Homeಅಂತರಾಷ್ಟ್ರೀಯಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

- Advertisement -
- Advertisement -

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ ಸ್ಟಾರ್ ಮತ್ತು ಪ್ರೋಥೋಮ್ ಅಲೋ ವರದಿಗಳು ತಿಳಿಸಿವೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಎಂಪಿ ಹೆಚ್ಚುವರಿ ಆಯುಕ್ತ ಎಸ್.ಎನ್. ನಜ್ರುಲ್ ಇಸ್ಲಾಂ, ಶಂಕಿತರಾದ ಫೈಸಲ್ ಕರೀಮ್ ಮಸೂದ್ ಮತ್ತು ಅಲಮ್‌ಗೀರ್ ಶೇಖ್, ಸ್ಥಳೀಯ ಸಹಚರರ ಸಹಾಯದಿಂದ ಮೈಮೆನ್ಸಿಂಗ್‌ನ ಹಲುಘಾಟ್ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಹೇಳಿದ್ದಾರೆ. “ಭಾರತದ ಗಡಿ ದಾಟಿದ ನಂತರ, ಅವರನ್ನು ಮೊದಲು ಪೂರ್ತಿ ಎಂಬ ವ್ಯಕ್ತಿ ಸ್ವೀಕರಿಸಿದ್ದಾರೆ. ನಂತರ, ಟ್ಯಾಕ್ಸಿ ಚಾಲಕ ಸಾಮಿ ಅವರನ್ನು ಮೇಘಾಲಯದ ತುರಾ ನಗರಕ್ಕೆ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.

ಪೂರ್ತಿ ಮತ್ತು ಸಾಮಿ ಇಬ್ಬರನ್ನೂ ಭಾರತದ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಅನೌಪಚಾರಿಕ ವರದಿಗಳು ಪೊಲೀಸರಿಗೆ ಬಂದಿವೆ. ಆದರೆ, ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ.

ಹಾದಿ ಹತ್ಯೆಯಲ್ಲಿ ಭಾಗಿಯಾದ ಇಬ್ಬರು ಪ್ರಮುಖ ಶಂಕಿತರನ್ನು ಬಂಧಿಸಿ ಗಡಿಪಾರು ಮಾಡುವುದನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶವು ಭಾರತೀಯ ಸಂಸ್ಥೆಗಳೊಂದಿಗೆ ಔಪಚಾರಿಕ ಮತ್ತು ಅನೌಪಚಾರಿಕ ಮಾರ್ಗಗಳ ಮೂಲಕ ಸಂವಹನ ನಡೆಸುತ್ತಿದೆ ಎಂದು ವರದಿಗಳು ಹೇಳಿವೆ.

ಡಿಸೆಂಬರ್ 12ರಂದು ಢಾಕಾದಲ್ಲಿ ಮುಸುಕುಧಾರಿ ದುಷ್ಕರ್ಮಿಗಳು ಪ್ರಮುಖ ರಾಜಕೀಯ ವ್ಯಕ್ತಿ ಮತ್ತು ಭಾರತ ಮತ್ತು ಅವಾಮಿ ಲೀಗ್ ಎರಡರ ಬಗ್ಗೆಯೂ ಕಟು ಟೀಕಾಕಾರರಾಗಿದ್ದ ಉಸ್ಮಾನ್ ಹಾದಿ ಅವರ ತಲೆಗೆ ಗುಂಡು ಹಾರಿಸಿದ್ದರು. ಅವರನ್ನು ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯಲಾಗಿತ್ತು. ಆದರೆ, ಆರು ದಿನಗಳ ನಂತರ ಅವರು ಸಾವನ್ನಪ್ಪಿದರು.

ಕಳೆದ ವರ್ಷದ ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಹಿಂಸಾತ್ಮಕ ವಿದ್ಯಾರ್ಥಿ ನೇತೃತ್ವದ ಜುಲೈ ದಂಗೆಯ ನಾಯಕರಲ್ಲಿ ಹಾದಿ ಕೂಡ ಒಬ್ಬರಾಗಿದ್ದರು. ಅವರು ಸಾಯುವ ಮೊದಲು, ಇಂಕಿಲಾಬ್ ಮಂಚ್ ಎಂಬ ರಾಜಕೀಯ ವೇದಿಕೆಯನ್ನು ಪ್ರಾರಂಭಿಸಿದ್ದರು ಮತ್ತು ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದರು.

ಅವರ ಹತ್ಯೆಯು ಢಾಕಾ ಮತ್ತು ಬಾಂಗ್ಲಾದೇಶದ ಇತರ ಭಾಗಗಳಲ್ಲಿ ವ್ಯಾಪಕ ಅಶಾಂತಿಯನ್ನು ಹುಟ್ಟುಹಾಕಿತು. ಗುಂಪು ಹಿಂಸಾಚಾರವು ನಂತರ ನಡೆಯಿತು. ಇದರಲ್ಲಿ ಪ್ರೋಥೋಮ್ ಅಲೋ ಮತ್ತು ದಿ ಡೈಲಿ ಸ್ಟಾರ್ ಪತ್ರಿಕೆಗಳ ಕಚೇರಿಗಳ ಮೇಲೆ ಹಾಗೂ ಛಾಯನತ್ ಮತ್ತು ಉದಿಚಿ ಶಿಲ್ಪಿ ಗೋಷ್ಠಿಯಂತಹ ಸಾಂಸ್ಕೃತಿಕ ಸಂಸ್ಥೆಗಳ ಮೇಲೆ ನಡೆದ ದಾಳಿಗಳೂ ಸೇರಿವೆ. ಈ ಅಶಾಂತಿ ಮಧ್ಯ ಬಾಂಗ್ಲಾದೇಶಕ್ಕೂ ಹರಡಿದೆ. ಅಲ್ಲಿ ಮೈಮೆನ್‌ಸಿಂಗ್‌ನಲ್ಲಿ ಕಾರ್ಖಾನೆಯೊಂದರ ಹಿಂದೂ ಕಾರ್ಮಿಕನನ್ನು ಹತ್ಯೆ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...