Homeಮುಖಪುಟಬಿಹಾರದಂತೆ ದೇಶದಾದ್ಯಂತ ಜಾತಿಗಣತಿ ನಡೆಸಬೇಕು; ತೇಜಸ್ವಿ ಯಾದವ್

ಬಿಹಾರದಂತೆ ದೇಶದಾದ್ಯಂತ ಜಾತಿಗಣತಿ ನಡೆಸಬೇಕು; ತೇಜಸ್ವಿ ಯಾದವ್

- Advertisement -
- Advertisement -

ದೇಶದಾದ್ಯಂತ ಬಿಹಾರ ಮಾದರಿಯ ಜಾತಿಗಣತಿ ನಡೆಸುವಂತೆ ಕೇಂದ್ರ ಸರಕಾರಕ್ಕೆ ಆಗ್ರಹಿಸಿದ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ಜನಸಂಖ್ಯೆ ಕುರಿತ ನಿಜವಾದ ಮಾಹಿತಿ ತಿಳಿದಾಗ ಮಾತ್ರ ಸಮಾಜದ ಎಲ್ಲಾ ವರ್ಗಗಳಿಗೆ ನೀತಿಗಳನ್ನು ಸರಿಯಾಗಿ ರೂಪಿಸಲು ಸಾಧ್ಯ ಎಂದು ಹೇಳಿದ್ದಾರೆ.

ಬಿಹಾರ ಸರ್ಕಾರವು ಮಾನವೀಯ ಕಾರ್ಯವನ್ನು ಕೈಗೊಂಡು ಜಾತಿ ಗಣತಿಯನ್ನು ನಡೆಸಿದೆ. ಇತರ ರಾಜ್ಯಗಳು ಕೂಡ ಇದನ್ನು ಮಾಡಬೇಕು ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಅ.2 ರಂದು ಬಿಹಾರ ಸರ್ಕಾರವು ಜಾತಿ ಗಣತಿಯ ವರದಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಹೆಚ್ಚು ಹಿಂದುಳಿದ ವರ್ಗದ ಜನರು(ಇಬಿಸಿ), ಹಿಂದುಳಿದ ವರ್ಗದ ಜನರು (ಒಬಿಸಿಗಳು) ಮತ್ತು ಪರಿಶಿಷ್ಟ ಜಾತಿಗಳು (ಎಸ್‌ಸಿ) ಜನರು ಒಟ್ಟು ಬಿಹಾರದ ಜನಸಂಖ್ಯೆಯ 84 ಪ್ರತಿಶತದಷ್ಟು ಇದ್ದಾರೆ ಎಂದು ವರದಿ ತಿಳಿಸಿದೆ. ಈ ವರದಿಯು ಸ್ವಾತಂತ್ರ್ಯಾ ನಂತರ ಬಿಡುಗಡೆಯಾದ ಮೊದಲನೆಯ ಜಾತಿಗಣತಿ ವರದಿಯಾಗಿದೆ.

ಬಿಹಾರದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜಸ್ಥಾನದ ಕಾಂಗ್ರೆಸ್‌ ನಾಯಕ ಅಶೋಕ್ ಗೆಹ್ಲೋಟ್ ಅವರು ರಾಜಸ್ಥಾನದಲ್ಲಿ ಕಾಂಗ್ರೆಸ್‌ ಮತ್ತೆ ಗೆದ್ದು ಅಧಿಕಾರಕ್ಕೆ ಬಂದರೆ ಬಿಹಾರದ ರೀತಿ ಜಾತಿಗಣತಿ ಮಾಡುವುದಾಗಿ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಛತ್ತೀಸ್‌ಗಢ ಚುನಾವಣೆಯಲ್ಲೂ ಇದೇ ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಾತಿಗಣತಿ ವರದಿ ನವೆಂಬರ್‌ನಲ್ಲಿ ಕೈಸೇರುವ ಸಾಧ್ಯತೆ ಇದ್ದು, ಆ ಬಳಿಕ ಮುಂದಿನ ನಿರ್ಧಾರವನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ.

ಜಾತಿ ಆಧಾರಿತ ಸಮೀಕ್ಷೆಯ ಬಗ್ಗೆ ಬಿಜೆಪಿಯ ಟೀಕೆಯ ಬಗ್ಗೆ ಪ್ರತಿಕ್ರಿಯಿಸಿ ಭಾರತೀಯ ಜನತಾ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ತೇಜಸ್ವಿ ಯಾದವ್‌, ಸಮೀಕ್ಷೆ ಅಥವಾ ಸಮೀಕ್ಷೆಯ ಡೇಟಾದ ಬಗ್ಗೆ ಬಿಜೆಪಿಗೆ ಪ್ರಶ್ನೆಗಳು, ಸಂಶಯಗಳು ಇದ್ದರೆ ಯಾಕೆ ನರೇಂದ್ರ ಮೋದಿಯವರಲ್ಲಿ ರಾಷ್ಟ್ರ ಮಟ್ಟದಲ್ಲಿ ಸರ್ವೆ ಮಾಡಲು ಆಗ್ರಹಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರಾದೇಶಿಕ ಪಕ್ಷಗಳು ಶೀಘ್ರದಲ್ಲೇ ಅಂತ್ಯ ಕಾಣಲಿದೆ ಎಂದು ಹೇಳಿದ್ದಾರೆ. ಮೋದಿ ಮತ್ತು ನಡ್ಡಾ ಇಬ್ಬರೂ ಹೊರಗಿನವರು, ನಮಗಿಂತ ಬಿಹಾರದ ಬಗ್ಗೆ ಅವರು ಹೆಚ್ಚು ತಿಳಿದಿದ್ದಾರೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಬಿಜೆಪಿ-ಜೆಡಿಎಸ್‌ ಮೈತ್ರಿ: ರಾಷ್ಟ್ರೀಯ ನಾಯಕರ ನಿರ್ಧಾರವನ್ನು ತಿರಸ್ಕರಿಸಿದ ಕೇರಳ ಜೆಡಿಎಸ್‌ ಘಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...