Homeಮುಖಪುಟಓಟಿಟಿ ಗಮ್ಮತ್ತು; ಚಿತ್ರಮಂದಿರಗಳಿಗೆ ಎದುರಾಗಿದೆ ಕುತ್ತು!

ಓಟಿಟಿ ಗಮ್ಮತ್ತು; ಚಿತ್ರಮಂದಿರಗಳಿಗೆ ಎದುರಾಗಿದೆ ಕುತ್ತು!

- Advertisement -
- Advertisement -

ಬದಲಾವಣೆ ಜಗದ ನಿಮಯ’ ಎಂಬುದು ಸಾಮಾನ್ಯವಾಗಿ ಎಲ್ಲಾ ವಿಚಾರಗಳಲ್ಲಿ ಬಳಕೆಯಾಗುತ್ತಿರುವ ಬದಲಾಗದ ಸಾಲು. ಬದಲಾವಣೆಯ ಹಾದಿಯಲ್ಲಿ ತಂತ್ರಜ್ಞಾನಗಳೂ ಬದಲಾಗುತ್ತಿವೆ. ಅಂದರೆ ಹೊಸ ಹೊಸ ಆವಿಷ್ಕಾರಗಳು ತೆರೆದುಕೊಳ್ಳುತ್ತಿವೆ. ಇದು ಮನರಂಜನಾ ಕ್ಷೇತ್ರಗಳನ್ನೂ ವ್ಯಾಪಿಸುತ್ತಿದೆ.

ಸಮಾಜದಲ್ಲಿರುವ ಎಲ್ಲಾ ವರ್ಗದ ಜನರು ರೇಡಿಯೋ ಬಳಸುವ ಹೊತ್ತಿಗೆ ಟಿವಿಗಳು ಲಗ್ಗೆ ಇಟ್ಟಿದ್ದವು. ಪಟ್ಟಣಗಳಲ್ಲಿ ಸಿನಿಮಾ ಟೆಂಟ್‍ಗಳು ತಲೆ ಎತ್ತಿದ್ದವು. ಟಿವಿ ಎಲ್ಲಾ ಮನೆಗಳನ್ನೂ ತಲುಪುವ ವೇಳೆಗೆ 21ನೇ ಶತಮಾನದ ಮೊದಲ ದಶಕ ಕಳೆದೇ ಹೋಗಿತ್ತು. ಟಿವಿಗಳಲ್ಲಿ ವಾರಕ್ಕೊಮ್ಮೆ ಪ್ರಸಾರವಾಗುವ ಸಿನಿಮಾಗಳಿಗಾಗಿ ಕಾದುಕುಳಿತಿರುತ್ತಿದ್ದ ಕಾಲವದು. ಆಗ ಚಿತ್ರಮಂದಿರಗಳಲ್ಲಿ ಹಣಕೊಟ್ಟ ಸಿನಿಮಾ ನೋಡಲಾಗದವರು ಹೊಸ ಸಿನಿಮಾಗಳಿಗಾಗಿ ವರ್ಷಗಳಟ್ಟಲೆ ಕಾಯಬೇಕಾಗಿತ್ತು. ಇದೆಲ್ಲವೂ ಕೇವಲ ನಾಲ್ಕೈದು ವರ್ಷಗಳ ಹಿಂದಿನ ಕತೆಗಳಷ್ಟೇ.

ಈ ನಡುವೆ ಟೆಕ್ನಾಲಜಿ ಬೆಳೆದಂತೆ ಪೈರಸಿಯ ಹವಾ ಶುರುವಾಯಿತು. ಸಿನಿಮಾಗಳನ್ನು ಕದ್ದು ಮಾರುವುದು, ಕ್ಯಾಮೆರಾ ಪ್ರಿಂಟ್‍ನಲ್ಲಿ ಚಿತ್ರಿಸಿ ಹಂಚುವುದು ಬೆಳೆಯಿತು. ಆದರೆ, ಇವು ಕ್ವಾಲಿಟಿಯನ್ನು ಹೊಂದಿರಲಿಲ್ಲ.

