Homeಮುಖಪುಟಕ್ಯಾಂಪಸ್‌ನಲ್ಲಿ ಪ್ರತಿಭಟನೆ-ಧರಣಿ ನಿರ್ಬಂಧಿಸಿದ ಉಸ್ಮಾನಿಯಾ ವಿಶ್ವವಿದ್ಯಾಲಯ

ಕ್ಯಾಂಪಸ್‌ನಲ್ಲಿ ಪ್ರತಿಭಟನೆ-ಧರಣಿ ನಿರ್ಬಂಧಿಸಿದ ಉಸ್ಮಾನಿಯಾ ವಿಶ್ವವಿದ್ಯಾಲಯ

- Advertisement -
- Advertisement -

ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯವು ತನ್ನ ವಿಭಾಗಗಳು, ಕಾಲೇಜು ಆಡಳಿತ ಕಟ್ಟಡಗಳಲ್ಲಿ ಪ್ರತಿಭಟನೆ-ಧರಣಿ ನಡೆಸುವುದನ್ನು ನಿಷೇಧಿಸಿದೆ.

ವಿಶ್ವವಿದ್ಯಾಲಯದ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ, ವಿಶ್ವವಿದ್ಯಾಲಯದ ವಿಭಾಗಗಳು/ಕಾಲೇಜುಗಳು/ಕೇಂದ್ರಗಳು/ ಆಡಳಿತ ಕಟ್ಟಡದ ಆವರಣದಲ್ಲಿ ಅತಿಕ್ರಮಣ, ಧರಣಿ ಮತ್ತು ಆಂದೋಲನಗಳನ್ನು ನಡೆಸುವುದು, ಘೋಷಣೆಗಳನ್ನು ಕೂಗುವುದು ಇತ್ಯಾದಿಗಳನ್ನು ನಿಷೇಧಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು.

ಆಡಳಿತಾತ್ಮಕ ಅಧಿಕಾರಿಗಳು, ಸಿಬ್ಬಂದಿ ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ತಡೆಯುವುದನ್ನು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಅಸಂಸದೀಯ ಭಾಷೆ ಬಳಸುವುದನ್ನು ವಿಶ್ವವಿದ್ಯಾಲಯವು ನಿಷೇಧಿಸಿದೆ.

ವಿಶ್ವವಿದ್ಯಾನಿಲಯದ ಆಂತರಿಕ ದಾಖಲೆಯ ಪ್ರಕಾರ, ವಿದ್ಯಾರ್ಥಿಗಳು/ವಿದ್ಯಾರ್ಥಿ ಗುಂಪುಗಳು ಉಸ್ಮಾನಿಯಾ ವಿಶ್ವವಿದ್ಯಾನಿಲಯದ ವಿಭಾಗಗಳು/ಕಾಲೇಜುಗಳು, ಕೇಂದ್ರಗಳು/ಆಡಳಿತ ಕಟ್ಟಡಕ್ಕೆ ನುಗ್ಗಿ ಪ್ರತಿಭಟನೆ ಮತ್ತು ಧರಣಿಗಳನ್ನು ನಡೆಸುತ್ತಿರುವ ಹಲವಾರು ಘಟನೆಗಳು ಕಂಡುಬಂದಿವೆ ಎಂದು ಹೇಳಿದ್ದಾರೆ.

ಇದರ ಪರಿಣಾಮವಾಗಿ, ಆಡಳಿತಾತ್ಮಕ ಕೆಲಸದಲ್ಲಿ ಅಡ್ಡಿ ಉಂಟಾಗುತ್ತಿದ್ದು, ಸಮಾಜಕ್ಕೆ ವಿಶ್ವವಿದ್ಯಾಲಯದ ಬಗ್ಗೆ ತಪ್ಪು ಗ್ರಹಿಕೆ ಉಂಟಾಗುತ್ತಿದೆ. ಇಂತಹ ಘಟನೆಗಳು ವಿಶ್ವವಿದ್ಯಾಲಯದ ಸುಗಮ ಕಾರ್ಯನಿರ್ವಹಣೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ, ಆಡಳಿತಾತ್ಮಕ ಮತ್ತು ಶೈಕ್ಷಣಿಕ ಪ್ರಗತಿಯಲ್ಲಿ ವಿಳಂಬಕ್ಕೆ ಕಾರಣವಾಗುತ್ತಿವೆ ಎಂದು ಹೇಳಿದ್ದಾರೆ. ಕೆಲವು ಸಂದರ್ಭಗಳಲ್ಲಿ, ಈ ಘಟನೆಗಳು ಭದ್ರತಾ ಸಮಸ್ಯೆಗಳು ಮತ್ತು ಕಳವಳಗಳನ್ನು ಹುಟ್ಟುಹಾಕಿವೆ ಎಂಬ ಕಾರಣ ನೀಡಿದ್ದಾರೆ.

ಮೇಲಿನ ಚಟುವಟಿಕೆಗಳಲ್ಲಿ ಯಾವುದೇ ವಿದ್ಯಾರ್ಥಿ ಭಾಗಿಯಾಗಿರುವುದು ಕಂಡುಬಂದರೆ, ಕಾನೂನಿನ ಪ್ರಕಾರ ಅಂತಹ ವ್ಯಕ್ತಿಯ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯವು ತಿಳಿಸಿದೆ.

ವಿಶ್ವವಿದ್ಯಾನಿಲಯ ವ್ಯವಸ್ಥೆಯಲ್ಲಿ ನಿಜವಾದ ದೂರು ಹೊಂದಿರುವ ಪಾಲುದಾರರು (ವಿದ್ಯಾರ್ಥಿಗಳು) ಮೊದಲು ಸಂಸ್ಥೆಯ ಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಯನ್ನು ಸಂಪರ್ಕಿಸಬೇಕು; ನಂತರ ಪೂರ್ವಾನುಮತಿಯೊಂದಿಗೆ ರಿಜಿಸ್ಟ್ರಾರ್ ಮತ್ತು ಅಧಿಕಾರಿಗಳಿಗೆ ದೂರು ನೀಡಬಹುದು ಎಂದು ವಿಶ್ವವಿದ್ಯಾಲಯವು ಹೇಳಿದೆ.

‘ಪಲ್ಟು ಚಾಚಾ ಕಹಾ ಹೈ..’; ಸಿಎಂ ನಿತೀಶ್ ಕುಮಾರ್ ನಿವಾಸದ ಮುಂದೆ ಹೋಳಿ ಆಚರಿಸಿದ ತೇಜ್ ಪ್ರತಾಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...