Homeಮುಖಪುಟ'ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ': ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

‘ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಿಂದ ಬಿಡುಗಡೆಗೊಂಡಿದ್ದರೂ, ಇತರ ಪ್ರಕರಣಗಳಲ್ಲಿ ಸಿಲುಕಿಸಲ್ಪಟ್ಟಿರುವ ಹಲವರ ಭವಿಷ್ಯ ಈಗಲೂ ಅನಿಶ್ಚಿತವಾಗಿರುವುದರ ಬಗ್ಗೆ ನನಗೆ ದುಃಖವಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಾಖಾ ಹೇಳಿದ್ದಾರೆ.

ವಿಚಾರಣಾಧೀನ ಕೈದಿಗಳಾಗಿ ನಮ್ಮ ಜೀವನದ ಅಮೂಲ್ಯವಾದ ವರ್ಷಗಳನ್ನು ಕಸಿದುಕೊಳ್ಳಲಾಗಿದೆ, ಈ ವಿಚಾರಣೆಯು ಮುಕ್ತಾಯಗೊಳ್ಳಲು ಹಲವಾರು ವರ್ಷಗಳನ್ನೇ ತೆಗೆದುಕೊಳ್ಳಲಿದೆ ಎಂದು ಬಿಡುಗಡೆ ಕುರಿತು ಬರೆದ ಪತ್ರದಲ್ಲಿ ಗೌತಮ್ ನವಲಾಖಾ ಹೇಳಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಮೇ 14ರಂದು ಸುಪ್ರೀಂ ಕೋರ್ಟ್ ಗೌತಮ್ ನವಲಾಖಾಗೆ ಜಾಮೀನು ಮಂಜೂರು ಮಾಡಿದೆ. ಗೃಹಬಂಧನದ ಸಮಯದಲ್ಲಿ ಅವರ ಭದ್ರತೆಯ ವೆಚ್ಚದ 20 ಲಕ್ಷ ರೂ.ಪಾವತಿ ಷರತ್ತಿನ ಬಳಿಕ ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಗಿದೆ.

ಇದು ದೀರ್ಘ ಕಾಯುವಿಕೆಯಾಗಿತ್ತು ಮತ್ತು ಅನಿವಾರ್ಯವಾಗಿತ್ತು ಎಂದು ನವ್ಲಾಖಾ ಬರೆದಿದ್ದಾರೆ. ವಿಚಾರಣಾಧೀನ ಕೈದಿಗಳ ಕುಟುಂಬಗಳು ತಮ್ಮ ಪ್ರೀತಿಪಾತ್ರರಿಂದ ದೂರವಾಗಿ ನೋವನ್ನು ಅನುಭವಿಸುತ್ತಾರೆ ಮತ್ತು ಅವರ ಬದುಕು ಅಸ್ತವ್ಯಸ್ತಗೊಳುತ್ತದೆ. ಇದು ಅಪರೂಪಕ್ಕೆ ಒಪ್ಪಿಕೊಳ್ಳಲಾಗಿರುವ ಕಟು ವಾಸ್ತವವಾಗಿದೆ. ಪ್ರಜಾಪ್ರಭುತ್ವದ ಹಕ್ಕುಗಳ ಕಾರ್ಯಕರ್ತನಾಗಿ ನನಗೆ ನ್ಯಾಯವು ದೂರದ ಕನಸಾಗಿ ಗೋಚರಿಸುತ್ತದೆ. ಅತಿಯಾದ ಹೊರೆಯು ನ್ಯಾಯಾಂಗದ ತ್ವರಿತ, ನ್ಯಾಯೋಚಿತ ವಿಚಾರಣೆಯನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಒಂದೇ ದಿನದ ಸ್ವಾತಂತ್ರ್ಯ ಹರಣವೂ ಅತಿ ಹೆಚ್ಚು ಎಂಬ ಉದಾತ್ತ ಹೇಳಿಕೆಯನ್ನು ನ್ಯಾಯಾಂಗವು ನೀಡಬಹುದು ಎಂದು ಓರ್ವ ಕೈದಿಯಾಗಿ ನಾನು ಆಗಾಗ್ಗೆ ಆಶಿಸುತ್ತಿದ್ದೆ. ಏಕೆಂದರೆ ಇಂತಹ ಹೇಳಿಕೆ ವಿಚಾರಣಾಧೀನ ಕೈದಿಗಳಿಗೆ ಭರವಸೆಯ ಆಶಾಕಿರಣವಾಗುತ್ತಿತ್ತು ಎಂದು ಬರೆದಿದ್ದಾರೆ.

ಸ್ವತಂತ್ರವಾಗಲು ಮತ್ತು ಅಂತಿಮವಾಗಿ ನನ್ನ ಕುಟುಂಬವನ್ನು ಮತ್ತು ಆತ್ಮೀಯರನ್ನು ಭೇಟಿಯಾಗಲು ನಾನು ಸಂತೋಷಪಡುತ್ತಿರುವಾಗ, ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ನರಳುತ್ತಿದ್ದಾರೆ ಎಂಬ ದುಃಖವಿದೆ ಎಂದು ಗೌತಮ್ ನವಲಾಖಾ  ಹೇಳಿದ್ದಾರೆ.

ಜನವರಿ 2018ರಲ್ಲಿ ಪುಣೆ ಬಳಿಯ ಭೀಮಾ ಕೋರೆಗಾಂವ್‌ನಲ್ಲಿ ಜಾತಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಆರೋಪ ಹೊರಿಸಿ ಬಂಧಿಸಲಾದ 16 ಶಿಕ್ಷಣ ತಜ್ಞರು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ವಕೀಲರಲ್ಲಿ 70 ವರ್ಷದ ಗೌತಮ್ ನವಲಾಖಾ ಕೂಡ ಸೇರಿದ್ದರು.

ಗೌತಮ್ ನವಲಾಖಾ ಅವರನ್ನು 2018ರಲ್ಲಿ ಬಂಧಿಸಲಾಗಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಕಾರಣದಿಂದ ಅವರನ್ನು ಜೈಲಿನಿಂದ ಸ್ಥಳಾಂತರಿಸುವ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದ ನಂತರ ಅವರನ್ನು ನವೆಂಬರ್ 2022 ರಲ್ಲಿ ಗೃಹಬಂಧನದಲ್ಲಿ ಇರಿಸಲಾಯಿತು.

ಡಿಸೆಂಬರ್‌ನಲ್ಲಿ ಭಯೋತ್ಪಾದನಾ-ವಿರೋಧಿ ಕಾನೂನಿನಿಂದ ವ್ಯಾಖ್ಯಾನಿಸಲಾದ ಭಯೋತ್ಪಾದಕ ಕೃತ್ಯವನ್ನು ಅವರು ಎಸಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಬಾಂಬೆ ಹೈಕೋರ್ಟ್ ನವಲಾಖಾ ಅವರಿಗೆ ಜಾಮೀನು ನೀಡಿತ್ತು. ಆದರೆ, ರಾಷ್ಟ್ರೀಯ ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಜಾಮೀನು ಆದೇಶಕ್ಕೆ ತಡೆ ನೀಡಿತ್ತು.

ಇದನ್ನು ಓದಿ: ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...