Homeಮುಖಪುಟಕ್ಯಾಂಪಸ್‌ನಲ್ಲಿ ಪ್ರತಿಭಟನೆ-ಧರಣಿ ನಿರ್ಬಂಧಿಸಿದ ಉಸ್ಮಾನಿಯಾ ವಿಶ್ವವಿದ್ಯಾಲಯ

ಕ್ಯಾಂಪಸ್‌ನಲ್ಲಿ ಪ್ರತಿಭಟನೆ-ಧರಣಿ ನಿರ್ಬಂಧಿಸಿದ ಉಸ್ಮಾನಿಯಾ ವಿಶ್ವವಿದ್ಯಾಲಯ

- Advertisement -
- Advertisement -

ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯವು ತನ್ನ ವಿಭಾಗಗಳು, ಕಾಲೇಜು ಆಡಳಿತ ಕಟ್ಟಡಗಳಲ್ಲಿ ಪ್ರತಿಭಟನೆ-ಧರಣಿ ನಡೆಸುವುದನ್ನು ನಿಷೇಧಿಸಿದೆ.

ವಿಶ್ವವಿದ್ಯಾಲಯದ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ, ವಿಶ್ವವಿದ್ಯಾಲಯದ ವಿಭಾಗಗಳು/ಕಾಲೇಜುಗಳು/ಕೇಂದ್ರಗಳು/ ಆಡಳಿತ ಕಟ್ಟಡದ ಆವರಣದಲ್ಲಿ ಅತಿಕ್ರಮಣ, ಧರಣಿ ಮತ್ತು ಆಂದೋಲನಗಳನ್ನು ನಡೆಸುವುದು, ಘೋಷಣೆಗಳನ್ನು ಕೂಗುವುದು ಇತ್ಯಾದಿಗಳನ್ನು ನಿಷೇಧಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು.

ಆಡಳಿತಾತ್ಮಕ ಅಧಿಕಾರಿಗಳು, ಸಿಬ್ಬಂದಿ ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ತಡೆಯುವುದನ್ನು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಅಸಂಸದೀಯ ಭಾಷೆ ಬಳಸುವುದನ್ನು ವಿಶ್ವವಿದ್ಯಾಲಯವು ನಿಷೇಧಿಸಿದೆ.

ವಿಶ್ವವಿದ್ಯಾನಿಲಯದ ಆಂತರಿಕ ದಾಖಲೆಯ ಪ್ರಕಾರ, ವಿದ್ಯಾರ್ಥಿಗಳು/ವಿದ್ಯಾರ್ಥಿ ಗುಂಪುಗಳು ಉಸ್ಮಾನಿಯಾ ವಿಶ್ವವಿದ್ಯಾನಿಲಯದ ವಿಭಾಗಗಳು/ಕಾಲೇಜುಗಳು, ಕೇಂದ್ರಗಳು/ಆಡಳಿತ ಕಟ್ಟಡಕ್ಕೆ ನುಗ್ಗಿ ಪ್ರತಿಭಟನೆ ಮತ್ತು ಧರಣಿಗಳನ್ನು ನಡೆಸುತ್ತಿರುವ ಹಲವಾರು ಘಟನೆಗಳು ಕಂಡುಬಂದಿವೆ ಎಂದು ಹೇಳಿದ್ದಾರೆ.

ಇದರ ಪರಿಣಾಮವಾಗಿ, ಆಡಳಿತಾತ್ಮಕ ಕೆಲಸದಲ್ಲಿ ಅಡ್ಡಿ ಉಂಟಾಗುತ್ತಿದ್ದು, ಸಮಾಜಕ್ಕೆ ವಿಶ್ವವಿದ್ಯಾಲಯದ ಬಗ್ಗೆ ತಪ್ಪು ಗ್ರಹಿಕೆ ಉಂಟಾಗುತ್ತಿದೆ. ಇಂತಹ ಘಟನೆಗಳು ವಿಶ್ವವಿದ್ಯಾಲಯದ ಸುಗಮ ಕಾರ್ಯನಿರ್ವಹಣೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ, ಆಡಳಿತಾತ್ಮಕ ಮತ್ತು ಶೈಕ್ಷಣಿಕ ಪ್ರಗತಿಯಲ್ಲಿ ವಿಳಂಬಕ್ಕೆ ಕಾರಣವಾಗುತ್ತಿವೆ ಎಂದು ಹೇಳಿದ್ದಾರೆ. ಕೆಲವು ಸಂದರ್ಭಗಳಲ್ಲಿ, ಈ ಘಟನೆಗಳು ಭದ್ರತಾ ಸಮಸ್ಯೆಗಳು ಮತ್ತು ಕಳವಳಗಳನ್ನು ಹುಟ್ಟುಹಾಕಿವೆ ಎಂಬ ಕಾರಣ ನೀಡಿದ್ದಾರೆ.

ಮೇಲಿನ ಚಟುವಟಿಕೆಗಳಲ್ಲಿ ಯಾವುದೇ ವಿದ್ಯಾರ್ಥಿ ಭಾಗಿಯಾಗಿರುವುದು ಕಂಡುಬಂದರೆ, ಕಾನೂನಿನ ಪ್ರಕಾರ ಅಂತಹ ವ್ಯಕ್ತಿಯ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯವು ತಿಳಿಸಿದೆ.

ವಿಶ್ವವಿದ್ಯಾನಿಲಯ ವ್ಯವಸ್ಥೆಯಲ್ಲಿ ನಿಜವಾದ ದೂರು ಹೊಂದಿರುವ ಪಾಲುದಾರರು (ವಿದ್ಯಾರ್ಥಿಗಳು) ಮೊದಲು ಸಂಸ್ಥೆಯ ಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಯನ್ನು ಸಂಪರ್ಕಿಸಬೇಕು; ನಂತರ ಪೂರ್ವಾನುಮತಿಯೊಂದಿಗೆ ರಿಜಿಸ್ಟ್ರಾರ್ ಮತ್ತು ಅಧಿಕಾರಿಗಳಿಗೆ ದೂರು ನೀಡಬಹುದು ಎಂದು ವಿಶ್ವವಿದ್ಯಾಲಯವು ಹೇಳಿದೆ.

‘ಪಲ್ಟು ಚಾಚಾ ಕಹಾ ಹೈ..’; ಸಿಎಂ ನಿತೀಶ್ ಕುಮಾರ್ ನಿವಾಸದ ಮುಂದೆ ಹೋಳಿ ಆಚರಿಸಿದ ತೇಜ್ ಪ್ರತಾಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...