Homeಮುಖಪುಟನಮ್ಮ ಬಗ್ಗೆ ಚಿಂತೆ ಬಿಡಿ, ಇತರರು ನಮಗಿಂತಲೂ ಹೆಚ್ಚು ಬಳಲುತ್ತಿದ್ದಾರೆ : ಕೊರೊನಾ ಸೋಂಕಿತೆ ನಟಿ...

ನಮ್ಮ ಬಗ್ಗೆ ಚಿಂತೆ ಬಿಡಿ, ಇತರರು ನಮಗಿಂತಲೂ ಹೆಚ್ಚು ಬಳಲುತ್ತಿದ್ದಾರೆ : ಕೊರೊನಾ ಸೋಂಕಿತೆ ನಟಿ ಮೋಹೆನಾ

- Advertisement -
- Advertisement -

ಟಿವಿ ತಾರೆ ಮೋಹೆನಾ ಕುಮಾರಿ ಸಿಂಗ್‌ರವರ ಇಡೀ ಕುಟುಂಬವೂ ಕೊರೊನಾ ವೈರಸ್‌ಗೆ ತುತ್ತಾಗಿರುವ ಹಿನ್ನೆಲೆಯಲ್ಲಿ ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸುತ್ತಿರುವ ಅಭಿಮಾನಿಗಳಿಗೆ ಅವರು ’ನಮ್ಮ ಬಗ್ಗೆ ಚಿಂತೆ ಬಿಡಿ, ಇತರರು ನಮಗಿಂತಲೂ ಹೆಚ್ಚು ಬಳಲುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಯೆ ರಿಷ್ಟಾ ಕ್ಯಾ ಕೆಹ್ಲತಾ ಹೈ ಪಾತ್ರದಲ್ಲಿ ಹೆಸರುವಾಸಿಯಾಗಿರುವ ಮೋಹೆನಾರವರು ಇಂದು ಬೆಳಿಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ತಮಗೆ ಮತ್ತು ತಮ್ಮ ಕುಟುಂಬದ 17 ಜನಕ್ಕೆ ಕೊರೊನಾ ಸೋಂಕು ತಗುಲಿರುವುದನ್ನು ದೃಢಪಡಿಸಿದ್ದಾರೆ. “ನಿದ್ರೆ ಮಾಡಲು ಸಾಧ್ಯವಿಲ್ಲ. ಈ ಆರಂಭಿಕ ದಿನಗಳು ಮನೆಯಲ್ಲಿ ನಮಗೆಲ್ಲರಿಗೂ ವಿಶೇಷವಾಗಿ ನಮ್ಮ ಮಕ್ಕಳು ಮತ್ತು ನಮ್ಮ ಹಿರಿಯರಿಗೆ ಕಷ್ಟಕರವಾಗಿದೆ. ಆದರೆ ನಾವು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ನಾವು ಚೆನ್ನಾಗಿರುತ್ತೇವೆ. ನಮಗಿಂತ ಹೆಚ್ಚು ಬಳಲುತ್ತಿರುವ ಜನರು ಸುತ್ತಲೂ ಇರುವುದರಿಂದ ಯಾವುದರ ಬಗ್ಗೆಯೂ ದೂರು ನೀಡಲು ನಮಗೆ ಹಕ್ಕಿಲ್ಲ” ಎಂದು ಬರೆದುಕೊಂಡಿದ್ದಾರೆ.

ಮೊಹೇನಾ ಅವರು 2019 ರ ಅಕ್ಟೋಬರ್‌ನಲ್ಲಿ ಸುಯೇಶ್ ರಾವತ್ (ಉತ್ತರಾಖಂಡ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಅವರ ಪುತ್ರ) ಅವರನ್ನು ವಿವಾಹವಾದರು. ನಂತರ ಅವರು ಡೆಹ್ರಾಡೂನ್‌ಗೆ ಸ್ಥಳಾಂತರಗೊಂಡರು. ತಾನು, ತನ್ನ ಪತಿ, ಅತ್ತೆ, ಅತ್ತಿಗೆ ಮತ್ತು ತನ್ನ ಐದು ವರ್ಷದ ಮಗ ಮತ್ತು ಕುಟುಂಬದ ಇತರ ಕೆಲವು ಸದಸ್ಯರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪದೇ ಪದೇ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿಯೂ ಅವರು ಈ ಮೇಲಿನ ಹೇಳಿಕೆಯನ್ನು ನೀಡಿದ್ದಾರೆ.

