸಿಯ ಪ್ರತಿಕ್ರಿಯೆಯನ್ನೂ ನಾವು ನಿರೀಕ್ಷಿಸುತ್ತಿದ್ದೇವೆ. ಸಿಬಿಎಸ್‌ಸಿ ನೀಡುವ ಉತ್ತರದ ಆಧಾರದಲ್ಲಿ ಸಮಿತಿಯು ಮುಂದಿನ ನಿರ್ಧಾರ ಕೈಗೊಳ್ಳಲಿದೆ’ ಎಂದು ಹೇಳಿದ್ದಾರೆ.

ಲೋಕಸಭೆಯ 21 ಸದಸ್ಯರು ಹಾಗೂ ರಾಜ್ಯಸಭೆಯ 10 ಸದಸ್ಯರನ್ನು ಒಳಗೊಂಡಿರುವ ಈ ಸಂಸದೀಯ ಸ್ಥಾಯಿ ಸಮಿತಿಯ ನೇತೃತ್ವವನ್ನು ದಿಗ್ವಿಜಯ್ ಸಿಂಗ್ ವಹಿಸಿದ್ದಾರೆ. ಸಿಬಿಎಸ್‌ಸಿಯ ಆನ್ ಸ್ಕ್ರೀನ್ ಮಾರ್ಕಿಂಗ್ ಪೋರ್ಟಲ್ ಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ 9 ಮತ್ತು 10ನೇ ತರಗತಿಗಳಲ್ಲಿ ತ್ರಿಭಾಷಾ ಸೂತ್ರದ ಅನುಷ್ಠಾನದ ಕುರಿತು ವ್ಯಕ್ತವಾಗಿರುವ ಕಳವಳಗಳನ್ನೂ ಸಮಿತಿ ಪರಿಶೀಲಿಸುತ್ತಿದೆ.

ಪ್ರಸ್ತುತ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬಿಎಸ್‌ಸಿ ಅಧ್ಯಕ್ಷರ ಅಭಿಪ್ರಾಯಗಳನ್ನೂ ಸಮಿತಿ ಆಲಿಸಿದೆ ಎಂದು ವರದಿಗಳು ತಿಳಿಸಿವೆ.

ಸಂಸದೀಯ ಸಮಿತಿಯ ಮುಂದೆ ಸಾಕ್ಷ್ಯಾಧಾರ ಅಥವಾ ಅಗತ್ಯ ಮಾಹಿತಿಯನ್ನು ಸಲ್ಲಿಸಲು ಯಾವುದೇ ಅಧಿಕಾರಿ ವಿಫಲರಾದರೆ ಅಥವಾ ಸಮಿತಿಯ ಕಾರ್ಯಕ್ಕೆ ಸಹಕರಿಸದಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಲೋಕಸಭೆಯ ಹಕ್ಕುಚ್ಯುತಿ ನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅವಕಾಶವಿದೆ.

ಏನಿದು ಆನ್-ಸ್ಕ್ರೀನ್ ಮಾರ್ಕಿಂಗ್ ?

ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಎನ್ನುವುದು ವಿದ್ಯಾರ್ಥಿಗಳ ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಕಂಪ್ಯೂಟರ್ ಸ್ಕ್ರೀನ್ (ತೆರೆ) ಮೇಲೆಯೇ ಡಿಜಿಟಲ್ ಆಗಿ ಮೌಲ್ಯಮಾಪನ ಮಾಡುವ ಒಂದು ಆಧುನಿಕ ತಂತ್ರಜ್ಞಾನ ವ್ಯವಸ್ಥೆಯಾಗಿದೆ.

ಸಿಬಿಎಸ್ಇ ಸೇರಿದಂತೆ ಪ್ರಮುಖ ಪರೀಕ್ಷಾ ಮಂಡಳಿಗಳು ಮೌಲ್ಯಮಾಪನ ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಪಾರದರ್ಶಕತೆ ತರಲು ಈ ವ್ಯವಸ್ಥೆಯನ್ನು ಬಳಸುತ್ತಿವೆ.

ವಿದ್ಯಾರ್ಥಿಗಳು ಬರೆದ ಭೌತಿಕ ಉತ್ತರ ಪತ್ರಿಕೆಗಳನ್ನು ಮೊದಲು ಹೈ-ಸ್ಪೀಡ್ ಸ್ಕ್ಯಾನರ್‌ಗಳ ಮೂಲಕ ಡಿಜಿಟಲ್ ಪ್ರತಿಗಳಾಗಿ (PDF/Image) ಪರಿವರ್ತಿಸಲಾಗುತ್ತದೆ.