ಹೊಸ ಸಿನಿಮಾಗಳಿಗಾಗಿ ಕಾಯುವ ತಾಳ್ಮೆಯೂ ಇಲ್ಲದ, ಹೆಚ್ಚು ಹಣಕೊಟ್ಟು ಥಿಯೇಟರ್‍ಗಳಿಗೆ ಹೋಗಲಾಗದವರ ಅಥವಾ ಥಿಯೇಟರ್‍ಗಳಿಗೆ ಹೋಗುವಷ್ಟು ಸಮಯವೇ ಇಲ್ಲದವರ ಸಮಸ್ಯೆಗಳನ್ನು ನೀಗಿಸಿದ್ದೇ ಓಟಿಟಿಗಳು. ‘ಓವರ್ ದಿ ಟಾಪ್’ ಎಂಬುದೇ ಓಟಿಟಿ. ಅಂದರೆ ನಾವು ಬಳಸುತ್ತಿರುವ ನೆಟ್‍ಫ್ಲಿಕ್ಸ್, ಅಮೆಜಾನ್ ಪ್ರೈಮ್, ವೂಟ್ ಮೊದಲಾದ ಡಿಜಿಟಲ್ ಮೀಡಿಯಾಗಳನ್ನು ಓಟಿಟಿ ಎಂದು ಕರೆಯಲಾಗುತ್ತದೆ.

ಓಟಿಟಿ ಪ್ಲಾಟ್ ಫಾರ್ಮ್‍ಗಳು ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾದ ಸಿನಿಮಾಗಳನ್ನು ಒಂದು ತಿಂಗಳ ಕಾಲಮಿತಿಯೊಳಗೇ ಜನರಿಗೆ ತಲುಪಿಸುತ್ತಿವೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಿನಿಮಾಗಳಷ್ಟೇ ಅಲ್ಲದೆ, ವೆಬ್ ಸೀರೀಸ್‍ಗಳು, ಡಾಕ್ಯುಮೆಂಟರಿಗಳು, ಕಿರುಚಿತ್ರ, ಧಾರಾವಾಹಿಗಳು ಸೇರಿದಂತೆ ವಿಭಿನ್ನ ಮನರಂಜನೆ ಮತ್ತು ಜ್ಞಾನವನ್ನು ಪೂರೈಸುತ್ತಿವೆ.

ಒಟಿಟಿ ಅಂದರೆ ನೇರವಾಗಿ ಕಂಟೆಂಟ್ (ಮೀಡಿಯಾ)ಗಳನ್ನು ಇಂಟರ್‍ನೆಟ್ ಮೂಲಕ ಕೇಬಲ್, ಟೆಲಿಕಮ್ಯುನಿಕೇಷನ್ ಇತರ ತಡೆಗಳಿಲ್ಲದೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತವೆ. ಇಂತಹ ಟಿಟಿಗಳಲ್ಲಿ ಅಮೇಜಾನ್ ಪ್ರೈಮ್ ಮತ್ತು ನೆಟ್‍ಫ್ಲಿಕ್ಸ್‍ಗಳು ಭಾರತದಲ್ಲಿ ಹೆಚ್ಚು ಪ್ರಸಿದ್ದವಾಗಿವೆ. ವಾರ್ಷಿಕ ಚಂದಾ ನೀಡಿ ಸಬ್‍ಸ್ಕ್ರಿಪ್ಶನ್ ಪಡೆದುಕೊಂಡರಷ್ಟೇ ಸಾಕು. ಒಂದು ವರ್ಷದ ಅವಧಿಗೆ ಎಲ್ಲಾ ರೀತಿಯ ಮನರಂಜನೆಯನ್ನು ಇವು ಒದಗಿಸುತ್ತವೆ. ಅಲ್ಲದೆ, ಒಂದು ಚಂದಾದಾರರಾದರೆ 5 ಟಿವಿ ಅಥವಾ ಮೊಬೈಲ್‍ಗಳಲ್ಲಿ ಸೇವೆಯನ್ನು ಪಡೆಯಬಹುದಾಗಿದೆ. ನಮ್ಮ ಚಿತ್ರಮಂದಿರಗಳಿಗೆ ಬಾರದೇ ಹೋಗುವ ಜಾಗತಿಕ ಸಿನೆಮಾಗಳನ್ನೂ ಈ ಒಟಿಟಿಗಳ ಫ್ಲಾಟ್‍ಫಾಂಗಳ ಮೂಲಕ ಮನೆಯಿಂದಲೇ ವೀಕ್ಷಿಸಬಹುದಾಗಿದೆ.

