Homeಮುಖಪುಟಓಟಿಟಿ ಗಮ್ಮತ್ತು; ಚಿತ್ರಮಂದಿರಗಳಿಗೆ ಎದುರಾಗಿದೆ ಕುತ್ತು!

ಓಟಿಟಿ ಗಮ್ಮತ್ತು; ಚಿತ್ರಮಂದಿರಗಳಿಗೆ ಎದುರಾಗಿದೆ ಕುತ್ತು!

- Advertisement -
- Advertisement -

ಬದಲಾವಣೆ ಜಗದ ನಿಮಯ’ ಎಂಬುದು ಸಾಮಾನ್ಯವಾಗಿ ಎಲ್ಲಾ ವಿಚಾರಗಳಲ್ಲಿ ಬಳಕೆಯಾಗುತ್ತಿರುವ ಬದಲಾಗದ ಸಾಲು. ಬದಲಾವಣೆಯ ಹಾದಿಯಲ್ಲಿ ತಂತ್ರಜ್ಞಾನಗಳೂ ಬದಲಾಗುತ್ತಿವೆ. ಅಂದರೆ ಹೊಸ ಹೊಸ ಆವಿಷ್ಕಾರಗಳು ತೆರೆದುಕೊಳ್ಳುತ್ತಿವೆ. ಇದು ಮನರಂಜನಾ ಕ್ಷೇತ್ರಗಳನ್ನೂ ವ್ಯಾಪಿಸುತ್ತಿದೆ.

ಸಮಾಜದಲ್ಲಿರುವ ಎಲ್ಲಾ ವರ್ಗದ ಜನರು ರೇಡಿಯೋ ಬಳಸುವ ಹೊತ್ತಿಗೆ ಟಿವಿಗಳು ಲಗ್ಗೆ ಇಟ್ಟಿದ್ದವು. ಪಟ್ಟಣಗಳಲ್ಲಿ ಸಿನಿಮಾ ಟೆಂಟ್‍ಗಳು ತಲೆ ಎತ್ತಿದ್ದವು. ಟಿವಿ ಎಲ್ಲಾ ಮನೆಗಳನ್ನೂ ತಲುಪುವ ವೇಳೆಗೆ 21ನೇ ಶತಮಾನದ ಮೊದಲ ದಶಕ ಕಳೆದೇ ಹೋಗಿತ್ತು. ಟಿವಿಗಳಲ್ಲಿ ವಾರಕ್ಕೊಮ್ಮೆ ಪ್ರಸಾರವಾಗುವ ಸಿನಿಮಾಗಳಿಗಾಗಿ ಕಾದುಕುಳಿತಿರುತ್ತಿದ್ದ ಕಾಲವದು. ಆಗ ಚಿತ್ರಮಂದಿರಗಳಲ್ಲಿ ಹಣಕೊಟ್ಟ ಸಿನಿಮಾ ನೋಡಲಾಗದವರು ಹೊಸ ಸಿನಿಮಾಗಳಿಗಾಗಿ ವರ್ಷಗಳಟ್ಟಲೆ ಕಾಯಬೇಕಾಗಿತ್ತು. ಇದೆಲ್ಲವೂ ಕೇವಲ ನಾಲ್ಕೈದು ವರ್ಷಗಳ ಹಿಂದಿನ ಕತೆಗಳಷ್ಟೇ.

ಈ ನಡುವೆ ಟೆಕ್ನಾಲಜಿ ಬೆಳೆದಂತೆ ಪೈರಸಿಯ ಹವಾ ಶುರುವಾಯಿತು. ಸಿನಿಮಾಗಳನ್ನು ಕದ್ದು ಮಾರುವುದು, ಕ್ಯಾಮೆರಾ ಪ್ರಿಂಟ್‍ನಲ್ಲಿ ಚಿತ್ರಿಸಿ ಹಂಚುವುದು ಬೆಳೆಯಿತು. ಆದರೆ, ಇವು ಕ್ವಾಲಿಟಿಯನ್ನು ಹೊಂದಿರಲಿಲ್ಲ.