ಸ್ಕ್ಯಾನ್ ಮಾಡಿದ ಈ ಪ್ರತಿಗಳನ್ನು ಅತ್ಯಂತ ಸುರಕ್ಷಿತವಾದ ಕೇಂದ್ರೀಕೃತ ಸರ್ವರ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಮೌಲ್ಯಮಾಪಕರು (ಶಿಕ್ಷಕರು) ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್ ಪರದೆಯ ಮೇಲೆ ಉತ್ತರ ಪತ್ರಿಕೆಗಳನ್ನು ನೋಡಿ, ಡಿಜಿಟಲ್ ಪೆನ್ ಅಥವಾ ಮೌಸ್ ಬಳಸಿ ತಪ್ಪು-ಒಪ್ಪುಗಳನ್ನು ಗುರುತಿಸುತ್ತಾರೆ.

ಪ್ರತಿ ಪ್ರಶ್ನೆಗೆ ಬರುವ ಅಂಕಗಳನ್ನು ಸಾಫ್ಟ್‌ವೇರ್‌ನಲ್ಲೇ ನೇರವಾಗಿ ನಮೂದಿಸಲಾಗುತ್ತದೆ. ಸಿಸ್ಟಮ್ ಸ್ವಯಂಚಾಲಿತವಾಗಿ ಒಟ್ಟು ಅಂಕಗಳನ್ನು ಲೆಕ್ಕ ಹಾಕುತ್ತದೆ.

ಮೌಲ್ಯಮಾಪನ ಮುಗಿದ ತಕ್ಷಣ ಅಂಕಗಳು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಆಗುವುದರಿಂದ ಫಲಿತಾಂಶ ಬೇಗ ಸಿಗುತ್ತದೆ. ಕಂಪ್ಯೂಟರ್ ತಾನಾಗಿಯೇ ಒಟ್ಟು ಅಂಕಗಳನ್ನು ಕೂಡುವುದರಿಂದ ಶಿಕ್ಷಕರು ಮಾಡುವ ಗಣಿತದ ತಪ್ಪುಗಳು ಇಲ್ಲಿ ಇರುವುದಿಲ್ಲ ಎನ್ನಲಾಗುತ್ತದೆ.

ಸಾಫ್ಟ್‌ವೇರ್‌ನಲ್ಲಿ ಎಲ್ಲ ಪ್ರಶ್ನೆಗಳಿಗೂ ಅಂಕ ನೀಡುವವರೆಗೂ ಸಬ್ಮಿಟ್ ಮಾಡಲು ಸಾಧ್ಯವಾಗದ ಕಾರಣ, ಯಾವುದೇ ಉತ್ತರ ಮೌಲ್ಯಮಾಪನವಾಗದೆ ಬಿಟ್ಟುಹೋಗುವ ಸಾಧ್ಯತೆ ಇರುವುದಿಲ್ಲ. ಭೌತಿಕ ಉತ್ತರ ಪತ್ರಿಕೆಗಳು ಕಳೆದುಹೋಗುವ ಅಥವಾ ಹಾನಿಯಾಗುವ ಭಯ ಇರುವುದಿಲ್ಲ.

ಸಾರ್ಥಕ್ ಸಿದ್ಧಾಂತ್ ಪ್ರಕರಣದಲ್ಲಿ ಉಂಟಾದ ಸಮಸ್ಯೆಗಳೇನು?

ಒಎಸ್‌ಎಂ ತಂತ್ರಜ್ಞಾನ ಒಳ್ಳೆಯದೇ ಆದರೂ, ಸಿಬಿಎಸ್ಇ ಬಳಸಿದ ವೆಂಡರ್ ಸಾಫ್ಟ್‌ವೇರ್‌ನಲ್ಲಿ ಗಂಭೀರ ಲೋಪಗಳಿದ್ದವು ಎಂದು ಸಾರ್ಥಕ್ ಆರೋಪಿಸಿದ್ದಾರೆ.

ಪೇಪರ್‌ಗಳನ್ನು ಸರಿಯಾಗಿ ಸ್ಕ್ಯಾನ್ ಮಾಡದ ಕಾರಣ ಶಿಕ್ಷಕರಿಗೆ ಉತ್ತರಗಳು ಸ್ಪಷ್ಟವಾಗಿ ಕಾಣಿಸದೆ ತಪ್ಪು ಮೌಲ್ಯಮಾಪನವಾಗಿದೆ. ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಿದಾಗ ಅವರಿಗೆ ಅಪೂರ್ಣ ಮತ್ತು ಕತ್ತರಿಸಿದ ಡಿಜಿಟಲ್ ಪ್ರತಿಗಳು ಸಿಕ್ಕಿವೆ. ಸಾಫ್ಟ್‌ವೇರ್ ಸರ್ವರ್‌ಗಳು ಸರಿಯಾಗಿ ಕೆಲಸ ಮಾಡದೆ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂದು ಸಾರ್ಥಕ್ ಹೇಳಿದ್ದಾರೆ.
















 

 

 

 

 

  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...