ಹೆಚ್ಚುತ್ತಿರುವ ಓಟಿಟಿ ಬೇಡಿಕೆ:

4ಜಿ/5ಜಿ ಅಂತರ್ಜಾಲದ ಡಿಜಿಟಲ್ ಸೇವೆಗಳ ಯುಗದಲ್ಲಿ ಓಟಿಟಿ ವೇದಿಕೆಯು ಜಗತ್ತಿನಾದ್ಯಂತ ಡಿಮಾಂಡ್ ಪಡೆದುಕೊಳ್ಳುತ್ತಿದೆ. ಇದಕ್ಕೆ ಭಾರತವೂ ಹೊರತಾಗಿಲ್ಲ. ಅಂತರಾಷ್ಟ್ರೀಯ ವೃತ್ತಿ ಕೌಶಲ್ಯ ಸೇವೆಗಳ ಕಂಪನಿ ಪ್ರೈಸ್ ವಾಟರ್‍ಹೌಸ್ ಕೂಪರ್ಸ್(ಪಿಡಬ್ಲೂಸಿ) ವರದಿಯ ಪ್ರಕಾರ 2018 ಮುಗಿಯುವ ವೇಳೆಗೆ ಭಾರತದಲ್ಲಿ ಓಟಿಟಿ ವಿಡಿಯೋ ಸೇವೆಗಳ ಮಾರುಕಟ್ಟೆ 63.8ಕೋಟಿ ಡಾಲರ್ (ಸುಮಾರು ರೂ 4,466 ಕೋಟಿ)ಗಳಿಗೆ ತಲುಪಿತ್ತು. 2023ರ ಹೊತ್ತಿಗೆ ವಾರ್ಷಿಕವಾಗಿ 21.8% ರಷ್ಟು ವೃದ್ದಿಯಾಗಲಿದ್ದು, 170 ಕೋಟಿ ಡಾಲರ್ (ರೂ.11,900ಕೋಟಿಗಳಿಗೆ) ತಲುಪಲಿದೆ ಎಂದು ಅಂದಾಜು ಮಾಡಲಾಗಿದೆ.

ಓಟಿಟಿಗಳ ಸಬ್‍ಸ್ಕ್ರಿಪ್ಷನ್ ಡಿಮಾಂಡ್ ವಾರ್ಷಿಕವಾಗಿ 23.3%ರಷ್ಟು ವೃದ್ದಿಯಾಗಿ 150 ಕೋಟಿ ಡಾಲರ್‍ಗಳಿಗೆ ತಲುಪಲಿದೆಯೆಂದು ಸಿಡಬ್ಲೂಸಿ ವರದಿಯಲ್ಲಿ ಹೇಳಿದೆ. ಅಂದರೆ 2023ರ ಹೊತ್ತಿಗೆ ಒಟಿಟಿ ಕಂಪನಿಗಳ ಒಟ್ಟು ಆದಾಯದಲ್ಲಿ ವಿಡಿಯೋಗಳ ಸಬ್‍ಸ್ಕ್ರಿಪ್ಷನ್‍ನಿಂದ ಬರುವ ಪಾಲು 84%ರಷ್ಟಕ್ಕೆ ತಲುಪಲಿದೆ. ಈಗ ಜಾಹೀರಾತಿನಿಂದಲೇ ಹೆಚ್ಚು ಆದಾಯ ಬರುತ್ತಿದೆ. ಅಷ್ಟೇ ಅಲ್ಲದೇ ನಾಲ್ಕು ವರ್ಷಗಳಲ್ಲಿ ಭಾರತದ ಒಟಿಟಿ ಮಾರುಕಟ್ಟೆ ಕೊರಿಯಾ ದೇಶವನ್ನು ಮೀರಿಸಲಿದೆ. ಪ್ರಪಂಚದಲ್ಲೇ 8ನೇ ಅತಿದೊಡ್ಡ ಒಟಿಟಿ ಮಾರುಕಟ್ಟೆಯಾಗಿ ಭಾರತ ಬೆಳೆಯಲಿದೆ. 2023 ಕೊನೆಗೆ ಜಗತ್ತಿನ ಓಟಿಟಿ ಮಾರುಕಟ್ಟೆಯ ಪ್ರಮಾಣ 7,280 ಕೋಟಿ ಡಾಲರ್‍ಗಳ ಮಟ್ಟಕ್ಕೆ ಬೆಳೆಯಲಿದೆ ಎಂದು ಅಂದಾಜಿಸಲಾಗಿದೆ.

ನೇರವಾಗಿ ಓಟಿಟಿಯಲ್ಲೇ ಬಿಡುಗಡೆಯಾಗುತ್ತಿವೆ ಸಿನಿಮಾಗಳು:

ಓಟಿಟಿ ಆರಂಭವಾದ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ತಿಂಗಳು ಕಳೆದ ನಂತರ ಸಿನಿಮಾಗಳು ಓಟಿಟಿ ಫ್ಲಾಟ್‍ಫಾಂಗೆ ಬರುತ್ತಿದ್ದವು. ಆದರೆ, ಈಗ ಹಾಗಿಲ್ಲ, ಹಲವು ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೆ ನೇರವಾಗಿ ಓಟಿಟಿಯಲ್ಲೇ ಬಿಡುಗಡೆಯಾಗುತ್ತಿವೆ. ಸ್ಯಾಂಡಲ್‍ವುಡ್‍ನ ಪುನೀತ್ ರಾಜ್‍ಕುಮಾರ್ ನಿರ್ಮಾಣದ ‘ಲಾ’ ಮತ್ತು ‘ಫ್ರೆಂಚ್ ಬಿರಿಯಾನಿ’ ಸಿನಿಮಾಗಳನ್ನು ನೇರವಾಗಿ ಓಟಿಟಿಯಲ್ಲೇ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಬಾಲಿವುಡ್‍ನ ‘ಲಕ್ಷ್ಮೀ ಬಾಂಬ್’ ಸಿನಿಮಾ ಕೂಡ ಓಟಿಟಿಯಲ್ಲೇ ನೇರವಾಗಿ ಬಿಡುಗಡೆಯಾಗಲಿದೆ.

ಚಿತ್ರಮಂದಿರಗಳಿಗೆ ಒದಗಿದಯೇ ಆಪತ್ತು:

ಕಳೆದ ಎರಡು ದಶಕಗಳಿಂದ ಸಿನಿಮಾ ನಿರ್ಮಾಣದ ಸಂಖ್ಯೆ ಎಗ್ಗಿಲ್ಲದೆ ಸಾಗುತ್ತಿದೆ. ಒಂದು ವಾರಕ್ಕೆ ಸುಮಾರು 15 ಸಿನಿಮಾಗಳು ಕನ್ನಡ ಇಂಡಸ್ಟ್ರಿಯಲ್ಲೇ ಬಂದು ನಿಲ್ಲುತ್ತಿವೆ. ಇವುಗಳಿಗೆ ಅನ್ಯ ಭಾಷೆ ಸಿನಿಮಾಗಳ ಪೈಪೋಟಿಯೂ ಒಂದುಕಡೆ. ಹೀಗಾಗಿ ಥಿಯೇಟರ್‍ಗಳು ಹಿಟ್ ಆಗುವ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವುದು, ಸಿನಿಮಾದಿಂದ ಹೆಚ್ಚು ಲಾಭವಾಗುತ್ತಿಲ್ಲವೆಂದರೆ ಬದಲಾಯಿಸುವುದು ಸರಾಗವಾಗಿದೆ. ಆದರೆ, ಇಂತಹ ಸಿಂಗಲ್ ಸ್ಕ್ರೀನ್ ಥಿಯೇಟರ್‍ಗಳಿಗೆ ಭಯ ಹುಟ್ಟಿಸಿದ್ದು, ಮಲ್ಟಿಫ್ಲೆಕ್ಸ್‍ಗಳು. ಮಾಲ್‍ಗಳಲ್ಲಿ ಹಾಗೂ ಸಿನಿಮಾಗಳಿಗಾಗಿ ಹೆಚ್ಚು ಸ್ಕ್ರೀನ್‍ಗಳುಳ್ಳ ಮಲ್ಟಿಫ್ಲೆಕ್ಸ್‍ಗಳು ಆರಂಭವಾದ ಸಂದರ್ಭದಲ್ಲಿ ಥಿಯೇಟರ್ ಮಾಲೀಕರು ಮಲ್ಟಿಫ್ಲೆಕ್ಸ್‍ಗಳಿಗೆ ಅನುಮತಿ ಕೊಡಬಾರದು ಎಂದು ಪ್ರತಿಭಟಿಸಿದ್ದರು. ಆದರೆ, ಇಂದು ಮಲ್ಪಿಫ್ಲೆಕ್ಸ್‍ಗಳ ಜೊತೆಗೆ ಓಟಿಟಿಗಳು ಥಿಯೇಟರ್‍ಗಳಿಗೆ ಎದುರಾಗಿ ಬೆಳೆದಿವೆ. ಇದರಿಂದಾಗಿ ಥಿಯೇಟರ್‍ಗಳಿಗೆ ಹೊಡೆತ ಬೀಳುವ ಸಾಧ್ಯತೆಗಳಿವೆ. ಅಲ್ಲದೆ, ಲಾಕ್‍ಡೌನ್ ಆದ ನಂತರದಲ್ಲಿ ಓಟಿಟಿಗಳ ಪ್ರಭಾವ ಜನರ ಮೇಲೆ ಹೆಚ್ಚಾಗಿದ್ದು, ಲಾಕ್‍ಡೌನ್ ತೆರವುಗೊಳ್ಳುವ ವೇಳೆಗೆ ಕರ್ನಾಟಕದಲ್ಲಿಯೇ 150ಕ್ಕೂ ಹೆಚ್ಚು ಚಿತ್ರಮಂದಿರಗಳು ಮುಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...