ಹೊಸ ಸಿನಿಮಾಗಳಿಗಾಗಿ ಕಾಯುವ ತಾಳ್ಮೆಯೂ ಇಲ್ಲದ, ಹೆಚ್ಚು ಹಣಕೊಟ್ಟು ಥಿಯೇಟರ್‍ಗಳಿಗೆ ಹೋಗಲಾಗದವರ ಅಥವಾ ಥಿಯೇಟರ್‍ಗಳಿಗೆ ಹೋಗುವಷ್ಟು ಸಮಯವೇ ಇಲ್ಲದವರ ಸಮಸ್ಯೆಗಳನ್ನು ನೀಗಿಸಿದ್ದೇ ಓಟಿಟಿಗಳು. ‘ಓವರ್ ದಿ ಟಾಪ್’ ಎಂಬುದೇ ಓಟಿಟಿ. ಅಂದರೆ ನಾವು ಬಳಸುತ್ತಿರುವ ನೆಟ್‍ಫ್ಲಿಕ್ಸ್, ಅಮೆಜಾನ್ ಪ್ರೈಮ್, ವೂಟ್ ಮೊದಲಾದ ಡಿಜಿಟಲ್ ಮೀಡಿಯಾಗಳನ್ನು ಓಟಿಟಿ ಎಂದು ಕರೆಯಲಾಗುತ್ತದೆ.

ಓಟಿಟಿ ಪ್ಲಾಟ್ ಫಾರ್ಮ್‍ಗಳು ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾದ ಸಿನಿಮಾಗಳನ್ನು ಒಂದು ತಿಂಗಳ ಕಾಲಮಿತಿಯೊಳಗೇ ಜನರಿಗೆ ತಲುಪಿಸುತ್ತಿವೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಿನಿಮಾಗಳಷ್ಟೇ ಅಲ್ಲದೆ, ವೆಬ್ ಸೀರೀಸ್‍ಗಳು, ಡಾಕ್ಯುಮೆಂಟರಿಗಳು, ಕಿರುಚಿತ್ರ, ಧಾರಾವಾಹಿಗಳು ಸೇರಿದಂತೆ ವಿಭಿನ್ನ ಮನರಂಜನೆ ಮತ್ತು ಜ್ಞಾನವನ್ನು ಪೂರೈಸುತ್ತಿವೆ.

ಒಟಿಟಿ ಅಂದರೆ ನೇರವಾಗಿ ಕಂಟೆಂಟ್ (ಮೀಡಿಯಾ)ಗಳನ್ನು ಇಂಟರ್‍ನೆಟ್ ಮೂಲಕ ಕೇಬಲ್, ಟೆಲಿಕಮ್ಯುನಿಕೇಷನ್ ಇತರ ತಡೆಗಳಿಲ್ಲದೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತವೆ. ಇಂತಹ ಟಿಟಿಗಳಲ್ಲಿ ಅಮೇಜಾನ್ ಪ್ರೈಮ್ ಮತ್ತು ನೆಟ್‍ಫ್ಲಿಕ್ಸ್‍ಗಳು ಭಾರತದಲ್ಲಿ ಹೆಚ್ಚು ಪ್ರಸಿದ್ದವಾಗಿವೆ. ವಾರ್ಷಿಕ ಚಂದಾ ನೀಡಿ ಸಬ್‍ಸ್ಕ್ರಿಪ್ಶನ್ ಪಡೆದುಕೊಂಡರಷ್ಟೇ ಸಾಕು. ಒಂದು ವರ್ಷದ ಅವಧಿಗೆ ಎಲ್ಲಾ ರೀತಿಯ ಮನರಂಜನೆಯನ್ನು ಇವು ಒದಗಿಸುತ್ತವೆ. ಅಲ್ಲದೆ, ಒಂದು ಚಂದಾದಾರರಾದರೆ 5 ಟಿವಿ ಅಥವಾ ಮೊಬೈಲ್‍ಗಳಲ್ಲಿ ಸೇವೆಯನ್ನು ಪಡೆಯಬಹುದಾಗಿದೆ. ನಮ್ಮ ಚಿತ್ರಮಂದಿರಗಳಿಗೆ ಬಾರದೇ ಹೋಗುವ ಜಾಗತಿಕ ಸಿನೆಮಾಗಳನ್ನೂ ಈ ಒಟಿಟಿಗಳ ಫ್ಲಾಟ್‍ಫಾಂಗಳ ಮೂಲಕ ಮನೆಯಿಂದಲೇ ವೀಕ್ಷಿಸಬಹುದಾಗಿದೆ.

