Homeಮುಖಪುಟ'ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ': ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

‘ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಿಂದ ಬಿಡುಗಡೆಗೊಂಡಿದ್ದರೂ, ಇತರ ಪ್ರಕರಣಗಳಲ್ಲಿ ಸಿಲುಕಿಸಲ್ಪಟ್ಟಿರುವ ಹಲವರ ಭವಿಷ್ಯ ಈಗಲೂ ಅನಿಶ್ಚಿತವಾಗಿರುವುದರ ಬಗ್ಗೆ ನನಗೆ ದುಃಖವಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಾಖಾ ಹೇಳಿದ್ದಾರೆ.

ವಿಚಾರಣಾಧೀನ ಕೈದಿಗಳಾಗಿ ನಮ್ಮ ಜೀವನದ ಅಮೂಲ್ಯವಾದ ವರ್ಷಗಳನ್ನು ಕಸಿದುಕೊಳ್ಳಲಾಗಿದೆ, ಈ ವಿಚಾರಣೆಯು ಮುಕ್ತಾಯಗೊಳ್ಳಲು ಹಲವಾರು ವರ್ಷಗಳನ್ನೇ ತೆಗೆದುಕೊಳ್ಳಲಿದೆ ಎಂದು ಬಿಡುಗಡೆ ಕುರಿತು ಬರೆದ ಪತ್ರದಲ್ಲಿ ಗೌತಮ್ ನವಲಾಖಾ ಹೇಳಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಮೇ 14ರಂದು ಸುಪ್ರೀಂ ಕೋರ್ಟ್ ಗೌತಮ್ ನವಲಾಖಾಗೆ ಜಾಮೀನು ಮಂಜೂರು ಮಾಡಿದೆ. ಗೃಹಬಂಧನದ ಸಮಯದಲ್ಲಿ ಅವರ ಭದ್ರತೆಯ ವೆಚ್ಚದ 20 ಲಕ್ಷ ರೂ.ಪಾವತಿ ಷರತ್ತಿನ ಬಳಿಕ ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಗಿದೆ.

ಇದು ದೀರ್ಘ ಕಾಯುವಿಕೆಯಾಗಿತ್ತು ಮತ್ತು ಅನಿವಾರ್ಯವಾಗಿತ್ತು ಎಂದು ನವ್ಲಾಖಾ ಬರೆದಿದ್ದಾರೆ. ವಿಚಾರಣಾಧೀನ ಕೈದಿಗಳ ಕುಟುಂಬಗಳು ತಮ್ಮ ಪ್ರೀತಿಪಾತ್ರರಿಂದ ದೂರವಾಗಿ ನೋವನ್ನು ಅನುಭವಿಸುತ್ತಾರೆ ಮತ್ತು ಅವರ ಬದುಕು ಅಸ್ತವ್ಯಸ್ತಗೊಳುತ್ತದೆ. ಇದು ಅಪರೂಪಕ್ಕೆ ಒಪ್ಪಿಕೊಳ್ಳಲಾಗಿರುವ ಕಟು ವಾಸ್ತವವಾಗಿದೆ. ಪ್ರಜಾಪ್ರಭುತ್ವದ ಹಕ್ಕುಗಳ ಕಾರ್ಯಕರ್ತನಾಗಿ ನನಗೆ ನ್ಯಾಯವು ದೂರದ ಕನಸಾಗಿ ಗೋಚರಿಸುತ್ತದೆ. ಅತಿಯಾದ ಹೊರೆಯು ನ್ಯಾಯಾಂಗದ ತ್ವರಿತ, ನ್ಯಾಯೋಚಿತ ವಿಚಾರಣೆಯನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಒಂದೇ ದಿನದ ಸ್ವಾತಂತ್ರ್ಯ ಹರಣವೂ ಅತಿ ಹೆಚ್ಚು ಎಂಬ ಉದಾತ್ತ ಹೇಳಿಕೆಯನ್ನು ನ್ಯಾಯಾಂಗವು ನೀಡಬಹುದು ಎಂದು ಓರ್ವ ಕೈದಿಯಾಗಿ ನಾನು ಆಗಾಗ್ಗೆ ಆಶಿಸುತ್ತಿದ್ದೆ. ಏಕೆಂದರೆ ಇಂತಹ ಹೇಳಿಕೆ ವಿಚಾರಣಾಧೀನ ಕೈದಿಗಳಿಗೆ ಭರವಸೆಯ ಆಶಾಕಿರಣವಾಗುತ್ತಿತ್ತು ಎಂದು ಬರೆದಿದ್ದಾರೆ.

ಸ್ವತಂತ್ರವಾಗಲು ಮತ್ತು ಅಂತಿಮವಾಗಿ ನನ್ನ ಕುಟುಂಬವನ್ನು ಮತ್ತು ಆತ್ಮೀಯರನ್ನು ಭೇಟಿಯಾಗಲು ನಾನು ಸಂತೋಷಪಡುತ್ತಿರುವಾಗ, ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ನರಳುತ್ತಿದ್ದಾರೆ ಎಂಬ ದುಃಖವಿದೆ ಎಂದು ಗೌತಮ್ ನವಲಾಖಾ  ಹೇಳಿದ್ದಾರೆ.

ಜನವರಿ 2018ರಲ್ಲಿ ಪುಣೆ ಬಳಿಯ ಭೀಮಾ ಕೋರೆಗಾಂವ್‌ನಲ್ಲಿ ಜಾತಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಆರೋಪ ಹೊರಿಸಿ ಬಂಧಿಸಲಾದ 16 ಶಿಕ್ಷಣ ತಜ್ಞರು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ವಕೀಲರಲ್ಲಿ 70 ವರ್ಷದ ಗೌತಮ್ ನವಲಾಖಾ ಕೂಡ ಸೇರಿದ್ದರು.

ಗೌತಮ್ ನವಲಾಖಾ ಅವರನ್ನು 2018ರಲ್ಲಿ ಬಂಧಿಸಲಾಗಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಕಾರಣದಿಂದ ಅವರನ್ನು ಜೈಲಿನಿಂದ ಸ್ಥಳಾಂತರಿಸುವ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದ ನಂತರ ಅವರನ್ನು ನವೆಂಬರ್ 2022 ರಲ್ಲಿ ಗೃಹಬಂಧನದಲ್ಲಿ ಇರಿಸಲಾಯಿತು.

ಡಿಸೆಂಬರ್‌ನಲ್ಲಿ ಭಯೋತ್ಪಾದನಾ-ವಿರೋಧಿ ಕಾನೂನಿನಿಂದ ವ್ಯಾಖ್ಯಾನಿಸಲಾದ ಭಯೋತ್ಪಾದಕ ಕೃತ್ಯವನ್ನು ಅವರು ಎಸಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಬಾಂಬೆ ಹೈಕೋರ್ಟ್ ನವಲಾಖಾ ಅವರಿಗೆ ಜಾಮೀನು ನೀಡಿತ್ತು. ಆದರೆ, ರಾಷ್ಟ್ರೀಯ ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಜಾಮೀನು ಆದೇಶಕ್ಕೆ ತಡೆ ನೀಡಿತ್ತು.

ಇದನ್ನು ಓದಿ: ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...