View this post on Instagram

??

A post shared by Mohena Kumari Singh (@mohenakumari) on

ತನ್ನ ಹೇಳಿಕೆಯಲ್ಲಿ, ತಾನು ಬೇಗ ಗುಣಮುಖಲಾಗಲೆಂದು ಹಾರೈಸಿದ ಅಭಿಮಾನಿಗಳಿಗೆ ಮೋಹೇನಾ ಕೃತಜ್ಞತೆಯ ಸಂದೇಶವನ್ನು ಅರ್ಪಿಸಿದ್ದಾರೆ. “ನೀವು ಕಳುಹಿಸುತ್ತಿರುವ ಎಲ್ಲಾ ಸಂದೇಶಗಳು, ಪ್ರಾರ್ಥನೆಗಳು ಮತ್ತು ಪ್ರೀತಿಗೆ ನಾನು ಪ್ರತಿಯೊಬ್ಬರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ಇದು ನಮ್ಮ ಉತ್ಸಾಹವನ್ನು ಉಳಿಸುತ್ತದೆ ಮತ್ತು ನಮ್ಮ ಹೃದಯದಲ್ಲಿ ನಿಮಗೆ ತುಂಬಾ ಕೃತಜ್ಞತೆ ಇದೆ” ಎಂದು ತಿಳಿಸಿದ್ದಾರೆ.

ಯೆ ರಿಷ್ಟಾ ಕ್ಯಾ ಕೆಹ್ಲತಾ ಹೈ ಚಿತ್ರದಲ್ಲಿ ಮೋಹೆನಾ ಜೊತೆ ನಟಿಸಿದ ಮತ್ತೊಬ್ಬ ನಟಿ ನಿಧಿ ಉತ್ತಮ್, “ಮೋಹ್, ಮತ್ತು ಇಡೀ ಕುಟುಂಬಕ್ಕೆ ನಮ್ಮೆಲ್ಲರ ಪ್ರಾರ್ಥನೆ ಮತ್ತು ಪ್ರೀತಿ. ನೀವು ಅಂತಹ ಪ್ರಬಲ ವ್ಯಕ್ತಿ ಎಂದು ನನಗೆ ತಿಳಿದಿದೆ, ನೀವು ಖಂಡಿತವಾಗಿಯೂ ಹೋರಾಡುತ್ತೀರಿ ಮತ್ತು ಬೇಗನೆ ಗುಣಮುಖರಾಗುತ್ತೀರಿ.” ಎಂದು ಬರೆದಿದ್ದಾರೆ.

ಮೋಹೇನಾ ಕುಮಾರಿ ಸಿಂಗ್ ಅವರು ಮಧ್ಯಪ್ರದೇಶದ ರೇವಾ ರಾಜಮನೆತನದ ಮಹಾರಾಜ ಪುಷ್‌ಪ್ರಜ್ ಸಿಂಗ್ ಮತ್ತು ರಾಗಿಣಿ ಸಿಂಗ್ ಅವರ ಪುತ್ರಿ. ಜನಪ್ರಿಯ ಟಿವಿ ಶೋ ಯೆ ರಿಷ್ಟಾ ಕ್ಯಾ ಕೆಹ್ಲತಾ ಹೈ ಚಿತ್ರದಲ್ಲಿ ಕೀರ್ತಿ ಗೋಯೆಂಕಾ ಪಾತ್ರವನ್ನು ನಿರ್ವಹಿಸುವುದರಲ್ಲಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ದಿಲ್ ದೋಸ್ತಿ ಡ್ಯಾನ್ಸ್ ಎಂಬ ಟಿವಿ ಕಾರ್ಯಕ್ರಮದಲ್ಲಿ ಮೋಹೆನಾ ಕೂಡ ಕಾಣಿಸಿಕೊಂಡಿದ್ದಾರೆ. ಡ್ಯಾನ್ಸ್ ರಿಯಾಲಿಟಿ ಶೋ ಝಲಕ್ ದಿಖ್ಲಾ ಜಾ ನಲ್ಲಿ ನೃತ್ಯ ಬೋಧಕಿಯಾಗಿಯೂ ಕೆಲಸ ಮಾಡಿದ್ದಾರೆ. ಅವರು ಡ್ಯಾನ್ಸ್ ರಿಯಾಲಿಟಿ ಶೋ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ 3 ನಲ್ಲಿ ಸ್ಪರ್ಧಿಯಾಗಿದ್ದರು.


ಇದನ್ನೂ ಓದಿ: ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...