ಹೆಚ್ಚುತ್ತಿರುವ ಓಟಿಟಿ ಬೇಡಿಕೆ:

4ಜಿ/5ಜಿ ಅಂತರ್ಜಾಲದ ಡಿಜಿಟಲ್ ಸೇವೆಗಳ ಯುಗದಲ್ಲಿ ಓಟಿಟಿ ವೇದಿಕೆಯು ಜಗತ್ತಿನಾದ್ಯಂತ ಡಿಮಾಂಡ್ ಪಡೆದುಕೊಳ್ಳುತ್ತಿದೆ. ಇದಕ್ಕೆ ಭಾರತವೂ ಹೊರತಾಗಿಲ್ಲ. ಅಂತರಾಷ್ಟ್ರೀಯ ವೃತ್ತಿ ಕೌಶಲ್ಯ ಸೇವೆಗಳ ಕಂಪನಿ ಪ್ರೈಸ್ ವಾಟರ್‍ಹೌಸ್ ಕೂಪರ್ಸ್(ಪಿಡಬ್ಲೂಸಿ) ವರದಿಯ ಪ್ರಕಾರ 2018 ಮುಗಿಯುವ ವೇಳೆಗೆ ಭಾರತದಲ್ಲಿ ಓಟಿಟಿ ವಿಡಿಯೋ ಸೇವೆಗಳ ಮಾರುಕಟ್ಟೆ 63.8ಕೋಟಿ ಡಾಲರ್ (ಸುಮಾರು ರೂ 4,466 ಕೋಟಿ)ಗಳಿಗೆ ತಲುಪಿತ್ತು. 2023ರ ಹೊತ್ತಿಗೆ ವಾರ್ಷಿಕವಾಗಿ 21.8% ರಷ್ಟು ವೃದ್ದಿಯಾಗಲಿದ್ದು, 170 ಕೋಟಿ ಡಾಲರ್ (ರೂ.11,900ಕೋಟಿಗಳಿಗೆ) ತಲುಪಲಿದೆ ಎಂದು ಅಂದಾಜು ಮಾಡಲಾಗಿದೆ.

ಓಟಿಟಿಗಳ ಸಬ್‍ಸ್ಕ್ರಿಪ್ಷನ್ ಡಿಮಾಂಡ್ ವಾರ್ಷಿಕವಾಗಿ 23.3%ರಷ್ಟು ವೃದ್ದಿಯಾಗಿ 150 ಕೋಟಿ ಡಾಲರ್‍ಗಳಿಗೆ ತಲುಪಲಿದೆಯೆಂದು ಸಿಡಬ್ಲೂಸಿ ವರದಿಯಲ್ಲಿ ಹೇಳಿದೆ. ಅಂದರೆ 2023ರ ಹೊತ್ತಿಗೆ ಒಟಿಟಿ ಕಂಪನಿಗಳ ಒಟ್ಟು ಆದಾಯದಲ್ಲಿ ವಿಡಿಯೋಗಳ ಸಬ್‍ಸ್ಕ್ರಿಪ್ಷನ್‍ನಿಂದ ಬರುವ ಪಾಲು 84%ರಷ್ಟಕ್ಕೆ ತಲುಪಲಿದೆ. ಈಗ ಜಾಹೀರಾತಿನಿಂದಲೇ ಹೆಚ್ಚು ಆದಾಯ ಬರುತ್ತಿದೆ. ಅಷ್ಟೇ ಅಲ್ಲದೇ ನಾಲ್ಕು ವರ್ಷಗಳಲ್ಲಿ ಭಾರತದ ಒಟಿಟಿ ಮಾರುಕಟ್ಟೆ ಕೊರಿಯಾ ದೇಶವನ್ನು ಮೀರಿಸಲಿದೆ. ಪ್ರಪಂಚದಲ್ಲೇ 8ನೇ ಅತಿದೊಡ್ಡ ಒಟಿಟಿ ಮಾರುಕಟ್ಟೆಯಾಗಿ ಭಾರತ ಬೆಳೆಯಲಿದೆ. 2023 ಕೊನೆಗೆ ಜಗತ್ತಿನ ಓಟಿಟಿ ಮಾರುಕಟ್ಟೆಯ ಪ್ರಮಾಣ 7,280 ಕೋಟಿ ಡಾಲರ್‍ಗಳ ಮಟ್ಟಕ್ಕೆ ಬೆಳೆಯಲಿದೆ ಎಂದು ಅಂದಾಜಿಸಲಾಗಿದೆ.

ನೇರವಾಗಿ ಓಟಿಟಿಯಲ್ಲೇ ಬಿಡುಗಡೆಯಾಗುತ್ತಿವೆ ಸಿನಿಮಾಗಳು:

