Homeಮುಖಪುಟನಮ್ಮ ಬಗ್ಗೆ ಚಿಂತೆ ಬಿಡಿ, ಇತರರು ನಮಗಿಂತಲೂ ಹೆಚ್ಚು ಬಳಲುತ್ತಿದ್ದಾರೆ : ಕೊರೊನಾ ಸೋಂಕಿತೆ ನಟಿ...

ನಮ್ಮ ಬಗ್ಗೆ ಚಿಂತೆ ಬಿಡಿ, ಇತರರು ನಮಗಿಂತಲೂ ಹೆಚ್ಚು ಬಳಲುತ್ತಿದ್ದಾರೆ : ಕೊರೊನಾ ಸೋಂಕಿತೆ ನಟಿ ಮೋಹೆನಾ

- Advertisement -
- Advertisement -

ಟಿವಿ ತಾರೆ ಮೋಹೆನಾ ಕುಮಾರಿ ಸಿಂಗ್‌ರವರ ಇಡೀ ಕುಟುಂಬವೂ ಕೊರೊನಾ ವೈರಸ್‌ಗೆ ತುತ್ತಾಗಿರುವ ಹಿನ್ನೆಲೆಯಲ್ಲಿ ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸುತ್ತಿರುವ ಅಭಿಮಾನಿಗಳಿಗೆ ಅವರು ’ನಮ್ಮ ಬಗ್ಗೆ ಚಿಂತೆ ಬಿಡಿ, ಇತರರು ನಮಗಿಂತಲೂ ಹೆಚ್ಚು ಬಳಲುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಯೆ ರಿಷ್ಟಾ ಕ್ಯಾ ಕೆಹ್ಲತಾ ಹೈ ಪಾತ್ರದಲ್ಲಿ ಹೆಸರುವಾಸಿಯಾಗಿರುವ ಮೋಹೆನಾರವರು ಇಂದು ಬೆಳಿಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ತಮಗೆ ಮತ್ತು ತಮ್ಮ ಕುಟುಂಬದ 17 ಜನಕ್ಕೆ ಕೊರೊನಾ ಸೋಂಕು ತಗುಲಿರುವುದನ್ನು ದೃಢಪಡಿಸಿದ್ದಾರೆ. “ನಿದ್ರೆ ಮಾಡಲು ಸಾಧ್ಯವಿಲ್ಲ. ಈ ಆರಂಭಿಕ ದಿನಗಳು ಮನೆಯಲ್ಲಿ ನಮಗೆಲ್ಲರಿಗೂ ವಿಶೇಷವಾಗಿ ನಮ್ಮ ಮಕ್ಕಳು ಮತ್ತು ನಮ್ಮ ಹಿರಿಯರಿಗೆ ಕಷ್ಟಕರವಾಗಿದೆ. ಆದರೆ ನಾವು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ನಾವು ಚೆನ್ನಾಗಿರುತ್ತೇವೆ. ನಮಗಿಂತ ಹೆಚ್ಚು ಬಳಲುತ್ತಿರುವ ಜನರು ಸುತ್ತಲೂ ಇರುವುದರಿಂದ ಯಾವುದರ ಬಗ್ಗೆಯೂ ದೂರು ನೀಡಲು ನಮಗೆ ಹಕ್ಕಿಲ್ಲ” ಎಂದು ಬರೆದುಕೊಂಡಿದ್ದಾರೆ.

ಮೊಹೇನಾ ಅವರು 2019 ರ ಅಕ್ಟೋಬರ್‌ನಲ್ಲಿ ಸುಯೇಶ್ ರಾವತ್ (ಉತ್ತರಾಖಂಡ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಅವರ ಪುತ್ರ) ಅವರನ್ನು ವಿವಾಹವಾದರು. ನಂತರ ಅವರು ಡೆಹ್ರಾಡೂನ್‌ಗೆ ಸ್ಥಳಾಂತರಗೊಂಡರು. ತಾನು, ತನ್ನ ಪತಿ, ಅತ್ತೆ, ಅತ್ತಿಗೆ ಮತ್ತು ತನ್ನ ಐದು ವರ್ಷದ ಮಗ ಮತ್ತು ಕುಟುಂಬದ ಇತರ ಕೆಲವು ಸದಸ್ಯರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪದೇ ಪದೇ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿಯೂ ಅವರು ಈ ಮೇಲಿನ ಹೇಳಿಕೆಯನ್ನು ನೀಡಿದ್ದಾರೆ.