ಓಟಿಟಿ ಆರಂಭವಾದ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ತಿಂಗಳು ಕಳೆದ ನಂತರ ಸಿನಿಮಾಗಳು ಓಟಿಟಿ ಫ್ಲಾಟ್‍ಫಾಂಗೆ ಬರುತ್ತಿದ್ದವು. ಆದರೆ, ಈಗ ಹಾಗಿಲ್ಲ, ಹಲವು ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೆ ನೇರವಾಗಿ ಓಟಿಟಿಯಲ್ಲೇ ಬಿಡುಗಡೆಯಾಗುತ್ತಿವೆ. ಸ್ಯಾಂಡಲ್‍ವುಡ್‍ನ ಪುನೀತ್ ರಾಜ್‍ಕುಮಾರ್ ನಿರ್ಮಾಣದ ‘ಲಾ’ ಮತ್ತು ‘ಫ್ರೆಂಚ್ ಬಿರಿಯಾನಿ’ ಸಿನಿಮಾಗಳನ್ನು ನೇರವಾಗಿ ಓಟಿಟಿಯಲ್ಲೇ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಬಾಲಿವುಡ್‍ನ ‘ಲಕ್ಷ್ಮೀ ಬಾಂಬ್’ ಸಿನಿಮಾ ಕೂಡ ಓಟಿಟಿಯಲ್ಲೇ ನೇರವಾಗಿ ಬಿಡುಗಡೆಯಾಗಲಿದೆ.

ಚಿತ್ರಮಂದಿರಗಳಿಗೆ ಒದಗಿದಯೇ ಆಪತ್ತು:

ಕಳೆದ ಎರಡು ದಶಕಗಳಿಂದ ಸಿನಿಮಾ ನಿರ್ಮಾಣದ ಸಂಖ್ಯೆ ಎಗ್ಗಿಲ್ಲದೆ ಸಾಗುತ್ತಿದೆ. ಒಂದು ವಾರಕ್ಕೆ ಸುಮಾರು 15 ಸಿನಿಮಾಗಳು ಕನ್ನಡ ಇಂಡಸ್ಟ್ರಿಯಲ್ಲೇ ಬಂದು ನಿಲ್ಲುತ್ತಿವೆ. ಇವುಗಳಿಗೆ ಅನ್ಯ ಭಾಷೆ ಸಿನಿಮಾಗಳ ಪೈಪೋಟಿಯೂ ಒಂದುಕಡೆ. ಹೀಗಾಗಿ ಥಿಯೇಟರ್‍ಗಳು ಹಿಟ್ ಆಗುವ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವುದು, ಸಿನಿಮಾದಿಂದ ಹೆಚ್ಚು ಲಾಭವಾಗುತ್ತಿಲ್ಲವೆಂದರೆ ಬದಲಾಯಿಸುವುದು ಸರಾಗವಾಗಿದೆ. ಆದರೆ, ಇಂತಹ ಸಿಂಗಲ್ ಸ್ಕ್ರೀನ್ ಥಿಯೇಟರ್‍ಗಳಿಗೆ ಭಯ ಹುಟ್ಟಿಸಿದ್ದು, ಮಲ್ಟಿಫ್ಲೆಕ್ಸ್‍ಗಳು. ಮಾಲ್‍ಗಳಲ್ಲಿ ಹಾಗೂ ಸಿನಿಮಾಗಳಿಗಾಗಿ ಹೆಚ್ಚು ಸ್ಕ್ರೀನ್‍ಗಳುಳ್ಳ ಮಲ್ಟಿಫ್ಲೆಕ್ಸ್‍ಗಳು ಆರಂಭವಾದ ಸಂದರ್ಭದಲ್ಲಿ ಥಿಯೇಟರ್ ಮಾಲೀಕರು ಮಲ್ಟಿಫ್ಲೆಕ್ಸ್‍ಗಳಿಗೆ ಅನುಮತಿ ಕೊಡಬಾರದು ಎಂದು ಪ್ರತಿಭಟಿಸಿದ್ದರು. ಆದರೆ, ಇಂದು ಮಲ್ಪಿಫ್ಲೆಕ್ಸ್‍ಗಳ ಜೊತೆಗೆ ಓಟಿಟಿಗಳು ಥಿಯೇಟರ್‍ಗಳಿಗೆ ಎದುರಾಗಿ ಬೆಳೆದಿವೆ. ಇದರಿಂದಾಗಿ ಥಿಯೇಟರ್‍ಗಳಿಗೆ ಹೊಡೆತ ಬೀಳುವ ಸಾಧ್ಯತೆಗಳಿವೆ. ಅಲ್ಲದೆ, ಲಾಕ್‍ಡೌನ್ ಆದ ನಂತರದಲ್ಲಿ ಓಟಿಟಿಗಳ ಪ್ರಭಾವ ಜನರ ಮೇಲೆ ಹೆಚ್ಚಾಗಿದ್ದು, ಲಾಕ್‍ಡೌನ್ ತೆರವುಗೊಳ್ಳುವ ವೇಳೆಗೆ ಕರ್ನಾಟಕದಲ್ಲಿಯೇ 150ಕ್ಕೂ ಹೆಚ್ಚು ಚಿತ್ರಮಂದಿರಗಳು ಮುಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...