View this post on Instagram

??

A post shared by Mohena Kumari Singh (@mohenakumari) on

ತನ್ನ ಹೇಳಿಕೆಯಲ್ಲಿ, ತಾನು ಬೇಗ ಗುಣಮುಖಲಾಗಲೆಂದು ಹಾರೈಸಿದ ಅಭಿಮಾನಿಗಳಿಗೆ ಮೋಹೇನಾ ಕೃತಜ್ಞತೆಯ ಸಂದೇಶವನ್ನು ಅರ್ಪಿಸಿದ್ದಾರೆ. “ನೀವು ಕಳುಹಿಸುತ್ತಿರುವ ಎಲ್ಲಾ ಸಂದೇಶಗಳು, ಪ್ರಾರ್ಥನೆಗಳು ಮತ್ತು ಪ್ರೀತಿಗೆ ನಾನು ಪ್ರತಿಯೊಬ್ಬರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ಇದು ನಮ್ಮ ಉತ್ಸಾಹವನ್ನು ಉಳಿಸುತ್ತದೆ ಮತ್ತು ನಮ್ಮ ಹೃದಯದಲ್ಲಿ ನಿಮಗೆ ತುಂಬಾ ಕೃತಜ್ಞತೆ ಇದೆ” ಎಂದು ತಿಳಿಸಿದ್ದಾರೆ.

ಯೆ ರಿಷ್ಟಾ ಕ್ಯಾ ಕೆಹ್ಲತಾ ಹೈ ಚಿತ್ರದಲ್ಲಿ ಮೋಹೆನಾ ಜೊತೆ ನಟಿಸಿದ ಮತ್ತೊಬ್ಬ ನಟಿ ನಿಧಿ ಉತ್ತಮ್, “ಮೋಹ್, ಮತ್ತು ಇಡೀ ಕುಟುಂಬಕ್ಕೆ ನಮ್ಮೆಲ್ಲರ ಪ್ರಾರ್ಥನೆ ಮತ್ತು ಪ್ರೀತಿ. ನೀವು ಅಂತಹ ಪ್ರಬಲ ವ್ಯಕ್ತಿ ಎಂದು ನನಗೆ ತಿಳಿದಿದೆ, ನೀವು ಖಂಡಿತವಾಗಿಯೂ ಹೋರಾಡುತ್ತೀರಿ ಮತ್ತು ಬೇಗನೆ ಗುಣಮುಖರಾಗುತ್ತೀರಿ.” ಎಂದು ಬರೆದಿದ್ದಾರೆ.

ಮೋಹೇನಾ ಕುಮಾರಿ ಸಿಂಗ್ ಅವರು ಮಧ್ಯಪ್ರದೇಶದ ರೇವಾ ರಾಜಮನೆತನದ ಮಹಾರಾಜ ಪುಷ್‌ಪ್ರಜ್ ಸಿಂಗ್ ಮತ್ತು ರಾಗಿಣಿ ಸಿಂಗ್ ಅವರ ಪುತ್ರಿ. ಜನಪ್ರಿಯ ಟಿವಿ ಶೋ ಯೆ ರಿಷ್ಟಾ ಕ್ಯಾ ಕೆಹ್ಲತಾ ಹೈ ಚಿತ್ರದಲ್ಲಿ ಕೀರ್ತಿ ಗೋಯೆಂಕಾ ಪಾತ್ರವನ್ನು ನಿರ್ವಹಿಸುವುದರಲ್ಲಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ದಿಲ್ ದೋಸ್ತಿ ಡ್ಯಾನ್ಸ್ ಎಂಬ ಟಿವಿ ಕಾರ್ಯಕ್ರಮದಲ್ಲಿ ಮೋಹೆನಾ ಕೂಡ ಕಾಣಿಸಿಕೊಂಡಿದ್ದಾರೆ. ಡ್ಯಾನ್ಸ್ ರಿಯಾಲಿಟಿ ಶೋ ಝಲಕ್ ದಿಖ್ಲಾ ಜಾ ನಲ್ಲಿ ನೃತ್ಯ ಬೋಧಕಿಯಾಗಿಯೂ ಕೆಲಸ ಮಾಡಿದ್ದಾರೆ. ಅವರು ಡ್ಯಾನ್ಸ್ ರಿಯಾಲಿಟಿ ಶೋ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ 3 ನಲ್ಲಿ ಸ್ಪರ್ಧಿಯಾಗಿದ್ದರು.


ಇದನ್ನೂ ಓದಿ: ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...